ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳ್ಗೆಗೆ ಪ್ರಣಾಳಿಕೆಯಲ್ಲಿ ಆದ್ಯತೆ: ಡಿಕೆಶಿ 


Team Udayavani, Aug 27, 2021, 8:21 PM IST

dfsfsfd

ಬೆಂಗಳೂರು: ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳಿಗೆ, ಸ್ವಾಭಿಮಾನ, ಗೌರವದ ಬದುಕಿಗೆ ಪಕ್ಷದ ಪ್ರಣಾಳಿಕೆಯಲ್ಲಿ ಆದ್ಯತೆ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.

ಅವರಿಗೆ ಕಿರುಕುಳ ನೀಡುವ ಪೊಲೀಸರು ಮತ್ತಿತರರ ವಿರುದ್ಧ ಕಠಿಣ ಕ್ರಮದ ಕಾನೂನು, ಸ್ವಯಂ ಉದ್ಯೋಗಕ್ಕೆ ಆರ್ಥಿಕ ನೆರವು, ಮನೆ, ಮಕ್ಕಳ ಶಿಕ್ಷಣಕ್ಕೆ ನೆರವು, ಆರೋಗ್ಯ ಹಾಗೂ ಪಿಂಚಣಿ ಸೌಲಭ್ಯ ಒದಗಿಸುವ ಭರವಸೆ ಪ್ರಣಾಳಿಕೆಯಲ್ಲಿ ಇರಲಿದೆ ಎಂದೂ ಶಿವಕುಮಾರ್ ಅವರು ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರು, ಹೋರಾಟಗಾರರ ಜತೆ ಶುಕ್ರವಾರ ಸಂವಾದ ನಡೆಸಿ, ಅವರ ಸಮಸ್ಯೆಗಳನ್ನು ಆಲಿಸಿದ ಅವರು, ‘ಈ ವರ್ಗದವರಿಗೆ ಸಮಾಜದಲ್ಲಿ ಗೌರವ ಸಿಗಬೇಕು ಹಾಗೂ ಅವರ ಸ್ವಾಭಿಮಾನದ ಬದುಕಿಗೆ ಅವಕಾಶ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ಅವರು ಹೇಳಿದ್ದಿಷ್ಟು;

ಲೈಂಗಿಕ ಕಾರ್ಯಕರ್ತೆಯರಿಗೆ ಕಾನೂನಿನಲ್ಲಿ ಅವಕಾಶ ಕಲ್ಪಿಸಿಕೊಡಲಾಗಿದೆಯಾದರೂ ಅವರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದಾರೆ. ಇಲ್ಲಿ ಬಡತನ ಯಾರಿಗೆ ಇದೆಯೋ, ಯಾರು ಜೀವನದಲ್ಲಿ ಮೋಸ ಹೋಗಿದ್ದಾರೋ ಅವರಿಗೆ ಹೆಚ್ಚು ತೊಂದರೆ ಆಗುತ್ತಿದೆ. ಹಣವಂತರಿಗೆ ರಕ್ಷಣೆ ಸಿಗುತ್ತಿದೆ. ನಿಮ್ಮ ಧ್ವನಿಯಾಗಲು ಇಂದು ನಿಮ್ಮ ಜತೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡಿದ್ದೇನೆ.

ನೀವು ಸಮಾಜದಲ್ಲಿ ಗೌರವ, ಸ್ವಾಭಿಮಾನದಿಂದ ಬದುಕುವಂತಾಗಬೇಕು. ನಿಮಗೆ ಕಿರುಕುಳ ನೀಡುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳಲು ಕಠಿಣ ಕಾನೂನಿನ ಅಗತ್ಯವಿದೆ. ಪೊಲೀಸರೇ ಆಗಲಿ, ಬೇರೆಯವರೇ ಆಗಲಿ ನಿಮಗೆ ಕಿರುಕುಳ ನೀಡಿದವರಿಗೆ ಕ್ರಮ ಕೈಗೊಳ್ಳುವ ಕಾನೂನು ತರಬೇಕಿದೆ. ಈ ವಿಚಾರವಾಗಿ ಮುಂದೆ ನಿಮ್ಮ ಸಂಘಟನೆಗಳ ಮುಖಂಡರ ಜತೆ ಮಾತನಾಡಿ, ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಈ ವಿಚಾರ ಅಳವಡಿಸುತ್ತೇವೆ.

ನೀವು ಮತ ಹಾಕಿದ ತಕ್ಷಣ ನಾವು ಅಧಿಕಾರಕ್ಕೆ ಬರುತ್ತೇವೆ ಎಂದಲ್ಲ. ನಾವು ಅಧಿಕಾರಕ್ಕೆ ಬಂದ ನಂತರ ನಮಗೂ, ನಿಮಗೂ ಸಮಾಧಾನ ಸಿಗುವ ಕಾರ್ಯಕ್ರಮ ಅನುಷ್ಠಾನಕ್ಕೆ ಬರಬೇಕು. ನಾವು ಎಲ್ಲ ವರ್ಗದ ಜನರನ್ನು ರಕ್ಷಣೆ ಮಾಡಬೇಕು. ನಿಮ್ಮ ವರ್ಗದ ಅನೇಕರು ಗುರುತಿಸಿಕೊಳ್ಳುವುದಿಲ್ಲ. ಕೆಲವರು ಮಾತ್ರ ಧೈರ್ಯವಾಗಿ ಗುರುತಿಸಿಕೊಳ್ಳುತ್ತಿದ್ದೀರಿ. ಹೀಗಾಗಿ ಈ ವಿಚಾರವಾಗಿ ಕ್ರಿಯಾ ಯೋಜನೆ (ಪ್ಲಾನ್ ಆಫ್ ಆಕ್ಷನ್) ರೂಪಿಸಬೇಕಿದೆ.

ನಮ್ಮಲ್ಲಿ ಮಹಿಳಾ ಮಹಾ ಪಂಚಾಯ್ತಿ ಎಂಬ ಕಾರ್ಯಕ್ರಮ ರೂಪಿಸಿದ್ದು, 224 ವಿಧಾನಸಭಾ ಕ್ಷೇತ್ರಗಳಲ್ಲೂ ಹೆಣ್ಣು ಮಕ್ಕಳ ಜತೆ ಚರ್ಚಿಸಲು ಸೂಚಿಸಿದ್ದೇನೆ. ಈ ಸಂವಾದದ ಮೂಲಕ ನಿಮ್ಮ ಕಷ್ಟ, ನೋವು ನನಗೆ ಅರ್ಥವಾಗಿದೆ. ನಿಮ್ಮ ಪರ ಧ್ವನಿ ಎತ್ತಲು ಸಾಧ್ಯವಿರುವಿಡೆ ಧ್ವನಿ ಎತ್ತಲು ಪ್ರಯತ್ನಿಸುತ್ತೇನೆ. ನಿಮ್ಮ ಸಮಸ್ಯೆ ಹಾಗೂ ಬೇಡಿಕೆಗಳನ್ನು ಕೇಳಿಸಿ, ಮನವರಿಕೆ ಮಾಡಿಕೊಂಡಿದ್ದೇನೆ.

ನಾನು ಜಯಮಾಲಾ ಅವರ ಅಧ್ಯಕ್ಷತೆಯ ಸಮಿತಿ ಹಾಗೂ ಇತರ ಸಮಿತಿಗಳ ವರದಿ ಪರಿಶೀಲಿಸುತ್ತೇನೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ನಿಮ್ಮನ್ನು ಭೇಟಿ ಮಾಡಿ ಚರ್ಚೆ ಮಾಡುತ್ತೇನೆ.’

ಈ ಸಂವಾದ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷರ ಮುಂದೆ ತಮ್ಮ ಸಮಸ್ಯೆ, ನೋವುಗಳನ್ನು ಹಂಚಿಕೊಂಡ ಹಲವು ಮಹಿಳೆಯರು, ತಾವು ದಿನನಿತ್ಯ ಪೊಲೀಸರಿಂದ ಎದುರಿಸುತ್ತಿರುವ ಸಮಸ್ಯೆ, ದೌರ್ಜನ್ಯವನ್ನು ಹೇಳಿಕೊಂಡು ಕಣ್ಣೀರಿಟ್ಟರು. ಇನ್ನು ಕೋವಿಡ್ ಸಮಯದಲ್ಲಿ ಜೀವನ ನಡೆಸಲು ಅನುಭವಿಸಿದ ಸಂಕಟ, ಸಮಾಜದಲ್ಲಿ ಎದುರಿಸುವ ಅಪಮಾನ, ಕುಟುಂಬದ ಜವಾಬ್ದಾರಿ ನಿಭಾಯಿಸಲು ಆಗುತ್ತಿರುವ ಪರದಾಟ ಎಲ್ಲವನ್ನು ಎಳೆಎಳೆಯಾಗಿ ವಿವರಿಸಿದರು.

ಈ ಸಂವಾದ ಕಾರ್ಯಕ್ರಮದಲ್ಲಿ ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಖ್ಯಾತ ಹೋರಾಟಗಾರ್ತಿ ಅಕೈ ಪದ್ಮಶಾಲಿ, ಸಾಧನಾ ಮಹಿಳಾ ಸಂಘದ ಗೀತಾ, ಮಧು ಹಾಗೂ ವಕೀಲರಾದ ಸಭಾ ಅವರು ಮಾತನಾಡಿದರು.

ಟಾಪ್ ನ್ಯೂಸ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.