ಹಾಲ್‌ಮಾರ್ಕ್‌ ಕಡ್ಡಾಯದಿಂದ ತೊಂದರೆ ಜಾಸ್ತಿ: ಬದ್ರಿನಾಥ್‌


Team Udayavani, Aug 23, 2021, 6:59 PM IST

23-11

ದಾವಣಗೆರೆ: ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯಗೊಳಿಸಿರುವುದನ್ನು ವಿರೋಧಿಸಿ ಆ. 23 ರಂದು ದಾವಣಗೆರೆ ಒಳಗೊಂಡಂತೆ ದೇಶದಾದ್ಯಂತ ಚಿನ್ನ, ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡಲಾಗುವುದು ಎಂದು ದಿ| ದಾವಣಗೆರೆ ಜ್ಯೂಯಲರ್ ಅಸೋಸಿಯೇಷನ್‌ ಉಪಾಧ್ಯಕ್ಷ ಆರ್‌.ಡಿ. ಬದ್ರಿನಾಥ್‌ ತಿಳಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಕಡ್ಡಾಯಗೊಳಿಸಿರುವ ಎಚ್‌ ಯುಐಡಿಯಿಂದ (ಹಾಲ್‌ಮಾರ್ಕ್‌ ಯೂನಿಕ್‌ ಐಡೆಂಟಿಕೇಷನ್‌ ಡಿಸ್ಕಿಪ್ಷನ್‌) ಚಿನ್ನ, ಬೆಳ್ಳಿ ವರ್ತಕರು ತೊಂದರೆ ಅನುಭವಿಸಬೇಕಾಗುತ್ತದೆ. ಎಚ್‌ಯುಐಡಿ ರದ್ದುಗೊಳಿಸಬೇಕು ಇಲ್ಲವೇ ಸರಳೀಕಣಗೊಳಿಸಬೇಕು ಎಂದು ಒತ್ತಾಯಿಸಿ ಸೋಮವಾರ ದೇಶದಾದ್ಯಂತ ಚಿನ್ನ-ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡುವ ಮೂಲಕ ಕೇಂದ್ರ ಸರ್ಕಾರದ ಗಮನ ಸೆಳೆಯಲಾಗುವುದು. ದಾವಣಗೆರೆ ನಗರದಲ್ಲಿ 700ಕ್ಕೂ ಅಧಿಕ ಚಿನ್ನ-ಬೆಳ್ಳಿ ಅಂಗಡಿಗಳನ್ನು ಬಂದ್‌ ಮಾಡಲಾಗುವುದು ಎಂದರು.

ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯ ಮಾಡಿರುವುದರಿಂದ ಚಿನ್ನ-ಬೆಳ್ಳಿ ವ್ಯಾಪಾರಸ್ಥರಿಗೆ ಸಾಕಷ್ಟು ಸಮಸ್ಯೆ ಆಗುತ್ತದೆ. ಯಾವುದೇ ಚಿನ್ನ-ಬೆಳ್ಳಿ ಆಭರಣ ತಯಾರಿಸಿ ನೋಂದಣಿ ಹಾಗೂ ಎಚ್‌ಯುಐಡಿ ಮಾಡಿದ ನಂತರ ಯಾವುದೇ ಕಾರಣಕ್ಕೂ ಆಭರಣಗಳ ವಿನ್ಯಾಸ, ತೂಕದಲ್ಲಿ ಬದಲಾವಣೆ ಮಾಡುವಂತೆಯೇ ಇಲ್ಲ. ಗ್ರಾಹಕರು ಏನೇ ಇಷ್ಟಪಟ್ಟರೂ ವ್ಯಾಪಾರಸ್ಥರು ಏನೂ ಮಾಡುವಂತಿಲ್ಲ. ಹಾಗಾಗಿ ಸಾಕಷ್ಟು ಸಮಸ್ಯೆ ಆಗುತ್ತದೆ ಎಂದು ಹೇಳಿದರು. ಎಚ್‌ಯುಐಡಿ ಕಡ್ಡಾಯ ಮಾಡಿರುವುದರಿಂದ ಲೆಕ್ಕಪತ್ರ ಇಡುವುದು, ವ್ಯಾಪಾರ-ವಹಿವಾಟು ನಡೆಸುವುದು ಒಳಗೊಂಡಂತೆ ಸಾಕಷ್ಟು ಪ್ರಾಯೋಗಿಕ ತೊಂದರೆಗಳನ್ನ ಅನುಭವಿಸಬೇಕಾಗುತ್ತದೆ.

ನಂಬಿಕೆ ಮತ್ತು ವಿಶ್ವಾಸದ ಆಧಾರದ ಮೇಲೆಯೆ ನಡೆಯುವಂತಹ ಚಿನ್ನ-ಬೆಳ್ಳಿ ವ್ಯಾಪಾರ ಮುಂದುವರಿಸುವುದಕ್ಕೆ ತೊಂದರೆ ಆಗುತ್ತದೆ. ಹಾಗಾಗಿ ಕೇಂದ್ರ ಸರ್ಕಾರ ಚಿನ್ನದ ಆಭರಣಗಳಿಗೆ ಎಚ್‌ಯುಐಡಿ ಕಡ್ಡಾಯಗೊಳಿಸಿರುವುದನ್ನ ಕೈ ಬಿಡಬೇಕು ಇಲ್ಲವೇ ಸರಳೀಕರಣಗೊಳಿಸಬೇಕು ಎಂದು ಒತ್ತಾಯಿಸಿದರು. ಚಿನ್ನ-ಬೆಳ್ಳಿ ಆಭರಣಗಳಲ್ಲಿ ತಯಾರಿಕೆ ಒಳಗೊಂಡಂತೆ ಎಲ್ಲ ಹಂತದಲ್ಲಿ ಪಾರದರ್ಶಿಕತೆ, ಪರಿಶುದ್ದತೆ ಕಾಪಾಡಿ ಕೊಳ್ಳುವ ಸರ್ಕಾರದ ಉದ್ದೇಶವನ್ನ ಸ್ವಾಗತಿಸುತ್ತೇವೆ.

ಆದರೆ ಗ್ರಾಹಕರು ಅಪೇಕ್ಷೆ, ಹಣ, ಬೇಡಿಕೆಗೆ ಅನುಗುಣವಾಗಿ ಎಚ್‌ಯುಐಡಿ ಕಡ್ಡಾಯದಿಂದ ವ್ಯಾಪಾರ-ವಹಿವಾಟು ನಡೆಸುವುದು ಕಷ್ಟವಾಗುತ್ತದೆ. ಚಿನ್ನ-ಬೆಳ್ಳಿ ವಹಿವಾಟು ಕ್ಷೇತ್ರದಲ್ಲಿ ಪರಿಶುದ್ಧತೆ, ಪಾರದರ್ಶಿಕತೆ ಬಯಸುವಂತಹ ಸರ್ಕಾರ ರಾಜಸ್ತಾನದ ಕುಂದನ್‌ ಜ್ಯೂಯಲರಿ, ಝಡಾವ್‌ ಜ್ಯೂಯಲರಿಗೆ ಎಚ್‌ಯುಐಡಿನಿಂದ ರಿಯಾಯತಿ ನೀಡುವ ಮೂಲಕ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದು ದೂರಿದರು. ಸಂಘದ ಗೌರವಾಧ್ಯಕ್ಷ ಶಂಕರ್‌ ಎನ್‌. ವಿಠuಲಕರ್‌, ಅಧ್ಯಕ್ಷ ಅರುಣಾಚಲ ಎನ್‌. ರೇವಣಕರ್‌, ನಲ್ಲೂರು ಎಸ್‌. ರಾಜ್‌ಕುಮಾರ್‌, ಮಂಜುನಾಥ್‌ ವರ್ಣೇಕರ್‌ ಸುದ್ದಿಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

Anjali Ambigera; ಚಿಗಟೇರಿ ಆಸ್ಪತ್ರೆಯಿಂದಲೂ ತಪ್ಪಿಸಲು ಯತ್ನಿಸಿದ್ದ ಅಂಜಲಿ ಹಂತಕ ಗಿರೀಶ್

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

ರೈಲಿನಲ್ಲಿ ಮಹಿಳೆಯೊಂದಿಗೆ ಕಿರಿಕ್; ಚಾಕು ಇರಿತ; ಅಂಜಲಿ ಹಂತಕ ಸಿಕ್ಕಿ ಬಿದ್ದಿದ್ಹೇಗೆ?

crime

Davanagere; ಪಾರ್ಟಿ ಮಾಡಲು ಹೋಗಿದ್ದ ಯುವಕನ ಕೊಲೆ!

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere: ಕೆರೆಗೆ ವಿಷ ಹಾಕಿದ ದುಷ್ಕರ್ಮಿಗಳು… ಸಾವಿರಾರು ಮೀನುಗಳ ಮಾರಣಹೋಮ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

Davanagere; ಅಪರೂಪದ ಮದುವೆಗೆ ಸಾಕ್ಷಿಯಾದ ಗೋವಿನಕೋವಿ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Siddaramaiah ಬರ ಪರಿಹಾರದ ಮೊತ್ತ ಸಾಲಕ್ಕೆ ಹೊಂದಾಣಿಕೆ ಬೇಡ

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

Farmers ಹಣ ಸಾಲಕ್ಕೆ ಜಮೆ ಮಾಡಿಕೊಳ್ಳದಂತೆ ಸೂಚಿಸಿ: ವಿಪಕ್ಷ ನಾಯಕ ಆರ್‌. ಅಶೋಕ್‌

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

SSLC EXAM-2, ಪರಿಹಾರ ಬೋಧನ ತರಗತಿಗಳು ಮುಂದೂಡಿಕೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.