ಸೇನೆಗೆ ಶೀಘ್ರವೇ ಆಕಾಶ್‌-ಧ್ರುವ ಬಲ


Team Udayavani, Aug 31, 2021, 7:20 AM IST

ಸೇನೆಗೆ ಶೀಘ್ರವೇ ಆಕಾಶ್‌-ಧ್ರುವ ಬಲ

ಹೊಸದಿಲ್ಲಿ: “ಮೇಕ್‌ ಇನ್‌ ಇಂಡಿಯಾ’ಕ್ಕೆ ಮತ್ತಷ್ಟು ಬಲ ತುಂಬುವ ನಿಟ್ಟಿನಲ್ಲಿ ಹೆಜ್ಜೆ ಇರಿಸಿರುವ ಭೂಸೇನೆಯು ಸ್ವದೇಶೀಯವಾಗಿ ತಯಾರಾದ, ಒಟ್ಟು 14,000 ಕೋಟಿ ರೂ. ಮೌಲ್ಯದ ವಿವಿಧ ಪರಿಕರಗಳನ್ನು ಖರೀದಿಸಲು ಮುಂದಾಗಿದೆ.

“ಆಕಾಶ್‌-ಎಸ್‌’ ಕ್ಷಿಪಣಿಯ ಎರಡು ರೆಜಿಮೆಂಟ್‌ ಮತ್ತು 25 “ಸುಧಾರಿತ ಲಘು ಹೆಲಿಕಾಪ್ಟರ್‌’ (ಎಎಲ್‌ಎಚ್‌) ಗಳನ್ನು ಕೊಳ್ಳಲು ಮುಂದಾಗಿದೆ. ಈ ನಿಟ್ಟಿನಲ್ಲಿ ರಕ್ಷಣ ಇಲಾಖೆಗೆ ಸೇನೆ ಪ್ರಸ್ತಾವನೆ ಸಲ್ಲಿಸಿದ್ದು, ಸದ್ಯದಲ್ಲೇ ರಕ್ಷಣ ಸಚಿವ ರಾಜನಾಥ್‌ ಸಿಂಗ್‌ ನೇತೃತ್ವದಲ್ಲಿ ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.

ಆಕಾಶ್‌-ಎಸ್‌ ಈ ಹಿಂದೆ ತಯಾರಿಸಲಾಗಿದ್ದ ಆಕಾಶ್‌ ಕ್ಷಿಪಣಿ ವ್ಯವಸ್ಥೆಯ ಸುಧಾರಿತ ರೂಪ. ಶತ್ರುಗಳ ಯುದ್ಧ ವಿಮಾನ ಮತ್ತು ಕ್ಷಿಪಣಿಗಳನ್ನು 25-30 ಕಿ.ಮೀ. ದೂರದಿಂದಲೇ ಕರಾರುವಾಕ್‌ ಆಗಿ ಹೊಡೆದುರುಳಿಸಬಲ್ಲುದು.

ಡಿಆರ್‌ಡಿಒದಿಂದ ಅಭಿವೃದ್ಧಿ :

ಗುಡ್ಡಗಾಡು ಮತ್ತು ದುರ್ಗಮ ಪ್ರದೇಶಗಳಲ್ಲಿ ಈ ಕ್ಷಿಪಣಿಗಳನ್ನು ಸೇನೆ ಸುಲಭವಾಗಿ ಬಳಸಬಹುದು. ಲಡಾಖ್‌ ನಂಥ ಭಾರೀ ಚಳಿಯ ವಾತಾವರಣದಲ್ಲೂ ಇದು ಪರಿಣಾಮ ಕಾರಿಯಾಗಿ ಕೆಲಸ ಮಾಡಬಲ್ಲುದು. ಇದನ್ನು ಚೀನ, ಪಾಕ್‌ ಗಡಿಯಲ್ಲಿ ಬಳಸಬಹುದಾಗಿದೆ. ಇದನ್ನು ಭಾರತೀಯ ರಕ್ಷಣ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ತಯಾರಿಸಿದೆ.  25 ಎಎಲ್‌ಎಚ್‌ “ಧ್ರುವ್‌ ಮಾರ್ಕ್‌ 3′ ಗಸ್ತು ಹೆಲಿಕಾಪ್ಟರ್‌ಗಳನ್ನು ಕೊಳ್ಳಲು ಸೇನೆ ಸಿದ್ಧವಾಗಿದೆ. ಈ ಹೆಲಿಕಾಪ್ಟರ್‌ಗಳನ್ನು ಎಚ್‌ಎಎಲ್‌ ನಿರ್ಮಿಸುತ್ತದೆ.

ಟಾಪ್ ನ್ಯೂಸ್

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

Malpe ದಕ್ಕೆಯಲ್ಲಿ ನೀರಿಗೆ ಬಿದ್ದು ಸಾವು: ದೂರು ದಾಖಲು

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Uppinangady ಹೃದಯಾಘಾತ; ಯುವಕ ಸಾವು

Uppinangady ಹೃದಯಾಘಾತ; ಯುವಕ ಸಾವು

IND VS PAK

ಪಾಕ್‌ಗೆ ರಾಜತಾಂತ್ರಿಕ ಸಭ್ಯತೆ ಇಲ್ಲ: ಭಾರತ ಕಿಡಿ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ

Kadaba ಪತಿಯ ಕಿರುಕುಳ ತಾಳಲಾರದೆ ಪತ್ನಿ ಆತ್ಮಹತ್ಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

police crime

Deepfake ವೀಡಿಯೋ ಸೃಷ್ಟಿಕರ್ತರನ್ನು ಬಂಧಿಸಿ: ಮಹಾ ಸರಕಾರ ಆದೇಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqqweqwe

ಲೈಂಗಿಕ ಕಿರುಕುಳದೂರು ರಾಜಕೀಯ ಪ್ರೇರಿತ: ಪ.ಬಂಗಾಲ ಗವರ್ನರ್‌

Supreme Court

ಒಂದೇ ಹೆಸರಿರುವ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ ಇಲ್ಲ: ಸುಪ್ರೀಂ

1-ewqeqewq

Eknath Shinde ಬಣ ಶಿವಸೇನೆ ಸೇರಿದ ಮಾಜಿ ಸಂಸದ ಸಂಜಯ ನಿರುಪಮ್‌

2000

2,000 ರೂ.ನ 97.76% ನೋಟು ವಾಪಸ್‌: ಆರ್‌ಬಿಐ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Madikeri ವೃದ್ಧೆ ಸಾವು: ಸೊಸೆಗೆ ನ್ಯಾಯಾಂಗ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.