ಧ್ಯಾನಚಂದ್ ಪ್ರಶಸ್ತಿ ಪುರಸ್ಕೃತ ಫುಟ್ಬಾಲ್ ಆಟಗಾರ ‘ಹಕೀಬ್ ಸಾಬ್’ ನಿಧನ


Team Udayavani, Aug 22, 2021, 6:26 PM IST

ಧ್ಯಾನಚಂದ್ ಪ್ರಶಸ್ತಿ ಪುರಸ್ಕೃತ ಫುಟ್ಬಾಲ್ ಆಟಗಾರ ‘ಹಕೀಬ್ ಸಾಬ್’ ನಿಧನ

ಕಲಬುರಗಿ : ಭಾರತೀಯ ಫುಟ್ಬಾಲ್ ತಂಡದ ಮಾಜಿ ಆಟಗಾರ, ತರಬೇತುದಾರ, ಧ್ಯಾನಚಂದ್ ಪ್ರಶಸ್ತಿ ಪುರಸ್ಕೃತ ಸೈಯದ್ ಸಾಹೀದ್ ಹಕೀಮ್ (82) ಇನ್ನಿಲ್ಲ. ನಗರದ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ.

50ರ ದಶಕದಲ್ಲಿ ಫುಟ್ಬಾಲ್ ತಂಡದ ಖ್ಯಾತ ತರಬೇತುದಾರಾಗಿದ್ದ ಸೈಯದ್ ಅಬ್ದುಲ್ ರಹೀಮ್ ಅವರ ಪುತ್ರ ಸಾಹೀದ್ ಹಕೀಮ್. 1960ರ ರೋಮ್ ಒಲಿಂಪಿಕ್ಸ್ ನಲ್ಲಿ ಭಾರತದ ಕೋಚ್ ತಂದೆ ಸೈಯದ್ ಅಬ್ದುಲ್ ರಹೀಮ್ ಅವರು ಆಗಿದ್ದರೆ, ಸಾಹೀದ್ ಹಕೀಮ್ ತಂಡದ ಸದಸ್ಯರಾಗಿದ್ದರು. ಸಾಹೀದ್ ಹಕೀಮ್ ಅವರು “ಹಕೀಮ್ ಸಾಬ್” ಎಂದೇ ಹೆಸರುವಾಸಿಯಾಗಿದ್ದಾರೆ.

ಮೂಲತಃ ಹೈದರಾಬಾದ್ ನವರು ಆಗಿವರು ಇವರು, 1939ರಲ್ಲಿ ಹೈದರಾಬಾದ್‍ನಲ್ಲೇ ಜನಿಸಿದ್ದರು. ಕಳೆದ ಮೂರೂವರೆ ವರ್ಷಗಳ ಹಿಂದೆಯಷ್ಟೇ ಕಲಬುರಗಿಗೆ ಬಂದು ನೆಲೆಸಿದ್ದರು. ಪತ್ನಿ ಸಾದಿಯಾ ಸೈಯದಾ, ಇಬ್ಬರು ಪುತ್ರಿಯರೊಂದಿಗೆ ಇಲ್ಲಿನ ಪಿ ಅಂಡ್ ಟಿ ಕಾಲೋನಿಯಲ್ಲಿ‌ ವಾಸವಾಗಿದ್ದರು.

ಕಳೆದ ವಾರ ಹೈದರಾಬಾದ್‍ಗೆ ಅವರು ತೆರಳಿದ್ದರು. ಅಲ್ಲಿದ್ದಾಗಲೇ ಎದೆನೋವು ಕಾಣಿಸಿಕೊಂಡಿತ್ತು. ಅವರು ಅದರ ಬಗ್ಗೆ ಅಷ್ಟು ಲಕ್ಷ್ಯ ಕೊಟ್ಟಿರಲಿಲ್ಲ. ಹೈದರಾಬಾದ್ ನಿಂದ ವಾಪಸ್ ಬಂದ ಮೇಲೆ ಇಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಾಪಸಣೆ ಮಾಡಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ರವಿವಾರ ಬೆಳಗ್ಗೆ ಅವರು ವಿಧಿವಶರಾದರು‌ ಎಂದು ಪತ್ನಿ ಸಾದಿಯಾ ಸೈಯದಾ ಅವರು ಕಣ್ಣೀರು ಹಾಕಿದರು.

ತಂದೆ-ತಾಯಿ ಸಮಾಧಿಗಳು ಹೈದರಾಬಾದ್‍ನಲ್ಲಿ ಇರುವುದರಿಂದ ಇವರ ಅಂತ್ಯಸಂಸ್ಕಾರವೂ ಅಲ್ಲಿಯೇ ನಡೆಯಲಿದೆ. ಈಗಾಗಲೇ ಇವರ ಪಾರ್ಥಿವ ಶರೀರವನ್ನು ಹೈದರಾಬಾದ್‍ಗೆ ಸ್ಥಳಾಂತರಿಸಲಾಗಿದೆ ಎಂದು ಅವರು ‘ಉದಯವಾಣಿ’ಗೆ ಮಾಹಿತಿ ನೀಡಿದರು.

80ರ ಇಳಿಯಸ್ಸಿನಲ್ಲೂ ಅವರಿಗೂ ಫುಟ್ಬಾಲ್ ಬಗ್ಗೆ ಅತೀಯ ಆಸಕ್ತಿ ಇತ್ತು. ಇಲ್ಲಿನ ಆಟಗಾರರಿಗೆ ಅವರಿಗೆ ತರಬೇತಿಯನ್ನೂ ನೀಡುತ್ತಿದ್ದರು. ಸಿಎಎ ವಿರೋಧಿ ಮತ್ತು ರೈತರ ಪರ ಹೋರಾಟದಲ್ಲೂ ಅವರು ಭಾಗಿಯಾಗಿದ್ದರು. ಕಳೆದ ವರ್ಷ ಕೋವಿಡ್ ನಿಂದ ಅವರು ಕೊರೊನಾದಿಂದ ಗುಣಮುಖರಾಗಿದ್ದರು.

ಹಕೀಮ್ ಅವರು ಐದು ದಶಕಗಳ ಕಾಲ ಭಾರತೀಯ ಫುಟ್ಬಾಲ್‍ನ ಭಾಗವಾಗಿದ್ದರು. ಭಾರತೀಯ ಫುಟ್ಬಾಲ್ ತಂಡದ ಅಭಿವೃದ್ಧಿಗೆ ಆಟಗಾರರರಾಗಿ, ತರಬೇತುದಾರರಾಗಿ ಅವರು ನೀಡಿದ ಕೊಡುಗೆ ಸ್ಮರಣೀಯವಾಗಿದೆ. ಇವರ ಜೀವಮಾನದ ಸಾಧನೆಗೆ 2017ರಲ್ಲಿ ಧ್ಯಾನಚಂದ್ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು. ಧ್ಯಾನಚಂದ್ ಪ್ರಶಸ್ತಿಗೆ ಭಾಜನರಾದ ಎರಡನೇ ಫುಟ್ಬಾಲ್ ಆಟಗಾರರ ಎಂಬ ಕೀರ್ತಿ ಇವರಾಗಿತ್ತು.

ಭಾರತೀಯ ವಾಯುಸೇನೆಯಲ್ಲಿ ಸ್ಕ್ವಾಡ್ರನ್ ಲೀಡರ್ ಆಗಿಯೂ ಇವರು ಸೇವೆ ಸಲ್ಲಿಸಿದ್ದರು. ಭಾರತೀಯ ಕ್ರೀಡಾ ಪ್ರಾಧಿಕಾರದ ಪ್ರಾದೇಶಿಕ ನಿರ್ದೇಶಕರು ಹಾಗೂ 2017ರ 17 ವಯೋಮಿತಿ ಫಿಫಾ ವಿಶ್ವಕಪ್ ಟೂರ್ನಿಯಲ್ಲಿ ಪ್ರಾಜೆಕ್ಟ್ ವ್ಯವಾಸ್ಥಾಪಕರಾಗಿಯೂ ಇವರು ಕಾರ್ಯನಿರ್ವಹಿಸಿದ್ದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Hockey

Kodava ಕುಂಡ್ಯೋಳಂಡ ಹಾಕಿ ಟೂರ್ನಿಇಂದು ಫೈನಲ್‌ : ಗಿನ್ನೆಸ್‌ ಅಧಿಕಾರಿಗಳ ಭೇಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.