ನೋಡಲ್ ಅಧಿಕಾರಿ ನೇಮಕ: ಹೈಕೋರ್ಟ್ಗೆ ಸರಕಾರ ಮಾಹಿತಿ
Team Udayavani, Aug 24, 2021, 6:35 AM IST
ಬೆಂಗಳೂರು: ಸೇವಾವಧಿಯಲ್ಲಿ ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪಕ್ಕೆ ಒಳಗಾದ ಸರಕಾರಿ ನೌಕರರ ವಿರುದ್ಧ ಲೋಕಾ
ಯುಕ್ತ ಮತ್ತು ಉಪ ಲೋಕಾ ಯುಕ್ತರು ಸಲ್ಲಿಸಿ ರುವ ವಿಚಾರಣ ವರದಿಗಳ ಮೇಲೆ ಕ್ರಮ ಕೈಗೊಂಡ ಬಗ್ಗೆ ಸಮಗ್ರ ವರದಿಯನ್ನು ನ್ಯಾಯಾ
ಲಯಕ್ಕೆ ಸಲ್ಲಿಸಲು ಸಂಬಂಧಪಟ್ಟ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಲು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಜಂಟಿ ಕಾರ್ಯದರ್ಶಿ (ವಿಚಕ್ಷಣ) ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ ಎಂದು ಸರಕಾರ ಹೈಕೋರ್ಟ್ಗೆ ತಿಳಿಸಿದೆ.
ಈ ಸಂಬಂಧ ಸಾಮಾಜಿಕ ಕಾರ್ಯಕರ್ತ ಸಾಯಿ ದತ್ತಾ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಿರಿಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠ ಸೋಮವಾರ ವಿಚಾರಣೆ ನಡೆಸಿತು.
ವಿಚಾರಣೆ ವೇಳೆ ಸರಕಾರಿ ವಕೀಲ ವಿಜಯ್ ಕುಮಾರ್ ಪಾಟೀಲ್ ವರದಿ ಸಲ್ಲಿಸಿದರು. ಭ್ರಷ್ಟಾಚಾರ ಮತ್ತು ದುರ್ನಡತೆ ಆರೋಪಕ್ಕೆ ಒಳಗಾಗಿರುವ ಸರಕಾರಿ ನೌಕರರ ವಿರುದ್ಧ ವಿಚಾರಣೆ ನಡೆಸಿ ಕ್ರಮ ಜರಗಿಸಲು ಶಿಫಾರಸು ಮಾಡಿ ಲೋಕಾಯುಕ್ತ ಮತ್ತು ಉಪ ಲೋಕಾಯುಕ್ತರು 1984ರ ಸೆಕ್ಷನ್ 12(1) ಅಡಿಯಲ್ಲಿ ಸಲ್ಲಿಸಿದ ವರದಿ ಆಧರಿಸಿ ಸಕ್ಷಮ ಪ್ರಾಧಿಕಾರ ಕೈಗೊಂಡ ಕ್ರಮಗಳ ಕುರಿತ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ಮತ್ತು ಈ ವಿಚಾರದಲ್ಲಿ ಸಮನ್ವಯತೆ ಸಾಧಿಸಲು ಸಾಧಿಸಲು ಸಿಬಂದಿ ಮತ್ತು ಆಡಳಿತ ಸುಧಾರಣ ಇಲಾಖೆಯ ಜಂಟಿ ಕಾರ್ಯದರ್ಶಿ (ವಿಚಕ್ಷಣ) ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ. ಈ ಕುರಿತು 2021ರ ಆ.6ರಂದು ಆದೇಶ ಹೊರಡಿಸಲಾಗಿದೆ ಎಂದು ಪ್ರಮಾಣಪತ್ರದಲ್ಲಿ ತಿಳಿಸಲಾಗಿದೆ.
ಇದನ್ನು ದಾಖಲಿಸಿಕೊಂಡ ನ್ಯಾಯಪೀಠ ಮುಂದಿನ ಪ್ರಗತಿ ಬಗ್ಗೆ ವರದಿ ಸಲ್ಲಿಸಲು ನಿರ್ದೇಶಿಸಿ ವಿಚಾರಣೆಯನ್ನು ಸೆ.9ಕ್ಕೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
Desi Swara: ಹೊನ್ನುಡಿ- ಕಲಿಯುವ ಮನೋಭಾವ ಮುಖ್ಯ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ