ಕೋವಿಡ್‌ ರೀತಿಯೇ ಅಪ್ಪಳಿಸಿದ ನೋಟಿಸ್‌!

ಸಾರ್ವಜನಿಕ ವಲಯದಲ್ಲಿ ಚರ್ಚೆ ದಂಡ ವಸೂಲಾತಿ ತಗ್ಗಿಸುವ, ರದ್ದುಗೊಳಿಸುವ ಬಗ್ಗೆ ನಿರ್ಧಾರಕ್ಕೆ ಆಗ್ರಹ

Team Udayavani, Aug 21, 2021, 2:49 PM IST

ಕೋವಿಡ್‌ ರೀತಿಯೇ ಅಪ್ಪಳಿಸಿದ ನೋಟಿಸ್‌!

ಬೆಂಗಳೂರು: ಆಸ್ತಿ ತೆರಿಗೆ ಬಾಕಿ ವಸೂಲಿ ಹಾಗೂ ದಂಡದ ಬಡ್ಡಿ ಪಾವತಿ ಮಾಡುವಂತೆ ಪಾಲಿಕೆ ಅಧಿಕಾರಿಗಳು ನೀಡಿರುವ ನೋಟಿಸ್‌ಗೆ ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಯಾಗುತ್ತಿದೆ. ಮತ್ತೊಂದೆಡೆ ನೋಟಿಸ್‌ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸುತ್ತಿರುವ ಆಸ್ತಿ ಮಾಲೀಕರು, ನಾಗರಿಕಕ್ಷೇಮಾಭಿವೃದ್ಧಿ ಸಂಘಟನೆಗಳು, ತಮ್ಮ ಬೇಡಿಕೆ ಹಾಗೂ ಸಮಸ್ಯೆಗಳ ಬಗ್ಗೆ ಮೌನ ಮುರಿದಿದ್ದಾರೆ.

ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿ ಕೊಂಡ ಆಸ್ತಿ ಮಾಲೀಕರಿಗೆ 2016-17ರಲ್ಲೇ ನೋಟಿಸ್‌ ನೀಡಬೇಕಿತ್ತು. ಈಗ ದಿಢೀರ್‌ ದಂಡ ಮತ್ತು ದಂಡದ ಬಡ್ಡಿ ಪಾವತಿ ನೋಟಿಸ್‌ ನೀಡಿರುವುದರ ಹಿಂದಿನ ಉದ್ದೇಶವೇನು? ಈ ಬಗ್ಗೆ ಸರ್ಕಾರ ಪರಿಶೀಲಿಸಬೇಕು. ಜತೆಗೆ ದಂಡ ವಸೂಲಾತಿ ತಗ್ಗಿಸುವ ಹಾಗೂ ರದ್ದುಗೊಳಿಸುವ ಬಗ್ಗೆ ಸ್ಪಷ್ಟ ನಿರ್ಧಾರ ಪ್ರಕಟಿಸಬೇಕು ಎಂಬ ಕೂಗು ಕೇಳಿಬರುತ್ತಿದೆ.

“ನಾನು ಖಾಸಗಿ ಕಂಪನಿ ಉದ್ಯೋಗಿ. ಕೋವಿಡ್‌ ಲಾಕ್‌ಡೌನ್‌ನಿಂದ ಮೊದಲಿದ್ದ ಸಂಬಳದಲ್ಲಿ ಅರ್ಧಕ್ಕರ್ಧ ಕಡಿತವಾಗಿದೆ. ಕಟ್ಟಡ ನಿರ್ಮಾಣ ಕ್ಕೆಂದು ಪಡೆದ ಬ್ಯಾಂಕ್‌ ಸಾಲ ಪಾವತಿಗೂ ಕಷ್ಟಪಡುತ್ತಿದ್ದೇನೆ. ಇಷ್ಟೊಂದು ಆಸ್ತಿ ತೆರಿಗೆ ಪಾವತಿ ಹಾಗೂ ದಂಡದ ಬಡ್ಡಿ ಪಾವತಿ ನೋಟಿಸ್‌ ಒಮ್ಮೆಲೆ ಕೋವಿಡ್‌ ಮಹಾಮಾರಿಯಂತೆಯೇ ಬಂದು ಅಪ್ಪಳಿಸಿದೆ!’ ಎಂದು ಮಾಲೀಕರೊಬ್ಬರು ಅಧಿಕಾರಿಗಳು ನೀಡಿದ ನೋಟಿಸ್‌ ಬಗ್ಗೆ ಅಸಹಾಯಕತೆ ವ್ಯಕ್ತಪಡಿಸಿದರು.

ಇದನ್ನೂ ಓದಿ:ಪುನೀತ್‌ ವರ್ಕೌಟ್ ವಿಡಿಯೋಗೆ ಫ್ಯಾನ್ಸ್‌ ಫಿದಾ

“ಕೋವಿಡ್‌ ಲಾಕ್‌ಡೌನ್‌ನಿಂದ ಸಂಬಳ ಕಡಿತ, ಉದ್ಯೋಗ ನಷ್ಟ ಎಂದು ಹಲವರು ತಿಂಗಳಿಡೀ ಮನೆ, ಕುಟುಂಬ ನಿರ್ವಹಣೆಗೂ ಪರದಾಡು ತ್ತಿದ್ದಾರೆ. ಸ್ವಂತ ಉದ್ದಿಮೆ ನಡೆಸಲು ಆರ್ಥಿಕ ಪರಿಸ್ಥಿತಿ ಸರಿಯಿಲ್ಲ. ಇದರ ಮಧ್ಯೆ ಆಸ್ತಿ ತೆರಿಗೆ ಪಾವತಿ ನೋಟಿಸ್‌ ಆಸ್ತಿ ಮಾಲೀಕರಿಗೆ ದಿಗ್ಬ್ರಮೆ ಮೂಡಿಸಿದೆ’ ಎಂದು ವಿವಿಧ ನಾಗರಿಕ ಕ್ಷೇಮಾಭಿವೃದ್ಧಿ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸುತ್ತವೆ.

“ಮೇಲಧಿಕಾರಿಗಳ ಆದೇಶದಂತೆ ವಲಯ ವರ್ಗೀಕರಣವನ್ನುತಪ್ಪಾಗಿ ಘೋಷಿಸಿಕೊಂಡ ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಲಾಗಿದೆ.ಕೋವಿಡ್‌ ಲಾಕ್‌ಡೌನ್‌ ನಿಂದ ಆಸ್ತಿ ಮಾಲೀಕರು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿರುವುದು ನಿಜ.ಹೀಗಾಗಿ, ದಂಡ ಮತ್ತು ಬಡ್ಡಿ ವಿನಾಯಿತಿಗೆ ಒತ್ತಾಯಿ ಸುತ್ತಿದ್ದಾರೆ. ಮೇಲಾಧಿಕಾರಿಗಳು ಹಾಗೂ ಸರ್ಕಾರದ ಮಟ್ಟದಲ್ಲೇ ಸೂಕ್ತ ನಿರ್ಧಾರವಾಗಬೇಕಿದೆ. ಆದರೆ,ಈ ಮಧ್ಯೆ ಏನೂ ಉತ್ತರಿಸಲಾಗದೆ ನಾವೂ ಗೊಂದಲಕ್ಕೀಡಾಗಿದ್ದೇವೆ’ ಎಂದು ಅಧಿಕಾರಿಗಳು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಗೊಂದಲ ನಿವಾರಣೆಗೆ ಒತ್ತಾಯ: “ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿಯಡಿ ವಲಯ ವರ್ಗೀಕರಣವನ್ನು ತಪ್ಪಾಗಿ ಘೋಷಿಸಿಕೊಂಡ ಆಸ್ತಿ
ಮಾಲೀಕರಿಗೆ 2016-17ರಲ್ಲೇ ನೋಟಿಸ್‌ ನೀಡಬೇಕಿತ್ತು. 2016ರಲ್ಲಿ ಆಸ್ತಿ ಮಾಲೀಕರಿಗೆ ಅಧಿಕಾರಿಗಳು ಯಾವುದೇ ಮಾಹಿತಿ ನೀಡಿಲ್ಲ.ವಾರ್ಡ್‌ ಕಮಿಟಿ ಮೂಲಕವೂ ಜಾಗೃತಿ ಮೂಡಿಸಿಲ್ಲ. ಈಗ ದಿಢೀರನೆ, ದಂಡ ಮತ್ತು ದಂಡದ ಬಡ್ಡಿ ಪಾವತಿಸುವ ನೋಟಿಸ್‌ ನೀಡಲಾಗಿದೆ. ಈ ಬಗ್ಗೆ ಸರ್ಕಾರದ ಮಟ್ಟದಲ್ಲಿ ಶೀಘ್ರ ಚರ್ಚೆ ನಡೆಸಿ ಆಸ್ತಿ ಮಾಲೀಕರಲ್ಲಿನ ಗೊಂದಲ ನಿವಾರಿಸಬೇಕು. ಜತೆಗೆ, ದಂಡ ವಸೂಲಾತಿ ತಗ್ಗಿಸುವ ಹಾಗೂ ರದ್ದುಗೊಳಿಸುವ ಬಗ್ಗೆ ಸ್ಪಷ್ಟ ನಿರ್ಧಾರಕೈಗೊಳ್ಳಬೇಕಿದೆ ಎಂದು ನಾಗರಿಕರ ಸಂಘಟನೆಗಳ ಮುಖಂಡರು ಒತ್ತಾಯಿಸಿದ್ದಾರೆ.

ಅಧಿಕಾರಿಗಳ ನಡೆಗೆ ಬೇಸರ: ಪಾಲಿಕೆ ಕೇಂದ್ರ ಕಚೇರಿ ಹಾಗೂ ಎಂಟು ವಲಯ ಕಚೇರಿಗಳ ವ್ಯಾಪ್ತಿಯಲ್ಲಿ ಕಂದಾಯ ವಿಭಾಗದಲ್ಲಿ 30 ಕಂದಾಯ ಅಧಿಕಾರಿಗಳು, 64 ಸಹಾಯಕ ಕಂದಾಯ ಅಧಿಕಾರಿಗಳು, 400 ಮಂದಿ ರೆವಿನ್ಯೂ ಇನ್‌ಸ್ಪೆಕ್ಟರ್‌ ಹಾಗೂ ಮೌಲ್ಯ ಮಾಪಕರು ಕಾರ್ಯನಿರ್ವಹಿಸುತ್ತಿದ್ದಾರೆ. ಇಷ್ಟು ಜನ ಅಧಿಕಾರಿಗಳಿದ್ದೂ ವ್ಯತ್ಯಾಸ ಮೊತ್ತದ ಆಸ್ತಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡಿಲ್ಲ. ಆಸ್ತಿ ಮಾಲೀಕರಿಗೆ ಸೂಕ್ತ
ಮಾಹಿತಿ ನೀಡುವಲ್ಲಿ ಎಡವಿದ್ದಾರೆ ಎಂದು ಅಸಮಾಧಾನ್ಯ ವ್ಯಕ್ತಪಡಿಸಿದ್ದಾರೆ.


ಕೋವಿಡ್‌ ನೆಪದಲ್ಲಿ ನೋಟಿಸ್‌ ಜಾರಿ: ಎರಡನೇ ಅಲೆ ವೇಳೆ ಕೋವಿಡ್‌ ಸೋಂಕು ಪ್ರಕರಣಗಳು ಹೆಚ್ಚಿದ್ದರಿಂದ ಕಂದಾಯ ವಿಭಾಗದ ಅಧಿಕಾರಿ ಹಾಗೂ ಸಿಬ್ಬಂದಿಯನ್ನು ಕೋವಿಡ್‌ ನಿಯಂತ್ರಣ ಕೆಲಸಗಳಿಗೆ ನೇಮಿಸಲಾಗಿತ್ತು. ಆ ವೇಳೆ ಆಸ್ತಿ ತೆರಿಗೆ ಸಂಗ್ರಹದ ಬಗ್ಗೆ ಗಮನಹರಿಸಿಲ್ಲ. ಪಾಲಿಕೆ ಆಡಳಿತಾಧಿಕಾರಿಗಳು ತಮ್ಮ ಮೊದಲ ಸಭೆಯಲ್ಲಿ ಪಾಲಿಕೆಯ ಪ್ರಮುಖಆದಾಯದ ಮೂಲವಾದ ಆಸ್ತಿ ತೆರಿಗೆ ಸಂಗ್ರಹಕ್ಕೆ ಒತ್ತು ನೀಡುವಂತೆ
ಸ್ಪಷ್ಟ ಸೂಚನೆ ನೀಡಿದ್ದರು . ಆದರೆ, ಕೆಲವು ಸಿಬ್ಬಂದಿ ಕೋವಿಡ್‌ ಸಂದರ್ಭದ ನೆಪವೊಡ್ಡಿ ಸರಿಯಾಗಿ ಕರ್ತವ್ಯ ನಿರ್ವಹಿಸುತ್ತಿಲ್ಲ. ಈ ನಡುವೆ ವಲಯಗಳಲ್ಲಿರುವ ಸಹಾಯಕ ಕಂದಾಯ ಅಧಿಕಾರಿಗಳ ಹಂತದಲ್ಲಿ 2016-17 ರಿಂದ 2019-20ರವರೆಗೆ ನಾಲ್ಕು ವರ್ಷದ ಅವಧಿಯಲ್ಲಿ ದಾಖಲೆಗಳನ್ನು ಪರಿಶೀಲಿಸಿ ಆಸ್ತಿಗಳ ಮಾಲೀಕರಿಗೆ ನೋಟಿಸ್‌ ನೀಡಲಾಗಿದೆಎಂದುಹಿರಿಯ ಅಧಿಕಾರಿಯೊಬ್ಬರು ದೂರಿದ್ದಾರೆ.

ತೆರಿಗೆಬಾಕಿ ಉಳಿಸಿಕೊಂಡವರಿಗೆ ಕೊಂಚ ರಿಲೀಫ್
ಹಲವು ವರ್ಷಗಳಿಂದ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡ ಮಾಲೀಕರಿಗೆ ಪಾಲಿಕೆ ಕೊಂಚ ರಿಲೀಫ್ ನೀಡಿದೆ. ಈವರೆಗೆ ಆಸ್ತಿ ತೆರಿಗೆಯ ಹಳೆಯ ಬಾಕಿಗೆ ಪ್ರತಿ ತಿಂಗಳಿಗೆ ಶೇ.2ರಂತೆ ವರ್ಷಕ್ಕೆ ಶೇ.24ರಷ್ಟು ಬಡ್ಡಿ ವಿಧಿಸಲಾಗುತ್ತಿತ್ತು. ಆದರೆ, 2020ರ ಬಿಬಿಎಂಪಿ ಕಾಯ್ದೆ ಜಾರಿಯಾದ ಬಳಿಕ ದಂಡದ ಬಡ್ಡಿಯ ಪ್ರಮಾಣವನ್ನು ವಾರ್ಷಿಕ ಶೆ.9ಕ್ಕೆ ಇಳಿಕೆ ಮಾಡಲಾಗಿದೆ. ಆ ಮೂಲಕ ‌ ಶೇ.15ರಷ್ಟು ಬಡ್ಡಿ ದರವನ್ನು ಇಳಿಕೆ ಮಾಡಿದಂತಾಗಿದೆ. ಈ ಸಂಬಂಧ ಬಿಬಿಎಂಪಿಯ ತೆರಿಗೆ ಪಾವತಿ ಸಾಫ್ಟ್ ವೇರ್‌ನಲ್ಲೂ ಪೂರಕವಾದ ಮಾರ್ಪಾಡು ಮಾಡಲಾಗಿದೆ. ಇದರಿಂದ ಅನೇಕ ವರ್ಷದಿಂದ ತೆರಿಗೆ ಬಾಕಿ ಉಳಿಸಿಕೊಂಡವರಿಗೆ ಅನುಕೂಲವಾಗಲಿದೆ ಎಂದುಕಂದಾಯ ವಿಭಾಗದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಏಪ್ರಿಲ್‌- ಮೇ ತಿಂಗಳ ಆಸ್ತಿ ತೆರಿಗೆ ರಿಯಾಯಿತಿ
ಪ್ರತಿ ಆರ್ಥಿಕ ವರ್ಷದ ಆರಂಭವಾಗುವ ಏಪ್ರಿಲ್‌ ತಿಂಗಳ ಕೊನೆಯದಿನದ ತನಕ ಒಂದೇ ಬಾರಿಗೆ ಆಸ್ತಿ ತೆರಿಗೆ ಸಲ್ಲಿಸುವವರಿಗೆ ಶೇ.5ರಷ್ಟು ಆಸ್ತಿ ತೆರಿಗೆ ರಿಯಾಯಿತಿ ನೀಡಲಾಗುತ್ತಿತ್ತು. ಆದರೆ, ಈ ಬಾರಿ ಕೋವಿಡ್‌ ಲಾಕ್‌ಡೌನ್‌ ಕಾರಣಕ್ಕೆ ಮೇ 31ರವರೆಗೆ ಹಾಗೂ ಆನಂತರ ಜೂನ್‌ 30ರ ತನಕ 2ನೇ ಬಾರಿಗೆ ಆಸ್ತಿ ತೆರಿಗೆ ಪಾವತಿಗೆ ನಗರಾಭಿವೃದ್ಧಿ ಇಲಾಖೆ ಅವಧಿಯನ್ನು ವಿಸ್ತರಣೆ ಮಾಡಿತ್ತು. ಅದರಂತೆ, ಬಿಬಿಎಂಪಿ ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿ ಒಟ್ಟು 22 ಲಕ್ಷ ಆಸ್ತಿಗಳಿದ್ದು, ಜೂನ್‌ 1ರ ತನಕ 8,60,463 ಮಂದಿ 2021-22 ಸಾಲಿನ ಆಸ್ತಿ ತೆರಿಗೆಯನ್ನು ಪಾವತಿಸಿದ್ದಾರೆ ಎಂದು ಹೇಳಿದ್ದಾರೆ.

ಬೇಡಿಕೆಗಳಿವು
– ಪಾಲಿಕೆ ನೀಡಿರುವ ಎಲ್ಲ ಸೂಚನೆ(ನೋಟಿಸ್‌)ಗಳನ್ನು ಹಿಂಪಡೆದುಕೊಳ್ಳಬೇಕು.
– ತೆರಿಗೆ ಮೊತ್ತದಿಂದ ಆಗಿರುವ ನಷ್ಟವನ್ನು ಮಾತ್ರ ಕಟ್ಟಿಸಿಕೊಂಡು ಬಡ್ಡಿ ಹಾಗೂ ದಂಡವನ್ನು ಮನ್ನಾ ಮಾಡಬೇಕು.
– ಪಾಲಿಕೆ ಈ ವಲಯ ಮರು ವರ್ಗೀಕರಣವನ್ನು ಮುಂದಿನ ಹಣಕಾಸು ವರ್ಷದಿಂದ ಜಾರಿಗೆ ತರಬೇಕು.
– ವಲಯ ಮರು ವಿಂಗಡಣೆ ಬಗ್ಗೆ ವ್ಯಾಪಕವಾಗಿ ಪ್ರಚಾರ ಮಾಡಬೇಕು.
– ಆಸ್ತಿ ತೆರಿಗೆಯನ್ನು ಪಾವತಿಸುವ ಸಮಯದಲ್ಲಿ, ಆಸ್ತಿ ಮಾಲೀಕರು ಮರುಪರಿಶೀಲನೆಯ ಬಗ್ಗೆ ಎಚ್ಚರವಹಿಸಬೇಕು.
– ಪ್ರಾಪರ್ಟಿಗಳನ್ನು ಜಿಯೋ-ಟ್ಯಾಗ್‌ ಮಾಡಲಾಗುತ್ತಿದ್ದು, ಸಾಧ್ಯವಾದರೆ ಸ್ವಯಂಚಾಲಿತವಾಗಿ ಪ್ರತಿಯೊಂದು ಆಸ್ತಿಗೂ ವಲಯಗಳನ್ನು
ವರ್ಗೀಕರಿಸಬಹುದು.
– ಕೆಲವರು ಉದ್ದೇಶಪೂರ್ವಕವಾಗಿ ತಪ್ಪು ಮಾಡಿರಬಹುದು, ಹಾಗೆಂದು ಉಳಿದವರಿಗೂ ನೋಟಿಸ್‌ ನೀಡುವುದು ಸರಿಯಲ್ಲ.
– ಉದ್ದೇಶಪೂರ್ವಕವಾಗಿ ಇದ್ದರೂ ಅಥವಾ ಇಲ್ಲದಿದ್ದರೂ ಕಡಿಮೆ ಪಾವತಿಗಳ ಉದಾಹರಣೆಗಳಿದ್ದರೆ ಅದೇ ವರ್ಷದಲ್ಲಿ ನೋಟಿಸ್‌ ನೀಡಬೇಕು

ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಿರುವ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತರಿಗೆ ವಿಶೇಷ ಆಯುಕ್ತರಿಗೆ(ಆದಾಯ) ಪತ್ರ ಬರೆದಿದ್ದೇವೆ. ಈ ಸಮಸ್ಯೆಗೆ ಯಾವುದೇ ಪರಿಹಾರವಿಲ್ಲದಿದ್ದರೆ, ಮುಖ್ಯಮಂತ್ರಿಗಳಿಗೆ ಮನವಿಯನ್ನುಕಳಿಸುತ್ತೇವೆ.
-ಬಿ. ನಾಗೇಂದ್ರ, ಬೆಂಗಳೂರು ದಕ್ಷಿಣ ಆರ್‌
ಡಬ್ಲ್ಯೂಎ(ನಿವಾಸಿಗಳಕಲ್ಯಾಣ ಸಂಘ) ಸದಸ್ಯ

ಕೋವಿಡ್‌ ಲಾಕ್‌ಡೌನ್‌ ಹಿನ್ನೆಲೆ ಅಧಿಕಾರಿಗಳು ಸರಿಯಾಗಿ ತೆರಿಗೆ ಸಂಗ್ರಹಿಸಿಲ್ಲ. ಹಿರಿಯ ಅಧಿಕಾರಿಗಳು ಈ ಬಗ್ಗೆ ಗಮನಹರಿಸಿಲ್ಲ. ಈಗ ಆಸ್ತಿ ಮಾಲೀಕರಿಗೆ ನೋಟಿಸ್‌ ನೀಡಿದ್ದಾರೆ. ಬಿಬಿಎಂಪಿ ಮುಖ್ಯ ಆಯುಕ್ತರು ಸಭೆ ಕರೆದು ಆಸ್ತಿ ಮಾಲೀಕರೊಂದಿಗೆ ಚರ್ಚಿಸಬೇಕು, ಅವರಿಗೆ ಸಮಯ ಕೊಡಬೇಕಿದೆ.
ಎನ್‌.ಕದರಪ್ಪ,
ವಳಗೇರೆಹಳ್ಳಿ ನಿವಾಸಿಗಳ ಒಕ್ಕೂಟದ ಅಧ್ಯಕ್ಷ

ಪಾಲಿಕೆ 2016-17ರಲ್ಲೇ ಆಸ್ತಿ ತೆರಿಗೆ ಮಾಲೀಕರಿಗೆ ಕಡಿಮೆ ಪಾವತಿಯ ಕುರಿತು ನೋಟಿಸ್‌ ನೀಡಿದ್ದರೆ, ತಾನೇ ಬದಲಾವಣೆ ಮಾಡಿ ಸರಿಯಾಗಿ ತೆರಿಗೆ ಪಾವತಿಸುತ್ತಿದ್ದರು. ಈಗ ಮಾಲೀಕರು, ತೆರಿಗೆ ಪಾವತಿಗಳನ್ನು ತಪ್ಪಿಸಲು ಉದ್ದೇಶ ಪೂರ್ವಕವಾಗಿ ಕಡಿಮೆ ಆಸ್ತಿ ತೆರಿಗೆಯನ್ನು ಪಾವತಿಸಿ ದ್ದಾರೆ ಎಂದು ಹೇಳುತ್ತಿದೆ. ಇದು ಸಂಪೂರ್ಣ ಅಸಮಂಜಸ.
-ಬಿ.ವಿ. ಲಲಿತಾಂಬ,
ಬೆಂಗಳೂರು ನವ ನಿರ್ಮಾಣ ಪಾರ್ಟಿ(ಬಿಎನ್‌ಪಿ)ಮುಖ್ಯಸ್ಥೆ

ಪಾಲಿಕೆ ಆಸ್ತಿ ತೆರಿಗೆ ತಂತ್ರಾಶ ತೋರಿಸಿದಂತೆ ಕಾಲಕಾಲಕ್ಕೆ ತೆರಿಗೆ ಪಾವತಿಸುತ್ತಿದ್ದೇನೆ. ಆದರೂ,ಐದು ವರ್ಷದ ಆಸ್ತಿ ತೆರಿಗೆ ಬಾಕಿ ಪಾವತಿ ಹಾಗೂ ದಂಡದ ಬಡ್ಡಿ ಪಾವತಿಗೆ ನೋಟಿಸ್‌ ನೀಡಲಾಗಿದೆ.ಇದು ಸಮಂಜಸ ಹಾಗೂ ನ್ಯಾಯಯುತವಲ್ಲ. ಬಡ್ಡಿ ಹಾಗೂ ದಂಡ ಇಲ್ಲದೆ ಬಾಕಿ ತೆರಿಗೆ ಪಾವತಿಗೆ ಪಾಲಿಕೆ ಅವಕಾಶ ನೀಡಬೇಕಿದೆ.
-ಎಚ್‌.ಬಿ. ಶ್ರೀನಾಥ್‌,
ಆಸ್ತಿ ಮಾಲೀಕರು, ಜೆ.ಪಿ ನಗರ, 6ನೇ ಹಂತ

-ವಿಕಾಸ್‌ ಆರ್‌. ಪಿಟ್ಲಾಲಿ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.