ರಾಜ್ಯದಲ್ಲಿ ಗಣಿಗಾರಿಕೆ ಪುನರಾರಂಭಿಸುವ ಪ್ರಯತ್ನಕ್ಕೆ ಸರ್ಕಾರ ಬದ್ಧ: ಪ್ರಮೋದ ಸಾವಂತ್
Team Udayavani, Aug 27, 2021, 4:57 PM IST
ಪಣಜಿ: ರಾಜ್ಯದಲ್ಲಿ ಗಣಿಗಾರಿಕೆ ಪುನರಾರಂಭಿಸುವ ಪ್ರಯತ್ನಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗಂಭೀರವಾಗಿದೆ. ಗಣಿ ಕಾರ್ಮಿಕರಿಗೆ ಸರ್ಕಾರ ಸಾಧ್ಯವಾದಷ್ಟು ಹೆಚ್ಚಿನ ಸಹಾಯ ಸಹಕಾರ ನೀಡಲಿದೆ. ವೇತನ ವಿಷಯಕ್ಕೆ ಸಂಬಂಧಿಸಿದಂತೆ ಶೀಘ್ರವೇ ವೇದಾಂತ ಕಂಪನಿಯೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ನುಡಿದರು.
ಮುಖ್ಯಮಂತ್ರಿ ಪ್ರಮೋದ ಸಾವಂತ್ ರವರು ಮಯೆಮ್ ಮತಕ್ಷೇತ್ರದ ಭೇಟಿಗೆ ತೆರಳಿದ್ದ ಸಂದರ್ಭದಲ್ಲಿ ಬಿಚೋಲಿಂ ಭಾಗದ ಗಣಿ ಕಾರ್ಮಿಕರು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ತಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಬಳಿ ಹೇಳಿಕೊಂಡರು.
ಇದನ್ನೂ ಓದಿ:ಕಚೇರಿಗೆ ಜನರ ಅಲೆದಾಟ ತಪ್ಪಿಸುವುದೇ ಎಸಿಬಿ ಉದ್ದೇಶ
ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಾವಂತ್-ವೇತನ ಸಮಸ್ಯೆಗೆ ಸಂಬಂಧಿಸಿದಂತೆ ವೇದಾಂತ ಕಂಪನಿಯೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುತ್ತೇನೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಗಣಿ ಕಾರ್ಮಿಕರಿಗೆ ಭರವಸೆ ನೀಡಿದರು.