ಬೋಳದಲ್ಲಿ  ಡೀಮ್ಡ್  ಫಾರೆಸ್ಟ್‌  ಗುಮ್ಮ


Team Udayavani, Aug 24, 2021, 5:50 AM IST

ಬೋಳದಲ್ಲಿ  ಡೀಮ್ಡ್  ಫಾರೆಸ್ಟ್‌  ಗುಮ್ಮ

ಬೆಳ್ಮಣ್‌: ಕಾರ್ಕಳ ತಾಲೂಕಿನ ಬೋಳ ಎಂಬ ಗ್ರಾಮ ಇಂದಿಗೂ ಬಸ್‌ ಬಾರದೂರು ಎಂಬ ಕುಖ್ಯಾತಿಗೆ ಪಾತ್ರವಾಗಿರುವುದರ ಜತೆಗೆ ಇಲ್ಲಿನ ಕೆಂಪುಜೋರ ಎಂಬಲ್ಲಿ ವಾಸವಾಗಿರುವ‌ 4 ಕೊರಗ ಕುಟುಂಬಗಳಿಗೆ ಡೀಮ್ಡ್ ಫಾರೆಸ್ಟ್‌  ಎಂಬ ಕಾರಣಕ್ಕಾಗಿ ಇನ್ನೂ ಹಕ್ಕುಪತ್ರ ಸಿಗದೆ ಇರುವುದು ಶಾಪವಾಗಿ ಪರಿಣಮಿಸಿದೆ.

ನಿರಂತರ ನೀರು ಪೂರೈಕೆ, ಸುಂದರ ರಸ್ತೆ, ಉತ್ತಮ ಕೃಷಿ ಚಟುವಟಿಕೆ, ವಿವಿಧ ಧಾರ್ಮಿಕ ಕೇಂದ್ರಗಳ ಮೂಲಕ ಸುದ್ದಿಯಲ್ಲಿರುವ ಈ ಬೋಳದಲ್ಲಿ ಕೆಲವೊಂದು ನಕಾರಾತ್ಮಕ ವಿಚಾರಗಳು ಸುದ್ದಿಯಾಗದೆ ಉಳಿದಿವೆ.

ಸುಮಾರು 1,300ಕ್ಕೂ ಮಿಕ್ಕಿ ಕುಟುಂಬಗಳಿರುವ ಈ ಬೋಳದ  ಕೆಂಪುಜೋರಾದಲ್ಲಿ ಈ ಹಿಂದೆ 5 ಕೊರಗ ಕುಟುಂಬಗಳು ವಾಸವಾಗಿದ್ದು ಇವರಿಗೆ 3-4 ದಶಕಗಳಿಂದ ಹಕ್ಕುಪತ್ರವೇ ಲಭಿಸಿರಲಿಲ್ಲ. ಕಳೆದ ವರ್ಷ ಉದಯವಾಣಿ ಜನಪರ ಕಾಳಜಿ ವಿಭಾಗದಲ್ಲಿ ಸಚಿತ್ರ ವರದಿ ಪ್ರಕಟಿಸಿದ ಬಳಿಕ  ಸಾಮಾಜಿಕ ಕಾರ್ಯಕರ್ತ ಬೋಳ ಸತೀಶ್‌ ಪೂಜಾರಿ ಅವರು ಸಮಾಜ ಕಲ್ಯಾಣ ಇಲಾಖೆ ಹಾಗೂ ಅರಣ್ಯ ಇಲಾಖೆಯ ಬೆನ್ನು ಹಿಡಿದು ಒಂದು ಕುಟುಂಬಕ್ಕೆ ಹಕ್ಕುಪತ್ರ ದೊರಕಿಸಲು ನೆರವಾಗಿದ್ದರು. ಇದೀಗ ಉಳಿದ ಕುಟುಂಬಗಳು ಡೀಮ್ಡ್ ಫಾರೆಸ್ಟ್‌  ಎಂಬ ಭಯದ ನೆರಳಲ್ಲಿ ಹಕ್ಕು ಪತ್ರಕ್ಕಾಗಿ ಕಾಯುತ್ತಿವೆ.

ವಿದ್ಯುತ್‌ ಬಿಲ್‌ ಹೊರೆ :

ಬೋಳದಲ್ಲಿ ಅಂತರ್ಜಲ ಮಟ್ಟದ ಕೊರತೆಯಿದ್ದು 6 ಬೋರ್‌ವೆಲ್‌ ತೋಡಿದ್ದರೂ ನೀರು ಸಿಕ್ಕಿರಲಿಲ್ಲ.  ಆ ಬಳಿಕ ತೋಡಿದ ಬೋರ್‌ವೆಲ್‌ನಲ್ಲಿ ನೀರು ಸಿಕ್ಕಿತ್ತು. ಇದೀಗ ಅಲ್ಲಲ್ಲಿ ಸುಮಾರು 8 ಬೋರ್‌ವೆಲ್‌ಗ‌ಳಿದ್ದು ಅವುಗಳಿಗೆ 8 ಪಂಪ್‌ಗ್ಳನ್ನು ಅಳವಡಿಸಿದ್ದರಿಂದ ವಿದ್ಯುತ್‌ ಬಿಲ್‌ ಅಧಿಕ ಬರುತ್ತಿದೆ. ಇದು ಸ್ಥಳೀಯ ಆಡಳಿತಕ್ಕೆ ಹೊರೆಯಾಗುತ್ತಿದೆ.

ಶೈಕ್ಷಣಿಕ ಕೇಂದ್ರಗಳ ಕೊರತೆ :

ಬೋಳ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಆಗರವಾಗಿದ್ದು ದೇವಸ್ಥಾನ, ದೈವಸ್ಥಾನಗಳು  ಪ್ರಮುಖ ಭಕ್ತಿ ಕೇಂದ್ರಗಳಾಗಿವೆ. ತುಳುನಾಡಿನ ಸತ್ಯದ ಸಿರಿ ಓಡಾಡಿದ ಉಲ್ಲೇಖಗಳೂ ಇವೆ. ಆದರೆ ಇಲ್ಲಿ ಶೈಕ್ಷಣಿಕ ಕೇಂದ್ರಗಳ ಕೊರತೆ ಎದ್ದು ಕಾಣುತ್ತಿದೆ. ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಶಾಲೆಗಳಿದ್ದರೂ ಪ್ರೌಢ, ಮುಂದಿನ ಶಿಕ್ಷಣಕ್ಕಾಗಿ ಈ ಊರಿನ ವಿದ್ಯಾರ್ಥಿಗಳು ಸುಮಾರು 10-15 ಕಿ.ಮೀ. ದೂರದ ಮುಂಡ್ಕೂರು, ಬೆಳ್ಮಣ್‌, ನಿಟ್ಟೆ  ಗ್ರಾಮಗಳಿಗೆ ತೆರಳಬೇಕಾಗಿದೆ.

ಇತರ ಸಮಸ್ಯೆಗಳೇನು? :

  • ಪ್ರೌಢಶಾಲೆಯ ಜತೆ ಉನ್ನತ ಶಿಕ್ಷಣಕ್ಕಾಗಿ ಶಿಕ್ಷಣ ಸಂಸ್ಥೆಗಳು ಬೇಕು.
  • ಅಂತರ್ಜಲ ಮಟ್ಟ ಕಡಿಮೆ ಇರುವುದರಿಂದ ನದಿಯಲ್ಲಿ ಬಾವಿ ತೋಡಿ ಒಂದೇ ಪಂಪ್‌ ಬಳಸಿ ವಿದ್ಯುತ್‌ ಬಿಲ್‌ ಕಡಿಮೆ ಮಾಡಲು ಕ್ರಮ ವಹಿಸುವುದು.
  • ಜನರ ಓಡಾಟಕ್ಕೆ ಬಸ್‌ ವ್ಯವಸ್ಥೆ ಆಗಬೇಕಾಗಿದೆ.
  • ರೈತ ಸಂಪರ್ಕ ಕೇಂದ್ರ ಅಗತ್ಯವಿದೆ.

ಅಭಿವೃದ್ಧಿ  ನಿರೀಕ್ಷೆ :

ಇಲ್ಲಿನ ಶಾಸಕರು  ಪ್ರಸ್ತುತ ಸಚಿವರಾಗಿರುವುದರಿಂದ ಇನ್ನಷ್ಟು ಅಭಿವೃದ್ಧಿ ನಿರೀಕ್ಷಿಸಲಾಗಿದೆ. ಅಲ್ಲದೆ ಕೋಟ ಶ್ರೀನಿವಾಸ ಪೂಜಾರಿ ಅವರು ಸಮಾಜ ಕಲ್ಯಾಣ ಸಚಿವರಾಗಿ  ಆಯ್ಕೆಯಾಗಿರುವುದರಿಂದ ಕೆಂಪುಜೋರ ಕೊರಗರ ಕುಟುಂಬದ ಹಕ್ಕು ಪತ್ರದ ಸಮಸ್ಯೆ ಪರಿಹಾರ ಸುಲಭ.ಬೋಳ ಸತೀಶ್‌ ಪೂಜಾರಿ, ಸಾಮಾಜಿಕ ಕಾರ್ಯಕರ್ತ

ಕೃಷಿಕರತ್ತ ಗಮನ ಕೊಡಿ  :

ಬೋಳದಲ್ಲಿ ಬಸ್‌ನ ಜತೆ ಕೆಲ ವೊಂದು ಮೂಲ ಸೌಕರ್ಯಗಳ ಕೊರತೆ ಇದೆ. ಕೃಷಿಕರಿಗೆ ಪೂರಕ ನೆರವು ಸಂಬಂಧ ಪಟ್ಟವರಿಂದ ದೊರಕುತ್ತಿಲ್ಲ. ಕೃಷಿಕರ ಬೆಳೆಗೆ ಬೆಂಬಲ ಬೆಲೆ ಅಗತ್ಯ. ಕೃಷಿಕರತ್ತ ಗಮನ ಕೊಡಿ.  -ಸಚ್ಚೇರಿಪೇಟೆ ಶರತ್‌ ಶೆಟ್ಟಿ, ಕೃಷಿಕ

 

ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

G. T. Devegowda; ಲೈಂಗಿಕ ದೌರ್ಜನ್ಯ ಪ್ರಕರಣ ಗೊತ್ತಿದ್ದರೆ ಟಿಕೆಟ್‌ ನೀಡುತ್ತಿರಲಿಲ್ಲ

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರದ ಜನರು

Dharwad; ಮತದಾನಕ್ಕಾಗಿ ತವರಿಗೆ ಮರಳಿದ ವಿನಯ್ ಕುಲಕರ್ಣಿ; ಸಪ್ತಾಪೂರದಲ್ಲಿ ಕಿಕ್ಕಿರಿದ ಜನರು

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Prajwal Revanna ಪ್ರಕರಣವನ್ನು ಸಿಬಿಐಗೆ ವಹಿಸಲಿ: ಜಗದೀಶ್‌ ಶೆಟ್ಟರ್‌

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ

Karnataka BJP ಪೋಸ್ಟ್ ಡಿಲೀಟ್ ಮಾಡಲು ಟ್ವಿಟರ್ ಗೆ ಸೂಚಿಸಿದ ಚುನಾವಣಾ ಆಯೋಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

13

Byndoor: ಬಾವಿಗೆ ಬಿದ್ದ ವ್ಯಕ್ತಿಯ ರಕ್ಷಣೆ

11-

Sulya: ಕಾರು-ಬೈಕ್‌ ಅಪಘಾತ; ಸವಾರನಿಗೆ ಗಾಯ

Raichur; ಚುನಾವಣೆ ನಿರತ ಬಿಎಲ್‌ಒ ಸಾವು

Raichur; ಚುನಾವಣೆ ಕರ್ತವ್ಯನಿರತ ಬಿಎಲ್‌ಒ ಸಾವು

10-

Koratagere: ಪಟ್ಟಣಕ್ಕೆ 10 ದಿನಕ್ಕೊಮ್ಮೆ ನೀರು ಸರಬರಾಜು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.