ವಿಮಾನ ಚಲಿಸುತ್ತಿರುವಾಗಲೇ ಪೈಲಟ್ಗೆ ಹೃದಯಾಘಾತ; ನಾಗ್ಪುರದಲ್ಲಿ ವಿಮಾನ ತುರ್ತು ಭೂಸ್ಪರ್ಶ
Team Udayavani, Aug 27, 2021, 9:30 PM IST
ನಾಗ್ಪುರ: ವಿಮಾನ ಚಲಿಸುತ್ತಿರುವಾಗಲೇ ಬಾಂಗ್ಲಾದೇಶದ ಬಿಮಾನ್ ವಿಮಾನಯಾನ ಸಂಸ್ಥೆಯ ಪೈಲಟ್ಗೆ ಹೃದಯಾಘಾತವಾಗಿದೆ. ಪರಿಣಾಮ ಶುಕ್ರವಾರ ಬೆಳಗ್ಗೆ 11.40 ಗಂಟೆಯ ಹೊತ್ತಿಗೆ ಮಹಾರಾಷ್ಟ್ರದ ನಾಗ್ಪುರ ನಿಲ್ದಾಣದಲ್ಲಿ ಬಾಂಗ್ಲಾ ವಿಮಾನವನ್ನು ತುರ್ತು ಭೂಸ್ಪರ್ಶ ಮಾಡಲಾಗಿದೆ.
ಪೈಲಟ್ರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಕೊರೊನಾ ನಂತರ ಇತ್ತೀಚೆಗೆ ಭಾರತ-ಬಾಂಗ್ಲಾ ನಡುವೆ ಮತ್ತೆ ವಿಮಾನ ಸಂಚಾರ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ 126 ಪ್ರಯಾಣಿಕರನ್ನು ಹೊತ್ತಿದ್ದ ಬೋಯಿಂಗ್ ಏರ್ಕ್ರಾಫ್ಟ್ ವಿಮಾನ ಮಸ್ಕತ್ನಿಂದ ಢಾಕಾಗೆ ಹೊರಟಿತ್ತು. ಛತ್ತೀಸಗಢದ ರಾಯ್ಪುರಕ್ಕೆ ಬರುವಾಗ ಪೈಲಟ್ಗೆ ಹೃದಯಾಘಾತವಾಗಿದೆ.
ಕೂಡಲೇ ಕೋಲ್ಕತದ ತುರ್ತು ಸೇವಾಕೇಂದ್ರವನ್ನು ಸಂಪರ್ಕಿಸಲಾಗಿದೆ. ಅಲ್ಲಿಂದ ನಾಗ್ಪುರ ವಿಮಾನ ನಿಲ್ದಾಣದಲ್ಲಿಳಿಸಲು ತಕ್ಷಣ ಅವಕಾಶ ಮಾಡಿಕೊಡಲಾಗಿದೆ.
ಇದನ್ನೂ ಓದಿ :ನಡುರಸ್ತೆಯಲ್ಲಿ ದಂಡ ವಸೂಲಿ ಮಾಡುತ್ತಿದ್ದ ಪೊಲೀಸರಿಗೆ ಚಳಿ ಬಿಡಿಸಿದ ರಮೇಶ್ ಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮುಂಗಾರಿಗಾಗಿ ಬಿತ್ತನೆ ಬೀಜ ದಾಸ್ತಾನು ಆರಂಭ; ಬೀಜ ದರ ಪ್ರತೀ ಕೆ.ಜಿ.ಗೆ 9.75 ರೂ. ಹೆಚ್ಚಳ!
China ಯೋಜನೆಗೆ ಭಾರತ ಸೆಡ್ಡು: ಚಬಹಾರ್ ಬಂದರಿಗಾಗಿ ಭಾರತ-ಇರಾನ್ ಅಂಕಿತ
SSLC Results ಕುಸಿತಕ್ಕೆ ಸಿಸಿಕೆಮರಾ ಕಾರಣವಲ್ಲ: ಕೆಪಿಎಂಟಿಸಿಸಿ ಅಭಿಪ್ರಾಯ
RCB ಪ್ಲೇ ಆಫ್ ಲೆಕ್ಕಾಚಾರ ಹೀಗಿದೆ ..; ಚೆನ್ನೈ ವಿರುದ್ಧ ಗೆಲ್ಲಬೇಕು, ಲಕ್ನೋ ಸೋಲಬೇಕು
Prajwal Revanna ಪಾಸ್ಪೋರ್ಟ್ ರದ್ದತಿಗೆ ಕೋರ್ಟ್ಗೆ ಎಸ್ಐಟಿ ಮೊರೆ?