ವಿಜಯಪುರ ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನದ ವಿಶ್ವಾಸ :ಬಿಜೆಪಿ ಶಾಸಕರಿಂದ ಬಹಿರಂಗ ಪ್ರಸ್ತಾಪ


Team Udayavani, Aug 30, 2021, 4:28 PM IST

vijayapura politics

ಮುದ್ದೇಬಿಹಾಳ: ವಿಜಯಪುರ ಜಿಲ್ಲೆಯ ಮುದ್ದೇಬಿಹಾಳದಲ್ಲಿ ಸೋಮವಾರ (ಆ.30) ನಡೆದ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಸಚಿವ ಸ್ಥಾನ ವಂಚಿತ ಜಿಲ್ಲೆಗೆ ಈ ಬಾರಿ ಸಚಿವ ಸ್ಥಾನ ಸಿಗುವ ಸಾಧ್ಯತೆ ಕುರಿತು ಶಾಸಕರಿಬ್ಬರು ಬಹಿರಂಗವಾಗಿಯೇ ಹೇಳಿಕೊಂಡ ಪ್ರಸಂಗ ನಡೆಯಿತು.

ಸರ್ಕಾರಿ ಆರ್‍ಎಂಎಸ್‍ಎ ಶಾಲೆಯ ನೂತನ ಕಟ್ಟಡ ಉದ್ಘಾಟನೆಯಲ್ಲಿ ಮುಖ್ಯ ಅತಿಥಿಯಾಗಿದ್ದ ವಿಧಾನ ಪರಿಷತ್ ಸದಸ್ಯ ಬಿಜೆಪಿಯ ಅರುಣ ಶಹಾಪೂರ ಅವರು ಮಾತನಾಡುತ್ತ ಇನ್ನೂ 6 ಸಚಿವರ ಸ್ಥಾನ ಖಾಲಿ ಇದೆ. ಸಚಿವ ಸಂಪುಟ ರಚನೆಯಾದ ಮೇಲೆ ಪಕ್ಷ 6 ಸ್ಥಾನ ಖಾಲಿ ಉಳಿಸಿಕೊಂಡು ಯಾರಿಗೆ ಕೊಡಬೇಕು ಅನ್ನೋ ಮೌಲ್ಯಮಾಪನ ಮಾಡುತ್ತಿದೆ. ಈ ಬಾರಿ ವಿಜಯಪುರ ಜಿಲ್ಲೆಗೂ ಮಂತ್ರಿ ಸ್ಥಾನ ಸಿಗುತ್ತದೆ. ಆ ಸ್ಥಾನ ಮುದ್ದೇಬಿಹಾಳ ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಎ.ಎಸ್.ಪಾಟೀಲ ನಡಹಳ್ಳಿಯವರಿಗೆ ಸಿಕ್ಕರೆ ಸಂತೋಷ ಪಡುವವರಲ್ಲಿ ನಾನು ಮೊದಲಿಗನಾಗಿರುತ್ತೇನೆ ಎನ್ನುವುದನ್ನು ಬಹಿರಂಗವಾಗಿ ಹೇಳ್ತೇನೆ ಎಂದು ಜಿಲ್ಲೆಯ ಬಿಜೆಪಿ ರಾಜಕಾರಣದ ಅಂತರ್ಯ ಬಿಡಿಸಿಟ್ಟರು.

ಜಿಲ್ಲೆಯಲ್ಲಿ ನೀವು ನಿಮ್ಮ ಗಟ್ಟಿ ನೇತೃತ್ವವನ್ನು ಮುಂದುವರೆಸಿಕೊಂಡು ಹೋಗಬೇಕು. ಜಿಲ್ಲೆಗೆ ಯಾಕೆ ಮಂತ್ರಿ ಸ್ಥಾನ ಬೇಕು ಎಂದರೆ ನಡಹಳ್ಳಿಯವರು ಮಂತ್ರಿ ಆಗಬೇಕಂತಲ್ಲ, ಈ ಜಿಲ್ಲೆ ಅಭಿವೃದ್ದಿ ಆಗಬೇಕು ಅನ್ನೋ ಕಳಕಳಿಯಿಂದ ಈ ಮಾತನ್ನು ಹೇಳುತ್ತಿದ್ದೇನೆ. ಮುದ್ದೇಬಿಹಾಳದಲ್ಲಿ ಅಭಿವೃಧ್ದಿಯ ಹೊಸ ಶಕೆ ಆರಂಭವಾಗಿದೆ. ಇದು ಮುಂದುವರೆಯಬೇಕು, ಜಿಲ್ಲೆಗೂ ವಿಸ್ತರಿಸಬೇಕು ಅನ್ನೋ ಹಾರೈಕೆ ನನ್ನದು. ನೀವು ಮುನ್ನಡೆಯಿರಿ ನಿಮ್ಮ ಜೊತೆಗೆ ನಾವಿದ್ದೇವೆ. ಮುದ್ದೇಬಿಹಾಳದಲ್ಲಿ ಕಣ್ಣು ಮುಚ್ಚಿ ಕಣ್ತೆರೆಯೋದರೊಳಗೆ ಬಂದು ನೀವು ಹೇಗೆ ಎಂಎಲ್‍ಎ ಆದಿರೋ ಹಾಗೇ ಮಂತ್ರಿ ಕೂಡಾ ಆಗಬೇಕು. ನಡಹಳ್ಳಿಯವರು ಕೂಡಾ ಎಬಿವಿಪಿಯಲ್ಲಿದ್ದು ಹೋರಾಟ ಮಾಡಿದವರಾಗಿದ್ದಾರೆ.

ನಡಹಳ್ಳಿಯವರು ಬೆಳೆಯಬೇಕಾದರೆ ಧಾರವಾಡದಲ್ಲಿ ಅವರು ಶಿಕ್ಷಣ ಪಡೆಯುವಾಗ ಎಬಿವಿಪಿಯಲ್ಲಿನ ಹೋರಾಟವೂ ಕಾರಣವಾಗಿದೆ. ನಡಹಳ್ಳಿಯವರ ಪಲ್ಲಕ್ಕಿ ಹೊರಲೂ ನಾನು ಸಿದ್ದ ಎಂದು ಹುರಿದುಂಬಿಸಿದರು.

ಇದನ್ನೂ ಓದಿ:ಕಾಮಸಮುದ್ರ ರಸ್ತೆಯಲ್ಲಿ ಗುಂಡಿ ಗಂಡಾಂತರ

ಇದಕ್ಕೆ ಬಹಿರಂಗವಾಗಿಯೇ ಪ್ರತಿಕ್ರಿಯಿಸಿದ ಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ನಡಹಳ್ಳಿಯವರು, ನಾನು ಕಾಂಗ್ರೆಸ್‍ನಲ್ಲಿದ್ದರೂ (2008, 2013ರಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರಾಗಿದ್ದರು) ಶಿಕ್ಷಕರ ಮತಕ್ಷೇತ್ರದಿಂದ ಪರಿಷತ್‍ಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಅರುಣ ಶಹಾಪೂರಗೆ ಸಹಾಯ ಮಾಡಿದ್ದೆ. ಅದನ್ನು ಇವತ್ತು ಬಹಿರಂಗಪಡಿಸುತ್ತಿದ್ದೇನೆ.

ಎಬಿವಿಪಿಯ ಸಂಬಂಧ ನಮ್ಮಿಬ್ಬರದು. ಜಿಲ್ಲೆಗೆ ಮಂತ್ರಿ ಸ್ಥಾನ ಸಿಗಬೇಕು ಅನ್ನೋದು ಜಿಲ್ಲೆಯ ಜನರ ಮತ್ತು ಪಕ್ಷದ ಕಾರ್ಯಕರ್ತರ ಅಪೇಕ್ಷೆಯಾಗಿದೆ. ಈ ಅಪೇಕ್ಷೆಯನ್ನು ಜಿಲ್ಲೆಯ ಹಿರಿಯರಾದ ರಮೇಶ ಜಿಗಜಿಣಗಿ ಅವರ ನೇತೃತ್ವದಲ್ಲಿ ಮಾಜಿ ಮಂತ್ರಿಗಳ, ಮಾಜಿ ಶಾಸಕರ ಸಹಕಾರದೊಂದಿಗೆ ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಡಲಾಗುತ್ತಿದೆ. ಮುಖ್ಯಮಂತ್ರಿಗಳು ನಮ್ಮ ಜಿಲ್ಲೆಗೆ ಪ್ರಾತಿನಿಧ್ಯ ಕೊಡುವ ವಿಶ್ವಾಸ ಇದೆ ಎಂದು ತಮ್ಮ ಮನದಾಳದ ಮಾತನ್ನು ಹೊರಗೆಡವಿದರು.

ಟಾಪ್ ನ್ಯೂಸ್

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

T20 ವಿಶ್ವಕಪ್‌ ಇಂಗ್ಲೆಂಡ್‌ ತಂಡ ಪ್ರಕಟ: ವರ್ಷದ ಬಳಿಕ ಸ್ಟಾರ್‌ ಬೌಲರ್‌ ತಂಡಕ್ಕೆ ಕಂಬ್ಯಾಕ್

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ

ಬ್ಯಾಟಿಂಗ್‌ – ಬೌಲಿಂಗ್‌ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್‌ಗೆ ದಕ್ಷಿಣ ಆಫ್ರಿಕಾ ಪ್ರಕಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

Puneeth Rajkumar: ಮರು ಬಿಡುಗಡೆಯತ್ತ ಅಂಜನಿಪುತ್ರ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Gadag

ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.