ವಿಶ್ವ ವಿಖ್ಯಾತಿ ನಗರಕ್ಕೆ ಬೇಕಿದೆ  ಸುಗಮ ಸಂಚಾರಿ ಮಾರ್ಗ


Team Udayavani, Aug 30, 2021, 3:50 AM IST

ವಿಶ್ವ ವಿಖ್ಯಾತಿ ನಗರಕ್ಕೆ ಬೇಕಿದೆ  ಸುಗಮ ಸಂಚಾರಿ ಮಾರ್ಗ

ಉಡುಪಿ, ಮಣಿಪಾಲ ಶೈಕ್ಷಣಿಕ, ಆರೋಗ್ಯ, ಪ್ರವಾಸೋದ್ಯಮ ದಡಿಯಲ್ಲಿ ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿ ಕೊಂಡಿದೆ. ಸ್ಮಾರ್ಟ್‌ ಸಿಟಿ ಅನುಷ್ಠಾನಗೊಳಿಸುವ ಚರ್ಚೆ ನಡೆಯುತ್ತಿರುವ ಕಾಲಘಟ್ಟದಲ್ಲಿಯೂ ನಗರದ ಕೆಲವೆಡೆ ಸುಸ್ಥಿತಿಯ ರಸ್ತೆಗಳು ಕಾಣ ಸಿಗುವುದು ವಿರಳ ಎನ್ನುವಂತಾಗಿದೆ.

ತೀರ್ಥಹಳ್ಳಿಯಿಂದ ಮಣಿಪಾಲವನ್ನು ಸಂಪರ್ಕಿಸುವ ರಾ.ಹೆ. 169(ಎ) ಪರ್ಕಳ ಮಾರ್ಗದ ಸುಮಾರು 900 ಮೀ. ರಸ್ತೆ ಹೊಂಡಗುಂಡಿಗಳಿಂದ ಆವೃತ್ತಗೊಂಡಿದೆ. ಡಾಮರು ಮಾಯವಾಗಿ ಕೆಂಪು ಮಣ್ಣಿನ ರಸ್ತೆ ಕಾಣ ಸಿಗುತ್ತಿದೆ. ಪರ್ಕಳ ಪೇಟೆಯ ಸರ್ಕಲ್‌ ಬಳಿಕ ಮೂರು ಕಡೆಗಳಿಂದ ವಾಹನಗಳು ಬರುವ ಹಿನ್ನೆಲೆಯಲ್ಲಿ ಯಾರು ಎತ್ತಕಡೆ ತಿರುಗುತ್ತಾರೆ ಎಂಬುದು ಗೊತ್ತಾಗುವುದಿಲ್ಲ. ದ್ವಿಚಕ್ರ, ಕಾರು, ರಿಕ್ಷಾಗಳ ಚಾಲಕರು ಆತಂಕದಿಂದಲೇ ವಾಹನ ಚಲಾಯಿಸಬೇಕಾದ ಪರಿಸ್ಥಿತಿ.

ಅಂಬಾಗಿಲು-ಪೆರಂಪಳ್ಳಿ ಮಾರ್ಗವಾಗಿ ಮಣಿಪಾಲವನ್ನು ಸಂಪರ್ಕಿಸುವ ಮಾರ್ಗದಲ್ಲಿ ಹೊಸ ರಸ್ತೆ ಕಾಮಗಾರಿ ಪ್ರಾರಂಭವಾಗಿ ಹಲವು ತಿಂಗಳು ಕಳೆದಿದೆ. ಪ್ರಸ್ತುತ ಅಂಬಾಗಿಲು ಮಾರ್ಗವಾಗಿ ರೈಲ್ವೇ ಬ್ರಿಡ್ಜ್ ಸಂಪರ್ಕಿಸುವ ಮಾರ್ಗದ ಸಂತೋಷನಗರ ರಸ್ತೆಯಲ್ಲಿ ಅಲ್ಲಲ್ಲಿ ದೊಡ್ಡ ದೊಡ್ಡ ಹೊಂಡಗಳು ನಿರ್ಮಾಣವಾಗಿವೆ. ವಾಹನ ಸವಾರರಿಗೆ ಮಳೆಗಾಲದಲ್ಲಿ ನೀರು ತುಂಬಿದ ರಸ್ತೆಯಲ್ಲಿ ಎಲ್ಲಿ ಹೊಂಡಗಳಿವೆ ಎನ್ನುವುದು ತಿಳಿಯದೆ ದ್ವಿಚಕ್ರ ವಾಹನ ಚಲಾಯಿಸಿ ಕೈಕಾಲು ಮುರಿದು ಕೊಂಡಿರುವ ಘಟನೆ ಸಂಭವಿಸಿವೆ.

ಮಲ್ಪೆ ಬಂದರು, ಕುಂದಾಪುರ ಮಾರ್ಗವಾಗಿ ಮಂಗಳೂರು ಹಾಗೂ ಉಡುಪಿ ಮಾರ್ಗವಾಗಿ ಕುಂದಾಪುರ ಸಂಪರ್ಕಿಸುವ ರಾ.ಹೆ. 66ರ ಕರಾವಳಿ ಬೈಪಾಸ್‌ನಲ್ಲಿ ಪ್ರತೀ ಮಳೆಗಾಲದಲ್ಲಿ ಅಲ್ಲಲ್ಲಿ ಭಾರೀ ಗಾತ್ರ ಹೊಂಡಗಳು ನಿರ್ಮಾಣವಾಗುತ್ತಿವೆ. ಗುಂಡಿಗಳನ್ನು ತಪ್ಪಿಸಲು ಹೋಗಿ ನಿತ್ಯ ಅಪಘಾತಗಳು ಸಂಭವಿಸುತ್ತಲೇ ಇದೆ. ರಸ್ತೆ ಅವ್ಯವಸ್ಥೆಯಿಂದಾಗಿ ಬೆಳಗ್ಗೆ ಹಾಗೂ ಸಂಜೆ ವೇಳೆ ಟ್ರಾಫಿಕ್‌ ಏರ್ಪಡುತ್ತಿದ್ದು, ಸಂಚಾರಿ ಪೊಲೀಸರಿಗೂ ಇಲ್ಲಿ ಸಂಚಾರ ವ್ಯವಸ್ಥೆ ನಿರ್ವಹಣೆ ಸವಾಲಾಗಿ ಪರಿಣಮಿಸಿದೆ. ಕರಾವಳಿ ಬೈಪಾಸ್‌ ರಾ.ಹೆ. ಗುಂಡಿಗಳನ್ನು ಮುಚ್ಚಿ ಸುಗಮ ವಾಹನ ಸಂಚಾರಕ್ಕೆ ನಗರಸಭೆ ಸಾಮಾನ್ಯ ಸಭೆಯಲ್ಲಿ ಹೆದ್ದಾರಿ ಇಲಾಖೆಗೆ ಸಂಬಂಧಪಟ್ಟ ಸಭೆಗಳಲ್ಲಿ ಜನಪ್ರತಿನಿಧಿಗಳು ಮನವಿ ಮಾಡುತ್ತಾ ಬಂದಿದ್ದಾರೆ. ಅದಕ್ಕೆ ಸ್ಪಂದನೆ ಮಾತ್ರ ಸಿಕ್ಕಿಲ್ಲ.

ಪರ್ಕಳ ರಾ.ಹೆ. 169(ಎ) ಮಾರ್ಗದಲ್ಲಿ ರಸ್ತೆ ನಿರ್ಮಿಸುವಂತೆ ಸ್ಥಳೀಯರು ವರ್ಷಗಳಿಂದ ಜನಪ್ರತಿನಿಧಿಗಳು ಹೆದ್ದಾರಿ ಇಲಾಖೆ ಹಾಗೂ ಸರಕಾರವನ್ನು ಹಲವಾರು ಸಮಯಗಳಿಂದ ಆಗ್ರ ಹಿಸುತ್ತಲೇ ಬಂದಿದ್ದಾರೆ. 2021ರ ಮಾರ್ಚ್‌ ಅಂತ್ಯದಲ್ಲಿ ಹೆದ್ದಾರಿ ಇಲಾಖೆ ಭೂಸ್ವಾಧೀನಕ್ಕೆ ಮುಂದಾಗಿರುವ ಸಂದರ್ಭ ಸ್ಥಳೀಯ ಭೂ ಸಂತ್ರಸ್ತರು ಕೋರ್ಟ್‌ ಮೊರೆ ಹೋಗಿದ್ದು, ಈ ವೇಳೆ ಕೋರ್ಟ್‌ನಲ್ಲಿ ಮುಂದಿನ ಆದೇಶ ಬರುವವರೆಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವಂತೆ ಜಿಲ್ಲಾಡಳಿತ ಹಾಗೂ ಹೆದ್ದಾರಿ ಇಲಾಖೆ ಆದೇಶಿಸಿದೆ. ಇದರಿಂದಾಗಿ ರಸ್ತೆಯ ವಿಸ್ತರಣೆ ಹಾಗೂ ಭೂ ಸ್ವಾಧೀನ ಕಾಮಗಾರಿ ಅರ್ಧಕ್ಕೆ ನಿಂತು ಹೋಗಿದೆ.

ನಗರದ ಮೂಲಕ ಹಾದು ಹೋಗುವ ರಾ.ಹೆ. ರಸ್ತೆಗಳನ್ನು ದುರಸ್ತಿಗೊಳಿಸಬೇಕಾಗಿದೆ. ಜತೆಗೆ ನಗರದಿಂದ ಬೇರೆ ಬೇರೆ ಪ್ರದೇಶಗಳನ್ನು ಸಂಪರ್ಕಿಸುವ ನಗರಸಭೆ ವ್ಯಾಪ್ತಿಯ ರಸ್ತೆಗಳನ್ನು ಅಭಿವೃದ್ಧಿಪಡಿಸುವತ್ತ ಅಧಿಕಾರಿಗಳು, ಜನಪ್ರತಿನಿಧಿಗಳು ಗಮನಹರಿಸಬೇಕಾಗಿದೆ.

  -ಸಂ.

ಟಾಪ್ ನ್ಯೂಸ್

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Manipal ದೇಶದ ಜಿಡಿಪಿ ಜತೆ ಪದವೀಧರರ ಸಂಖ್ಯೆಯೂ ದ್ವಿಗುಣ: ಕೆ.ವಿ. ಕಾಮತ್‌ ಕರೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Udupi ಕುಡಿಯುವ ನೀರಿನ ಸಮಸ್ಯೆಗಳಿಗೆ ತುರ್ತು ಸ್ಪಂದನೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.