ವಿನಯ್ ಕುಲಕರ್ಣಿಗೆ ತಿಲಕವಿಟ್ಟು ರಾಖೀ ಕಟ್ಟಿ ಸ್ವಾಗತಿಸಿದ ಶಾಸಕಿ ಹೆಬ್ಬಾಳ್ಕರ್
Team Udayavani, Aug 22, 2021, 1:41 PM IST
ಬೆಳಗಾವಿ: ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಅವರು ತಮ್ಮ ಬೆಂಬಲಿಗರೊಂದಿಗೆ ಜೈಲಿನ ಆವರಣಕ್ಕೆ ಬಂದಿದ್ದರು. ಒಂದು ಗಂಟೆಗಳ ಕಾಲ ಕಾಯುತ್ತ ಹೊರ ಭಾಗದಲ್ಲಿ ನಿಂತಿದ್ದರು. ವಿನಯ ಜೈಲಿನಿಂದ ಹೊರ ಬರುತ್ತಲೇ ಹೂಗುತ್ಛ ನೀಡಿ ಹಣೆಗೆ ತಿಲಕವಿಟ್ಟು ಅವರಿಗೆ ರಾಖೀ ಕಟ್ಟಿ ಸ್ವಾಗತಿಸಿದರು.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಹೆಬ್ಬಾಳ್ಕರ್, “ನನ್ನ ಹಾಗೂ ವಿನಯಣ್ಣನ ಕುಟುಂಬದ ಸಂಬಂಧ ರಾಜಕೀಯೇತರವಾಗಿದೆ. 25 ವರ್ಷಗಳಿಂದಲೂ ಅಣ್ಣ-ತಂಗಿ ನಂಟಿದೆ. ರಕ್ಷಾ ಬಂಧನ ಮುನ್ನಾ ದಿನವೇ ಅಣ್ಣ ಕಾರಾಗೃಹದಿಂದ ಬಿಡುಗಡೆ ಆಗುತ್ತಿದ್ದಾರೆ. ಹೀಗಾಗಿ ನಮಗೆಲ್ಲ ಇದು ಸಂತಸದ ಸುದ್ದಿ. ಅವರು ಬಿಡುಗಡೆ ಆಗುತ್ತಿರುವುದನ್ನು ಕಣ್ತುಂಬಿಕೊಳ್ಳಲು ಸಂತೋಷದಿಂದ ಸ್ವಾಗತಿಸಿಕೊಳ್ಳಲು ಇಲ್ಲಿಗೆ ಬಂದಿದ್ದೇನೆ’ ಎಂದರು.
“ವಿನಯಣ್ಣನ ಜೀವನದಲ್ಲಿ ನಡೆದ ಕಹಿ ಘಟನೆಗಳಿಂದ ಅವರು ಘಾಸಿಯಾಗಿದ್ದಾರೆ. ಅವರ ಕುಟುಂಬ ವರ್ಗದವರಿಗೂ ಬಹಳ ನೋವಾಗಿದೆ. ಈ ಪ್ರಕರಣದಲ್ಲಿ ಅವರು ಗೆದ್ದು ಬರಲಿ ಎಂಬುದಾಗಿ ಹಾರೈಸುತ್ತೇನೆ. ಕಾಂಗ್ರೆಸ್ ಪಕ್ಷ ವಿನಯಣ್ಣನ ಜೊತೆಗೆ ಇರುತ್ತದೆ. ಇವರ ಬಿಡುಗಡೆಯಿಂದ ಪಕ್ಷಕ್ಕೆ ಬಹಳ ಅನುಕೂಲ ಆಗಲಿದೆ. ಕೇವಲ ಒಂದು ಕ್ಷೇತ್ರದ ನಾಯಕರಲ್ಲದೇ ರಾಜ್ಯ ಮಟ್ಟದ ಪ್ರಭಾವಿ ನಾಯಕರು. ಉತ್ತರ ಕರ್ನಾಟಕದಲ್ಲಿ ಪ್ರಭಾವಿ ಆಗಿದ್ದಾರೆ’ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು
ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಹೋಗುವುದನ್ನು ಪ್ಲ್ಯಾನ್ ಮಾಡಿದವರು ದೇವೇಗೌಡರು – ಸಿಎಂ ಆರೋಪ
MUST WATCH
ಹೊಸ ಸೇರ್ಪಡೆ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
Sandalwood: ಬಿಸಿಲ ಧಗೆ ಎಫೆಕ್ಟ್; ಔಟ್ಡೋರ್ ಶೂಟಿಂಗ್ನಿಂದ ಸಿನಿಮಂದಿ ದೂರ
ವಿಧಾನಸಭಾ ಚುನಾವಣೆಯಲ್ಲಿ ಸಿದ್ದು,ಡಿಕೆಶಿ ನನ್ನ ಜತೆ ಕೈ ಜೋಡಿಸಿದ್ದರು:ಗಾಲಿ ಜನಾರ್ದನ ರೆಡ್ಡಿ
Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ
Bengaluru: ಫ್ಲೈಓವರ್ಗಳಲ್ಲೂ ಕಸ ಸುರಿಯುವ ವಾಹನ ಸವಾರರು