ಗ್ರಾಮೀಣ ಅಭಿವೃದ್ಧಿಗೆ ಬಿಜೆಪಿ ಸದಾ ಬದ್ಧ : ಪ್ರಮೋದ ಸಾವಂತ್
Team Udayavani, Aug 21, 2021, 4:30 PM IST
ಪಣಜಿ: ಗ್ರಾಮೀಣ ಭಾಗದ ಅಭಿವೃದ್ಧಿಗಾಗಿ ಬಿಜೆಪಿ ಕಂಕಣಬದ್ಧವಾಗಿದೆ. ಸಂಕಷ್ಟದ ಮೇಲೆ ಸಂಕಷ್ಟ ಬರುತ್ತಿದ್ದರೂ ಕೂಡ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳೂ ನಿಂತಿಲ್ಲ. ಇನ್ನುಳಿದ 6 ತಿಂಗಳ ಅಧಿಕಾರಾವಧಿಯಲ್ಲಿ ಬಾಕಿ ಉಳಿದ ಎಲ್ಲಾ ಅಭಿವೃದ್ಧಿ ಕಾರ್ಯಗಳನ್ನೂ ಪೂರ್ಣಗೊಳಿಸಲಾಗುವುದು. “ಹರ್ ಘರ್ ನಲ್ ಹರ್ ಘರ್ ಜಲ್” ಯೋಜನೆ ಜಾರಿಗೆ ತಂದಿರುವ ದೇಶದ ಮೊದಲ ರಾಜ್ಯ ಗೋವಾ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.
ಸಾವರ್ಡೆ ಮತ ಕ್ಷೇತ್ರದಲ್ಲಿ ಆಯೋಜಿಸಿದ್ದ ಬಿಜೆಪಿ ಸಭೆಯನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಸಾವಂತ್- ಕಳೆದ ಎರಡು ವರ್ಷ ಕೋವಿಡ್ ಮಹಾಮಾರಿಯಿಂದಾಗಿ ಹೆಚ್ಚಿನ ತೊಂದರೆ ಅನುಭವಿಸುವಂತಾಯಿತು. ಆದರೆ ರಾಜ್ಯದಲ್ಲಿ ಯಾವುದೇ ಅಭಿವೃದ್ಧಿ ಕಾರ್ಯಗಳೂ ನಿಂತಿಲ್ಲ. ಕರೋನಾದಿಂದ ಸಾವನ್ನಪ್ಪಿದ ವ್ಯಕ್ತಿಯ ಕುಟುಂಬಕ್ಕೆ 2 ಲಕ್ಷ ರೂ. ಅನುದಾನ ನೀಡುತ್ತಿರುವ ದೇಶದ ಮೊದಲ ರಾಜ್ಯ ಗೋವಾ ರಾಜ್ಯವಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ನುಡಿದರು.
ಇದನ್ನೂ ಓದಿ:ತಿಹಾರ್, ಹಿಂಡಲಗಾ ಜೈಲಿನಿಂದ ಹೊರಬಂದವರೇ ಕಾಂಗ್ರೆಸ್ ಪಕ್ಷಕ್ಕೆ ಶ್ರೇಷ್ಠರು: ಬಿಜೆಪಿ ಟೀಕೆ
ಈ ಸಂದರ್ಭದಲ್ಲಿ ಲೋಕೊಪಯೋಗಿ ಸಚಿವ ದೀಪಕ್ ಪಾವುಸ್ಕರ್, ರಾಜ್ಯಸಭಾ ಸದಸ್ಯ ವಿನಯ್ ತೆಂಡುಲ್ಕರ್, ಎನ್ಆರ್ಐ ಆಯುಕ್ತ ನರೇಂದ್ರ ಸಾವೈಕರ್, ದಕ್ಷಿಣ ಗೋವಾ ಜಿಪಂ ಅಧ್ಯಕ್ಷೆ ಸುವರ್ಣಾ ತೆಂಡುಲ್ಕರ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ