ಆನೆಗಳು ಕಾಡಿನಲ್ಲಿರಬೇಕು, ದೇವಸ್ಥಾನದಲ್ಲಲ್ಲ; ಪೂಜಾಕಾರ್ಯಕ್ಕೆ ಬಳಸುವುದು ಕ್ರೌರ್ಯ:ಹೈಕೋರ್ಟ್


Team Udayavani, Aug 20, 2021, 9:33 AM IST

ಆನೆಗಳು ಕಾಡಿನಲ್ಲಿರಬೇಕು, ದೇವಸ್ಥಾನದಲ್ಲಲ್ಲ; ಪೂಜಾಕಾರ್ಯಕ್ಕೆ ಬಳಸುವುದು ಕ್ರೌರ್ಯ:ಹೈಕೋರ್ಟ್

ಬೆಂಗಳೂರು: ನಗರದ ತಿಂಡ್ಲುವಿನ ವಿದ್ಯಾರಣ್ಯಪುರದ ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪೂಜಾ ಕಾರ್ಯಕ್ಕೆ ಬಳಸಲು ಆನೆಯನ್ನು ಇರಿಸಿಕೊಂಡಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಹೈಕೋರ್ಟ್‌, ಆನೆಗಳು ಕಾಡಿನಲ್ಲಿ ಇರಬೇಕು ಹೊರತು ದೇವಸ್ಥಾನದಲ್ಲಿ ಅಲ್ಲ. ಪೂಜಾ ಕಾರ್ಯಕ್ರಮಕ್ಕೆ ಆನೆಗಳನ್ನು ಬಳಸಿಕೊಳ್ಳುವುದು ಕ್ರೌರ್ಯವೇ ಆಗುತ್ತದೆ ಎಂದು ತೀಕ್ಷ್ಣವಾಗಿ ಹೇಳಿತು.

ಈ ಕುರಿತು ಸಲ್ಲಿಸಿದ್ದ ಅರ್ಜಿಯು ಮುಖ್ಯ ನ್ಯಾ. ಎ.ಎಸ್.ಓಕ್‌ ಅವರ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಈ ವೇಳೆ ಅರ್ಜಿದಾರರ ಪರ ವಕೀಲರು ವಾದ ಮಂಡಿಸಿ, ಕಾಳಿಕಾ ದುರ್ಗಾಪರಮೇಶ್ವರಿ ದೇವಸ್ಥಾನವು ಖಾಸಗಿ ದೇವಾಲಯವಾಗಿದೆ. ಅಲ್ಲಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಲು ಆನೆಯೊಂದನ್ನು ತಂದು ಪೋಷಿಸಲಾಗುತ್ತಿತ್ತು. ಇದೀಗ ದೇವಸ್ಥಾನವನ್ನು ಮುಜರಾಯಿ ಇಲಾಖೆ ಸುಪರ್ದಿಗೆ ಪಡೆದ ಕಾರಣ ಆನೆಯೂ ಸರ್ಕಾರದ ವಶದಲ್ಲಿದೆ. ಅದನ್ನು ಸ್ಥಳಾಂತರಿಸದೇ ದೇವಸ್ಥಾನದಲ್ಲಿಯೇ ಇರಿಸಲು ಮುಜರಾಯಿ ಇಲಾಖೆಗೆ ನಿರ್ದೇಶಿಸಬೇಕು ಎಂದುಕೋರಿದರು.

ಇದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಪೀಠ, ಆನೆಗಳು ಕಾಡಿನಲ್ಲಿರಬೇಕೇ ಹೊರತು ದೇಗುಲಗಳಲ್ಲಲ್ಲ ಎಂದಿತು. ಕೇವಲ ಪೂಜಾ ಕಾರ್ಯಕ್ರಮ ನೆರವೇರಿಸಲು ಅದನ್ನು ಬಳಕೆ ಮಾಡಲಾಗುತ್ತದೆ ಎಂದು ಅರ್ಜಿದಾರರ ಪರ ವಕೀಲರು ಸಮರ್ಥನೆ ನೀಡಿದರು.

ಇದನ್ನೂ ಓದಿ:ಕಣ್ಣಿಗೆ ಬಟ್ಟೆ  ಕಟ್ಟಿ ರಚಿಸಿದ ಸೂರ್ಯೋದಯದ ಚಿತ್ರಕ್ಕೆ  ಮನ್ನಣೆ

ಆನೆಯನ್ನು ದೇವಸ್ಥಾನದಲ್ಲಿರಿಸಿ ಪೂಜಾ ಕಾರ್ಯಕ್ರಮಕ್ಕೆ ಬಳಸುವುದು ಎಷ್ಟು ಸರಿ ಎಂದು ಪೀಠ ಖಾರವಾಗಿ ಪ್ರಶ್ನಿಸಿತು. ಅದಕ್ಕೆ ವಕೀಲರು ಈ ಪದ್ಧತಿ ಹಿಂದಿನಿಂದಲೂ ಜಾರಿಯಲ್ಲಿದೆ ಎಂದರು. ಆಕ್ಷೇಪಿಸಿದ ಪೀಠ, ಹಿಂದಿನ ಕಾಲದಲ್ಲಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆ ಕಾಯ್ದೆ ಜಾರಿಯಲ್ಲಿರಲಿಲ್ಲ. ಇದೀಗ ಆ ಕಾಯ್ದೆ ಜಾರಿಯಲ್ಲಿದೆ. ಪದ್ಧತಿ ಇತ್ತು ಎಂದು ಮುಂದುವರಿಸುತ್ತೀರಿ ಎನ್ನುವುದಾದರೆ ಒಪ್ಪಲಾಗದು ಎಂದು ಹೇಳಿತು.

ಸರ್ಕಾರಿ ವಕೀಲ ವಿಜಯ್‌ ಕುಮರ್‌ ಪಾಟೀಲ್‌, ಆನೆಗೆ ಆರೋಗ್ಯ ಸಮಸ್ಯೆಯಿದೆ. ಚಿಕಿತ್ಸೆ ನೀಡುವ ಅಗತ್ಯ ಇರುವುದರಿಂದ ಅದನ್ನು ಮಾಲೂರಿನ ಅರಣ್ಯ ಇಲಾಖೆಯ ಪುನರ್ವಸತಿ ಕೇಂದ್ರಕ್ಕೆ ರವಾನಿಸಿ ಅಗತ್ಯ ಚಿಕಿತ್ಸೆ ನೀಡಲಾಗುವುದು ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಅದನ್ನು ಪರಿಗಣಿಸಿದ ನ್ಯಾಯಪೀಠ, ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ 2 ವಾರ ಕಾಲಾವಕಾಶ ನೀಡಿತು. ಜತೆಗೆ, ಆನೆಗೆ ಸೂಕ್ತ ಚಿಕಿತ್ಸೆ ಕಲ್ಪಿಸಿ, ವೈದ್ಯಕೀಯ ವರದಿ ನೀಡುವಂತೆ ಸರ್ಕಾರಕ್ಕೆ ಸೂಚಿಸಿ ಸೆ.13ಕ್ಕೆ ವಿಚಾರಣೆ ಮುಂದೂಡಿತು.

ಟಾಪ್ ನ್ಯೂಸ್

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

Lok Sabha polls: ಒಡಿಶಾದಲ್ಲಿ ನವೀನ್‌ ಜನಪ್ರಿಯತೆ Vs ಬಿಜೆಪಿ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

ಕಾಂಗ್ರೆಸ್ ಗೆ ಆಘಾತ; ರಾಜೀನಾಮೆ ನೀಡಿದ ದೆಹಲಿ ಕಾಂಗ್ರೆಸ್ ಮುಖ್ಯಸ್ಥ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Subrahmanya Dhareshwar: ಗಾಯನ ಮುಗಿಸಿದ ಗಾನ ಕೋಗಿಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.