ಪುತ್ತೂರು ಸರಕಾರಿ ಆಸ್ಪತ್ರೆ: 15 ದಿನಗಳಲ್ಲಿ ಆಮ್ಲಜನಕ ಘಟಕ ಸಿದ್ಧ


Team Udayavani, Aug 28, 2021, 6:01 AM IST

ಪುತ್ತೂರು ಸರಕಾರಿ ಆಸ್ಪತ್ರೆ: 15 ದಿನಗಳಲ್ಲಿ ಆಮ್ಲಜನಕ ಘಟಕ ಸಿದ್ಧ

ಸಾಂದರ್ಭಿಕ ಚಿತ್ರ

ಪುತ್ತೂರು: ಕ್ಯಾಂಪ್ಕೋ ಪ್ರಾಯೋಜಕತ್ವದಲ್ಲಿ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ನಿರ್ಮಿಸಲು ಉದ್ದೇಶಿಸಿರುವ ಆಕ್ಸಿಜನ್‌ ಘಟಕ ಮುಂದಿನ ಹದಿನೈದು ದಿನಗಳಲ್ಲಿ ಅನುಷ್ಠಾನಗೊಳ್ಳಲಿದೆ. ಕೋವಿಡ್‌ ಎರಡನೇ ಅಲೆ ಸಂದರ್ಭದಲ್ಲಿ ಆಮ್ಲಜನಕ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಶಾಸಕರ ಮನವಿ ಮೇರೆಗೆ ಕ್ಯಾಂಪ್ಕೋ ಸಂಸ್ಥೆ ಘಟಕ ನಿರ್ಮಾಣದ ಭರವಸೆ ನೀಡಿದ್ದು ಅದರಂತೆ ಘಟಕ ನಿರ್ಮಾಣದ ಸಿದ್ಧತೆ ಅಂತಿಮ ಹಂತಕ್ಕೆ ತಲುಪಿದೆ.

ಕೊಯಮತ್ತೂರಿನ ಸಮಿಟ್ಸ್‌ ಹೈಗ್ರಾನಿಕ್ಸ್‌ ಪ್ರೈವೇಟ್‌ ಲಿಮಿಟೆಡ್‌ ಕಂಪೆನಿ ಮೂಲಕ ಘಟಕ ತಯಾರಿ ಕೆಲಸ ನಡೆದಿದೆ. ಕಂಪೆನಿಯಲ್ಲಿಯೇ ನಿರ್ಮಾಣ ಕಾರ್ಯ ಆಗಿದ್ದು ಅಲ್ಲಿಂದ ವಾರದೊಳಗೆ ಪುತ್ತೂರಿಗೆ ತಲುಪಲಿದೆ. ಈಗಾಗಲೇ ಕಳುಹಿಸುವ ವ್ಯವಸ್ಥೆ ಪ್ರಾರಂಭಗೊಂಡಿದೆ. ಘಟಕದ ಬಿಡಿಭಾಗಗಳು ಮತ್ತು ಟ್ಯಾಂಕ್‌ ನಿರ್ಮಿಸಿ ಅದನ್ನು ಪುತ್ತೂರಿಗೆ ತಂದು ಸರಕಾರಿ ಆಸ್ಪತ್ರೆ ವಠಾರದಲ್ಲಿ ನಿಗದಿಪಡಿಸಲಾದ ಸ್ಥಳದಲ್ಲಿ ಅಳವಡಿಸಲಾಗುತ್ತದೆ. ಅನುಷ್ಠಾನ ಕಾರ್ಯಕ್ಕೆ ಒಂದು ವಾರ ತಗಲಬಹುದು ಎನ್ನುತ್ತಾರೆ ಲೋಕೋಪಯೋಗಿ ಇಲಾ ಖೆಯ ಸಹಾಯಕ ಎಂಜಿನಿಯರ್‌ ಪ್ರಮೋದ್‌.

1 ಕೋ.ರೂ.ವೆಚ್ಚ
ಒಟ್ಟು ವೆಚ್ಚ 1 ಕೋ.ರೂ.ಆಗಿದ್ದು 15 ಲಕ್ಷ ರೂ. ಸಿವಿಲ್‌ ವರ್ಕ್‌ಗೆ ತಗಲುತ್ತದೆ. ಹಳೆ ಸಬ್‌ಜೈಲಿಗೆ ಹೊಂದಿಕೊಂಡಂತೆ ಘಟಕ ನಿರ್ಮಾಣಕ್ಕೆ ಸ್ಥಳ ಸಮತಟ್ಟು ಪೂರ್ಣಗೊಂಡಿದೆ. 600 ಚದರಡಿ ವಿಸ್ತೀರ್ಣದಲ್ಲಿ 3 ಮೀಟರ್‌ ಎತ್ತರದ ಘಟಕ ನಿರ್ಮಾಣಗೊಳ್ಳಲಿದೆ. ಛಾವಣಿ ಸೇರಿದರೆ ಎತ್ತರ 5 ಮೀಟರ್‌ನಷ್ಟಿರಲಿದೆ ಎನ್ನುತ್ತದೆ ಘಟಕ ಸ್ಥಾಪನೆಯ ನೀಲ ನಕಾಶೆ.

ಇದನ್ನೂ ಓದಿ:ಲೈಂಗಿಕ ಅಲ್ಪಸಂಖ್ಯಾತರು, ಕಾರ್ಯಕರ್ತರ ರಕ್ಷಣೆ, ಏಳ್ಗೆಗೆ ಪ್ರಣಾಳಿಕೆಯಲ್ಲಿ ಆದ್ಯತೆ: ಡಿಕೆಶಿ 

ಆಕ್ಸಿಜನ್‌ ಉತ್ಪಾದನೆ
ಪ್ರತೀ ಗಂಟೆಗೆ 27 ಮೀಟರ್‌ ಕ್ಯೂಬ್‌ ಆಕ್ಸಿಜನ್‌ ಉತ್ಪಾದನೆ ಮಾಡುವ ಸಾಮರ್ಥ್ಯ ಈ ಘಟಕ ಹೊಂದಿರಲಿದೆ.

ಶೀಘ್ರ ಅನುಷ್ಠಾನ
ಕೊಯಮತ್ತೂರಿನಿಂದ ಸಮಿಟ್ಸ್‌ ಕಂಪೆನಿಯು ಘಟಕ ನಿರ್ಮಿಸಿ ಪುತ್ತೂರಿಗೆ ವಾರದೊಳಗೆ ಪೂರೈಸಲಿದೆ. ಹದಿನೈದು ದಿನಗಳಲ್ಲಿ ಅನುಷ್ಠಾನ ಕಾರ್ಯ ನಡೆಯಲಿದೆ. ಕ್ಯಾಂಪ್ಕೋ ಒಂದು ಕೋ.ರೂ.ವೆಚ್ಚದಲ್ಲಿ ಈ ಘಟಕವನ್ನು ಸರಕಾರಿ ಆಸ್ಪತ್ರೆಯಲ್ಲಿ ಅನುಷ್ಠಾನಿಸುತ್ತಿದೆ.
-ಕೃಷ್ಣ ಕುಮಾರ್‌,
ಆಡಳಿತ ನಿರ್ದೇಶಕ, ಕ್ಯಾಂಪ್ಕೋ

ಉಪವಿಭಾಗದ ದೊಡ್ಡ ಆಸ್ಪತ್ರೆ
ಸುಮಾರು 100 ಬೆಡ್‌ ಸಾಮರ್ಥ್ಯದ ತಾಲೂಕು ಸರಕಾರಿ ಆಸ್ಪತ್ರೆಯನ್ನು 300 ಬೆಡ್‌ಗೆ ಏರಿಸುವ ಪ್ರಸ್ತಾವನೆಯನ್ನು ಈಗಾಗಲೇ ಸರಕಾರಕ್ಕೆ ಸಲ್ಲಿಸಲಾಗಿದೆ. ಸುಮಾರು 20 ಕೋ.ರೂ. ವೆಚ್ಚದಲ್ಲಿ ಆರು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಕ್ರಿಯಾಯೋಜನೆ ತಯಾರಿಸಲಾಗಿದೆ. ಇಡೀ ಆಸ್ಪತ್ರೆಗೆ ಕ್ಯಾಂಪಸ್‌ ರೂಪ ನೀಡುವ ಸಲುವಾಗಿ ಆಸ್ಪತ್ರೆಗೆ ತಾಗಿಕೊಂಡಿರುವ ವಿವಿಧ ಇಲಾಖೆಗಳ ಖಾಲಿ ಜಾಗವನ್ನು ಆಸ್ಪತ್ರೆ ಹೆಸರಿಗೆ ವರ್ಗಾಯಿಸಲಾಗುತ್ತಿದೆ. ಈ ಪ್ರಕ್ರಿಯೆ ಪೂರ್ಣಗೊಂಡಲ್ಲಿ ಒಟ್ಟು 5.5 ಎಕ್ರೆ ಜಾಗ ಹೊಂದಿರುವ ಜಿಲ್ಲೆಯ ಆಸ್ಪತ್ರೆ ಇದಾಗಲಿದೆ. ಹೀಗಾಗಿ ಆಕ್ಸಿಜನ್‌ ಘಟಕ ಸ್ಥಾಪನೆ ಕೂಡ ಆಸ್ಪತ್ರೆಯ ಬೆಳವಣಿಗೆಗೆ ಪೂರಕವಾಗಲಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.