ಸಿಖ್, ಹಿಂದೂಗಳು ಸೇರಿ 140 ಭಾರತೀಯರು ಅಫ್ಘಾನ್ ಬಿಟ್ಟು ತೆರಳದಂತೆ ತಾಲಿಬಾನ್ ತಡೆ!

ಇನ್ನೂ ಹಲವಾರು ಮಂದಿ ಭಾರತೀಯರನ್ನು ಸ್ಥಳಾಂತರಿಸಬೇಕಾಗಿದೆ

Team Udayavani, Aug 26, 2021, 3:56 PM IST

ಸಿಖ್, ಹಿಂದೂಗಳು ಸೇರಿ 140 ಭಾರತೀಯರು ಅಫ್ಘಾನ್ ಬಿಟ್ಟು ತೆರಳದಂತೆ ತಾಲಿಬಾನ್ ತಡೆ!

ಕಾಬೂಲ್: ಅಫ್ಘಾನಿಸ್ತಾನದ ಕಾಬೂಲ್ ವಿಮಾನ ನಿಲ್ದಾಣದಲ್ಲಿರುವ ಸಿಖ್ ಸಮುದಾಯ ಮತ್ತು ಹಿಂದೂಗಳು ಸೇರಿದಂತೆ ಸುಮಾರು 140 ಮಂದಿ ಭಾರತಕ್ಕೆ ತೆರಳದಂತೆ ತಾಲಿಬಾನ್ ಉಗ್ರರು ತಡೆಯೊಡ್ಡಿರುವುದಾಗಿ ಸಿಎನ್ ಎನ್ ನ್ಯೂಸ್ 18 ವರದಿ ತಿಳಿಸಿದೆ.

ಇದನ್ನೂ ಓದಿ:ಪಾಕ್ ನಮಗೆ ಎರಡನೇ ಮನೆ ಇದ್ದಂತೆ: ಭಾರತದ ಜತೆ ಉತ್ತಮ ಬಾಂಧವ್ಯ: ತಾಲಿಬಾನ್ ಬಯಕೆ

ಕಾಬೂಲ್ ವಿಮಾನ ನಿಲ್ದಾಣದಲ್ಲಿ ಸುಮಾರು 140 ಮಂದಿ ಭಾರತೀಯರು ಏರ್ ಲಿಫ್ಟ್ ಗಾಗಿ ಕಾಯುತ್ತಿದ್ದು, ಏತನ್ಮಧ್ಯೆ ತಾಲಿಬಾನ್ ಉಗ್ರರು ಅಫ್ಘಾನ್ ಬಿಟ್ಟು ತೆರಳದಂತೆ ತಡೆಯೊಡ್ಡಲು ಪ್ರಯತ್ನಿಸುತ್ತಿರುವುದಾಗಿ ವರದಿ ವಿವರಿಸಿದೆ.

ಕೇಂದ್ರ ಸರ್ಕಾರದ ಅಂಕಿಅಂಶದ ಪ್ರಕಾರ, ಈಗಾಗಲೇ ಅಫ್ಘಾನಿಸ್ತಾನದಿಂದ 175 ಮಂದಿ ರಾಯಭಾರಿ ಕಚೇರಿ ಸಿಬಂದಿಗಳು, 263 ಭಾರತೀಯ ನಾಗರಿಕರು, ಹಿಂದೂಗಳು, ಸಿಖ್ಖರು ಸೇರಿದಂತೆ 112 ಅಫ್ಘಾನ್ ಪ್ರಜೆಗಳು, ಇತರ ದೇಶದ 15 ಮಂದಿ ಸೇರಿದಂತೆ ಈವರೆಗೆ 565 ಮಂದಿಯನ್ನು ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದೆ.

ಭಾರತೀಯ ಪ್ರಜೆಗಳನ್ನು ಕರೆತರುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಎಲ್ಲಾ ರೀತಿಯಿಂದಲೂ ಶ್ರಮಿಸುತ್ತಿರುವುದಾಗಿ ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಸರ್ವಪಕ್ಷಗಳ ಸಭೆಯಲ್ಲಿ ತಿಳಿಸಿದ್ದಾರೆ.

ದೇವಿ ಶಕ್ತಿ ಆಪರೇಶನ್ ಹೆಸರಿನಲ್ಲಿ ಈಗಾಗಲೇ 500ಕ್ಕೂ ಹೆಚ್ಚು ಮಂದಿಯನ್ನು ಕಾಬೂಲ್ ವಿಮಾನ ನಿಲ್ದಾಣದಿಂದ ಭಾರತಕ್ಕೆ ಕರೆತರಲಾಗಿದೆ. ಆದರೂ ಅಫ್ಘಾನಿಸ್ತಾನದಲ್ಲಿ ಇನ್ನೂ ಹಲವಾರು ಮಂದಿ ಭಾರತೀಯರನ್ನು ಸ್ಥಳಾಂತರಿಸಬೇಕಾಗಿದೆ ಎಂದು ಮಾಹಿತಿ ನೀಡಿರುವುದಾಗಿ ವರದಿ ಹೇಳಿದೆ.

ಆದಷ್ಟು ಶೀಘ್ರವಾಗಿ ಕಾಬೂಲ್ ನಲ್ಲಿರುವ ಭಾರತೀಯರನ್ನು ಸುರಕ್ಷಿತವಾಗಿ ಕರೆತರಲು ಕೇಂದ್ರ ಸರ್ಕಾರ ಬದ್ಧವಾಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಹೆಚ್ಚಿನ ಮಾತುಕತೆ ನಡೆಯಲಿದೆ ಎಂದು ಜೈಶಂಕರ್ ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ತಿಳಿಸಿದೆ.

ಟಾಪ್ ನ್ಯೂಸ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

Covid vaccine ಅಡ್ಡ ಪರಿಣಾಮದಿಂದಲೇ ಹೃದಯಾಘಾತ?: ನಟ ಶ್ರೇಯಸ್ ಹೇಳಿದ್ದೇನು?

1-aaa

Pen drive case; ಇಂದೇ ಪ್ರಜ್ವಲ್‌ ರೇವಣ್ಣ ಎಸ್‌ಐಟಿ ಮುಂದೆ ಶರಣು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

canada

Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

Pak 2

Pakistan; ಈಗ ಯೋಗ ತರಬೇತಿ ಅಧಿಕೃತವಾಗಿ ಆರಂಭ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: 3 ಭಾರತೀಯರನ್ನು ಬಂಧಿಸಿದ ಕೆನಡಾ

Nijjar Case: ಭಯೋತ್ಪಾದಕ ನಿಜ್ಜರ್ ಹತ್ಯೆ ಪ್ರಕರಣ: ಮೂವರು ಭಾರತೀಯರನ್ನು ಬಂಧಿಸಿದ ಕೆನಡಾ

Chandra

China ಹೊಸ ಸಾಹಸ; ಭೂಮಿಗೆ ಕಾಣದ ಚಂದ್ರನ ಭಾಗದ ಮಾದರಿ ಸಂಗ್ರಹ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Pralhad Joshi ರಾಜ್ಯ ಸರ್ಕಾರ ತಕ್ಷಣ ಬರ ಪರಿಹಾರಕ್ಕೆ ಕ್ರಮಕೈಗೊಳ್ಳಬೇಕು

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

Dharwad: ಪ್ರಹ್ಲಾದ ಜೋಶಿ ಗೆದ್ದರೆ ಇನ್ನಷ್ಟು ಅಭಿವೃದ್ಧಿ: ಹುಣಸಿಮರದ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.