ರಾಪ್ಟಿಂಗ್, ಬೋಟಿಂಗ್ ಹಾಗೂ ಜಲಕ್ರೀಡೆಗೆ ಅನುಮತಿ ನೀಡಿ : ಆರ್.ಅಶೋಕ್ ಗೆ ಮನವಿ
Team Udayavani, Aug 24, 2021, 2:01 PM IST
ದಾಂಡೇಲಿ : ಕೋವಿಡ್ ಮೂರನೇ ಅಲೆಯ ಹಿನ್ನಲೆಯಲ್ಲಿ ರಾಪ್ಟಿಂಗ್, ಬೋಟಿಂಗ್ ಹಾಗೂ ಜಲಕ್ರೀಡೆಯನ್ನು ಸ್ಥಗಿತಗೊಳಿಸಿರುವುದರಿಂದ ಪ್ರವಾಸೋದ್ಯಮ ತೀವ್ರ ಸಂಕಷ್ಟವನ್ನು ಎದುರಿಸುತ್ತಿದ್ದು, ಪ್ರವಾಸೋದ್ಯಮವನ್ನೆ ನಂಬಿರುವ ದಾಂಡೇಲಿ-ಜೊಯಿಡಾ ತಾಲೂಕಿನ ಸಾವಿರಾರು ಜನರ ಬದುಕು ದುಸ್ತರಗೊಂಡಿದ್ದಲ್ಲದೇ, ಪ್ರವಾಸೋದ್ಯಮಿಗಳು ಸಹ ಸಂಕಷ್ಟದಲ್ಲಿದ್ದಾರೆ.
ಜಲಕ್ರೀಡೆಯನ್ನು ಸ್ಥಗಿತಗೊಳಿಸಿರುವುದರಿಂದ ಪ್ರವಾಸೋದ್ಯಮ ಚಟುವಟಿಕೆ ಸಂಪೂರ್ಣ ನೆಲಕಚ್ಚಿದ್ದು, ಈ ನಿಟ್ಟಿನಲ್ಲಿ ಮತ್ತೇ ರಾಪ್ಟಿಂಗ್, ಬೋಟಿಂಗ್ ಮತ್ತು ಜಲಕ್ರೀಡೆಯನ್ನು ನಡೆಸಲು ಅನುಮತಿಯನ್ನು ನೀಡಿ ಪ್ರವಾಸೋದ್ಯಮವನ್ನು ಬೆಳೆಸುವಂತೆ ದಾಂಡೇಲಿ-ಜೋಯಿಡಾ ಹೋಂ ಸ್ಟೇ / ರೆಸಾರ್ಟ್ಸ್ ಗಳ ಸಂಘದ ನಿಯೋಗವು ಇಂದು (ಮಂಗಳವಾರ, ಆಗಸ್ಟ್ 24) ಬೆಳಿಗ್ಗೆ ರಾಜ್ಯದ ಕಂದಾಯ ಸಚಿವರಾದ ಆರ್.ಅಶೋಕ್ ಅವರನ್ನು ಬೆಂಗಳೂರಿನ ಪದ್ಮನಾಭನಗರದಲ್ಲಿರುವ ಅವರ ಕಚೇರಿಯಲ್ಲಿ ಭೇಟಿಯಾಗಿ ಲಿಖಿತ ಮನವಿ ನೀಡಿ ವಿನಂತಿಸಲಾಗಿದೆ.
ಇದನ್ನೂ ಓದಿ : ಇನ್ಮುಂದೆ ವಾಟ್ಸ್ಯಾಪ್ ಮೂಲಕವೂ ಲಸಿಕೆಯ ಸ್ಲಾಟ್ ಬುಕ್ ಮಾಡಬಹುದು : ಕೇಂದ್ರ
ಮನವಿ ಸ್ವೀಕರಿಸಿದ ಸಚಿವ ಆರ್.ಅಶೋಕ ಅವರು ರಾಪ್ಟಿಂಗ್, ಬೋಟಿಂಗ್ ಮತ್ತು ಜಲಕ್ರೀಡೆಗೆ ಸಂಬಂಧಿಸಿದಂತೆ ಟಾಸ್ಕ್ ಪೋರ್ಸ್ ಸಭೆಯಲ್ಲಿ ಚರ್ಚಿಸಿ, ಶೀಘ್ರದಲ್ಲೆ ಅನುಮತಿಯನ್ನು ನೀಡುವುದಾಗಿ ನಿಯೋಗಕ್ಕೆ ಭರವಸೆ ನೀಡಿದ್ದಾರೆ.
ಇನ್ನು, ಸಚಿವ ಆರ್. ಅಶೋಕ್ ಅವರು ದಾಂಡೇಲಿ-ಜೊಯಿಡಾ ತಾಲೂಕಿನ ಪ್ರವಾಸೋದ್ಯಮ ಬೆಳವಣಿಗೆಯ ಬಗ್ಗೆ ನಿಯೋಗದ ಜೊತೆ ಮಾಹಿತಿಯನ್ನು ಪಡೆದುಕೊಂಡು, ಕೋವಿಡ್ ಮುನ್ನೆಚ್ಚರಿಕೆಯೊಂದಿಗೆ ಪ್ರವಾಸೋದ್ಯಮ ಚಟುವಟಿಕೆಯನ್ನು ನಡೆಸುವಂತೆ ಸೂಚನೆ ನೀಡಿದ್ದಾರೆಂದು ನಿಯೋಗವು ಮಾದ್ಯಮಕ್ಕೆ ತಿಳಿಸಿದೆ. ಸರಳ ಸಹೃದಯಿಯಾಗಿ ಉಭಯ ಕುಶಲೋಪರಿ ನಡೆಸಿದ ಸಚಿವರ ನಡವಳಿಕೆಯ ಬಗ್ಗೆ ಹಾಗೂ ತಕ್ಷಣವೆ ಸ್ಪಂದಿಸಿದ ಕಾರ್ಯವೈಖರಿಯ ಬಗ್ಗೆ ನಿಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.
ನಿಯೋಗದಲ್ಲಿ ದಾಂಡೇಲಿ-ಜೋಯಿಡಾ ಹೋಂ ಸ್ಟೇ/ರೆಸಾರ್ಟ್ಸ್ ಗಳ ಸಂಘದ ಅಧ್ಯಕ್ಷ ವಿಷ್ಣುಮೂರ್ತಿ ರಾವ್ ಹಾಗೂ ಸಂಘದ ಪದಾಧಿಕಾರಿಗಳಾದ ಅರುಣಾದ್ರಿ ರಾವ್, ನರಸಿಂಗ ರಾಠಿ ಮತ್ತು ಶ್ರೀಷಾ ರಾವ್ ಉಪಸ್ಥಿತರಿದ್ದರು. ಇದೇ ನಿಯೋಗ ರಾಜ್ಯ ಸರಕಾರದ ಪ್ರಧಾನ ಕಾರ್ಯದರ್ಶಿಯವರನ್ನು ಭೇಟಿಯಾಗಿ ಮನವಿ ಮಾಡಿದೆ.
ಇದನ್ನೂ ಓದಿ : ಕೋವಿಡ್ ಅಶಿಸ್ತಿನ ಸುಸ್ತು ದಾಟಿದ ವಿದ್ಯಾರ್ಥಿ ವೃಂದ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
MUST WATCH
ಹೊಸ ಸೇರ್ಪಡೆ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ