ಕಟಪಾಡಿ ಪೇಟೆ: ಮುಗಿಯದ ಪಾರ್ಕಿಂಗ್‌ ಸಮಸ್ಯೆ

ನಿಲ್ದಾಣದೊಳಗೆ ಪಾರ್ಕಿಂಗ್‌ ಮಾಡುತ್ತಿದ್ದಾರೆ ; ಬಸ್‌ ನಿಲ್ದಾಣಕ್ಕೆ ಬಸ್‌ ಬರುವುದೇ ಇಲ್ಲ

Team Udayavani, Aug 21, 2021, 6:34 AM IST

ಕಟಪಾಡಿ ಪೇಟೆ: ಮುಗಿಯದ ಪಾರ್ಕಿಂಗ್‌ ಸಮಸ್ಯೆ

ಕಟಪಾಡಿ ಪೇಟೆಯಲ್ಲಿ ಜನರು ವಾಹನಗಳನ್ನು ಪಾರ್ಕಿಂಗ್‌ ಮಾಡಲು ಸ್ಥಳವಿಲ್ಲದೆ ಬಸ್‌ಸ್ಟಾಂಡ್‌ ಒಳಗಡೆಯೇ ಪಾರ್ಕಿಂಗ್‌ ಮಾಡುವುದರಿಂದ ಬಸ್‌ಗಳು ನಿಲ್ದಾಣಕ್ಕೆ ಬರುವುದೇ ಇಲ್ಲ .

ಕಟಪಾಡಿ: ಕಟಪಾಡಿ ಪೇಟೆಯಾದ್ಯಂತ ಎಲ್ಲೆಡೆ ಪಾರ್ಕಿಂಗ್‌ ಸಮಸ್ಯೆಯು ತಲೆದೋರಿದ್ದು, ಕಟಪಾಡಿ ಬಸ್‌ ನಿಲ್ದಾಣಕ್ಕೆ ಬಸ್‌ಬರು ತ್ತಿ ಲ್ಲ. ನಿತ್ಯ ಪ್ರಯಾಣಿಕರು ರಾಷ್ಟ್ರೀಯ ಹೆದ್ದಾರಿ ದಾಟುವ ಮತ್ತು ಗ್ರಾಹಕರು ಪಾರ್ಕಿಂಗ್‌ ವಾಹನಗಳ ಎಡೆಯಲ್ಲಿ ನುಸುಳಿಕೊಂಡು ಹೋಗಿ ಖರೀದಿಸುವ ಸಮಸ್ಯೆಯನ್ನು ಅನುಭವಿಸುವಂತಾಗಿದೆ.

ರಾಷ್ಟ್ರೀಯ ಹೆದ್ದಾರಿ 66ರ ಜಂಕ್ಷನ್‌ ಪ್ರದೇಶವಾಗಿ ಗುರುತಿಸಿಕೊಂಡಿರುವ ಕಟಪಾಡಿ ಪೇಟೆಯು ಸಾಕಷ್ಟು ವ್ಯಾಪಾರ ಮಳಿಗೆಗಳು, ವಾಣಿಜ್ಯ ಮಳಿಗೆಗಳು, ವಸತಿ ಸಮುತ್ಛಯಗಳು, ಹಲವು ದೇಗುಲಗಳು, ಆರಾಧನ ಕೇಂದ್ರಗಳು, ಹೊಟೇಲ್‌ಗ‌ಳು, ಹೆಸರುವಾಸಿ ವೈದ್ಯರು, ಕ್ಲಿನಿಕಲ್‌ ಲ್ಯಾಬೋರೇಟರಿಗಳನ್ನು ಹೊಂದಿದೆ. ಅಲ್ಲದೆ ಮಟ್ಟು, ಕೋಟೆ, ಶಿರ್ವ, ಶಂಕರಪುರ, ಮಣಿಪುರ ಸಹಿತ ಇತರ ಗ್ರಾಮಗಳಿಗೂ ಕೇಂದ್ರ ಸ್ಥಳವಾಗಿ ಬೆಳೆದು ನಿಂತಿದೆ. ಆ ನಿಟ್ಟಿನಲ್ಲಿ ಸದಾ ಜನಜಂಗುಳಿ, ಗ್ರಾಹಕರಿಂದ ಕಟಪಾಡಿ ಪೇಟೆಯು ಗಿಜಿಗುಡುತ್ತಿರುತ್ತದೆ.

ಈಗಾಗಲೇ ಸಮಸ್ಯೆಯ ಬಗ್ಗೆ ಅಧಿಕಾರಿಗಳ ಗಮನಕ್ಕೆ ತರಲಾಗಿದ್ದರೂ ಪ್ರತಿಫಲ ಶೂನ್ಯವಾಗಿದೆ. ಚತುಷ್ಪಥ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಸಂದರ್ಭ ಸ್ವಾಧೀನಪಡಿಸಿಕೊಳ್ಳಲಾದ ಪ್ರದೇಶ ಮತ್ತು ಅಳಿದುಳಿದ ಕಟ್ಟಡಗಳನ್ನು ತೆರವುಗೊಳಿಸಿದಲ್ಲಿ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂದು ಕಟಪಾಡಿ ರಿಕ್ಷಾ ಚಾಲಕ-ಮಾಲಕರ ಸಂಘದ ಅಧ್ಯಕ್ಷ ಪ್ರೇಮ್‌ ಕುಮಾರ್‌ ಹೇಳುತ್ತಾರೆ.

ಇದನ್ನೂ ಓದಿ:“ಅವರು ಬದಲಾಗಿಲ್ಲ, ನಮಗೆ ಸಾವೇ ಗತಿ’ : ತಾಲಿಬಾನ್‌ ಆಡಳಿತದ ಕುರಿತು ಹೆಂಗಳೆಯರ ನೋವಿನ ಮಾತು

ಕಟಪಾಡಿ ಪೇಟೆಯೊಳಗಿನ ಬಸ್‌ ತಂಗುದಾಣಕ್ಕೆ ಬಸ್‌ ಬರಬೇಕು. ಕಾರು ಪಾರ್ಕಿಂಗ್‌ಗೂ ಸೂಕ್ತ ಸ್ಥಳಾವಕಾಶ ಕಲ್ಪಿಸಬೇಕಿದೆ. ಇಲಾಖಾ ಧಿಕಾರಿಗಳು ತಕ್ಕ ಕ್ರಮ ಕೈಗೊಳ್ಳಬೇಕಿದ್ದು, ಕಟಪಾಡಿಯಲ್ಲಿ ಘೋಷಣೆಯಾಗಿರುವ ಮೇಲ್ಸೇತುವೆ ಶೀಘ್ರವಾಗಿ ನಿರ್ಮಾಣಗೊಂಡಲ್ಲಿ ಸೂಕ್ತ ಪರಿಹಾರ ಕಂಡುಕೊಳ್ಳಲು ಸಾಧ್ಯ ಎಂಬುದು ಕಟಪಾಡಿ ಕಾರು ಚಾಲಕ- ಮಾಲಕರ ಸಂಘದ ಅಧ್ಯಕ್ಷ ರಮೇಶ್‌ ಕೋಟ್ಯಾನ್‌ ಅವರ ಅಭಿ ಪ್ರಾಯವಾಗಿದೆ.

ಸ್ಥಳೀಯ ಕಟಪಾಡಿ ಗ್ರಾ.ಪಂ. ಮತ್ತು ಕಾಪು ಪೊಲೀಸರು ಹಾಗೂ ಸಂಬಂಧಪಟ್ಟ ಇಲಾಖಾಧಿಕಾರಿಗಳು ಈ ಸಮಸ್ಯೆಗಳನ್ನು ಸೌಹಾರ್ದ ಯುತವಾಗಿ ಬಗೆಹರಿಸಬೇಕಾದ ಅಗತ್ಯವಿದೆ.

ವಾಹನಗಳ ಪಾರ್ಕಿಂಗ್‌ ಸಮಸ್ಯೆ
ಕಟಪಾಡಿ ಪೇಟೆಯಲ್ಲಿನ ಬಸ್‌ ನಿಲ್ದಾಣದ ಸ್ಥಳದಲ್ಲಿ ವಾಹನ ಪಾರ್ಕಿಂಗ್‌ ಮಾಡಿ ತೆರಳುವುದರಿಂದ ಪಾರ್ಕಿಂಗ್‌ ಸಮಸ್ಯೆ ಮತ್ತು ಬಸ್‌ ನಿಲ್ದಾಣಕ್ಕೆ ಬಸ್ಸೇ ಬಾರದಂತಹ ಬಿಕ್ಕಟ್ಟಿನ ಪರಿಸ್ಥಿತಿ ನಿರ್ಮಾಣಗೊಂಡಂತಾಗಿದೆ. ವ್ಯಾಪಾರ ಸಂಕೀರ್ಣದ ಮುಂಭಾಗದಲ್ಲಿ ಎಲ್ಲೆಂದರಲ್ಲಿ ಎರ್ರಾಬಿರ್ರಿಯಾಗಿ ವಾಹನಗಳನ್ನು ನಿಲ್ಲಿಸುವುದರಿಂದ ಗ್ರಾಹಕರು ಸಮಸ್ಯೆಯನ್ನು ಎದುರಿಸುವಂತಾಗಿದೆ. ಮುಂಬರುವ ದಿನಗಳಲ್ಲಿ ಹಬ್ಬಗಳು, ಶುಭ ಸಮಾರಂಭಗಳು ನಡೆಯಲಿರುವ ಕಾರಣ ಸಮಸ್ಯೆಯು ಮತ್ತಷ್ಟು ಬಿಗಡಾಯಿಸುವ ಸಾಧ್ಯತೆ ಹೆಚ್ಚಿದೆ.

ಇತರ ಸಮಸ್ಯೆಗಳೇನು?
– ವಯೋವೃದ್ಧರು, ಮಕ್ಕಳು, ಮಹಿಳೆಯರು, ಅಂಗವಿಕಲರು, ಬಸ್‌ಗಾಗಿ ಚತುಷ್ಪಥ ರಾಷ್ಟ್ರೀಯ ಹೆದ್ದಾರಿಯನ್ನು ಹೆದ್ದಾರಿಯನ್ನು ದಾಟುವಂತಹ ಅನಿವಾರ್ಯ ಪರಿಸ್ಥಿತಿ ಇದ್ದು ಅಪ ಘಾತ ಸಂಭವಿಸುವ ಸಾಧ್ಯತೆ ಇರುತ್ತದೆ.
– ಬಸ್‌ ಪೇಟೆಯೊಳಕ್ಕೆ ಬಾರದೇ ಕೆಲವು ವ್ಯಾಪಾರಸ್ಥರು ಗ್ರಾಹಕರನ್ನು ಕಳೆದುಕೊಂಡಂತಾಗಿದೆ.

ಬಸ್‌ಸ್ಟ್ಯಾಂಡ್ ಉಳಿಯಲಿ
ಉದ್ಯೋಗಕ್ಕಾಗಿ ಮತ್ತು ಬೇರೆ ಊರುಗಳಿಗೆ ತೆರಳುವ ಮಂದಿ ವಾಹನಗಳನ್ನು ಎಲ್ಲೆಂದರಲ್ಲಿ ನಿಲ್ಲಿಸಿ ಲಾಕ್‌ ಹಾಕಿ ತೆರಳುತ್ತಾರೆ. ಕಟಪಾಡಿ ಬಸ್‌ಸ್ಟ್ಯಾಂಡ್ ಹಾಗೆಯೇ ಉಳಿಯಲಿ. ಖಾಸಗಿ ವಾಹನಗಳ ಪಾರ್ಕಿಂಗ್‌ ಸ್ಥಳವಾಗದಿರಲಿ .
-ವೈ. ರಂಜನ್‌ ಹೆಗ್ಡೆ, ಅಧ್ಯಕ್ಷರು, ವರ್ತಕರ ಸಂಘ ಕಟಪಾಡಿ

ಸೂಕ್ತ ಕಾನೂನು ಕ್ರಮ
ಕಟಪಾಡಿ ಪೇಟೆಯೊಳಗೆ ಬಸ್‌ಬರುವಲ್ಲಿ ಅನುಕೂಲತೆ ಕಲ್ಪಿಸಲು ಅನಧಿಕೃತ ಪಾರ್ಕಿಂಗ್‌ಗೆ ಕಡಿವಾಣ ಹಾಕಲಾಗುತ್ತದೆ. ಪಾರ್ಕಿಂಗ್‌ ಸಮಸ್ಯೆ ಮತ್ತೂ ಮುಂದುವರಿದಲ್ಲಿ ಪೊಲೀಸ್‌ ಇಲಾಖೆಯಿಂದ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.
-ರಾಘವೇಂದ್ರ, ಪಿ.ಎಸ್‌.ಐ. ಕಾಪು ಪೊಲೀಸ್‌ ಠಾಣೆ

ಸಮಾಲೋಚನ ಸಭೆ
ಸಮಸ್ಯೆಯ ಪರಿಹಾರಕ್ಕೆ ಕೂಡಲೇ ಮತ್ತೊಮ್ಮೆ ಸಾರ್ವಜನಿಕರು, ಇಲಾಖಾಧಿಕಾರಿಗಳೊಂದಿಗೆ ಸಮಾಲೋಚನ ಸಭೆ ನಡೆಸಲಾಗುತ್ತದೆ. ಲಾಕ್‌ಡೌನ್‌ ಮುಂಚಿತವಾಗಿ ಕೈಗೊಂಡಂತೆ ಸೂಕ್ತ ಸುರಕ್ಷಾ ಕ್ರಮಗಳೊಂದಿಗೆ ಬಸ್‌ಕಟಪಾಡಿ ಬಸ್‌ನಿಲ್ದಾಣಕ್ಕೆ ಬರುವಲ್ಲಿ ಮತ್ತು ಪಾರ್ಕಿಂಗ್‌ ಸಮಸ್ಯೆ ನೀಗಿಸುವಲ್ಲಿ ಪ್ರಯತ್ನಿಸಲಾಗುತ್ತದೆ .
– ಮಮತಾ ವೈ. ಶೆಟ್ಟಿ, ಪಿ.ಡಿ.ಒ., ಕಟಪಾಡಿ ಗ್ರಾ.ಪಂ.

-ವಿಜಯ ಆಚಾರ್ಯ ಉಚ್ಚಿಲ

ಟಾಪ್ ನ್ಯೂಸ್

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

Agumbe ಘಾಟಿಯಲ್ಲಿ ಸುರಂಗ ಮಾರ್ಗ ಯೋಜನೆ ಮುನ್ನೆಲೆಗೆ; ಕರಾವಳಿ-ಮಲೆನಾಡು ಬೆಸೆಯಲು ಸುರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Raichur; ಮತದಾನ ಕೇಂದ್ರದಲ್ಲಿ ಕೇಸರಿ ಶಾಲು- ಹಿಜಾಬ್ ಗಲಾಟೆ; ಪೊಲೀಸರೊಂದಿಗೆ ಮಾತಿನ ಚಕಮಕಿ

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

Met Gala 2024: ಇವೆಂಟ್‌ನಲ್ಲಿ ಭಾಗಿಯಾಗದ ಖ್ಯಾತ ಸೆಲೆಬ್ರಿಟಿಗಳ ಡೀಪ್‌ ಫೇಕ್‌ ಫೋಟೋ ವೈರಲ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.