ಆಸ್ತಿ ವಿವಾದಕ್ಕೆ ನಾಲ್ವರು ಸಹೋದರರ ಹತ್ಯೆ: ಪುಟಾಣಿ ಕುಟುಂಬದ 9 ಮಂದಿಯ ಬಂಧನ


Team Udayavani, Aug 29, 2021, 1:34 PM IST

bagal

ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಮದರಖಂಡಿಯಲ್ಲಿ ಜಮೀನು ವಿವಾದದ ಹಿನ್ನೆಲೆಯಲ್ಲಿ ನಾಲ್ವರು ಸಹೋದರರನ್ನು ಹತ್ಯೆ ಮಾಡಿದ್ದ 9 ಮಂದಿ ಆರೋಪಿಗಳನ್ನು ಪೊಲೀಸರು ರವಿವಾರ ಬಂಧಿಸಿದ್ದಾರೆ.

ಮದರಖಂಡಿಯ ಸುಮಾರು 3 ಎಕರೆ 21 ಗುಂಟೆ ಜಮೀನಿನ ವಿವಾದ ನಾಲ್ವರು ಸಹೋದರರ ಬರ್ಬರ ಹತ್ಯೆಗೆ ಕಾರಣವಾಗಿತ್ತು. ಜಮಖಂಡಿ ತಾಲೂಕಿನ ಮದರಖಂಡಿ ಗ್ರಾಮದ ಹೊರವಲಯದ ತೋಟದಲ್ಲಿ ಶನಿವಾರ ರಾತ್ರಿ ಈ ಕೊಲೆ ನಡೆದಿತ್ತು.

ಮದರಖಂಡಿ ಮತ್ತು ಪುಟಾಣಿ ಎರಡು ಕುಟುಂಬಗಳ ನಡುವಿನ ಜಮೀನು ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಹೋದರರನ್ನು ಮಾರಕಾಸ್ತ್ರಗಳಿಂದ ಭೀಕರವಾಗಿ ಹತ್ಯೆ ಮಾಡಲಾಗಿದ್ದು, ಮುದರಡ್ಡಿ(ಉದಗಟ್ಟಿ) ಕುಟುಂಬದ ಸಹೋದರರಾದ ಹನುಮಂತ ಮಹಾದೇವ ಮುದರಡ್ಡಿ(45 ವ), ಮಲ್ಲಪ್ಪ(42 ವ) ಬಸಪ್ಪ(37 ವ) ಹಾಗೂ ಈಶ್ವರ (35 ವ)ಕೊಲೆಯಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿ ಆರೋಪಿಗಳನ್ನು ಜಮಖಂಡಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಮುದರಡ್ಡಿ ಕುಟುಂಬದವರು ಗ್ರಾಮದ ಪುಟಾಣಿ ಕುಟುಂಬದವರಿಂದ ಜಮೀನು ಖರೀದಿ ಮಾಡಿದ್ದು, ಈ ವಿಚಾರವಾಗಿ ಎರಡು ಕುಟುಂಬಗಳ ನಡುವೆ ವಿವಾದ ಉಂಟಾಗಿತ್ತು.

ಇದನ್ನೂ ಓದಿ:ಟ್ಯಾಟೂ ನೀಡಿದ ಸಾಕ್ಷಿ: ಕೊಲೆ ಪ್ರಕರಣವನ್ನು ಭೇದಿಸಲು ಪೊಲೀಸರಿಗೆ ಸಹಾಯ ಮಾಡಿದ ಟ್ಯಾಟೂ

ಪುಟಾಣಿ ಕುಟುಂಬದವರಿಂದ ಖರೀದಿಸಿದ್ದ 3ಎಕರೆ 21 ಗುಂಟೆ ಜಮೀನಿನಲ್ಲಿ 21 ಗುಂಟೆ ಜಾಗವನ್ನು ಬಿಟ್ಟು ಕೊಡುವುದಾಗಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಮುದರಡ್ಡಿ ಕುಟುಂಬದವರು ಒಪ್ಪಿಕೊಂಡಿದ್ದರು ಎನ್ನಲಾಗಿದೆ. ಆದರೆ ಆ ಜಮೀನು ಬಿಟ್ಟು ಕೊಡದೆ ಸತಾಯಿಸಿದ್ದರಿಂದ ಪುಟಾಣಿ ಕುಟುಂಬದವರು ದುಷ್ಕೃತ್ಯ ನಡೆಸಿದ್ದಾರೆ ಎಂದು ಹೇಳಲಾಗಿದೆ.

ಸದ್ಯ ಪುಟಾಣಿ ಕುಟುಂಬದ ನಂದೀಶ್, ನಾಗಪ್ಪ, ಪರಪ್ಪ, ಶಿವಾನಂದ, ಈರಪ್ಪ, ಶಂಕರ್, ಅಂಬವ್ವ, ರುಕ್ಮವ್ವ, ಮಾಲಾಶ್ರೀ, ಸುನಂದಾ ಹಾಗೂ ಪ್ರೇಮಾ ನಿಡೋಣಿ, ಚನ್ನಬಸಪ್ಪ ನಿಡೋಣಿ ಸೇರಿದಂತೆ ಒಟ್ಟು 12 ಮಂದಿ ಕೃತ್ಯ ಎಸಗಿರುವುದಾಗಿ ತಿಳಿದು ಬಂದಿದೆ. ಮೃತರ ಮನೆಯಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ನಾಲ್ವರು ಮಕ್ಕಳನ್ನು ಕಳೆದುಕೊಂಡು ಹೆತ್ತ ತಾಯಿಯ ಕಣ್ಣೀರು ಹಾಕುತ್ತಿದ್ದಾರೆ.

ಕೊಲೆಯಾಗಿರುವ ಮಲ್ಲಪ್ಪನ ಪತ್ನಿ ಭಾರತಿಯ ಆಕ್ರಂದನ ಮುಗಿಲು ಮುಟ್ಟಿದೆ. ನಾಲ್ವರು ಸಹೋದರರಿಗೆ ಒಟ್ಟು 12 ಜನ ಮಕ್ಕಳು ಇದ್ದಾರೆ.

ಈ ಎರಡು ಕುಟುಂಬಗಳ ನಡುವಿನ ಆಸ್ತಿ ವಿವಾದ ಧಾರವಾಡ ಹೈಕೋರ್ಟ್ ಮೆಟ್ಟಿಲೇರಿತ್ತು. ಅದಿನ್ನೂ ಬಗೆಹರಿದಿಲ್ಲ. ಗ್ರಾಮದ ಹಿರಿಯರು ಕೂಡ ಈ ಕುಟುಂಬಗಳ ನಡುವಿನ ವಿವಾದ ಬಗೆ ಹರಿಸುವ ಪ್ರಯತ್ನ ಮಾಡಿದ್ದರೂ ಎರಡು ಕುಟುಂಬದ ನಡುವೆ ದ್ವೇಷ ಮುಂದುವರೆದಿತ್ತು ಎನ್ನಲಾಗಿದೆ. ತೋಟಕ್ಕೆ ಬಂದ ಸಹೋದರರನ್ನು ಒಬ್ಬರ ಮೇಲೊಬ್ಬರಂತೆ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.

ಟಾಪ್ ನ್ಯೂಸ್

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.