ಓವಲ್‌ ಟೆಸ್ಟ್‌ ಪಂದ್ಯ : ಮುನ್ನಡೆ ಸಾಧಿಸಿದ ಇಂಗ್ಲೆಂಡ್‌


Team Udayavani, Sep 3, 2021, 11:21 PM IST

England vs India, 4th Test, The Oval, 2nd day

ಲಂಡನ್‌ : ಭಾರತದ 191 ರನ್ನುಗಳ ಸಾಮಾನ್ಯ ಮೊತ್ತವನ್ನು ಹಿಂದಿಕ್ಕಿದ ಇಂಗ್ಲೆಂಡ್‌ ಓವಲ್‌ ಟೆಸ್ಟ್‌ ಪಂದ್ಯದ ದ್ವಿತೀಯ ದಿನ 290ಕ್ಕೆ ಆಲೌಟ್‌ ಆಗಿದ್ದು, 99 ರನ್‌ಗಳ ಮೊದಲ ಇನ್ನಿಂಗ್ಸ್‌ ಲೀಡ್‌ ಗಳಿಸುವಲ್ಲಿ ಯಶಸ್ವಿಯಾಗಿದೆ.

ಆರಂಭದಲ್ಲಿ ತಿರುಗೇಟು ನೀಡಿದ ಭಾರತದ ಬೌಲರ್‌ಗಳು ಆತಿಥೇಯರಿಗೆ ಬಿಸಿ ಮುಟ್ಟಿಸತೊಡಗಿದರು. ಉಮೇಶ್‌ ಯಾದವ್‌ ಮತ್ತು ಬುಮ್ರಾ ಸೇರಿಕೊಂಡು 62 ರನ್‌ ಆಗುವಷ್ಟರಲ್ಲಿ 5 ವಿಕೆಟ್‌ ಉರುಳಿಸಿದರು. ಆಗ ಕೊಹ್ಲಿ ಪಡೆಗೆ ಮುನ್ನಡೆಯ ಸಾಧ್ಯತೆಯೊಂದು ಗೋಚರಿಸಿತು. ಆದರೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಓಲೀ ಪೋಪ್‌ (81) ಬೇರೂರಿ ನಿಂತು ಇಂಗ್ಲೆಂಡ್‌ ಸರದಿಯನ್ನು ಬೆಳೆಸತೊಡಗಿದರು. ಅವರಿಗೆ ಬೇರ್‌ಸ್ಟೊ (37), ಮೊಯಿನ್‌ ಅಲಿ (35) ಉತ್ತಮ ಬೆಂಬಲ ನೀಡಿದರು.

ಮೊದಲ ದಿನದ ಅಂತ್ಯಕ್ಕೆ ಇಂಗ್ಲೆಂಡ್‌ 3ಕ್ಕೆ 53 ರನ್‌ ಮಾಡಿತ್ತು. ಇದರಲ್ಲಿ ಅಪಾಯಕಾರಿ ಜೋ ರೂಟ್‌ (21) ವಿಕೆಟ್‌ ಕೂಡ ಸೇರಿತ್ತು. ಇದೇ ಮೊತ್ತಕ್ಕೆ ನೈಟ್‌ ವಾಚ್‌ಮನ್‌ ಓವರ್ಟನ್‌ (1) ವಾಪಸಾದರು. ಮಲಾನ್‌ 31ರ ಗಡಿ ದಾಟಲಿಲ್ಲ. ಈ ಎರಡೂ ವಿಕೆಟ್‌ ಉಮೇಶ್‌ ಯಾದವ್‌ ಪಾಲಾಯಿತು. ಪೋಪ್‌-ಬೇರ್‌ಸ್ಟೊ 89 ರನ್‌ ಜತೆಯಾಟ ನಡೆಸಿ ಆಸರೆ ಒದಗಿಸಿದರು. ಈ ಜೋಡಿಯನ್ನು ಸಿರಾಜ್‌ ಬೇರ್ಪಡಿಸಿದರು. ಅಲಿ ವಿಕೆಟ್‌ ಜಡೇಜ ಕಿತ್ತರು. ಕೊನೆಯಲ್ಲಿ ವೋಕ್ಸ್‌ (50) ಲೀಡ್‌ ಇನ್ನಷ್ಟು ಹೆಚ್ಚಿಸಿದರು.

ಇದನ್ನೂ ಓದಿ :ಭಾರತ ಟೇಬಲ್‌ ಟೆನಿಸ್‌ ತಂಡದ ಕೋಚ್‌ ರಾಯ್‌ ವಿರುದ್ಧ ಮಣಿಕಾ ಬಾತ್ರಾ ಫಿಕ್ಸಿಂಗ್‌ ಆರೋಪ!

ಟಾಪ್ ನ್ಯೂಸ್

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!

3-hunsur

Hunsur: ಆನೆ ನಡೆದದ್ದೇ ದಾರಿ! ಆನೆ ದಾಳಿಗೆ ಬೈಕ್ ಜಖಂ, ಕಾಂಪೌಂಡ್ ಗೆ ಹಾನಿ

2-kushtagi

Polls:ಮತದಾನ ಮಾಡಲು ಬೈಕ್ ನಲ್ಲಿ ಬರುತ್ತಿದ್ದ ಯುವಕನಿಗೆ ಅಪರಿಚಿತ ವಾಹನ ಡಿಕ್ಕಿ; ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

BJP Party: ಬಿಜೆಪಿ ಸೇರಿದ ನಟ ಶೇಖರ್ ಸುಮನ್, ರಾಧಿಕಾ ಖೇರಾ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

Encounter: ಜಮ್ಮು – ಕಾಶ್ಮೀರದಲ್ಲಿ ಎನ್‌ಕೌಂಟರ್‌… ಮೂವರು ಭಯೋತ್ಪಾದಕರು ಹತ

4-manjeshwara-1

Manjeshwara: ಆ್ಯಂಬುಲೆನ್ಸ್- ಕಾರು ಭೀಕರ ಅಪಘಾತ; ಮೂವರು ಮೃತ್ಯು, ನಾಲ್ವರಿಗೆ ಗಾಯ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ

21

Rachana inder: ಮರ್ಡರ್‌ ಮಿಸ್ಟರಿ 4 ಎನ್‌ 6

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.