500 ಕೋಟಿ ಬಜೆಟ್ನಲ್ಲಿ ಸಿನಿಮಾ; ಉದ್ಯಮಿಯೊಬ್ಬರ ಡ್ರೀಮ್ ಪ್ರಾಜೆಕ್ಟ್
Team Udayavani, Aug 20, 2021, 5:14 PM IST
ಕೆಲವು ತಿಂಗಳ ಹಿಂದೆ ಬೆಂಗಳೂರು ಮೂಲದ ಉದ್ಯಮಿಯೊಬ್ಬರು ಕೇರಳದ ಭಗವತಿದೇವಿ ದೇವಸ್ಥಾನಕ್ಕೆ 700 ಕೋಟಿ ರೂಪಾಯಿಯನ್ನು ದಾನ ರೂಪದಲ್ಲಿ ನೀಡಿರುವ ಸುದ್ದಿಯನ್ನು ನೀವು ಕೇಳಿರಬಹುದು.ಈಗ ಆ ಉದ್ಯಮಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ. 500 ಕೋಟಿ
ರೂಪಾಯಿ ಬಜೆಟ್ನಲ್ಲಿ ತಮ್ಮ ಹೊಸ ಸಿನಿಮಾದ ಟೈಟಲ್ ಲಾಂಚ್ ಮಾಡಿದ್ದಾರೆ.
ಹೀಗೆ ಸಿನಿಮಾಕ್ಕೆ ಬಂದ ಅವರ ಹೆಸರು ಗಾನ ಶರವಣ ಸ್ವಾಮೀಜಿ. ಜಿ.ಎಸ್.ಆರ್.ಫಿಲಂ ಪೊಡಕ್ಷನ್ಸ್ ಎಂಬ ಬ್ಯಾನರ್ ಹುಟ್ಟುಹಾಕಿದ್ದು, ಅದರಡಿ “ಕೃಷ್ಣರಾಜ-4′ ಸಿನಿಮಾ ಮಾಡಲು ಮುಂದಾಗಿದ್ದಾರೆ. ಇತ್ತೀಚೆಗೆ ಚಿತ್ರದ ಟೈಟಲ್ ಲಾಂಚ್ ಮಾಡಿದರು. ಟೈಟಲ್ ಲಾಂಚ್ ಬಳಿಕ ಮಾತನಾಡಿದ ನಿರ್ಮಾಪಕ, ಕಥೆಗಾರ ಹಾಗೂ ಸಂಗೀತ ನಿರ್ದೇಶಕರೂ ಆದ ಗಾನ ಶರವಣ ಸ್ವಾಮೀಜಿ, “ಸಂಗೀತ ಕಲೆ ನನಗೆ ರಕ್ತಗತವಾಗಿ ಬಂದಿದೆ.
ಐದಾರು ವರ್ಷದಿಂದ ಸಿನಿಮಾ ಮಾಡುವ ಯೋಜನೆ ಇತ್ತು. ಮೂರು ವರ್ಷಗಳ ಹಿಂದೆ ಒಂದು ಕಥೆಯ ಹೊಳೆಯಿತು. ಐತಿಹಾಸಿಕ ಹಾಗೂ ಸಾಮಾಜಿಕ ಹಿನ್ನೆಲೆ ಇರುವ ಕಥೆ ಹೊಂದಿದ ಈ ಚಿತ್ರಕ್ಕೆ ಕೃಷ್ಣರಾಜ-4 ಎಂಬ ಟೈಟಲ್ ಇಟ್ಟಿದ್ದೇವೆ. ಚಿತ್ರದ ಬಜೆಟ್ 400ರಿಂದ 500 ಕೋಟಿ ಆಗಲಿದೆ. ಲಂಡನ್ನಲ್ಲಿ ನಮ್ಮ ಮ್ಯೂಸಿಕ್ ಸ್ಟುಡಿಯೋ ಇದ್ದು, ಅಲ್ಲೇ ಈ ಚಿತ್ರದ ಮ್ಯೂಸಿಕ್ ಕೆಲಸಗಳು ನಡೆಯಲಿದೆ. ಅಲ್ಲದೆ ಭಾರತದಲ್ಲಿ ಹೆಸರು ಮಾಡಿರುವ ನಿರ್ದೇಶಕರೊಬ್ಬರನ್ನು ನಮ್ಮ ಚಿತ್ರಕ್ಕೆ ಕರೆತರುವ ಆಲೋಚನೆ ಇದೆ. ಇದು ಕನ್ನಡದ ಜೊತೆಗೆ ಬೇರೆ ಬೇರೆ ಭಾಷೆಯಲ್ಲಿ ನಿರ್ಮಾಣವಾಗಲಿದೆ. ಆಯಾ ಭಾಷೆಯ ಖ್ಯಾತ ಕಲಾವಿದರನ್ನೇ ಕರೆತರುತ್ತೇವೆ’ ಎನ್ನುವುದು ಸ್ವಾಮೀಜಿ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?
Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Sandalwood; ಟ್ರೆಂಡ್ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!