40 ವರ್ಷದಿಂದ ಸೌಲಭ್ಯ ಕಾಣದ ಅಟ್ಟೂರು

ವಸತಿ ಸೌಲಭ್ಯವಿಲ್ಲದೆ ಹಳೇ ಮನೆಗಳಲ್ಲೇ ವಾಸ ; ರಸ್ತೆ, ಚರಂಡಿ, ವಿದ್ಯುತ್‌ ವ್ಯವಸ್ಥೆಯೂ ಇಲ್ಲ: ಆರೋಪ

Team Udayavani, Sep 2, 2021, 4:08 PM IST

40 ವರ್ಷದಿಂದ ಸೌಲಭ್ಯ ಕಾಣದ ಅಟ್ಟೂರು

ಚಿಂತಾಮಣಿ: ಕೇವಲ ಹೆಸರಿಗಷ್ಟೇ ಗ್ರಾಮ. ಸುಮಾರು 40 ವರ್ಷದಿಂದಲೂ ಸೌಲಭ್ಯ ಮರೀಚಿಕೆ. ಮನವಿ ಸಲ್ಲಿಸಿದರೂ ಅಧಿಕಾರಿಗಳು-ಜನಪ್ರತಿನಿಧಿಗಳು ಮೌನ.

ಹೌದು, ತಾಲೂಕಿನ ತಳಗವಾರ ಗ್ರಾಪಂ ವ್ಯಾಪ್ತಿಯ ಅಟ್ಟೂರು ಗ್ರಾಮವನ್ನು ಅಧಿಕಾರಿಗಳು- ಜನಪ್ರತಿನಿಧಿಗಳು ನಿರ್ಲಕ್ಷ್ಯಿಸಿದ್ದು ಜನತೆ ರೋಸಿ ಹೋಗಿದ್ದಾರೆ.

ಪರಿಶಿಷ್ಟ ಜಾತಿ ಸಮುದಾಯದವರೇ ಈಗ್ರಾಮದಲ್ಲಿಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಕೂಲಿಯೇ ಇವರಿಗೆ ಆದಾಯದ ಮೂಲ. ಈಗಲೂ ಪಾಳು ಬಿದ್ದ, ಟಾರ್ಪಲ್‌ ಹೊದಿಸಿದ ಗುಡಿಸಲುಗಳಲ್ಲೇ ಜನತೆ ವಾಸಿಸುತ್ತಿದ್ದಾರೆ. ಗ್ರಾಪಂ ಮೂಲಕ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೊಳಿಸಿದ್ದರೂ ಈ ಗ್ರಾಮದಲ್ಲಿ ಸಮರ್ಪಕವಾಗಿ ಮನೆಗಳಿಲ್ಲ. ಸರಿಯಾದ ರಸ್ತೆ, ಕುಡಿಯಲು ಶುದ್ಧನೀರು, ವಿದ್ಯುತ್‌ ವ್ಯವಸ್ಥೆಯೂ ಇಲ್ಲದಂತಾಗಿದೆ.

ಅಟ್ಟೂರು ಗ್ರಾಮದ ಸರ್ವೆ ನಂ1ರಲ್ಲಿ 2.20 ಎಕರೆ ಸರ್ಕಾರಿ ಗೋಮಾಳವಿದ್ದು ಸದರಿ ಜಮೀನಿನಲ್ಲಿ ಸವರ್ಣೀಯರು ಸೇರಿದಂತೆ 70 ಕುಟುಂಬಗಳು ಮನೆಗಳನ್ನು ನಿರ್ಮಿಸಿಕೊಂಡಿವೆ.ಈ ಪೈಕಿ 20-30 ಸರ್ವಣಿಯರ ಕುಟುಂಬಗಳಿಗೆ ನಿವೇಶನ ಖಾತೆಯಾಗಿ ಎಲ್ಲಾ ಸೌಲಭ್ಯಗಳು ದೊರೆಯುತ್ತಿವೆ. ಆದರೆ, ಉಳಿದ 30-40 ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ನಿವೇಶನ ಖಾತೆಯಾಗಿಲ್ಲ. ವಸತಿ ಸೌಲಭ್ಯಗಳೂ ದೊರೆತಿಲ್ಲ. ಅಷ್ಟೇ ಅಲ್ಲದೆ ಸಕ್ರಿಯವಾಗಿ ವಿದ್ಯುತ್‌ ಸಂಪರ್ಕವೂ ಇಲ್ಲದಂತಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ:ಕೆಲವು ವಾಹಿನಿ, ವೆಬ್ ಪೋರ್ಟಲ್ ಗಳಲ್ಲಿ ಹರಡುವ ಸುದ್ದಿಗಳಿಗೆ ನಿಯಂತ್ರಣವೇ ಇಲ್ಲ : ಸುಪ್ರೀಂ

ನಿರ್ಲಕ್ಷ್ಯ: ಇನ್ನು ಸರ್ಕಾರ ವಸತಿ ಕಲ್ಪಿಸಲು ಹತ್ತು ಹಲವುಯೋಜನೆ ರೂಪಿಸಿದ್ದರೂ ಅವುಗಳ ಜಾರಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿರು ‌ ವುದು ಆಟ್ಟೂರು ಗ್ರಾಮದ ವ್ಯವಸ್ಥೆಗೆ ಸಾಕ್ಷಿಯಾದಂತಿದೆ.

ನರೇಗಾ ಯೋಜನೆ ವ್ಯರ್ಥ: ಕಳೆದ 40 ವರ್ಷಗಳಿಂದಲೂ ಹಳೆ ಮನೆಗಳಲ್ಲೇ ವಾಸವಿದ್ದೇವೆ. ನಮಗೆ ಯಾವುದೇ ಸೌಲಭ್ಯ ಕಲ್ಪಿಸಿಲ್ಲ. ಯಾವ ಅಧಿಕಾರಿಯೂ ನಮ್ಮ ಊರಿಗೆ ಭೇಟಿ ನೀಡಿ ಸಮಸ್ಯೆ ಕೇಳಿಲ್ಲ. ಇನ್ನು ಜನಪ್ರತಿನಿಧಿಗಳು ಚುನಾವಣೆ ಸಮಯದಲ್ಲಿ ಮಾತ್ರ ಬಂದು ಹೋಗುತ್ತಾರೆ.  ಸಮಸ್ಯೆಗಳ ಬಗ್ಗೆ ಹಲವು ಬಾರಿ ಅಧಿಕಾರಿಗಳಿಗೆ ಮನವಿ‌ ಮಾಡಿದರೂ ಸೌಲಭ್ಯ ಕಲ್ಪಿಸಿಲ್ಲವೆಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನಾನು ಗ್ರಾಪಂ ಸದಸ್ಯನಾಗಿ 8 ತಿಂಗಳು ಆಗಿದ್ದು ಕೆಲವು ಮೂಲಭೂತ ಸೌಲಭ್ಯಕಲ್ಪಿಸಿದ್ದೇನೆ. ನನ್ನಅವಧಿಯಲ್ಲಿ ಸಂಪೂರ್ಣವಾಗಿ ರಸ್ತೆ,
ಚರಂಡಿಗಳನ್ನು ನಿರ್ಮಿಸಿಕೊಡುತ್ತೇನೆ. ಆದಷ್ಟು ಎಲ್ಲಾ ಸಮಸ್ಯೆ ಬಗೆಹರಿಸಲು ಪ್ರಯತ್ನಿಸುವೆ.
– ನರಸಿಂಹಮೂರ್ತಿ, ಗ್ರಾಪಂ ಸದಸ್ಯ.

ಅಟ್ಟೂರು ಗ್ರಾಮದಲ್ಲಿ ಸಮಸ್ಯೆಗಳಿರುವುದಾಗಿ ತಿಳಿದು ಬಂದಿದೆ. ಗ್ರಾಮಕ್ಕೆಭೇಟಿ ನೀಡಿ ಸ್ಥಳ ಪರಿಶೀಲನೆ ಮಾಡುತ್ತೇನೆ. ಅಭಿವೃದ್ಧಿಗೆ ಕ್ರಮಕೈಗೊಳ್ಳುತ್ತೇನೆ.
-ಮಂಜುನಾಥ್‌, ತಾಪಂ ಇಒ

ಅಟ್ಟೂರು ಗ್ರಾಮದಲ್ಲಿ ರಸ್ತೆ ಮತ್ತು ಚರಂಡಿ, ವಸತಿ ಸೌಲಭ್ಯಇಲ್ಲವೆಂದು ಗ್ರಾಮಸ್ಥರು ದೂರಿದ್ದಾರೆ. ಗ್ರಾಮ ಸದಸ್ಯರೊಂದಿಗೆ ಚರ್ಚಿಸಿ ನರೇಗಾ ಯೋಜನೆಯಡಿವಸತಿ ಸೌಲಭ್ಯಕಲ್ಪಿಸುವೆ.
– ಸುಕಾಂತ್‌, ತಳಗವಾರ ಗ್ರಾಪಂ ಪಿಡಿಒ

ಟಾಪ್ ನ್ಯೂಸ್

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

ಬಿಜೆಪಿ ವರ್ಚಸ್ಸು ಕುಸಿತ; ಸೋಲಿನ ಭೀತಿಯಿಂದ ಮೋದಿ ದ್ವೇಷ ಭಾಷಣ: ಬಿ.ಆರ್.ಪಾಟೀಲ್

8-uv-fusion

UV Fusion: ಬಾಯಾರಿ ಬರುವ ಬಾನಾಡಿಗಳ ರಕ್ಷಿಸೋಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

Lok Sabha elections: ಲೋಕ ಸಮರ; ಮತದಾನದಲ್ಲಿ ಪುರುಷರೇ ಮೇಲುಗೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

CSKvsPBKS; ”ಇದು ಟೀಮ್ ಗೇಮ್….”: ಧೋನಿ ನಡೆಗೆ ಇರ್ಫಾನ್ ಪಠಾಣ್ ಟೀಕೆ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Rahul Gandhiಯನ್ನು ಭಾರತದ ಪ್ರಧಾನಿ ಮಾಡಲು ಪಾಕ್‌ ಉತ್ಸುಕವಾಗಿದೆ: ಪ್ರಧಾನಿ ಮೋದಿ

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Brahmavara-ಉಡುಪಿ ಟ್ರಾಫಿಕ್‌ ಜಾಮ್‌ ಸಮಸ್ಯೆ: ಸವಾರರು ಸುಸ್ತೋ ಸುಸ್ತು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

Gangster ಗೋಲ್ಡಿ ಬ್ರಾರ್ ಸತ್ತಿಲ್ಲ… ಶೂಟೌಟ್ ಬಗ್ಗೆ ಸ್ಪಷ್ಟನೆ ನೀಡಿದ ಅಮೆರಿಕ ಪೊಲೀಸರು

9-uv-fusion

Pens: ಬಹುರೂಪದಲ್ಲಿ ಲಭ್ಯವಿರುವ ಬಹುಪಯೋಗಿ ಲೇಖನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.