ಪಂ.ಗೆ ಇನ್ನೂ ದೊರೆತಿಲ್ಲ ಸ್ವಂತ ಕಟ್ಟಡ ಭಾಗ್ಯ! 


Team Udayavani, Aug 26, 2021, 3:40 AM IST

ಪಂ.ಗೆ ಇನ್ನೂ ದೊರೆತಿಲ್ಲ ಸ್ವಂತ ಕಟ್ಟಡ ಭಾಗ್ಯ! 

ಕಿಲ್ಪಾಡಿಯು  ರಾಜ್ಯ ಹೆದ್ದಾರಿ ಬದಿಯಲ್ಲಿರುವ ಗ್ರಾಮ. ಗ್ರಾಮದಲ್ಲಿ ಮೂಲಸೌಲಭ್ಯಗಳನ್ನು ಅಭಿವೃದ್ಧಿಗೊಳಿಸಬೇಕಿದೆ. ರಸ್ತೆಗಳಿಗೆ ಕಾಂಕ್ರೀಟ್‌ ಹಾಕುವುದು, ಕೆಲವು ಕಡೆ ವಿಸ್ತರಣೆ ಮಾಡಬೇಕಿದೆ. ಕಿಲ್ಪಾಡಿ ಗ್ರಾ.ಪಂ. ಆಡಳಿತಕ್ಕೆ ಸ್ವಂತ ಕಟ್ಟಡ ಆಗಬೇಕಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನಸೆಳೆಯಲು “ಉದಯವಾಣಿ ಸುದಿನ’ದ “ಒಂದು ಊರು-ಹಲವು ದೂರು’ ಅಭಿಯಾನದ ಮೂಲಕ ಪ್ರಯತ್ನಿಸಲಾಗಿದೆ.

ಮೂಲ್ಕಿ: ಕಿಲ್ಪಾಡಿ ಗ್ರಾ.ಪಂ. ವ್ಯಾಪ್ತಿಗೆ ಕಿಲ್ಪಾಡಿ ಒಂದೇ ಗ್ರಾಮ ಬರುತ್ತದೆ. ಈ ಗ್ರಾ.ಪಂ.ಗೆ ಕಟ್ಟಡಕ್ಕೆ ಸ್ವಂತ ಜಾಗವಿಲ್ಲದ ಕಾರಣ ಲೋಕೋಪಯೋಗಿ ಇಲಾಖೆಗೆ ಸೇರಿದ ಜಾಗದಲ್ಲಿ ಕಾರ್ಯನಿರ್ವಹಿಸುತ್ತಿದೆ. ಆಡಳಿತ ಅನುಕೂಲಕ್ಕಾಗಿ ಗ್ರಾ.ಪಂ.ಗೆ ಸ್ವಂತ ಕಟ್ಟಡ ಭಾಗ್ಯ ಅಗತ್ಯವಿದೆ.

ಕೆರೆಕಾಡು ಪ್ರದೇಶದಲ್ಲಿ ಸರಕಾರದಿಂದ ನೂರಾರು ಫ‌ಲಾನುಭವಿಗಳಿಗೆ ನಿವೇಶನ ಒದಗಿಸಿದ ಕಿಲ್ಪಾಡಿ ಗ್ರಾ.ಪಂ.ಗೆ ಆಡಳಿತಕ್ಕೆ ಸ್ವಂತ ಕಟ್ಟಡ ಇಲ್ಲದಿರುವುದು ವಿಪರ್ಯಾಸ.

ಗ್ರಾಮದ ಬಹುತೇಕ ಪ್ರದೇಶದಲ್ಲಿ ರಾಜ್ಯ ಹೆದ್ದಾರಿ ಹಾದುಹೋಗುತ್ತಿದ್ದರೂ ಈ ಪ್ರದೇಶವು ಹಸುರು ವಲಯವಾಗಿ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಯಾವುದೇ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗದೇ ಪಂಚಾಯತ್‌ನ ಆದಾಯಕ್ಕೆ ಹಿನ್ನಡೆಯಾಗಿದೆ. ಹಸುರು ವಲಯ ಎಂದು ಗುರುತಿಸಿರುವ ಜಾಗದ ವಲಯ ಬದಲಾವಣೆ ಮಾಡುವಂತೆ ಸರಕಾರದ ಮುಂದೆ ಪಂಚಾಯತ್‌ ನಿರ್ಣಯವನ್ನು ತಿಳಿಸಿದೆ. ಜತೆಗೆ ನಗರಾಭಿವೃದ್ಧಿ ಪ್ರಾಧಿಕಾರವೂ ವಲಯ ಬದಲಾವಣೆಗೆ ಪೂರಕವಾಗಿ ಸ್ಪಂದಿಸಿದೆ. ಆದರೆ ಈವರೆಗೂ ಯಾವುದೇ ಬದಲಾವಣೆ ಆಗಿಲ್ಲ. ಅಭಿವೃದ್ಧಿಗೆ ಪೂರಕವಾಗಿ ವಲಯ ಬದಲಾವಣೆಗೆ ಅಗತ್ಯ.

ನೀರಿನ ಸಮಸ್ಯೆನಿವಾರಣೆ ಅಗತ್ಯ :

ರಾಜ್ಯ ಹೆದ್ದಾರಿಗೆ ತಾಗಿಕೊಂಡು ಕೆಂಚನಕೆರೆಯ ನೀರಿನ ಒರತೆ ಚೆನ್ನಾಗಿ ಇರುವುದರಿಂದ ಗ್ರಾಮಕ್ಕೆ ನೀರಿನ ಕೊರತೆ ಇಲ್ಲ. ಆದರೆ ಈ ಕೆರೆಯಲ್ಲಿ ಬಂಡೆಗಳು ಅತಿಯಾಗಿವೆ. ಕುಬೆವೂರು ಬಳಿಯ ಬೈಲಕೆರೆ, ಕೆಂಚನೆಕೆರೆಯನ್ನು ಅಭಿವೃದ್ಧಿಪಡಿಸುವ ಅಗತ್ಯವಿದೆ. ಇದರಿಂದ ನೀರಿನ ಸಮಸ್ಯೆಗೆ ಸಂಪೂರ್ಣವಾಗಿ ನಿವಾರಿಸಬಹುದು.

ಗ್ರಾಮದಲ್ಲಿ ಜಲಜೀವನ್‌ ಮಿಷನ್‌ ಯೋಜನೆಗೆ ಮುಂದಾಗಿದ್ದರೂ ಅನುಷ್ಠಾನಕ್ಕಾಗಿ ಜನಪ್ರತಿನಿಧಿಗಳು ಶೀಘ್ರ ಪ್ರಯತ್ನಿಸಬೇಕಿದೆ. ಗ್ರಾಮದ

ಶ್ರೀ ಕುಮಾರ ಮಂಗಿಲ ದೇವಸ್ಥಾನದ ವ್ಯಾಪ್ತಿಯಲ್ಲಿರುವ ಸಿಹಿ ನೀರಿನ ಹರಿವಿನ ಕಿರು ನದಿಗೆ ವಿಶೇಷ ಒತ್ತು ನೀಡಿ ಕಿಂಡಿ ಅಣೆಕಟ್ಟು ನಿರ್ಮಿಸಿ ಅಭಿವೃದ್ಧಿಪಡಿಸಬೇಕಿದೆ.

ಇತರ ಸಮಸ್ಯೆ ಗಳೇನು? :

  • ಗ್ರಾಮದಲ್ಲಿ ಆಟದ ಮೈದಾನ, ಪಾರ್ಕ್‌ ನಿರ್ಮಿಸುವುದು ಅಗತ್ಯ.
  • ಗ್ರಾಮವು ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಸೇರಿಕೊಂಡರೂ ನಗರಾಭಿವೃದ್ಧಿ ಪ್ರಾಧಿಕಾರ ಕೆರೆ ಅಭಿವೃದ್ಧಿ ಶುಲ್ಕವನ್ನು ಸಂಗ್ರಹಿಸಿದರೂ ಈ ವರೆಗೂ ಯಾವುದೇ ಅಭಿವೃದ್ಧಿ ಕಾರ್ಯಗಳಾಗಿಲ್ಲ.
  • ಮೂಲ್ಕಿ ರೈಲು ನಿಲ್ದಾಣ ಕಿಲ್ಪಾಡಿ ಗ್ರಾಮದ ವ್ಯಾಪ್ತಿಯಲ್ಲಿ ಇರುವುದರಿಂದ ಇದಕ್ಕೆ ಸಂಪರ್ಕವಾಗುವ ರಸ್ತೆಗಳನ್ನು ಅಭಿವೃದ್ಧಿಪಡಿಸುವಂತೆ ಇಲಾಖೆಯ ಮೇಲೆ ಒತ್ತಡ ಏರುವುದು ಅಗತ್ಯ.
  • 94ಸಿಸಿ ಯಲ್ಲಿ ಅರ್ಜಿ ಸಲ್ಲಿಸಿದ ನಿವೇಶನ ರಹಿತರಿಗೆ ನಿವೇಶನ ಕೊಡಿಸುವಲ್ಲಿ ಗ್ರಾ.ಪಂ. ಆಡಳಿತ ಒತ್ತು ನೀಡಬೇಕಿದೆ.
  • ರಾಜ್ಯ ಹೆದ್ದಾರಿಯಲ್ಲಿ ಬೀದಿ ದೀಪಗಳನ್ನು ಅಳವಡಿಸಬೇಕಾಗಿದೆ.
  • ಗ್ರಾ.ಪಂ. ವ್ಯಾಪ್ತಿಯ ಒಳರಸ್ತೆಗಳಲ್ಲಿ ಕೆಲವು ಕಡೆ ಕಾಂಕ್ರೀಟ್‌ ಹಾಕಲಾಗಿದ್ದು, ಅದು ತೀರಾ ಕಿರಿದಾಗಿದೆ. ಅದರ ವಿಸ್ತರಣೆಗೆ ಕ್ರಮ ಅಗತ್ಯ.
  • ಹೆಚ್ಚಿನ ರಸ್ತೆಗಳ ಬದಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿರದೆ ರಸ್ತೆಯಲ್ಲಿಯೇ ನೀರು ಹರಿಯುತ್ತದೆ. ಇದಕ್ಕೆ ಪರಿಹಾರ ಕೈಗೊಳ್ಳುವುದು ಅಗತ್ಯ.
  • ಗ್ರಾಮದಲ್ಲಿನ ಹಲವು ಎಕರೆ ಗದ್ದೆಗಳು ಹಡಿಲು ಬಿದ್ದಿದ್ದು ಅಲ್ಲಿ ಕೃಷಿ ಚಟುವಟಿಕೆ ನಡೆಸಲು ಪ್ರೋತ್ಸಾಹದಾಯಕ ಯೋಜನೆ ರೂಪಿಸುವುದು ಅಗತ್ಯ.

 

-ಸರ್ವೋತ್ತಮ ಅಂಚನ್‌, ಮೂಲ್ಕಿ

ಟಾಪ್ ನ್ಯೂಸ್

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.