ವರ್ಕ್‌ ಫ್ರಂ ಹೋಂ ಮುಂದುವರಿಸಲು ಸಲಹೆ


Team Udayavani, Aug 25, 2021, 4:13 PM IST

ವರ್ಕ್‌ ಫ್ರಂ ಹೋಂ ಮುಂದುವರಿಸಲು ಸಲಹೆ

ಬೆಂಗಳೂರು: ಹೊರವರ್ತುಲ ರಸ್ತೆ(ಓಆರ್‌ಆರ್‌)ಯಲ್ಲಿ “ನಮ್ಮ ಮೆಟ್ರೋ’ಕಾಮಗಾರಿ ಆರಂಭಗೊಂಡಿದ್ದು, ಈ ಹಿನ್ನೆಲೆಯಲ್ಲಿ ಐಟಿ ಕಂಪನಿಗಳು 2022ರ ಡಿಸೆಂಬರ್‌ವರೆಗೆ ಮನೆಯಿಂದಲೇಕೆಲಸ (ವರ್ಕ್‌ ಫ್ರಂ ಹೋಂ) ಪದ್ಧತಿಯನ್ನು ಮುಂದುವರಿಸುವುದು ಸೂಕ್ತ!

– ಸರ್ಕಾರ ಇಂತಹದ್ದೊಂದು ಸಲಹೆಯನ್ನು ಐಟಿ ಕಂಪನಿಗಳ ಮುಂದಿಟ್ಟಿದೆ. ಕೋವಿಡ್‌ ಹಾವಳಿ ಹಿನ್ನೆಲೆಯಲ್ಲಿ ಈಗಾಗಲೇ ಕಳೆದ ಒಂದು ವರ್ಷದಿಂದಲೂ ಬಹುತೇಕ ಐಟಿ ಕಂಪನಿಗಳು ವರ್ಕ್‌ ಫ್ರಂ ಹೋಂ ವ್ಯವಸ್ಥೆ ಅಳವಡಿಸಿ ಕೊಂಡಿವೆ. ಇದೇ ಪದ್ಧತಿಯನ್ನು ಕಂಪನಿಗಳು ಅದರಲ್ಲೂ ವಿಶೇಷವಾಗಿ ಓಆರ್‌ಆರ್‌ ಮಾರ್ಗದಲ್ಲಿ ಬರುವ ಟೆಕ್‌ ಪಾರ್ಕ್‌ಗಳು, ಕಂಪನಿಗಳು 2022ರ ಡಿಸೆಂಬರ್‌ವರೆಗೆ ಮುಂದುವರಿಸುವುದು ಸೂಕ್ತ.

ಅಲ್ಲದೆ,ಕಚೇರಿಗೆಬರಲೇಬೇಕಾದ ಸಿಬ್ಬಂದಿಯ ಕೆಲಸದ ಅವಧಿಯನ್ನು ಪರಿಷ್ಕರಿಸಬೇಕು ಹಾಗೂ ಬಿಎಂಟಿಸಿಯಂತಹ ಸಮೂಹ ಸಾರಿಗೆ ಬಳಕೆಗೆ ಪ್ರೋತ್ಸಾಹಿಸಬೇಕು ಎಂದು ಎಲೆಕ್ಟ್ರಾನಿಕ್‌,ಐಟಿ-ಬಿಟಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಡಾ.ಇ.ವಿ. ರಮಣರೆಡ್ಡಿ ಹೇಳಿದ್ದಾರೆ.

ಇದನ್ನೂ ಓದಿ:ಇಂಡಿಯನ್ ಐಡಲ್ 12: ಪ್ರಶಸ್ತಿ ವಿಜೇತ ಪವನ್ ದೀಪ್ ಉತ್ತರಾಖಂಡ್ ನ ಬ್ರ್ಯಾಂಡ್ ಅಂಬಾಸಿಡರ್

ಈ ಸಂಬಂಧ ರಾಷ್ಟೀಯ ಸಾಫ್ಟ್ ವೇರ್‌ ಮತ್ತು ಸೇವಾ ಕಂಪನಿಗಳ ಸಂಘ (ನ್ಯಾಸ್ಕಾಂ) ಪ್ರಾದೇಶಿಕ ನಿರ್ದೇಶಕರಿಗೆ ಪತ್ರ ಬರೆದಿರುವ ಡಾ.ರಮಣರೆಡ್ಡಿ, “ಸಂಚಾರದಟ್ಟಣೆ ಉಂಟಾಗದಿರಲು ಹಾಗೂ ಮೆಟ್ರೋ ಕಾಮಗಾರಿ ಯಾವುದೇ ಅಡತಡೆ ಇಲ್ಲದೆ ಸಾಗಲು ವರ್ಕ್‌ ಫ್ರಂ ಹೋಂ ಪದ್ಧತಿಯನ್ನು ಇನ್ನೂಒಂದೂವರೆ ವರ್ಷ ಮುಂದುವರಿಸಲು ಕೋರಲಾಗಿದೆ. ಇದೊಂದು ಸಲಹೆ ಅಷ್ಟೇ’ ಎಂದು ತಿಳಿಸಿದ್ದಾರೆ.

ಓಆರ್‌ಆರ್‌ನಲ್ಲಿ ಅಂದರೆ ಸೆಂಟ್ರಲ್‌ ಸಿಲ್ಕ್ ಬೋರ್ಡ್‌ನಿಂದ ಕೆ.ಆರ್‌. ಪುರಂ ನಡುವೆ “ನಮ್ಮ ಮೆಟ್ರೋ’ ಎರಡನೇ ಹಂತದ 2ಎ ಅಡಿ ಎತ್ತರಿಸಿದ ಮಾರ್ಗ ನಿರ್ಮಾಣ ಕಾಮಗಾರಿ ಆರಂಭಗೊಂಡಿದ್ದು, ಇದು ಒಂದೂವರೆಯಿಂದ ಎರಡು ವರ್ಷ ಮುಂದುವರಿಯಲಿದೆ. ಐಟಿ ಹಬ್‌ ಆಗಿರುವ ಉದ್ದೇಶಿತ ಮಾರ್ಗವು ಈ ಮೊದಲೇ ಅತ್ಯಧಿಕ ಸಂಚಾರ ದಟ್ಟಣೆ ಇರುವ ರಸ್ತೆಯಾಗಿದೆ. “ಪೀಕ್‌ಅವರ್‌’ನಲ್ಲಂತೂಹೆಜ್ಜೆ-ಹೆಜ್ಜೆಗೂ ಇಲ್ಲಿ ವಾಹನ ಸವಾರರು ಪರದಾಡುತ್ತಾರೆ.

ಈ ಹಿನ್ನೆಲೆಯಲ್ಲಿ ಸರ್ಕಾರವು ಆರು ಪಥದ ರಸ್ತೆಯಲ್ಲಿ “ಬಸ್‌ ಆದ್ಯತಾ ಪಥ’ (ಬಿಪಿಎಲ್‌), ಬೈಸಿಕಲ್‌ ಪಥ ನಿರ್ಮಾಣ, ಸಮೂಹ ಸಾರಿಗೆ ಪ್ರೋತ್ಸಾಹ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡಿದೆ. ಆದಾಗ್ಯೂ ಕೋವಿಡ್‌ ಪೂರ್ವದಲ್ಲಿ ಸಂಚಾರದಟ್ಟಣೆ ವಿಪರೀತ ಇರುವುದನ್ನು
ಕಾಣಬಹುದು. ಈ ಮಧ್ಯೆ ಮೆಟ್ರೋ ಕಾಮಗಾರಿ ಬೇರೆ ಕೈಗೆತ್ತಿಕೊಳ್ಳಲಾಗಿದ್ದು, ಸಹಜಸ್ಥಿತಿಗೆ ಮರಳಿದರೆ, ವಾಹನ ಸವಾರರು ತೊಂದರೆ ಅನುಭವಿಸುವ ಸಾಧ್ಯತೆ ಇದೆ. ಆದ್ದರಿಂದ ವರ್ಕ್‌ ಫ್ರಂ ಹೋಂ ವ್ಯವಸ್ಥೆ ಮುಂದುವರಿಕೆ ಹಾಗೂ ಸಮೂಹ ಸಾರಿಗೆ ಬಳಕೆಗೆ ಪ್ರೋತ್ಸಾಹದಾಯಕ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ

Belthangady ತಾಯಿ, ಮಗನ ಮೇಲೆ ಸಂಬಂಧಿಕರಿಂದ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ… ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

Bengaluru water crisis: ನೀರು ಯಾವಾಗ ಬರುತ್ತೆ?: ಮೊಬೈಲಲ್ಲೇ ಮಾಹಿತಿ

10

Bengaluru: ಫ್ಲೈಓವರ್‌ಗಳಲ್ಲೂ ಕಸ ಸುರಿಯುವ ವಾಹನ ಸವಾರರು 

7

Bengaluru: ಸೈಕಲ್‌ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್‌ ಬಂಧನ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

BC Road, ಉಪ್ಪಿನಂಗಡಿಯಲ್ಲಿ ಸಂಚಾರ ಸಂಕಷ್ಟ : ಗಂಟೆಗಳ ಕಾಲ ಟ್ರಾಫಿಕ್‌ ಜಾಮ್‌

Temperature Increase: ಮೊಟ್ಟೆ ದರ ಇಳಿಕೆ

Retail Market; ತಾಪಮಾನ ಏರಿಕೆ: ಮೊಟ್ಟೆ ದರ ಇಳಿಕೆ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna Case ಜಾಲತಾಣದಲ್ಲಿ ಅಶ್ಲೀಲ ವೀಡಿಯೋ ಡಿಲೀಟ್‌ ಮಾಡಿಸಲು ಕ್ರಮ: ಪರಂ

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ವಿದೇಶಕ್ಕೆ ಹಾರಲು ರಾಜ್ಯ ಸರಕಾರದ ವೈಫ‌ಲ್ಯ ಕಾರಣ: ಅಶೋಕ್‌

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Prajwal Revanna ಬಂಧನಕ್ಕೆ ಸಹಕರಿಸುವಂತೆ ಪ್ರಧಾನಿಗೆ ಸಿಎಂ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.