ನಗರದಲ್ಲಿ ಫ್ಲೈಓವರ್‌ ಪ್ರಸ್ತಾವನೆಗಳು ಕಾರ್ಯಗತಗೊಳ್ಳಲಿ 


Team Udayavani, Aug 30, 2021, 3:30 AM IST

ನಗರದಲ್ಲಿ ಫ್ಲೈಓವರ್‌ ಪ್ರಸ್ತಾವನೆಗಳು ಕಾರ್ಯಗತಗೊಳ್ಳಲಿ 

ಮಂಗಳೂರು ನಗರ ಅಭಿವೃದ್ಧಿ ಹೊಂದುತ್ತಿದೆ. ರಸ್ತೆಗಳು ಉನ್ನತೀಕರಣಗೊಳ್ಳುತಿವೆ. ನಗರದ ಮೂಲಕ ಹಾದು ಹೋಗುತ್ತಿರುವ ರಾಷ್ಟ್ರೀಯ ಹೆದ್ದಾರಿಗಳು ಚತುಷ್ಪಥವಾಗಿವೆ. ಖಂಡಿತವಾಗಿಯೂ ಇವೆಲ್ಲ ಉತ್ತಮ ಬೆಳವಣಿಗೆ. ಆದರೆ ಅಭಿವೃದ್ಧಿಯ ಸಂದರ್ಭದಲ್ಲಿ ಆಗಿರುವ ಕೆಲವು ಪ್ರಮಾದಗಳು, ಕೊರತೆಗಳಿಂದ ಜನತೆ ಕಿರಿಕಿರಿ ಅನುಭವಿಸುವಂತಾಗಿದೆ. ಇದರಲ್ಲಿ ಪ್ರಮುಖವಾದುದು ನಂತೂರು ಹಾಗೂ ಕೆಪಿಟಿ ವೃತ್ತಗಳಲ್ಲಿ ಫ್ಲೈಓವರ್‌ನಿರ್ಮಾಣವಾಗದಿರುವುದು.

ನಗರದ ಹೃದಯಭಾಗದಲ್ಲಿರುವ ನಂತೂರು ಹಾಗೂ ಕೆಪಿಟಿ ವೃತ್ತಗಳಲ್ಲಿ ಭಾರೀ ವಾಹನದಟ್ಟಣೆ ಆಗಾಗ ಸಂಚಾರ ತಡೆಗೆ ಕಾರಣವಾಗುತ್ತಿದೆ. ಇಲ್ಲಿ ಸಮಸ್ಯೆ ಎಂದರೆ ಏಕಕಾಲಕ್ಕೆ ಎಲ್ಲ ಕಡೆಯಿಂದ ವಾಹನಗಳು ಬರುವ ಹಿನ್ನೆಲೆಯಲ್ಲಿ ಕೆಲವು ಸಂದರ್ಭ ಯಾರು ಎತ್ತಕಡೆ ತಿರುಗುತ್ತಾರೆ ಎಂಬುದು ಗೊತ್ತಾಗುವುದಿಲ್ಲ. ದ್ವಿಚಕ್ರ, ಕಾರು, ರಿಕ್ಷಾಗಳ ಚಾಲಕರು ಆತಂಕದಿಂದಲೇ ವಾಹನ ಚಲಾಯಿಸಬೇಕಾದ ಪರಿಸ್ಥಿತಿ. ಪರಿಣಾಮ ವಾಹನ ಸಂಚಾರ ಪದೇ ಪದೆ ಸ್ಥಗಿತಗೊಳ್ಳುವುದು ಇಲ್ಲಿ ನಿರಂತರವಾಗಿ ಕಾಡುವ ಸಮಸ್ಯೆ. ನಂತೂರಿನಲ್ಲಿ ದಿನದಲ್ಲಿ ಹಲವು ಬಾರಿ ಅರ್ಧ ಕಿ.ಮೀ.ವರೆಗೆ ವಾಹನಗಳ ಸಾಲು ಇರುತ್ತವೆ. ಸಂಚಾರಿ ಪೊಲೀಸರಿಗೂ ಇಲ್ಲಿ ಸಂಚಾರ ವ್ಯವಸ್ಥೆ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ.

ನಂತೂರಿನಲ್ಲಿ ಹಾಗೂ ಕೆಪಿಟಿ ವೃತ್ತದಲ್ಲಿ ಓವರ್‌ ಪಾಸ್‌ ಅಥವಾ ಅಂಡರ್‌ ಪಾಸ್‌ ನಿರ್ಮಾಣ ಹಲವು ವರ್ಷದ ಬೇಡಿಕೆ. ನಾಗರಿಕರು, ಜನಪ್ರತಿನಿಧಿಗಳು ಹೆದ್ದಾರಿ ಇಲಾಖೆ ಹಾಗೂ ಸರಕಾರವನ್ನು ಹಲವಾರು ಸಮಯಗಳಿಂದ ಒತ್ತಾಯಿಸುತ್ತಲೇ ಬಂದಿದ್ದಾರೆ. ಮಹಾನಗರ ಪಾಲಿಕೆ ಸಾಮಾನ್ಯಸಭೆ, ತ್ತೈಮಾಸಿಕ ಕೆಡಿಪಿ ಸಭೆಗಳು, ಹೆದ್ದಾರಿ ಇಲಾಖೆಗೆ ಸಂಬಂಧಪಟ್ಟ ಸಭೆಗಳಲ್ಲಿ ಜನಪ್ರತಿನಿಧಿಗಳು ಪ್ರಸ್ತಾವಿಸುತ್ತಲೇ ಬಂದಿದ್ದರು.

ಸುರತ್ಕಲ್‌ನಿಂದ ಬಿ.ಸಿ. ರೋಡು ಜಂಕ್ಷನ್‌ ವೃತ್ತದ ವರೆಗೆ ರಾಷ್ಟ್ರೀಯ ಹೆದ್ದಾರಿ ಚತುಷ್ಪಥವಾಗಿ ಮೇಲ್ದರ್ಜೆಗೇರುವ ಯೋಜನೆಯಲ್ಲಿ ನಂತೂರಿನಲ್ಲಿ  ಫ್ಲೈಓವರ್‌ ನಿರ್ಮಾಣ ಕಾಮಗಾರಿ ಒಳಗೊಂಡಿತ್ತು. ಆದರೆ ಸಕಾಲದಲ್ಲಿ ಭೂಸ್ವಾಧೀನವಾಗದೆ ಕಾಮಗಾರಿ ನಡೆಯಲಿಲ್ಲ. ಇದೇ ಕಾರಣಕ್ಕಾಗಿ ಹೆದ್ದಾರಿ ಪ್ರಾಧಿಕಾರ ಈ ಕಾಮಗಾರಿಯನ್ನು ಕೈಬಿಟ್ಟಿತ್ತು. ಜಿಲ್ಲಾಡಳಿತ ಅನಂತರ ಎಚ್ಚೆತ್ತು ಭೂಸ್ವಾಧೀನ ಮಾಡಿದ್ದರೂ ಗುತ್ತಿಗೆ ವಹಿಸಿಕೊಂಡಿರುವ ಇರ್ಕಾನ್‌

ಯೋಜನ ವೆಚ್ಚ ದುಪ್ಪಟ್ಟು ಆಗಿರುವ ಕಾರಣ ಮತ್ತೆ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲು ನಿರಾಕರಿಸಿತ್ತು. ಆದರೆ ನಂತೂರು ವೃತ್ತದಲ್ಲಿ ದಿನದಿಂದ ದಿನಕ್ಕೆ ಸಂಚಾರ ಸಮಸ್ಯೆ ಬಿಗಡಾಯಿಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಇಲ್ಲಿ ಆರಂಭದಲ್ಲಿ ಫ್ಲೈಓವರ್‌ ಬಳಿಕ ಇದನ್ನು ಮಾರ್ಪಾಡು ಮಾಡಿ ಓವರ್‌ಪಾಸ್‌ ಪ್ರಸ್ತಾವನೆಯನ್ನು ಕೇಂದ್ರ ಭೂಸಾರಿಗೆ ಸಚಿವಾಲಯಕ್ಕೆ ಕಳುಹಿಸಿತ್ತು. ಆದರೆ ಇದು ಕಾರ್ಯರೂಪಕ್ಕೆ ಈವರೆಗೂ ಬಂದಿಲ್ಲ.

ಬೆಳೆಯುತ್ತಿರುವ ನಗರದಲ್ಲಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಪ್ರಸ್ತುತ ಪ್ರಸ್ತಾವನೆಯಲ್ಲಿರುವ ಫ್ಲೈಓವರ್‌ ನಿರ್ಮಾಣ ಯೋಜನೆಗಳನ್ನು ಶೀಘ್ರ ಕೈಗೆತ್ತಿಕೊಂಡು ಅನುಷ್ಠಾನಗೊಳಿಸುವ ಕಾರ್ಯ ನಗರದ ಸುಗಮ ಸಂಚಾರ ನಿಟ್ಟಿನಲ್ಲಿ ಅವಶ್ಯವಾಗಿದೆ.

ಸಂ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.