ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಲು ಕೇಂದ್ರ ಕಾನೂನು ಜಾರಿಗೊಳಿಸಲಿ : ಗಿರಿ ಒತ್ತಾಯ


Team Udayavani, Sep 2, 2021, 12:38 PM IST

ABAP President urges Centre to pass law to declare cows as national animal

ರಾಜಸ್ಥಾನ :  ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕೆಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ವ್ಯಕ್ತ ಪಡಿಸಿದನ್ನು ಅಖಿಲ ಭಾರತೀಯ ಅಖಾರ ಪರಿಷತ್ (ಎ ಬಿ ಎ ಪಿ )ನ ಅಧ್ಯಕ್ಷ ಮಹಾಂತ್ ನರೇಂದ್ರ ಗಿರಿ ಸ್ವಾಗತಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿದ ಗಿರಿ, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕೆಂದು ಅಲಹಾಬಾದ್ ಹೈಕೋರ್ಟ್ ಹೇಳಿರುವುದು ಸೂಕ್ತವಾಗಿದೆ. ಕೇಂದ್ರ ಸರ್ಕಾರ ಈ ಸಂಬಂಧಿ ಕಾನೂನನ್ನು ಅತಿ ಶೀಘ್ರದಲ್ಲಿ ಜಾರಿಗೆ ತರಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ : ಬಿಗ್ ಬಾಸ್ 13ನೇ ಸೀಸನ್ ವಿಜೇತ, ನಟ ಸಿದ್ದಾರ್ಥ್ ಶುಕ್ಲಾ ಹೃದಯಾಘಾತದಿಂದ ನಿಧನ

“ಕೇಂದ್ರ ಸರ್ಕಾರವು ಕಾನೂನನ್ನು ರೂಪಿಸಲು, ಸಂಸತ್ತಿನಲ್ಲಿ ಈ ವಿಚಾರದ ಕುರಿತು ಮಂಡಿಸಲು ಮತ್ತು ಇದನ್ನು ಅಂಗೀಕರಿಸಬೇಕೆಂದು ನಾನು ಒತ್ತಾಯಿಸುತ್ತೇನೆ. ಈ ಸಂಬಂಧಿಸಂದೆ ಕೇಂದ್ರ ಸರ್ಕಾರ ಒಂದು ಕಾನೂನನ್ನು ಜಾರಿಗೊಳಿಸುವುದರಿಂದ ಹಾಗೂ ಹಸುಗಳು ರಾಷ್ಟ್ರೀಯ ಪ್ರಾಣಿಯಾದಾಗ ಜನರು ಗೋವುಗಳ ಮೇಲೆ ಹೆಚ್ಚು ಗೌರವ ಹಾಗೂ ಭಕ್ತಿ ಭಾವ ಬರುತ್ತದೆ” ಎಂದು ಅವರು ಹೇಳಿದ್ದಾರೆ.

ಭಾರತೀಯ ಸಂಸ್ಕೃತಿಯಲ್ಲಿ ಗೋವು ಪ್ರಮುಖವಾದ ಭಾಗವಾಗಿದೆ ಎಂದು ತಿಳಿಸಿರುವ ಅಲಹಬಾದ್ ಹೈಕೋರ್ಟ್ ಪೀಠ, ಗೋ ಮಾಂಸ ಭಕ್ಷಣೆ ಮಾಡುವವರಿಗಷ್ಟೇ ಅದು ಮೂಲಭೂತ ಹಕ್ಕಲ್ಲ. ಆದರೆ ಗೋವುಗಳನ್ನು ಯಾರು ಪೂಜಿಸುತ್ತಾರೋ ಹಾಗೂ ಗೋವಿನ ಮೇಲೆ ಆರ್ಥಿಕವಾಗಿ ಅವಲಂಬಿತರಾಗಿರುವವರ ಮೂಲಭೂತ ಹಕ್ಕಾಗಿದೆ ಎಂದು ಅಲಹಾಬಾದ್ ಹೈ ಕೋರ್ಟ್ ಹೇಳಿರುವುದಕ್ಕೆ ಗಿರಿ ಸಂತೋಷ ವ್ಯಕ್ತ ಪಡಿಸಿದ್ದಲ್ಲದೇ, ಗೋವು ಕೇವಲ ಪ್ರಾಣಿ ಮಾತ್ರವಲ್ಲ. ಗೋವು ನಮ್ಮ ಮಾತೆ. ಹಸುಗಳನ್ನು ಪೂಜಿಸುವುದು ಮತ್ತು ಅವುಗಳ ಸೇವೆ ಮಾಡುವುದು ನಮ್ಮ ಜವಾಬ್ದಾರಿ ಎಂದಿದ್ದಾರೆ.

ಇನ್ನು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಮತ್ತು ಯಾರು ಗೋವನ್ನು ಹತ್ಯೆಗೈಯುತ್ತಾರೋ ಅಂತವರನ್ನು ಶಿಕ್ಷಿಸುವ ನಿಟ್ಟಿನಲ್ಲಿ ಸಂಸತ್ತು ಕಾನೂನನ್ನು ರೂಪಿಸಬೇಕು ಎಂದು ಹೈಕೋರ್ಟ್ ಪೀಠದ ಜಸ್ಟೀಸ್ ಶೇಖರ್ ಕುಮಾರ್ ಯಾದವ್ ಸಲಹೆ ನೀಡಿರುವುದಾಗಿ ವರದಿ ಹೇಳಿದೆ.

ಕೊಲ್ಲುವ ಹಕ್ಕಿಗಿಂತ ಬದುಕುವ ಹಕ್ಕು ಎಲ್ಲಕ್ಕಿಂತ ದೊಡ್ಡದಾದದ್ದು. ಗೋ ಮಾಂಸ ತಿನ್ನುವುದನ್ನು ಯಾವುದೇ ಕಾರಣಕ್ಕೂ ಮೂಲಭೂತ ಹಕ್ಕು ಎಂದು ಪರಿಗಣಿಸಬಾರದು ಎಂದು ಹೈಕೋರ್ಟ್ನ ನ್ಯಾಯ ಪೀಠ ತಿಳಿಸಿದೆ.

ಇದನ್ನೂ ಓದಿ : ಗೋವು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು: ಗೋ ಹತ್ಯೆಗೆ ಕಠಿಣ ಶಿಕ್ಷೆ; ಅಲಹಾಬಾದ್ ಹೈಕೋರ್ಟ್

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

Supreme Court: ಕೇಜ್ರಿ ಜಾಮೀನು ರದ್ದು ಕೋರಿದ್ದ ಇ.ಡಿ. ಅರ್ಜಿ ವಜಾ

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.