ಅಲ್ಪ ಅವಧಿಯಲ್ಲಿ ಹಾಲ್ ಮಾರ್ಕಿಂಗ್ ಯಶಸ್ವಿ : ಬಿಐಎಸ್
Team Udayavani, Aug 23, 2021, 2:17 PM IST
ನವ ದೆಹಲಿ : ಅಲ್ಪ ಅವಧಿಯಲ್ಲಿಯೇ ಕೇಂದ್ರದ ಹಾಲ್ ಮಾರ್ಕಿಂಗ್ ಯೋಜನೆ ಯಶಸ್ವಿಯಾಗಿದೆ. ಈ ಯೋಜನೆಯಡಿಯಲ್ಲಿ ಈಗಾಗಲೇ . 90,000ಕ್ಕೂ ಹೆಚ್ಚು ಆಭರಣ ವ್ಯಾಪಾರಿಗಳು ನೋಂದಾವಣಿ ಮಾಡಿಕೊಂಡಿದ್ದು, ಅದಾಗಲೇ ಒಂದು ಕೋಟಿಗೂ ಹೆಚ್ಚು ಆಭರಣಗಳಿಗೆ ಹಾಲ್ಮಾರ್ಕ್ ಹಾಕಲಾಗಿದೆ ಎಂದು ಬಿಐಎಸ್ ಮಾಹಿತಿ ನೀಡಿದೆ.
ಭಾರತದಲ್ಲಿ ಹಾಲ್ ಮಾರ್ಕಿಂಗ್ ಪ್ರಗತಿಯ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಬಿಐಎಸ್ ಮಹಾನಿರ್ದೇಶಕ ಪ್ರತಿಕ್ರಿಯಿಸಿದ್ದು, ನೋಂದಾಯಿತ ಆಭರಣಕಾರರ ಸಂಖ್ಯೆ 91,603 ಕ್ಕೂ ಹೆಚ್ಚಾಗಿದೆ. 2021 ಜುಲೈ 1 ರಿಂದ ಆಗಸ್ಟ್ 20ರವರೆಗೆ 1ಕೋಟಿ 17 ಲಕ್ಷ ಆಭರಣಗಳನ್ನು ಸ್ವೀಕರಿಸಲಾಗಿದೆ. ಅವುಗಳಲ್ಲಿ 1 ಕೋಟಿಗೂ 2 ಲಕ್ಷ ಆಭರಣಗಳಿಗೆ ಹಾಲ್ಮಾರ್ಕ್ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆಂದು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಶೂಟಿಂಗ್ ವೇಳೆ ಗಾಯ : ಬಾಲಿವುಡ್ ನಟ ಅಭಿಷೇಕ್ ಬಚ್ಚನ್ ಆಸ್ಪತ್ರೆಗೆ ದಾಖಲು
.ಕಳೆದ ಜುಲೈ 1ರಿಂದ 15ರವರೆಗೆ 14.28 ಲಕ್ಷ ಆಭರಣಗಳಿಗೆ ಹಾಲ್ಮಾರ್ಕ್ ಹಾಕಲಾಗಿದೆ. ನಂತರ ಆಗಸ್ಟ್ 1 ರಿಂದ 15 ರ ಅವಧಿಯಲ್ಲಿ ಹಾಲ್ ಮಾರ್ಕ್ ಹಾಕಿದ ಾಭರಣಗಳ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದಿದೆ.
ಆಭರಣದ ಉದ್ಯಮ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಕೈಗೊಂಡಿರುವ ಕ್ರಮಗಳು ಎಎಚ್ಸಿ ಹೊಂದಿರುವ 256 ಜಿಲ್ಲೆಗಳಲ್ಲಿ ಮಾತ್ರ ಹಾಲ್ಮಾರ್ಕ್ ಕಡ್ಡಾಯಗೊಳಿಸಲಾಗಿದೆ. ಇನ್ನು, ನೋಂದಣಿ ಪ್ರಕ್ರಿಯೆಯನ್ನು ಸುಲಭಗೊಳಿಸಲಾಗಿದೆ, ನೋಂದಣಿ ಶುಲ್ಕವನ್ನು ಮನ್ನಾ ಮಾಡಲಾಗಿದೆ.
ಇನ್ನು, ಹಾಲ್ ಮಾರ್ಕಿಂಗ್ ಗೆ 20, 23 ಮತ್ತು 24 ಕ್ಯಾರೆಟ್ ಚಿನ್ನದ ಆಭರಣಗಳನ್ನು ಅನುಮತಿಸಲಾಗಿದೆ. ಭಾರತೀಯ ಮಾನದಂಡವನ್ನು ತಿದ್ದುಪಡಿ ಮಾಡಲಾಗಿದ್ದು, ಒಂದೇ ರೀತಿಯ ಶುದ್ಧತೆಯ ಸಣ್ಣ ವಿಶ್ರಣಗಳಿಗೂ ಸಹ ಹಾಲ್ ಮಾರ್ಕಿಂಗ್ ಅನುಮತಿಸಲಾಗುತ್ತದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ವರ್ಷದ ಬಳಿಕ ಶಾಲೆಗೆ ಆಗಮಿಸಿದ ಮಕ್ಕಳಿಗೆ ಸಾಂಪ್ರದಾಯಿಕ ಸ್ವಾಗತ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Share Market Business: ಷೇರು ವಹಿವಾಟು-ದಕ್ಷಿಣ ಭಾರತ ಮಹಿಳೆಯರೇ ಮುಂಚೂಣಿಯಲ್ಲಿದ್ದಾರೆ!
Stock Market- 4ನೇ ಹಂತದ ಮತದಾನ: ಬಾಂಬೆ ಷೇರುಪೇಟೆ ಸೂಚ್ಯಂಕ 750 ಅಂಕ ಕುಸಿತ
Election result ಅನಿಶ್ಚಿತತೆ: 1,062 ಅಂಕ ಕುಸಿದ ಸೆನ್ಸೆಕ್ಸ್
Air India: ಪೈಲಟ್ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್ ಇಂಡಿಯಾ ವಿಮಾನ ಸಂಚಾರ ರದ್ದು
Share Market; ರೇಖಾ ಜುಂಜುನ್ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!
MUST WATCH
ಹೊಸ ಸೇರ್ಪಡೆ
Governor ಸಹಿ ನಕಲಿ ; ಕೋಟ್ಯಂತರ ರೂ. ವಂಚನೆ: ಕೊರಟಗೆರೆಯ ಜುಬೇರ್ ಅರೆಸ್ಟ್
Gopal Krishna Belur ಯಾರಿಂದಲೂ ರಾಜ್ಯ ಸರ್ಕಾರ ಅಲ್ಲಾಡಿಸಲು ಆಗಲ್ಲ
Sandalwood: ದರ್ಶನ್ ʼಡೆವಿಲ್ʼಗೆ ಕರಾವಳಿ ಬೆಡಗಿ ರಚನಾ ರೈ ನಾಯಕಿ; ಫಸ್ಟ್ ಪೋಸ್ಟರ್ ಔಟ್
Dr.G. Parameshwara ಹೆಸರು ದುರ್ಬಳಕೆ: ಕಾಂಗ್ರೆಸ್ ನಿಂದ ಮೊಹಮ್ಮದ್ ಜುಬೇರ್ ಉಚ್ಛಾಟನೆ
Belagavi,ಚಿಕ್ಕೋಡಿ ಸೇರಿ 14 ರಿಂದ 17 ಸೀಟು ಕಾಂಗ್ರೆಸ್ ಗೆಲ್ಲಲಿದೆ: ಸತೀಶ್ ಜಾರಕಿಹೊಳಿ