ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿ

ಸೆ.30 ಗಡುವು ಮುಗಿದ ಬಳಿಕ ಅ.1ರಿಂದ ಹೋರಾಟ ಮುಂದುವರಿಕೆ: ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್‌

Team Udayavani, Aug 28, 2021, 4:28 PM IST

ಪಂಚಮಸಾಲಿ 2ಎ ಮೀಸಲಾತಿ ಹೋರಾಟಕ್ಕೆ ಬೆಂಬಲ ನೀಡಿ

ಗುಂಡ್ಲುಪೇಟೆ: ಲಿಂಗಾಯತರಿಗೆ 2ಎ ಮೀಸಲಾತಿ ಸಿಗದಿದ್ದಲ್ಲಿ ಮುಂದಿನ ಹೋರಾಟಗಳಿಗೆ ದಕ್ಷಿಣ ಭಾಗದ ಎಲ್ಲ ಲಿಂಗಾಯತರು ಬೆಂಬಲ
ನೀಡಬೇಕು ಎಂದು ಲಿಂಗಾಯಿತ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಅಧ್ಯಕ್ಷ, ಮಾಜಿ ಶಾಸಕ ವಿಜಯಾನಂದ ಕಾಸಪ್ಪನವರ್‌ ತಿಳಿಸಿದರು.

ತಾಲೂಕಿನ ಹಂಗಳದಲ್ಲಿ ಲಿಂಗಾಯಿತರ 2 ಮೀಸಲಾತಿ ಹೋರಾಟದ ನೇ ದಿನದ ಪ್ರತಿಜ್ಞಾ ಪಂಚಾಯತ್‌ ಅಭಿಯಾನ(2ಎ ಮೀಸಲಾತಿ
ಕೊಡಿರಿ-ಹೇಳಿದಂತೆ ನಡೆಯಿರಿ)ದಲ್ಲಿ ಮಾತನಾಡಿದರು.

ನಾವು ನೀಡಿರುವ ಸೆ.30 ಗಡುವು ಮುಗಿದ ಬಳಿಕ ಅ.1ರಿಂದ ಹೋರಾಟ ಮುಂದುವರಿಸ ಬೇಕಿದೆ. ಮೈಸೂರು, ಮಂಡ್ಯ, ಕೊಡುಗು, ಚಾಮರಾಜ ನಗರ ಜಿಲ್ಲೆಯಲ್ಲಿ ಬೇರೆ ಬೇರೆ ಹೆಸರಿನಿಂದ ಕರೆಯಲ್ಪಡುವ ಗೌಡ ಲಿಂಗಾಯತರು ನಮ್ಮೊಂದಿಗೆ ಬೆಂಗಳೂರಿನಲ್ಲಿ 20 ಲಕ್ಷ ಜನ ಸೇರಿಸಿ ಹೋರಾಟ ಮಾಡಲು ಸಾಧ್ಯವಾಗುತ್ತದೆ ಎಂದರು.

ಕೂಡಲ ಸಂಗಮದ ಜಗದ್ಗುರು ಮೃತ್ಯುಂಜಯ ಸ್ವಾಮೀಜಿ ಮಾತನಾಡಿ, ಲಿಂಗಾಯಿತರ 2ಎ ಮೀಸಲಾತಿ, ಪಾದಯಾತ್ರೆ, ಹೋರಾಟ, ಈಗ ಮಲೆ ಮಹದೇಶ್ವರ ಬೆಟ್ಟದಲ್ಲಿ ಪ್ರತಿಜ್ಞಾ ಪಂಚಾಯತ್‌ ಅಭಿಯಾನದ ಮೂಲಕ ಮುಂದುವರಿಯುತ್ತಿದೆ. ರಾಜ್ಯದಲ್ಲಿ 3800 ಲಿಂಗಾಯತ ಮಠಗಳಿವೆ. ಆದರೆ ಮೀಸಲಾತಿ ಇಂದಿನ ಅತಿ ಅಗತ್ಯ ಎಂಬುದನ್ನು ನಾವು ಅರಿಯಬೇಕು ಎಂದರು.

ಇದನ್ನೂ ಓದಿ:ಗೋವಾ: ಪ್ರವಾಸಿಗನನ್ನು ದೋಚಿದ್ದ ಆರೋಪಿಗಳ ಬಂಧನ

ಗೌಡ ಲಿಂಗಾಯತ ಸಭಾ ರಾಜ್ಯಾಧ್ಯಕ್ಷ ಆಲನಹಳ್ಳಿ ಪುಟ್ಟಸ್ವಾಮಿ, ಅಖೀಲ ಭಾರತ ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ಎಚ್‌.ಎಸ್‌
.ನಂಜಪ್ಪ, ಮುಖಂಡರಾದ ಎಸ್‌.ಪಿ.ಸುರೇಶ್‌, ಸಿದ್ದೇಶ್‌ ಬಾಬು(ಗೊಂಬೆ), ಡಾ.ಬಿ.ಎಸ್‌ .ಪಾಟೀಲ್‌ ನಾಗರಾಳ ಇತರಿದ್ದರು.

ಸಮುದಾಯ ಇನ್ನಾದರೂ ಎಚ್ಚೆತ್ತುಕೊಳ್ಳಲಿ:ಮಲ್ಲೇಶ್‌
ಗೌಡ ಲಿಂಗಾಯತ ಮುಂದುವರಿದ ಜಾತಿ ಎನ್ನುವುದಾದರೆ ಕೇಂದ್ರದ ಶೇ.10 ಮೀಸಲಾತಿ ಕೊಡಿ ಎಂದರೂ ಸಾಧ್ಯವಿಲ್ಲ ಎನ್ನಲಾಗುತ್ತಿದೆ.
ಹಿಂದುಳಿದವರು ಎಂಬ ಕಾರಣಕ್ಕೆ 2ಎ ಕೊಡಿ ಎಂದರೂ ಕೊಡುತ್ತಿಲ್ಲ. ಈಗ ಸಮುದಾಯಕ್ಕೆ ಮೀಸಲು ಪಡೆಯುವ ಅಗತ್ಯ ಕುತ್ತಿಗೆಗೆ ಬಂದಿದೆ. ಇನ್ನಾದರೂ ಎಚ್ಚೆತ್ತುಕೊಳ್ಳಿ. ಮೃತ್ಯುಂಜಯ ಸ್ವಾಮೀಜಿ ನಮ್ಮ ಆಶಾಕಿರಣವಾಗಿದ್ದಾರೆ. ತ್ಯಾಗ ಮನೋಭಾವ ಇರುವವರನ್ನು ಬೆಂಬಲಿಸೋಣ. ಜಿಲ್ಲೆಯ ಬಹುದಿನದ ಕನಸಿನ ಕಬಿನಿ 2ನೇ ಹಂತದ ಯೋಜನೆಗೆ ಹೋರಾಡೋಣ ಎಂದು ಗೌಡ ಲಿಂಗಾಯಿತ ಸಂಘಟನೆ ಸಂಚಾಲಕ ಅಮ್ಮನಪುರ ಮಲ್ಲೇಶ್‌ ತಿಳಿಸಿದರು.

ಟಾಪ್ ನ್ಯೂಸ್

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

1-RR

Modi ಹಾವಿನ ರೀತಿಯಲ್ಲಿ ರೈತರ ವಿರುದ್ಧ ಸೇಡಿಗೆ ಕಾಯ್ತಿದ್ದಾರೆ: ರೇವಂತ್‌

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ

Jagan mohan

YSR Congress ಪ್ರಣಾಳಿಕೆ: ಪಿಂಚಣಿ ಮೊತ್ತ ಏರಿಕೆ, ವೈಜಾಗ್‌ ಕಾರ್ಯಕಾರಿ ರಾಜಧಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

1-wwqw

CRPF DIG ಯಿಂದ ಲೈಂಗಿಕ ಕಿರುಕುಳ: ಖಜಾನ ವಜಾ ಸಾಧ್ಯತೆ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.