ಗ್ರಾಮಗಳಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸಿ
Team Udayavani, Aug 26, 2021, 6:38 AM IST
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪರೀಕ್ಷೆಯ ಪ್ರಮಾಣವನ್ನು 1.75 ಲಕ್ಷಕ್ಕೆ ಹೆಚ್ಚಿಸಿ ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.
ಪ್ರತಿ ಜಿಲ್ಲೆಯಲ್ಲಿ ಒಟ್ಟಾರೆ ಪರೀಕ್ಷೆಯಲ್ಲಿ ಶೇ.70 ಆರ್ಟಿಪಿಸಿಆರ್ ಹಾಗೂ ಶೇ.30 ರ್ಯಾಪಿಡ್ಆ್ಯಂಟಿಜಿನ್ ಪರೀಕ್ಷೆ ನಡೆಸಬೇಕು. ಒಟ್ಟು ಪರೀಕ್ಷೆಯ ಅರ್ಧದಷ್ಟು ತಾಲೂಕು ಕೇಂದ್ರಗಳ ಹೊರಗೆ ನಡೆಯಬೇಕು ಎಂದು ತಿಳಿಸಲಾಗಿದೆ. ಒಟ್ಟು ಪರೀಕ್ಷೆಯಲ್ಲಿ ಕಡ್ಡಾಯವಾಗಿ ಶೇ.10 ಪರೀಕ್ಷೆ ಮಕ್ಕಳಿಗೆ ನಡೆಸಬೇಕು ಎಂದು ಆದೇಶಿಸಲಾಗಿದೆ. 15ರಿಂದ 18 ವರ್ಷದ ಮಕ್ಕಳಲ್ಲಿ ಸೋಂಕಿನ ರೋಗ ಲಕ್ಷಣಗಳಿದ್ದರೆ ಕಡ್ಡಾಯವಾಗಿ ರ್ಯಾಪಿಡ್ ಆ್ಯಂಟಿಜಿನ್ ಪರೀಕ್ಷೆ ನಡೆಸಬೇಕು ಎಂದು ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕಿ ಅರುಂಧತಿ ಚಂದ್ರಶೇಖರ್ ಸೂಚಿಸಿದ್ದಾರೆ.
ಬುಧವಾರ 1,224 ಮಂದಿಗೆ ಸೋಂಕು :
ರಾಜ್ಯದಲ್ಲಿ ಬುಧವಾರ 1,224 ಮಂದಿಗೆ ಸೋಂಕು ತಗಲಿದ್ದು, 22 ಮಂದಿ ಮೃತಪಟ್ಟಿದ್ದಾರೆ. ಜತೆಗೆ 1,668 ಮಂದಿ ಗುಣಮುಖರಾಗಿದ್ದಾರೆ. ಮಂಗಳವಾರಕ್ಕೆ ಹೋಲಿಸಿದರೆ ಸೋಂಕು ಪರೀಕ್ಷೆಗಳು 5 ಸಾವಿರ (1.95 ಲಕ್ಷಕ್ಕೆ) ಹೆಚ್ಚಳವಾಗಿವೆ. ಹೊಸ ಪ್ರಕರಣ 35, ಸೋಂಕಿತರ ಸಾವು 7 ಕಡಿಮೆಯಾಗಿವೆ. ಪಾಸಿಟಿವಿಟಿ ದರ ಶೇ.0.6ರಷ್ಟಿದ್ದು, ಮರಣ ದರ ಶೇ.2.3ರಿಂದ 1.8ಕ್ಕಿಳಿದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
E.D. ಬಂಧನ ಪ್ರಶ್ನಿಸಿದ್ದ ಸೊರೇನ್ ಅರ್ಜಿ ತಿರಸ್ಕಾರ
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ
Rahul Gandhi ಭೇಟಿ ಯಾವುದೇ ಪರಿಣಾಮ ಬೀರದು: ಬಿಎಸ್ವೈ