ಜಿಎಸ್‌ಬಿ ಸೇವಾ ಮಂಡಲ ಮುಂಬಯಿ: 67ನೇ ಗಣೇಶೋತ್ಸವದ 3ನೇ ಸಮಾಲೋಚನ ಸಭೆ


Team Udayavani, Aug 29, 2021, 2:45 PM IST

ಜಿಎಸ್‌ಬಿ ಸೇವಾ ಮಂಡಲ ಮುಂಬಯಿ: 67ನೇ ಗಣೇಶೋತ್ಸವದ 3ನೇ ಸಮಾಲೋಚನ ಸಭೆ

ಸಯಾನ್‌: ಜಿಎಸ್‌ಬಿ ಸೇವಾ ಮಂಡಲ ಮುಂಬಯಿ ಇದರ ವಿಶ್ವವಿಖ್ಯಾತ 67ನೇ ವಾರ್ಷಿಕ ಗಣೇಶೋತ್ಸವವು ಸೆ. 10ರಿಂದ ಸೆ. 14ರ ವರೆಗೆ ಐದು ದಿನಗಳ ಕಾಲ ಕಿಂಗ್‌ಸರ್ಕಲ್‌ನ ಶ್ರೀ ಸುಕೃತೀಂದ್ರ ನಗರದ ಎ. ರಾಮನಾಯಕ್‌ ಹಾಲ್‌ ಹಾಗೂ ಜಿಎಸ್‌ಬಿ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ಜರಗಲಿದ್ದು, ಇದರ ಪೂರ್ವ ತಯಾರಿ ಸಭೆಯು ಆ. 21ರಂದು ಸಯಾನ್‌ನ ಶ್ರೀ ಗುರುಗಣೇಶ್‌ ಸಭಾಗೃಹದಲ್ಲಿ ನಡೆಯಿತು.

ವಾರ್ಷಿಕ ಗಣೇಶೋತ್ಸವವು ಶ್ರೀ ಕಾಶೀ ಮಠಾಧೀಶ ವೃಂದಾವನಸ್ಥ ಶ್ರೀಮದ್‌ ಸುಧೀಂದ್ರ ತೀರ್ಥ ಸ್ವಾಮೀಜಿ ಹಾಗೂ ಶ್ರೀಮದ್‌ ಸಮ್ಯಮೀಂದ್ರ ತೀರ್ಥ ಸ್ವಾಮೀಜಿಯವರ ಆಶೀರ್ವಾದ ಹಾಗೂ ಮಾರ್ಗದರ್ಶನದೊಂದಿಗೆ ನಡೆಯಲಿದ್ದು, ಮೂರನೇ ಪೂರ್ವಭಾವಿ ಸಭೆಯಲ್ಲಿ ಸೇವಾ ಮಂಡಲದ ಕಾರ್ಯಕಾರಿ ಸಮಿತಿ, ಸ್ವಯಂ ಸೇವಕರು ಉಪಸ್ಥಿತರಿದ್ದರು. ಗಣೇಶೋತ್ಸವ ಆಯೋಜನ ಸಮಿತಿಯ ಸಂಚಾಲಕ ಡಾ| ಭುಜಂಗ ಪೈ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯ ಸೇವಾ ಮಂಡಲದ ಕಾರ್ಯದರ್ಶಿ ಶಿವಾನಂದ ಭಟ್‌ ಪ್ರಾರ್ಥನೆಗೈದರು.

ಡಾ| ಭುಜಂಗ ಪೈ ಅವರು ವಾಲ್ಕೇಶ್ವರ ಶ್ರೀ ಕಾಶೀ ಮಠದ ಉಭಯ ವೃಂದಾವನಸ್ಥ ಗುರುವರ್ಯರನ್ನು ಪ್ರಾರ್ಥಿಸಿ ಸ್ವಾಗತಿಸಿದರು. ಹಿಂದಿನ ಸಮಾಲೋಚನ ಸಭೆಯ ವರದಿಯನ್ನು ವಾಚಿಸಿ ಅನುಮೋದನೆ ಪಡೆಯಲಾಯಿತು. ಈ ವರ್ಷದ ಗಣೇಶೋತ್ಸವವು ಸರಕಾರಿ ಮಾರ್ಗ ಸೂಚಿಗಳಂತೆ ಜರಗಬೇಕು. ಕೋವಿಡ್‌ ಸಾಂಕ್ರಮಿಕದಿಂದ ರಕ್ಷಣೆ ಪಡೆಯಲು ಸರ್ವರು ಆದಷ್ಟು ಬೇಗ ಕೋವಿಡ್‌ ಲಸಿಕೆಯನ್ನು ಪಡೆಯಬೇಕು. ಸೇವಾ ಮಂಡಲವು ಇತ್ತೀಚೆಗೆ ದಾನಿಗಳ ಸಹಕಾರದಿಂದ ಮುಂಬಯಿಯ ವಿವಿಧ ಸ್ಥಳಗಳಲ್ಲಿ ಉಚಿತ ಕೊರೊನಾ ಲಸಿಕೆ ಅಭಿಯಾನವನ್ನು ಆಯೋಜಿಸಿ ಸಹಕರಿಸಿದೆ ಎಂದು ನುಡಿದು ಸರ್ವರ ಸಹಕಾರ ಅಗತ್ಯವಾಗಿದೆ ಎಂದರು.

ಇದನ್ನೂ ಓದಿ:ಪಶ್ಚಿಮಘಟ್ಟದ ರಮಣೀಯ ತಾಣ ಕ್ಯಾತನಮಕ್ಕಿ

ಸೇವಾ ಮಂಡಲದ ಅಧ್ಯಕ್ಷ ರಮೇಶ್‌ ಭಂಡಾರ್ಕರ್‌ ಅವರು ಮಾತನಾಡಿ, ಗಣೇಶೋತ್ಸವದ ಮಂಟಪ ನಿರ್ಮಾಣದ ಕುರಿತು ಮಾಹಿತಿ ನೀಡಿದರು. ಜತೆ ಸಂಚಾಲಕ ಜಿ. ಡಿ. ರಾವ್‌ ಅವರು ಗಣೇಶ ವಿಗ್ರಹವು ಸರಕಾರಿ ನಿಯಮಂತೆ ನಾಲ್ಕು ಅಡಿ ಮಾತ್ರ ಎತ್ತರ ಇರಬೇಕು. ಕಳೆದ ವರ್ಷ ವಿಗ್ರಹವು ಅತೀ ಸುಂದರವಾಗಿ ಮೂಡಿ ಬಂದಿದೆ. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಮಾತಿಗೆ ನಮ್ಮ ಮಂಡಳಿಯು ಹೆಗ್ಗಳಿಕೆಗೆ ಪಾತ್ರವಾಗಿದೆ ಎಂದು ನುಡಿದು ಶುಭಹಾರೈಸಿದರು.

ಗಣೇಶೋತ್ಸವ ಆಯೋಜನ ಸಮಿತಿಯ ಮಾಜಿ ಸಂಚಾಲಕ ಜಿ. ಜಿ. ಪ್ರಭು ಅವರು ಮಾತನಾಡಿ, ಬರುವ ದಿನಗಳಲ್ಲಿ ಸರಕಾರದ ನಿಯಮಾ ವಳಿಯಲ್ಲಿ ಸೂಕ್ತ ಮಾರ್ಪಾಡು ಮಾಡಿ ವಿಜೃಂಭಣೆಯಿಂದ ಗಣೇಶೋತ್ಸವ ಜಗರುವಂತಾಗಬೇಕು ಎಂದು ನುಡಿದು ಹಾರೈಸಿದರು. ಸೇವಾ ಮಂಡಲದ ಟ್ರಸ್ಟಿ ಆರ್‌. ಜಿ. ಭಟ್‌ ಅವರು ಮಾತನಾಡಿ, ಕಳೆದ ಒಂದೂವರೆ ವರ್ಷಗಳಿಂದ ಕೋವಿಡ್‌ ನಿಮಿತ್ತ ಲಾಕ್‌ಡೌನ್‌ ಸಮಯದಲ್ಲಿ ತೊಂದರೆಗೀಡಾದ ಅಪಾರ ಮಂದಿಗೆ ಧನ ಸಹಾಯ,ನಿತ್ಯ ಮನೆಯಲ್ಲಿ ಬೇಕಾಗುವ ಸಾಮಾ ಗ್ರಿಗಳ ಕಿಟ್‌, ಉಚಿತ ವ್ಯಾಕ್ಸಿನೇಶನ್‌, ಆಸ್ಪತ್ರೆ ಗಳಲ್ಲಿ ದಾಖಲಾದ ರೋಗಿಗಳ ಸಂಬಂಧಿಕರಿಗೆ ಉಚಿತ ಅನ್ನದಾನ, ಮಹಾರಾಷ್ಟ್ರ ನೆರೆ ಪೀಡಿತರಿಗೆ ನೆರವು ಇತ್ಯಾದಿ ಕಾರ್ಯಗಳಿಗೆ ಸೇವಾ ಮಂಡಲವು ಸಹಕರಿಸಿದೆ ಎಂದರು.

ಸತೀಶ್‌ ರಾಮ ನಾಯಕ್‌ ಅವರು ಸರಕಾರದ ಗಣೇಶೋತ್ಸವದ ನಿಯಮಾವಳಿಯಲ್ಲಿ ಸೂಕ್ತ ಬದಲಾವಣೆಗಾಗಿ ಬಿಎಂಸಿ ಸಮನ್ವಯ ಸಮಿತಿ ಪ್ರಯತ್ನಿಸುತ್ತಿದೆ ಎಂದರು. ಸೇವಾ ಮಂಡಲದ ಜತೆ ಕೋಶಾಧಿಕಾರಿ ವಿಷ್ಣು ಕಾಮತ್‌ ಅವರು ಗಣೇಶೋತ್ಸವ ಭಕ್ತರಿಗೆ ಪೂಜೆ, ಸೇವೆಯನ್ನು ಆ್ಯಪ್‌ ಮೂಲಕ ಬುಕ್‌ ಮಾಡಲು ಉತ್ತೇಜಿಸಬೇಕು ಎಂದರು. ಮಂಡಲದ ಅಧ್ಯಕ್ಷ ರಮೇಶ್‌ ಭಂಡಾರ್ಕರ್‌ ವಂದಿಸಿದರು.

ಟಾಪ್ ನ್ಯೂಸ್

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur: ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.