ಬೌದ್ಧಿಕವಾಗಿ ಕಾಂಗ್ರೆಸ್ ಸಂಪೂರ್ಣ ದಿವಾಳಿಯಾಗಿದೆ : ನಳೀನ್‌ ಕುಮಾರ್ ಕಟೀಲ್


Team Udayavani, Aug 25, 2021, 5:35 PM IST

Intellectually the Congress is completely bankrupt: Nalin Kumar Kateel

ಮಂಡ್ಯ: ಕಾಂಗ್ರೆಸ್ ಬಳಿ ಯಾವುದೇ ವಿಷಯಗಳಿಲ್ಲ. ಬೌದ್ಧಿಕವಾಗಿ ಕಾಂಗ್ರೆಸ್ ಸಂಪೂರ್ಣ ದಿವಾಳಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‌ ಕುಮಾರ್ ಕಟೀಲ್ ಹೇಳಿದ್ದಾರೆ.

ನಗರದಲ್ಲಿ ರಾಜ್ಯಮಟ್ಟದ ಪದಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದಲ್ಲಿ ಲೋಕಸಭೆ ನಿಲ್ಲಿಸುವ ಷಡ್ಯಂತ್ರ ಕಾಂಗ್ರೆಸ್‌ನವರದ್ದು ಹಾಗೂ ವಿರೋಧ ಪಕ್ಷವಾಗಿ ಜವಾಬ್ದಾರಿಯುತ ನೆಲೆ ತೋರಲಿಲ್ಲ ಎಂದು ಕಿಡಿಕಾರಿದ್ದಾರೆ.

ಇದನ್ನೂ ಓದಿ : ಗೋವಾ : ಕಾಂಗ್ರೇಸ್ ನ ಚುನಾವಣಾ ನಿರೀಕ್ಷಕ ಪಿ.ಚಿದಂಬರಂ ಆಗಮನ  

ಚೀನಾ, ಪಾಕಿಸ್ತಾನಕ್ಕೆ ಕಾಂಗ್ರೆಸ್ ಬೆಂಬಲ

ಚೀನಾ, ಪಾಕಿಸ್ತಾನಕ್ಕೆ ಬೆಂಬಲ ಕೊಡುವಂತದ್ದನ್ನ ಕಾಂಗ್ರೆಸ್‌ ನವರು ಮಾಡುತ್ತಾರೆ. ಕಾಶ್ಮೀರ ಪ್ರತ್ಯೇಕ ಎಂಬ ಹೇಳಿಕೆಯನ್ನು ಪಂಜಾಬ್ ಕಾಂಗ್ರೆಸ್‌ ನ ಪ್ರಮುಖರು ನೀಡಿದ್ದಾರೆ. ಕೇಂದ್ರ, ರಾಜ್ಯದಲ್ಲಿ ಕಾಂಗ್ರೆಸ್ ಇಬ್ಭಾಗವಾಗಿದೆ. ಹೀಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜಗಳ ಪ್ರಾರಂಭವಾಗಿದೆ. ಮುಂದೆ ಯಾರು ಸಿಎಂ ಎನ್ನುವ ವಿಚಾರದಲ್ಲಿ ಜಗಳವಾಡುತ್ತಾ, ರಾಜ್ಯದ ಪದಾಧಿಕಾರಿಗಳ ಆಯ್ಕೆಯನ್ನೇ ಕಾಂಗ್ರೆಸ್ ಮಾಡಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಮೈಸೂರಿನಲ್ಲಿ ಮೇಯರ್ ಸ್ಥಾನ ಲಭಿಸಿದ್ದಕ್ಕೆ ಅಭಿನಂದನೆ 

ಮೊದಲ ಬಾರಿಗೆ ಬಿಜೆಪಿಗೆ ಮೈಸೂರು ಮೇಯರ್ ಸ್ಥಾನ ಸಿಕ್ಕಿದ್ದಕ್ಕೆ ಅಭಿನಂದನೆ ತಿಳಿಸುತ್ತೇನೆ. ಹಾಸನ, ಮಂಡ್ಯ, ಮೈಸೂರು ಭಾಗದಲ್ಲಿ ಬಿಜೆಪಿಗೆ ವೇಗ ಸಿಗಬೇಕು ಎಂಬುದಿತ್ತು. ಅದರ ಮೊಲದ ಪ್ರಯತ್ನದಲ್ಲೇ ಮೈಸೂರು ಮೇಯರ್ ಸ್ಥಾನ ಗೆದ್ದಿದ್ದೇವೆ ಎಂದಿದ್ದಾರೆ.

ಮಂಡ್ಯದಲ್ಲಿ ಬಿಜೆಪಿಗೆ ನೆಲೆ

ಮಂಡ್ಯದಲ್ಲಿ ಬಿಜೆಪಿ ಪದಾಧಿಕಾರಿಗಳ ಸಭೆ ಯಶಸ್ವಿಯಾಗಿ ನಡೆದಿದೆ. ಬಿಜೆಪಿ ಪರವಾದ ವಾತಾವರಣ ಮಂಡ್ಯದಲ್ಲಿದೆ. ಎಲ್ಲ ನಾಯಕರ ಜತೆ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಸಲಾಗಿದ್ದು, ಪಕ್ಷದ ಸಂಘಟನೆಗೂ ಒತ್ತು ನೀಡಲಾಗಿದೆ. ಇದರಿಂದ ಮುಂದಿನ ಚುನಾವಣೆಗಳಲ್ಲಿ ಜಿಲ್ಲೆಯಲ್ಲಿ ಬಿಜೆಪಿಗೆ ಗೆಲುವು ಸಾಧಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹಿರಿಯ ಮಾರ್ಗದರ್ಶನಕ್ಕೆ ಸಿಎಂ ದೆಹಲಿಗೆ

ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ದೆಹಲಿ ಪ್ರವಾಸ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಬೇರೆ ಬೇರೆ ಕಾರಣಗಳಿಗೆ ಸಿಎಂ ದೆಹಲಿಗೆ ಹೋಗಿದ್ದಾರೆ. ಮಾತುಕತೆ ನಡೆಸಿ ಹಿರಿಯ ಮಾರ್ಗದರ್ಶನದಂತೆ ನಡೆಯಲಿದ್ದಾರೆ ಎಂದಿದ್ದಾರೆ.

ಯತ್ನಾಳ್‌ ಗೆ ಎಚ್ಚರಿಕೆ 

ಸರ್ಕಾರ ವಿರುದ್ಧ ಮತ್ತೆ ಯತ್ನಾಳ್ ವಾಗ್ದಾಳಿ ವಿಚಾರವಾಗಿ ಮಾತನಾಡಿದ ಅವರು, ಯತ್ನಾಳ್ ಅವರಿಗೆ ಈಗಾಗಲೇ ಎಚ್ಚರಿಕೆ ನೀಡಲಾಗಿದೆ. ರಾಷ್ಟಿçÃಯ ಶಿಸ್ತು ಸಮಿತಿ ಎಲ್ಲವನ್ನು ಗಮನಿಸುತ್ತಿದೆ ಎಂದು ಹೇಳಿದ್ದಾರೆ.

ಕೋವಿಡ್ ಉಲ್ಲಂಘನೆಯಾದರೆ ಕ್ರಮ ಕೈಗೊಳ್ಳಲಿ

ಬಿಜೆಪಿ ಸಭೆಯಲ್ಲಿ ಕೋವಿಡ್ ನಿಯಮ ಉಲ್ಲಂಘನೆ ವಿಚಾರದಲ್ಲಿ ಎಲ್ಲರಿಗೂ ಒಂದೇ ಲೆಕ್ಕ, ತಪ್ಪಿದರೇ ಕ್ರಮ ಕೈಗೊಳ್ಳಲಿ ಎಂದ ಅವರು, ಬಿಬಿಎಂಪಿ ಸ್ವೆಟರ್ ಹಗರಣದಲ್ಲಿ ನಟ ಜಗ್ಗೇಶ್ ಸಹೋದರ ನಟ ಕೋಮಲ್ ಹೆಸರು ಕೇಳಿ ಬಂದ ವಿಚಾರಕ್ಕೆ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಇದರ ಬಗ್ಗೆ ವರದಿ ತರಿಸಿಕೊಳ್ಳುತ್ತೇನೆ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಇದನ್ನೂ ಓದಿ : ಇಂಡಿಯನ್ ಐಡಲ್ 12: ಪ್ರಶಸ್ತಿ ವಿಜೇತ ಪವನ್ ದೀಪ್ ಉತ್ತರಾಖಂಡ್ ನ ಬ್ರ್ಯಾಂಡ್ ಅಂಬಾಸಿಡರ್

ಟಾಪ್ ನ್ಯೂಸ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.