ವಿಜಯನಗರಕ್ಕೆ ಬಂದಿಳಿದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ದಂಪತಿ
Team Udayavani, Aug 20, 2021, 6:04 PM IST
ಹೊಸಪೇಟೆ :ತುಂಗಾಭದ್ರಾ ಜಲಾಶಯ,ಹಂಪಿಯ ವಿಶ್ವ ಪಾರಂಪರಿಕ ತಾಣಗಳನ್ನು ವೀಕ್ಷಿಸಲು ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯ ಮುನ್ಸಿಪಲ್ ಮೈದಾನಕ್ಕೆ ವಾಯುಪಡೆಯ ವಿಶೇಷ ಹೆಲಿಕ್ಯಾಪ್ಟರ್ ಮೂಲಕ ಶುಕ್ರವಾರ ಸಂಜೆ ಬಂದಿಳಿದರು.
ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರಿಗೆ ಪರಿಸರ, ಜೀವಿಶಾಸ್ತ್ರ, ಪ್ರವಾಸೋದ್ಯಮ ಹಾಗೂ ಬಳ್ಳಾರಿ ಮತ್ತು ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಆನಂದಸಿಂಗ್ ಸ್ವಾಗತ ಕೋರಿದರು.
ಕೊಪ್ಪಳ ಸಂಸದ ಸಂಗಣ್ಣ ಕರಡಿ, ಕಲಬುರಗಿ ವಿಭಾಗೀಯ ಪ್ರಾದೇಶಿಕ ಆಯುಕ್ತ ಎನ್.ವಿ.ಪ್ರಸಾದ್, ಐಜಿಪಿ ಮನಿಷ್ ಖರ್ಬಿಕರ್,ಬಳ್ಳಾರಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ,ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ,ಅಪರ ಪೊಲೀಸ್ ವರಿಷ್ಠಾಧಿಕಾರಿ ಬಿ.ಎನ್.ಲಾವಣ್ಯ ಮತ್ತಿತರರು ಇದ್ದರು.
ಇದನ್ನೂ ಓದಿ:ಜಲಕ್ರೀಡೆಗಿಲ್ಲ ಅನುಮತಿ-ನೆಲಕಚ್ಚಿದ ಪ್ರವಾಸೋದ್ಯಮ
ನಂತರ ಉಪರಾಷ್ಟ್ರಪತಿಗಳಾದ ಎಂ.ವೆಂಕಯ್ಯನಾಯ್ಡು ಹಾಗೂ ಅವರ ಧರ್ಮಪತ್ನಿ ಎಂ.ಉಷಾ ಅವರು ತುಂಗಾಭದ್ರಾ ಜಲಾಶಯದ ಸೌಂದರ್ಯ ಮತ್ತು ಜಲಧಾರೆ ಕಣ್ತುಂಬಿಕೊಳ್ಳಲು ತೆರಳಿದರು.
ಉಪರಾಷ್ಟ್ರಪತಿಗಳು ಭೇಟಿ ಹಿನ್ನೆಲೆ ನಗರದಾದ್ಯಂತ ಬೀಗಿಬಂದೋಬಸ್ತ್ ಕೈಗೊಳ್ಳಲಾಗಿತ್ತು. ಉಪರಾಷ್ಟ್ರಪತಿಗಳು ರಸ್ತೆ ಮಾರ್ಗವಾಗಿ ತುಂಗಭದ್ರಾ ಜಲಾಶಯಕ್ಕೆ ತೆರಳುತ್ತಿರುವ ರಸ್ತೆಯುದ್ದಕ್ಕೂ ಸಾರ್ವಜನಿಕರು ನಿಂತು ವೀಕ್ಷಿಸಿದರು. ಈ ಸಂದರ್ಭದಲ್ಲಿ ಅನೇಕರು ವಿಡಿಯೋ ಹಾಗೂ ಫೋಟೊ ಚಿತ್ರಿಕರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ