ಅತಿ ಮೋಹದಿಂದ ಅವಸಾನ ಖಚಿತ

ಅಂತರಂಗ ಶುದ್ಧವಿಲ್ಲದವರ ಸಂಗ ವಿಷವೆಂಬುದರ ಅರಿವು ಅಗತ್ಯ: ಡಾ| ಪಂಡಿತಾರಾಧ್ಯ ಶಿವಾಚಾರ್ಯ ಶ್ರೀ

Team Udayavani, Aug 26, 2021, 6:46 PM IST

26-15

ಹೊಸದುರ್ಗ: ತನು, ಮನ, ಧನವನ್ನು ಗುರು, ಲಿಂಗ, ಜಂಗಮಕ್ಕೆ ಅರ್ಪಿಸಬೇಕು. ಬದಲಾಗಿ ತನು, ಮನ, ಧನಗಳ ಮೋಹಕ್ಕೆ ಒಳಗಾದರೆ ಕೇಡು ತಪ್ಪಿದ್ದಲ್ಲ. ಇಂಥವರನ್ನು ಶರಣರು ಭವಿಗಳು ಎನ್ನುವರು.

ಇಂಥವರು ಸಮಾಜದಲ್ಲಿ ಬೇಕಾದಷ್ಟು ಜನರಿದ್ದಾರೆ. ಇವರ ಒಡನಾಟ ಸಲ್ಲದು ಎಂದು ಡಾ| ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ಶ್ರೀ ತರಳಬಾಳು ಜಗದ್ಗುರು ಶಾಖಾ ಮಠ ಆಯೋಜಿಸಿರುವ “ಮತ್ತೆ ಕಲ್ಯಾಣ’ ಅಂತರ್ಜಾಲ ಉಪನ್ಯಾಸ ಮಾಲಿಕೆಯ 25ನೇ ದಿನದ ಕಾರ್ಯಕ್ರಮದಲ್ಲಿ ಶ್ರೀಗಳು ಆಶೀರ್ವಚನ ನೀಡಿದರು. ಸಜ್ಜನರ ಒಡನಾಟ ಹೆಜ್ಜೆàನು ಸವಿದಂತೆ. ಅಂತರಂಗ ಶುದ್ಧವಿಲ್ಲದವರ ಸಂಗ ವಿಷ. ವ್ಯಕ್ತಿ ಬಡವನಾದರೂ ಮನಸ್ಸಿನಿಂದ ಶ್ರೀಮಂತನಾಗಬೇಕು. ಆಗ ಬದುಕು ಭವ್ಯವಾಗುವುದು ಎಂದರು.

ಬಸವ ಸಂದೇಶ ಕಾಲಾತೀತ, ದೇಶಾತೀತ. ಕನ್ನಡ ನಾಡಿನ ದಾರ್ಶನಿಕ ಪರಂಪರೆಯಲ್ಲಿ 12ನೇ ಶತಮಾನದ ಶರಣ ಪರಂಪರೆ ಬಹು ದೊಡ್ಡದು. ಅಲ್ಲಿ ಅನುಭಾವಿಗಳ ಸಮೂಹವೇ ಇತ್ತು. ಇವರೆಲ್ಲರೂ ಸಂಸಾರದಲ್ಲಿದ್ದುಕೊಂಡೇ ಆಧ್ಯಾತ್ಮದ ಅನುಭೂತಿ ಪಡೆದರು. ಇದಕ್ಕೆ ಕಾರಣ ಬಸವಣ್ಣನವರು ಹಾಕಿಕೊಟ್ಟ ಕಾಯಕ-ದಾಸೋಹ ತತ್ವ. ಶರಣರೆಲ್ಲರೂ ಕಾಯಕವೇ ಕೈಲಾಸವೆಂದು ದುಡಿಮೆಯಲ್ಲಿಯೇ ದೇವರನ್ನು ಕಂಡವರು.

ಈ ಎಲ್ಲ ಶರಣರ ಬದುಕಿಗೆ ಬೆಳಕನ್ನು ಕರುಣಿಸಿದವರು ಬಸವಣ್ಣ. ಅವರ ಹೆಸರೇ ಮಂತ್ರ ಸದೃಶವಾದುದು ಎಂದು ಬಣ್ಣಿಸಿದರು. ಉಪನ್ಯಾಸ ಮಾಲಿಕೆಯಲ್ಲಿ “ಅನಿವಾಸಿ ಭಾರತೀಯರಿಗೆ ಬಸವ ತತ್ವದ ಪ್ರಸ್ತುತತೆ’ ಕುರಿತು ಇಂಗ್ಲೆಂಡ್‌ನ‌ ನ್ಯಾಷನಲ್‌ ಹೆಲ್ತ್‌ ಸರ್ವಿಸ್‌ನ ತಜ್ಞ ವೈದ್ಯ ಡಾ| ಜಿ.ಎಸ್‌. ಶಿವಪ್ರಸಾದ್‌ ಮಾತನಾಡಿ, ವೃತ್ತಿ ಆಶಯ, ವೈಯುಕ್ತಿಕ, ಆರ್ಥಿಕ ಉನ್ನತಿ ಮುಂತಾದ ಕಾರಣದಿಂದ ಅನೇಕ ಭಾರತೀಯರು ವಲಸೆ ಬಂದಿದ್ದಾರೆ. ಇಲ್ಲಿಗೆ ಬಂದ ಅನಿವಾಸಿಗಳಿಗೆ ಭಾಷೆ, ಸಂಸ್ಕೃತಿ, ಆಧ್ಯಾತ್ಮ ತೃಷೆ, ತಾಯ್ನಾಡಿನ ತುಡಿತ, ಮಕ್ಕಳು, ಮೊಮ್ಮಕ್ಕಳು ಮೂಲ ಬೇರುಗಳನ್ನು ಕಳೆದುಕೊಳ್ಳುವುದರ ಬಗ್ಗೆ ಆತಂಕವಿರುವುದು ಸಹಜ. ಈ ಆತಂಕ ನಿವಾರಣೆಗೆ ಕನ್ನಡ ಸಂಘಗಳನ್ನು ಕಟ್ಟಿಕೊಂಡು ಭಾಷೆಯನ್ನು ಬೆಳೆಸುವ, ಉಳಿಸುವ ಕೆಲಸ ಯಶಸ್ವಿಯಾಗಿ ನಡೆದಿದೆ.

ಈ ಹಿನ್ನೆಲೆಯಲ್ಲಿ ಇಂಗ್ಲೆಂಡಿನಲ್ಲಿ ಬಸವ ತತ್ವದ ಪರಿಕಲ್ಪನೆಯಡಿ ಜಾತ್ಯತೀತವಾಗಿ ವೀರಶೈವ ಸಮಾಜ ಎನ್ನುವ ಸಂಸ್ಥೆಯ ಮೂಲಕ ಕಾಲ ಕಾಲಕ್ಕೆ ಶರಣರ ಬದುಕು-ಬರಹ ಕುರಿತಂತೆ ಕಾರ್ಯಕ್ರಮಗಳನ್ನು ಆಯೋಜಿಸುತ್ತ ಬಂದಿದ್ದೇವೆ. ಥೇಮ್ಸ್‌ ನದಿಯ ದಡದಲ್ಲಿ ಸ್ಥಾಪಿಸಿರುವ ಬಸವೇಶ್ವರರ ಪ್ರತಿಮೆಯನ್ನು ಭಾರತದ ಪ್ರಧಾನಿ ಮೋದಿಯವರು ಅನಾವರಣಗೊಳಿಸಿದ್ದು ಬಸವ ತತ್ವದ ಅರಿವು ಮತ್ತು ಪ್ರಸ್ತುತಿಗೆ ಸಾಕ್ಷಿಯಾಗಿದೆ ಎಂದು ತಿಳಿಸಿದರು. ಅಸಹಾಯಕರಿಗೆ, ಅನಾಥಾಶ್ರಮಗಳಿಗೆ, ಕೊರೊನಾ ಸೋಂಕಿತರಿಗೆ ಆರ್ಥಿಕ ಸಹಾಯ ಮಾಡುವ ಮೂಲಕ ಇಲ್ಲಿನ ವೀರಶೈವ ಸಮಾಜ ಮತ್ತು ಕನ್ನಡ ಬಳಗ ಬಸವ ತತ್ವಗಳಲ್ಲಿ ಒಂದಾದ “ದಾಸೋಹ ತತ್ವ’ಕ್ಕೆ ವಿಶೇಷವಾದ ಅರ್ಥ ನೀಡಿದೆ. ಆರ್ಥಿಕವಾಗಿ ಅನುಕೂಲವಾಗಿರುವ ಅನಿವಾಸಿ ಭಾರತೀಯರು ಪಡೆಯುವುದಕ್ಕಿಂತ ಕೊಡುವುದರಲ್ಲಿಯೇ ಸಾರ್ಥಕತೆಯಿದೆ ಎನ್ನುವುದನ್ನು ಅರಿತಿದ್ದಾರೆ.

ಇಲ್ಲಿನ ಎಷ್ಟೋ ದಾನಿಗಳು ಆನ್‌ಲೈನ್‌ ಮೂಲಕ ಡೊನೇಷನ್‌ ಕೊಡುವಾಗ ತಮ್ಮ ಹೆಸರನ್ನು ಪ್ರಕಟಿಸಬಾರದು ಎಂದು ಹೇಳುವುದು “ಮಾಡಿ ಮಾಡಿ ಕೆಟ್ಟರು ಮನವಿಲ್ಲದೆ, ನೀಡಿ ನೀಡಿ ಕೆಟ್ಟರು ನಿಜವಿಲ್ಲದೆ’ ಎನ್ನುವ ಬಸವಣ್ಣನವರ ವಚನವವನ್ನು ನೆನಪಿಸುತ್ತದೆ ಎಂದರು. ಇಟಲಿಯ ಹೇಮೇಗೌಡ ರುದ್ರಪ್ಪ ಸ್ವಾಗತಿಸಿದರು.

ಶಿವಸಂಚಾರದ ಕೆ. ಜ್ಯೋತಿ, ಕೆ. ದಾûಾಯಣಿ, ಎಚ್‌. ಎಸ್‌. ನಾಗರಾಜ್‌ ವಚನಗೀತೆಗಳನ್ನು ಹಾಡಿದರು. ಶಿವಮೊಗ್ಗದ ಸಹಚೇತನ ನಾಟ್ಯಾಲಯ ಕೇಂದ್ರದ ಕಲಾವಿದರು ವಚನ ನೃತ್ಯ ಪ್ರದರ್ಶಿಸಿದರು.

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.