ಜಾನಪದ ಪರಂಪರೆ ರಕ್ಷಣೆ ಎಲ್ಲರ ಜವಾಬ್ದಾರಿ: ವಾಲೀಕಾರ

ಅಂದೇ ಜಾನಪದ ಹುಟ್ಟಿತು. ಜಾನಪದದ ಕುರಿತು ಹಲವರು ಪರಿಣಿತರಿದ್ದಾರೆ

Team Udayavani, Sep 2, 2021, 6:38 PM IST

ಜಾನಪದ ಪರಂಪರೆ ರಕ್ಷಣೆ ಎಲ್ಲರ ಜವಾಬ್ದಾರಿ: ವಾಲೀಕಾರ

ವಿಜಯಪುರ: ಜಾನಪದ ಸಾಹಿತ್ಯ ಅತ್ಯಂತ ಶ್ರೀಮಂತ ಸಾಹಿತ್ಯ ಪ್ರಕಾರ ಎನಿಸಿದೆ. ಜಾನಪದ ನುಡಿಗಳು ವೇದಕ್ಕೆ ಸಮಾನವಾಗಿದ್ದು, ನಮ್ಮ ಪರಂಪರೆಯ ಜೀವಂತಿಕೆ ಇರುವ ಜಾನಪದ ಸಾಹಿತ್ಯ ಹಾಗೂ ಕಲೆಗಳ ಸಂರಕ್ಷಣೆ ಅಗತ್ಯವಿದೆ ಎಂದು ಮಾನವ ಹಕ್ಕುಗಳ ಕಲ್ಯಾಣ ಮಂಡಳಿ ಅಧ್ಯಕ್ಷ ಹಾಸಿಂಪೀರ್‌ ವಾಲೀಕಾರ ಅಭಿಪ್ರಾಯಪಟ್ಟರು.

ತಿಕೋಟಾ ಪಟ್ಟಣದ ಬಿಎಲ್‌ಡಿಇ ಸಂಸ್ಥೆಯಲ್ಲಿ ಕನ್ನಡ ಜಾನಪದ ಪರಿಷತ್‌ ಹಾಗೂ ನೂತನ ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಜಾನಪದ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಜಾನಪದ ನಮ್ಮ ಸಂಸ್ಕೃತಿಯ ಪ್ರತೀಕವಾಗಿದೆ.ಭವಿಷ್ಯದಲ್ಲಿ ಸಮಾಜದಲ್ಲಿರುವ ನಮ್ಮಯುವ ಪೀಳಿಗೆಗೆಈ ಪರಂಪರೆಯನ್ನು ನೀಡುವುದು ನಮ್ಮೆಲ್ಲರ ಹೊಣೆಯಾಗಿದೆ ಎಂದು ಹೇಳಿದರು. ಕನ್ನಡಜಾನಪದ ಪರಿಷತ್‌ ಜಿಲ್ಲಾಧ್ಯಕ್ಷಬಾಳನಗೌಡ ಪಾಟೀಲ ಮಾತನಾಡಿ, ಆಡು ಮುಟ್ಟದ ಸೊಪ್ಪಿಲ್ಲ, ಜಾನಪದರು ಹೇಳದ ವಿಷಯಗಳಿಲ.ಜಾನಪದರು ತಮ್ಮ ದಿನ ನಿತ್ಯದ ಕೆಲಸಗಳಲ್ಲಿ ನಿರತವಾಗಿದ್ದರೂ ಅನಕ್ಷರಸ್ತರಾಗಿದ್ದರೂ ಸ್ವಾನುಭವದ ಸಂಗತಿಗಳನ್ನು ಕಾವ್ಯಗಳಾಗಿ, ಕಥೆಗಳಾಗಿ ಕಟ್ಟಿಕೊಡುತ್ತಿದ್ದರು.

ಅಲಿಖಿತ ಸಾಹಿತ್ಯದ ನಿರಂತರ ಪ್ರಸಾರದ ಮೂಲಕವೇ ತಮ್ಮ ನೋವು ನಲಿವುಗಳನ್ನು ಸಂವೇದಿಸುತ್ತಿದ್ದು. ಆದರೆ ಆಧುನಿಕತೆ ತಾಂತ್ರಿಕ ಯುಗದಲ್ಲಿ ಇಂಗಿನ ಯುವ ಸಮೂಹ ಟಿವಿ, ಮೊಬೈಲ್‌, ಅಂತರ್ಜಾಲದಂಥ ಪ್ರಭಾವಕ್ಕೆ ಸಿಲುಕಿ ನಮ್ಮ ಮೂಲ ಪರಂಪರೆಯಿಂದ ವಿಮುಖರಾಗುತ್ತಿದ್ದಾರೆ. ಹೀಗಾಗಿ ಭವಿಷ್ಯದ ಯುವ ಜನಾಂಗಕ್ಕೆ ಜಾನಪದಕಲೆ, ಸಾಹಿತ್ಯದ ಅರಿವು ಮೂಡಿಸುವ ಕೆಲಸ ಮಾಡಲಾಗುತ್ತಿದೆ ಎಂದರು.

ಕನ್ನಡ ಜಾನಪದ ಪರಿಷತ್‌ ತಿಕೋಟಾ ತಾಲೂಕು ಘಟಕದ ಅಧ್ಯಕ್ಷ ನಿಂಗಪ್ಪ ಕಲಘಟಗಿ ಮಾತನಾಡಿ, ಭೂಮಿ ಮೇಲೆ ಮಾನವ ಜನಾಂಗ ಯಾವಾಗ ಹುಟ್ಟಿತೋ ಅಂದೇ ಜಾನಪದ ಹುಟ್ಟಿತು. ಜಾನಪದದ ಕುರಿತು ಹಲವರು ಪರಿಣಿತರಿದ್ದಾರೆ. ಯಾವುದೇ ಶಾಲೆ-ವಿಶ್ವವಿದ್ಯಾಲಯದಲ್ಲಿ ಕಲಿಯದೇ, ಅಕ್ಷರದ ಜ್ಞಾನ ಇಲ್ಲದಿದ್ದರೂ ಸಮಾಜದಲ್ಲಿ ಪರಂಪರೆಯಿಂದ ಹರಿದು ಬಂದಿದ್ದ ಜ್ಞಾನದಿಂದಲೇ ಕಾವ್ಯಗಳನ್ನು ರಚಿಸುತ್ತಿದ್ದರು‌. ಬದುಕಿನ ಅನುಭವಗಳೇ ಅವರಿಗೆ ವಿಶ್ವವಿದ್ಯಾಲಯಕ್ಕೂ ಮೀರಿದ ಸಾತ್ವಿಕ ಬದುಕಿನ ಶಿಕ್ಷಣ ನೀಡುತ್ತಿದ್ದವು ಎಂದು ವಿವರಿಸಿದರು.

ಪ್ರವಚನಕಾರ ಬಾಬುರಾವ್‌ ಮಹಾರಾಜ್‌ ಮಾತನಾಡಿ, ಬ್ರಹ್ಮಾಂಡದ ಮೂಲ ಉತ್ಪತ್ತಿಯೇ ಓಂಕಾರದಿಂದ ರೂಪಿತವಾಗಿದೆ. ಜಾನಪದ ಸಾಹಿತ್ಯ ಅಮ್ಮನ ಲಾಲಿ ಹಾಡಿನಿಂದ ಹಿಡಿದು ಹಂತಿಯ ಹಾಡು, ಮದುವೆ ಹಾಡು, ಬೀಸುವ ಕಲ್ಲಿನ ಹಾಡು ಮುಂತಾದವು ಜಾನಪದ ಸಾಹಿತ್ಯ ಹಾಗೂ ಕಲೆಗಳ ಆಗರವಾಗಿವೆ ಎಂದರು. ಗೀರಥಿತೇಲಿ,ಎಂ.ಎಸ್‌.ಯಚ್ಚಿ,ಪ್ರಾಚಾರ್ಯ ಎಸ್‌.ಪಿ. ಮದ್ರೇಕರ, ಚಂದ್ರಶೇಖರಯ್ಯ ಹಿರೇಮಠ, ಧರೆಪ್ಪ ಪಚ್ಚಾಪುರ, ಶಂಕ್ರಪ್ಪ ಶಿವನಾಕರ, ಕೆಂಚಪ್ಪ ಬೆಳಗಾವಿ, ಶಟವ್ವ ಮಾದರ, ಶಫೀಕ್‌ ಹಡಗಲಿ, ಮಧು ಖೋತ ,ಅನಿಲ ಖೋತ, ಶರಣು ಕಂಠಿ, ಖೋತ, ಐ.ಕೆ. ನದಾಫ್‌, ಎಸ್‌.ಆರ್‌. ಲಕ್ಕೊಂಡ, ಧರೆಪ್ಪ
ಹಡಪದ, ಚಂದ್ರಶೇಖರ ಹಿರೇಮಠ, ಬಸವರಾಜ ತಳವಾರ, ಕೊಣ್ಣೂರ ಇದ್ದರು.

ಟಾಪ್ ನ್ಯೂಸ್

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

ಘಾಟಿ ಪ್ರದೇಶದಲ್ಲಿ ಮಂಜಿನ ವಾತಾವರಣ; ಹೆದ್ದಾರಿ ಇಲಾಖೆಯಿಂದ ಮಳೆಗಾಲ ಪೂರ್ವ ಕಾಮಗಾರಿ

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Udupi; ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ: ರಘುಪತಿ ಭಟ್‌

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Uppinangady ಮಣ್ಣು ಹಾಕಿದ ರಸ್ತೆಯಲ್ಲಿ ಸಿಲುಕಿದ ಲಾರಿ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

Sullia: ಡ್ಯಾಂ ನೀರು ಹೊರಕ್ಕೆ ನೀರು ಸಂಗ್ರಹದ ಪ್ರದೇಶದಲ್ಲಿ ಕುಸಿತ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ

ಕಡಲಾಳದ ಬಳಕೆಯಾಗದ ಮೀನಿಗೆ ಮಾರುಕಟ್ಟೆ ಅಧಿಕ: ಡಾ| ಮೀನ ಕುಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Vijayapura:ಆಯುತಪ್ಪಿ ಬಿದ್ದ ಮಹಿಳೆಯ ಕಾಲಿನ ಮೇಲೆ ಹರಿದ ಬಸ್

police crime

Vijayapura ಜಿಲ್ಲೆಯ ವೈದ್ಯ ಸೇರಿ ಇಬ್ಬರಿಗೆ ಆನ್‍ಲೈನ್ ವಂಚನೆ : 68.77 ಲಕ್ಷ ರೂ. ಪಂಗನಾಮ

15-indi

Indi: ಕೃಷಿ ಹೊಂಡದಲ್ಲಿ ಬಿದ್ದು ಇಬ್ಬರು ಬಾಲಕರು ಮೃತ್ಯು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kedarnath

Chardham; 15 ದಿನಗಳಲ್ಲಿ 52 ಯಾತ್ರಾರ್ಥಿಗಳ ಸಾವು

court

Equestrian: ಆಡಳಿತ ನಿರ್ವಹಣೆಗೆ ಸಮಿತಿ

pvs

Malaysia Master ಬ್ಯಾಡ್ಮಿಂಟನ್‌: ಸೆಮಿಫೈನಲ್‌ ಪ್ರವೇಶಿಸಿದ ಸಿಂಧು

Sunil Chhetri

FIFA ವಿಶ್ವಕಪ್‌ ಕ್ವಾಲಿಫೈಯರ್‌; ಭಾರತ ಫುಟ್‌ಬಾಲ್‌ ತಂಡ ಪ್ರಕಟ: ಛೇತ್ರಿಗೆ ವಿದಾಯ ಪಂದ್ಯ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Heavy Rain ಕರಾವಳಿಯಲ್ಲಿ ಮುಂದುವರಿದ ಗಾಳಿ-ಮಳೆಯ ಅಬ್ಬರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.