ಮುಂಗಾರು ಮಳೆ: ನಳ ನಳಿಸುತ್ತಿರುವ ರಾಗಿ ಬೆಳೆ

4-5 ವರ್ಷದಿಂದ ಸಂಕಷ್ಟದಲ್ಲಿದ್ದ ರೈತನ ಮೊಗದಲ್ಲಿ ಮಂದಹಾಸ; ತುಂಬಿದ ಕೆರೆ ಕಟ್ಟೆಗಳು: ನಿಟ್ಟುಸಿರು ಬಿಟ್ಟ ಅನ್ನದಾತ

Team Udayavani, Sep 1, 2021, 4:32 PM IST

ಮುಂಗಾರು ಮಳೆ: ನಳ ನಳಿಸುತ್ತಿರುವ ರಾಗಿ ಬೆಳೆ

ಅರಸೀಕೆರೆ: ವಾಡಿಕೆ ಮಳೆಗಿಂತಲೂ ಹೆಚ್ಚು ಮುಂಗಾರು ಮಳೆ ಈ ವರ್ಷ ಅಬ್ಬರಿಸಿದ್ದು ಸಣ್ಣ ಪುಟ್ಟ ಹಳ್ಳ ಕೊಳ್ಳಗಳು ತುಂಬಿ ಹೋಗಿವೆ. ಹೊಲಗಳಲ್ಲಿ ಬೆಳೆಯೂ ನಳನಳಿಸುತ್ತಿದ್ದು ರೈತರಲ್ಲಿ ಮಂದಹಾಸ ಮೂಡಿಸಿದೆ.

ತಾಲೂಕು ಬಯಲುಸೀಮೆ ಪ್ರದೇಶವಾಗಿದ್ದು, ಸತತ ಮಳೆ ಕೊರತೆಯಿಂದ ಕಳೆದ 4-5 ವರ್ಷಗಳಿಂದ ಬರದ ಬವಣೆಯಲ್ಲಿ ಸಿಲುಕಿದ್ದರು. ತಾಲೂಕು ಬಯಲುಸೀಮೆ ಪ್ರದೇಶವಾಗಿದ್ದು,ಕಸಬಾ ಹೋಬಳಿ, ಕಣಕಟ್ಟೆ ಹೋಬಳಿ, ಗಂಡಸಿ ಹೋಬಳಿ, ಬಾಣಾವರ ಹಾಗೂ ಜಾವಗಲ್‌ ಹೋಬಳಿ ಒಳಗೊಂಡಿದೆ.

ಮಳೆ ನೀರಿನಿಂದ ತುಂಬಿದ ಕೆರೆ-ಕಟ್ಟೆಗಳು: ಕಳೆದ 4-5 ವರ್ಷಗಳಲ್ಲಿ ಉತ್ತಮ ಮಳೆ ಇಲ್ಲದೆ ರೈತರು ಸಂಕಷ್ಟ ಎದುರಿಸುತ್ತಿದ್ದರು. ಪ್ರಸ್ತುತ ವರ್ಷದ ಮುಂಗಾರು ಮಳೆ ಜೂನ್‌ ತಿಂಗಳಲ್ಲಿ ಪ್ರತಿ ವರ್ಷದ ವಾಡಿಕೆ ಮಳೆಗಿಂತಲೂ ಶೇ.24 ಪ್ರಮಾಣದ ಹೆಚ್ಚಿನ ಮಳೆಯಾಗಿದೆ. ಆಗಸ್ಟ್‌ನಲ್ಲಿ 56 ಮಿ.ಮೀ, ವಾಡಿಕೆ ಮಳೆಗಿಂತಲೂ 61 ಮಿ.ಮೀ ಮಳೆ ಬಿದ್ದಿದ್ದು, ಸಣ್ಣ ಪುಟ್ಟ ಕೃಷಿ ಹೊಂಡ, ಹಳ್ಳ ಕೊಳ್ಳಗಳು ತುಂಬಿದ್ದು ತಾಲೂಕಿನ ರೈತರು ತುಸು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ.

ಇದನ್ನೂ ಓದಿ:ಐ ಫೋನ್‌ಗಳಿಗೆ ಸ್ಯಾಟಲೈಟ್‌ ಫೀಚರ್‌?!

ಅಗತ್ಯ ಪ್ರೋತ್ಸಾಹ ಧನ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಅಶೋಕ್‌ ಪ್ರತಿಕ್ರಿಯಿಸಿ, ನರೇಗಾ ಯೊಜನೆಯಡಿ ರೈತರಿಗೆ ಕೃಷಿ ಹೊಂಡ ಬದು ನಿರ್ಮಾಣ ಹಾಗೂ ರೈತ ಬಂಧು ಕಾರ್ಯಕ್ರಮದಲ್ಲಿ ಸಾವಯವ ಕೃಷಿಗೆ ಉತ್ತೇಜನ ನೀಡಲಾಗುತ್ತಿದೆ. ಎರೆಹುಳು ಗೊಬ್ಬರ ಘಟಕಗಳ ಸ್ಥಾಪನೆಗೆ 27 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುತ್ತಿದೆ. ಆಸಕ್ತ ರೈತರು ಇದರ ಸದುಪಯೋಗ ಪಡೆದು ಕೊಂಡು ಎರೆಹುಳು ಗೊಬ್ಬರ ಉತ್ಪಾದನೆಗೆ ಮುಂದಾಗಬೇಕು ಎಂದರು. ಒಟ್ಟಾರೆ ತಾಲೂಕಿನಲ್ಲಿ ವಾಡಿಕೆಗಿಂತಲೂ ಹೆಚ್ಚು ಮಳೆಯಾಗಿದ್ದು, ಮುಂಗಾರು ಹಂಗಾಮಿನ ಬೆಳೆಗಳು ಉತ್ತಮವಾಗಿರುವುದು ಆಶಾದಾಯಕವಾಗಿದೆ ಎಂದರು.

ನಿಗದಿತ ಗುರಿಗಿಂತಲೂ ಹೆಚ್ಚು ಹೆಕ್ಟೇರ್‌ನಲ್ಲಿ ಬೆಳೆ
ಅರಸೀಕೆರೆ ತಾಲೂಕಿನಲ್ಲಿ 82,900 ಹೆಕ್ಟೇರ್‌ ಸಾಗುವಳಿ ಕೃಷಿಭೂಮಿ ಪೈಕಿ 71 ಸಾವಿರ ಹೆಕ್ಟೇರ್‌ ಕೃಷಿ ಭೂಮಿಯೂ ಕೃಷಿ ಚಟುವಟಿಕೆಗೆ ಲಭ್ಯ ವಿದೆ. ಈಗಾಗಲೇ ರಾಗಿ 29.230 ಹೆಕ್ಟೇರ್‌ ಜೋಳ246 ಹೆಕ್ಟೇರ್‌, ಮುಸುಕಿನ ಜೋಳ11.935 ಹೆಕ್ಟೇರ್‌, ಹೆಸರು 6410 ಹೆಕ್ಟೇರ್‌, ಉದ್ದು 603 ಹೆಕ್ಟೇರ್‌, ತೊಗರಿ 158 ಹೆಕ್ಟೇರ್‌, ಹಲಸಂದೆ2104 ಹೆಕ್ಟೇರ್‌ ಪ್ರದೇಶದಲ್ಲಿ ಎಳ್ಳು1173 ಹೆಕ್ಟೇರ್‌, ಗುರೆಳ್ಳು103 ಹೆಕ್ಟೇರ್‌ನಲ್ಲಿ ಸೂರ್ಯ ಕಾಂತಿ 70 ಹೆಕ್ಟೇರ್‌, ಹರಳು127 ಹೆಕ್ಟೇರ್‌, ನೆಲೆಗಡಲೆ50 ಹೆಕ್ಟೇರ್‌ನಲ್ಲಿ ಬೆಳೆಯಲಾಗಿದೆ. ಪ್ರಸ್ತುತ ವರ್ಷದಲ್ಲಿ ನಿರ್ದಿಷ್ಠ ಗುರಿ 51.875 ಹೆಕ್ಟೇರ್‌ ಗಿಂತಲೂ 52.697 ಹೆಕ್ಟೇರ್‌ನಲ್ಲಿ ಮುಂಗಾರು ಹಂಗಾಮಿನ ಬೆಳೆಗಳನ್ನು ರೈತರು ಬಿತ್ತನೆ ಮಾಡಿದ್ದಾರೆ. ಈ ಮೂಲಕ ಶೇ.101ರಷ್ಟು ಗುರಿ ಸಾಧಿಸಿದೆ.

ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ
ಮುಂಗಾರು ಮಳೆ ಉತ್ತಮವಾಗಿ ಬೀಳುತ್ತಿದೆ. ರಾಗಿ, ಜೋಳ, ಮುಸುಕಿನ ಜೋಳ ಏಕದಳ ಧಾನ್ಯಗಳನ್ನು ರೈತರು ಸುಮಾರು 41.436 ಹೆಕ್ಟೇರ್‌ ನಲ್ಲಿ ಬೆಳೆದಿದ್ದಾರೆ. ರಸಗೊಬ್ಬರಕ್ಕೆ ಯವುದೇ ಕೊರತೆ ಉಂಟಾಗಿಲ್ಲ. ಯೂರಿಯಾಕ್ಕೆ ಬೇಡಿಕೆಯಿದ್ದು ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಅಶೋಕ್‌ ತಿಳಿಸಿದರು.

ಮುಂಗಾರು ಉತ್ತಮವಾಗಿ ಬೀಳುತ್ತಿದ್ದು ರಾಗಿ ಬೆಳೆಗೆ ನವ ಚೈತನ್ಯ ನೀಡಿದಂತಾಗಿದೆ.ಯಾವುದೇ ಕೀಟ ಭಾದೆ ಇಲ್ಲ. ಈ ಬಾರಿ ರಾಗಿ, ಜೋಳ ಹಾಗೂ ದ್ವಿದಳ ಧಾನ್ಯ ಬೆಳೆಗಳು ರೈತರಕೈ ಸೇರುವ ನಿರೀಕ್ಷೆ ಇದೆ.
-ಅಗ್ಗುಂದ ಚಂದ್ರಯ್ಯ, ರೈತ

-ರಾಮಚಂದ್ರ, ಅರಸೀಕೆರೆ

ಟಾಪ್ ನ್ಯೂಸ್

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ

Congress, ಬಿಜೆಡಿ ಲೂಟಿಯಿಂದ ಒಡಿಶಾ ಬಡ ರಾಜ್ಯವಾಗಿದೆ: ಪ್ರಧಾನಿ ಮೋದಿ ವಾಗ್ದಾಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

ದೇವರ ಮೊರೆ ಹೋದ ಶಾಸಕ ಎಚ್‌.ಡಿ. ರೇವಣ್ಣ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.