ಲಕ್ಷಾಂತರ ರೂ.ಮೌಲ್ಯದ ಗಾಂಜಾ ವಶ: ಅಬಕಾರಿ ಅಧಿಕಾರಿಗಳಿಂದ ಓರ್ವನ ಬಂಧನ
Team Udayavani, Sep 3, 2021, 7:57 PM IST
ವಿಜಯಪುರ: ಅಕ್ರಮವಾಗಿ ಗಾಂಜಾ ಸಾಗಿಸುತ್ತಿದ್ದ ಓರ್ವ ಆರೋಪಿಯನ್ನು ಜಿಲ್ಲೆಯ ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಅಮೋಘ ಸಿದ್ದ ಯಮನಪ್ಪ ಲೋಗಾಂವಿ ಬಂಧಿತ ಆರೋಪಿ. ಈತನಿಂದ ಲಕ್ಷಾಂತರ ರೂ. ಮೌಲ್ಯದ ಗಾಂಜಾ ವಶಕ್ಕೆ ಪಡೆದಿದ್ದಾರೆ.
ಶುಕ್ರವಾರ ಬೆಳಗಾವಿ ಅಬಕಾರಿ ಅಪರಾಧ ವಿಭಾಗದ ಅಪರ ಆಯುಕ್ತ ಡಾ.ವೈ ಮಂಜುನಾಥ ಹಾಗೂ ವಿಜಯಪುರ ಉಪ ಆಯುಕ್ತೆ ಸೈಯೀದ ಅಜ್ಮತ್ ಆಪ್ರೀನ್ ಮಾರ್ಗದರ್ಶನದಲ್ಲಿ ಖಚಿತ ಮಾಹಿತಿ ಆಧರಿಸಿ ಉಪ ಅಧೀಕ್ಷಕ ಎಚ್.ಎಸ್. ವಜ್ಜರಮಟ್ಟಿ ಹಾಗೂ ಅಬಕಾರಿ ನಿರೀಕ್ಷಕರು ಜಿಲ್ಲಾ ವಿಚಕ್ಷಣ ಧಳದ ನಿರೀಕ್ಷಕ ಮಹಾದೇವ ಪೂಜಾರಿ ನೇತೃತ್ವದಲ್ಲಿ ದಾಳಿ ನಡೆಸಲಾಗಿತ್ತು.
ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ರತ್ನಾಪೂರ ಕ್ರಾಸ್ ನಲ್ಲಿ ಆರೋಪಿ ಅಮೋಘ ಸಿದ್ದ ಯಮನಪ್ಪ ಲೋಗಾಂವಿ ತನ್ನ ದ್ವೀಚಕ್ರ ವಾಹನದಲ್ಲಿ ಅಕ್ರಮವಾಗಿ ಮಾರಾಟ ಮಾಡುವ ಉದ್ದೇಶದಿಂದ ಗಾಂಜಾ ಸಾಗಿಸುತ್ತಿದ್ದ. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದಾಗ ಆರೋಪಿ ಬಳಿ 1.10 ಲಕ್ಷ ರೂ. ಮೌಲ್ಯದ 4 ಕೆಜಿ ಒಣಗಿದ ಗಾಂಜಾ ಪತ್ತೆಯಾಗಿದ್ದು, ವಶಕ್ಕೆ ಪಡೆದಿದ್ದಾರೆ.
ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ವಿಜಯಪುರ ಅಬಕಾರಿ ಪಿಎಸ್ಐ ಪ್ರಕಾಶ ಜಾಧವ, ಪೇದೆಗಳಾದ ಆಶ್ರೀತ್, ಈರಗೊಂಡ ಹಟ್ಟಿ, ಭೀಮಣ್ಣ ಕುಂಬಾರ ಹಾಗೂ ವಾಹನ ಚಾಲಕ ಪರಶುರಾಮ ತೆಲಗಿ ದಾಳಿಯಲ್ಲಿ ಪಾಲ್ಹೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ
Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು
Yellapur; ಬೊಲೆರೋ ಢಿಕ್ಕಿಯಾಗಿ ಬೈಕ್ ಸವಾರ ದುರ್ಮರಣ, ಹಿಂಬದಿ ಸವಾರ ಗಂಭೀರ
Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್
IPL; ಮೆಕ್ಗುರ್ಕ್ ಅಬ್ಬರ : ಡೆಲ್ಲಿ ಎದುರು ಹೋರಾಡಿ ಸೋತ ಮುಂಬೈ