ತಾಪಂ-ಜಿಪಂ ಚುನಾವಣೆಗೆ ಭರ್ಜರಿ ತಯಾರಿ: ಎರಡು ಕುಟುಂಬಗಳ ಮಧ್ಯೆ ಕದನ
ಈ ಕ್ಷೇತ್ರದ ಮೇಲೆ ಕಾಂಗ್ರೆಸ್ ಪಕ್ಷದ ಪ್ರಭಾವ ಹೆಚ್ಚಿದೆ.
Team Udayavani, Aug 25, 2021, 6:25 PM IST
ಹುಮನಾಬಾದ: ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆ ಕುರಿತು ಚುನಾವಣಾ ಆಯೋಗ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡುವ ಮುನ್ನವೆ ಹುಮನಾಬಾದ ವಿಧಾನ ಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ಭರ್ಜರಿ ಚುನಾವಣಾ ತಯಾರಿ ನಡೆಸಿವೆ. ಕಳೆದ ನಾಲ್ಕು ದಶಕಗಳಿಂದ ಆಡಳಿತ ನಡೆಸಿದ ಪಾಟೀಲ ಪರಿವಾರದಲ್ಲಿ ಕಳೆದ ಕೆಲ ತಿಂಗಳಿಂದ ರಾಜಕೀಯವಾಗಿ ಬಿರುಕು ಮೂಡಿದ್ದು, ಇದೀಗ ಪಾಟೀಲ ಪರಿವಾರದಲ್ಲಿಯೇ ರಾಜಕೀಯ ಗುದ್ದಾಟ ನಡೆಯಲ್ಲಿದೆ.
ಬಸವಕಲ್ಯಾಣ ಉಪ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ತೊರೆದು ಬಿಜೆಪಿ ಸೇರ್ಪಡೆಗೊಂಡ ಡಾ| ಸಿದ್ದಲಿಂಗಪ್ಪ ಪಾಟೀಲ ಪರಿವಾರ ಹಾಗೂ ಕಾಂಗ್ರೆಸ್ ಪಕ್ಷದ ಸ್ಥಳೀಯ ಶಾಸಕ ರಾಜಶೇಖರ ಪಾಟೀಲ ಪರಿವಾರ ಇದೀಗ ಖುದ್ದು ಗ್ರಾಮೀಣ ಪ್ರದೇಶಗಳಿಗೆ ಭೇಟಿ ನೀಡಿ ಮುಂದೆ ಬರಲ್ಲಿರುವ ಚುನಾವಣೆಗಳಲ್ಲಿ ತಮ್ಮ ಬೆಂಬಲಿಗರನ್ನು ಗೆಲ್ಲಿಸುವ ತಯಾರಿ ನಡೆಸಿದ್ದಾರೆ.
ಶಾಸಕ ರಾಜಶೇಖರ ಪಾಟೀಲ ವಿವಿಧ ಇಲಾಖೆ ಅಧಿಕಾರಿಗಳ ಜೊತೆಗೆ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಅಲ್ಲಿನ ಜನರಿಂದ ಕುಂದುಕೊರೆತಗಳನ್ನು ಆಲಿಸಿ ಸಮಸ್ಯೆಗಳು ಬಗೆಹರಿಸುವ ಪ್ರಯತ್ನ ನಡೆಸಿದ್ದಾರೆ. ಇವರಿಗೆ ವಿಧಾನ ಪರಿಷತ್ ಸದಸ್ಯ ಡಾ| ಚಂದ್ರಶೇಖರ ಪಾಟೀಲ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಭೀಮರಾವ ಪಾಟೀಲ, ಯುವ ಮುಖಂಡ ಅಭಿಷೇಕ್ ಪಾಟೀಲ ಪ್ರತೇಕ ತಂಡಗಳು ರಚಿಸಿಕೊಂಡು ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಪ್ರಚಾರ ಕಾರ್ಯ ನಡೆಸಿದ್ದಾರೆ. ಯಾವುದೇ ಸಮಸ್ಯೆಗಳು ಇದ್ದರೆ ನೇರವಾಗಿ ಬಂದು ಮಾತಾಡುವಂತೆ ಜನರಿಗೆ ಮನವರಿಕೆ ಮಾಡುತ್ತಿದ್ದಾರೆ.
ಬಿಜೆಪಿಯಿಂದ ಯುವ ಮುಖಂಡ ಡಾ| ಸಿದ್ದಲಿಂಗ ಪಾಟೀಲ, ಸಹೋದರ ಸಂತೋಷ ಪಾಟೀಲ ಸೇರಿದಂತೆ ಇತರೆ ಕಾರ್ಯಕರ್ತರ ತಂಡಗಳು ರಚಿಸಿಕೊಂಡು ಹಳ್ಳಿಗಳಲ್ಲಿ ಜನರ ಸಂಪರ್ಕ ಸಾಧಿಸುವ ಕಾರ್ಯ ನಡೆಸಿದ್ದಾರೆ. ಒಂದೇ ಕುಟುಂಬದವರು ಇರುವ ಕಾರಣ ರಾಜಕೀಯ ಲೆಕ್ಕಾಚಾರಗಳು ಪರಸ್ಪರ ಕರಗತವಾಗಿ ಮಾಡಿಕೊಂಡಿದ್ದು, ಚುನಾವಣಾ ಪೂರ್ವದಲ್ಲಿಯೇ ಭರ್ಜರಿ ತಯಾರಿಗಳು ನಡೆಸಿದ್ದಾರೆ.
ಎರಡು ಕುಟುಂಬಗಳ ಮಧ್ಯೆ ಫೈಟ್
ಕೆಲ ತಿಂಗಳ ಹಿಂದೆ ನಡೆದ ರಾಜಕೀಯ ಬದಲಾವಣೆ ನಂತರ ಎರೆಡು ಕುಟುಂಬಗಳು ಜನರ ಮಧ್ಯೆ ತೆರಳುತ್ತಿದ್ದು, ನಿರಂತರ ಜನರ ಸಂಪರ್ಕ ಸಾಧಿಸುವಲ್ಲಿ ಪ್ರಯತ್ನ ನಡೆಸುತ್ತಿದ್ದಾರೆ. ಆದರೆ, ಬೆಂಬಲಿಗರು ಇಂದಿಗೂ ಕೂಡ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವಲ್ಲಿ ಗೊಂದಲದಲ್ಲಿ ಇದ್ದಾರೆ. ಸಾಮಾನ್ಯವಾಗಿ ಅಧಿಕಾರದಲ್ಲಿರುವ ಕಡೆಗಳಲ್ಲಿ ಜನರು ಹೆಚ್ಚಿನ ಒಲವು ತೋರುವುದು ಸಾಮಾನ್ಯವಾಗಿದ್ದು, 1999ರಲ್ಲಿ ನಡೆದ ವಿಧನ ಸಭೆ ಚುನಾವಣೆಯಲ್ಲಿ ಈ ಕ್ಷೇತ್ರದಲ್ಲಿ ಬಿಜೆಪಿ ಜಯಗಳಿಸಿ ನಂತರ ಅಧಿಕಾರ ಕಳೆದುಕೊಂಡಿದ್ದು, ನಂತದಲ್ಲಿ ಅಧಿಕಾರಕ್ಕೆ ಬಂದಿಲ್ಲ. ಈ ಕ್ಷೇತ್ರದ ಮೇಲೆ ಕಾಂಗ್ರೆಸ್ ಪಕ್ಷದ ಪ್ರಭಾವ ಹೆಚ್ಚಿದೆ. ಇದೀಗ ಸಿದ್ದಲಿಂಗಪ್ಪ ಪಾಟೀಲ ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದು, ಮುಂದೆ ನಡೆಯಲ್ಲಿರುವ ಚುನಾವಣೆಗಳಿಂದ ಪಕ್ಷಗಳ ಬಲಾಬಲ
ಗೊತ್ತಾಗಲ್ಲಿದೆ.
*ದುರ್ಯೋಧನ ಹೂಗಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು
MUST WATCH
ಹೊಸ ಸೇರ್ಪಡೆ
Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್ ಮೂಲಕ ಬಾಂಬ್ ಬೆದರಿಕೆ…
Majestic Underpass: ಅಸಹ್ಯ, ಭಯ ಹುಟ್ಟಿಸುತ್ತೆ ಮೆಜೆಸ್ಟಿಕ್ ಅಂಡರ್ಪಾಸ್
Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ
Vande Bharat: ಉಪನಗರಕ್ಕೂ ವಂದೇ ಭಾರತ ಮೆಟ್ರೋ ಬೋಗಿ?
Delhi Police; ಮರದ ಪುಡಿ, ಕೆಮಿಕಲ್ ಬಳಸಿ ಮಸಾಲೆ ಪದಾರ್ಥ ತಯಾರು; ಮೂವರ ಬಂಧನ