ಬಾಹ್ಯಾಕಾಶ ಕೇಂದ್ರದತ್ತ ಇರುವೆ, ಬೆಣ್ಣೆಹಣ್ಣುಗಳ ಸಂಚಾರ! 


Team Udayavani, Aug 30, 2021, 7:00 AM IST

ಬಾಹ್ಯಾಕಾಶ ಕೇಂದ್ರದತ್ತ ಇರುವೆ, ಬೆಣ್ಣೆಹಣ್ಣುಗಳ ಸಂಚಾರ! 

ಕೇಪ್‌ ಕನವರಾಲ್‌: ಇರುವೆಗಳು, ಬೆಣ್ಣೆಹಣ್ಣು, ನಿಂಬೆಹಣ್ಣು, ಐಸ್‌ಕ್ರೀಂ ಸೇರಿದಂತೆ ಹಲವು ವಸ್ತುಗಳನ್ನು ಹೊತ್ತ ಸ್ಪೇಸ್‌ ಎಕ್ಸ್‌ನ ರಾಕೆಟ್‌ವೊಂದು ರವಿವಾರ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದತ್ತ ಸಂಚಾರ ಆರಂಭಿಸಿದೆ.

ಸೋಮವಾರ ಇದು ನಿಲ್ದಾಣವನ್ನು ತಲುಪಲಿದ್ದು, ಕಳೆದ 10 ವರ್ಷಗಳಲ್ಲಿ ನಾಸಾಗೆ ಸ್ಪೇಸ್‌ ಎಕ್ಸ್‌ ಕಂಪೆನಿ ಮಾಡುತ್ತಿರುವ 23ನೇ ಡೆಲಿವರಿ ಇದಾಗಿದೆ. ನಾಸಾದ ಕೆನೆಡಿ ಬಾಹ್ಯಾಕಾಶ ಕೇಂದ್ರದಿಂದ ರವಿವಾರ ಬೆಳಗ್ಗೆ ಮರುನವೀಕರಣಗೊಂಡ ಫಾಲ್ಕನ್‌ ರಾಕೆಟ್‌ ನಭಕ್ಕೆ ಚಿಮ್ಮಿತು. ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿರುವ 7 ಮಂದಿ ಗಗನಯಾತ್ರಿಗಳಿಗೆ ನೀಡಲು ಬೆಣ್ಣೆಹಣ್ಣು, ಐಸ್‌ಕ್ರೀಂ ಸೇರಿದಂತೆ 2,170 ಕೆಜಿ ತೂಕದ ಸಾಮಗ್ರಿಗಳನ್ನು ಈ ಡ್ರ್ಯಾಗನ್‌ ಕ್ಯಾಪ್ಸ್ಯೂಲ್‌ ಹೊತ್ತೂಯ್ದಿದೆ.

ಅಧ್ಯಯನಕ್ಕೆಂದು ಸಾಗಣೆ: ಇದರ ಜತೆಗೆ ಇರುವೆಗಳು, ಉಪ್ಪು ನೀರಿನ ಸಿಗಡಿ ಹಾಗೂ ಸಸಿಗಳು, ಕಾಂಕ್ರೀಟ್‌ ಮಾದರಿ, ಸೌರ ಫ‌ಲಕಗಳು, ಹೂವಿನ ಬೀಜ ಹಾಗೂ ಇತರ ವಸ್ತುಗಳನ್ನು ಅಧ್ಯಯನಕ್ಕಾಗಿ ಒಯ್ಯಲಾಗಿದೆ. ಇಷ್ಟೇ ಅಲ್ಲದೆ, ಜಪಾನ್‌ನ ಸ್ಟಾರ್ಟಪ್‌ ಕಂಪೆನಿಯೊಂದು ತನ್ನ ಪ್ರಾಯೋಗಿಕ ರೊಬೋಟಿಕ್‌ ಅಂಗಾಂಗವೊಂದನ್ನೂ ಕಳುಹಿಸಿಕೊಟ್ಟಿದೆ.

ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುವ ರೊಬೋಟಿಕ್‌ ಮಾಡೆಲ್‌ಗ‌ಳು ಬಾಹ್ಯಾಕಾಶಕ್ಕೆ ತೆರಳಿ ರಿಪೇರಿ ಕೆಲಸವನ್ನೂ ಮಾಡುವಂಥ ಸಾಮರ್ಥ್ಯ ಹೊಂದಲಿವೆ ಎಂದು ಕಂಪೆನಿ ತಿಳಿಸಿದೆ. ಶನಿವಾರವೇ ಈ ರಾಕೆಟ್‌ ಉಡಾವಣೆ ಆಗಬೇಕಿತ್ತು. ಆದರೆ ಪ್ರತಿಕೂಲ ಹವಾಮಾನದಿಂದಾಗಿ ಆ ಪ್ರಯತ್ನವು ವಿಫ‌ಲವಾದ ಕಾರಣ, ರವಿವಾರ ಉಡಾವಣೆ ಮಾಡಲಾಗಿದೆ.

ಟಾಪ್ ನ್ಯೂಸ್

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

3-vijayapura

Vijayapura: ಸೀಟಿಗಾಗಿ ಮಹಿಳೆಯರ ಕಿತ್ತಾಟ: ರಸ್ತೆಯಲ್ಲೇ ನಿಂತ ಬಸ್

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

Lok Sabha Election: ರಾಯ್​ಬರೇಲಿಯಿಂದ ರಾಹುಲ್,​ ಅಮೇಥಿಯಿಂದ ಕೆ.ಎಲ್​. ಶರ್ಮ ಕಣಕ್ಕೆ

2-blr-crime

Bengaluru: ರಸ್ತೆಯಲ್ಲೇ 10 ಬಾರಿ ಇರಿದು ಪತ್ನಿಯ ಕೊಂದ ಪತಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Joe Biden: ವಲಸಿಗರನ್ನು ಸ್ವೀಕರಿಸದ ಕಾರಣ ಭಾರತದ ಆರ್ಥಿಕ ಪ್ರಗತಿ ಕುಂಠಿತ: ಬೈಡೆನ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

Boeing aircraft: ಬೋಯಿಂಗ್‌ ವಿಮಾನದ ದೋಷ ಪತ್ತೆ ಮಾಡಿದ್ದ ಮಾಹಿತಿದಾರ ದಿಢೀರ್‌

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

China: ಭಾರೀ ಮಳೆಗೆ ಕುಸಿದ ಹೈವೇ: ಚೀನಾದಲ್ಲಿ ಕನಿಷ್ಠ 48 ಸಾವು

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

Pleasure Squad: ತನ್ನ ಸುಖಕ್ಕಾಗಿ ಪ್ರತಿವರ್ಷ 25 ಹುಡುಗಿಯರನ್ನು ಆಯ್ಕೆಮಾಡುವ ಕಿಮ್ ಜಾಂಗ್!

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

UAE Rains: ಭಾರೀ ಗಾಳಿ-ಮಳೆಗೆ ನಲುಗಿದ ಯುಎಇ; ಹಲವು ವಿಮಾನ ಸಂಚಾರ ರದ್ದು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Lok Sabha Polls: ದಾವಣಗೆರೆ ಮಾದರಿ ಕ್ಷೇತ್ರವನ್ನಾಗಿಸುವ ಕನಸಿದೆ: ಗಾಯತ್ರಿ ಸಿದ್ದೇಶ್ವರ

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Tragedy: ಮೊಬೈಲ್ ಬೆಳಕಿನಲ್ಲಿ ಸಿಸೇರಿಯನ್ ಹೆರಿಗೆಗೆ ಮುಂದಾದ ವೈದ್ಯರು.. ತಾಯಿ, ಮಗು ಮೃತ್ಯು

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

Harassment: ಪಶ್ಚಿಮ ಬಂಗಾಳದ ರಾಜ್ಯಪಾಲರಿಂದ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ

4-sampaje

Aranthodu: ಚಾಲಕನ ನಿಯಂತ್ರಣ ತಪ್ಪಿ ಹೋಟೆಲ್ ಗೆ ಢಿಕ್ಕಿ ಹೊಡೆದ ಕಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.