ಸ್ಥಿರಾಸ್ತಿ ಮಾರ್ಗಸೂಚಿ ದರ ಇಳಿಕೆ : ಸಚಿವ ಅಶೋಕ್
Team Udayavani, Sep 4, 2021, 7:00 AM IST
ಬೆಂಗಳೂರು : ಕೊರೊನಾ ಬಳಿಕ ರಿಯಲ್ ಎಸ್ಟೇಟ್ ಉದ್ಯಮ ಕುಸಿತ ಹಾಗೂ ನೋಂದಣಿ ಮತ್ತು ಮುದ್ರಾಂಕ ಬಾಬ್ತುನಿಂದ ನಿರೀಕ್ಷಿತ ತೆರಿಗೆ ಸಂಗ್ರಹವಾಗದ ಹಿನ್ನೆಲೆಯಲ್ಲಿ ಸ್ಥಿರಾಸ್ತಿ ಮಾರ್ಗಸೂಚಿ ದರ ಕಡಿಮೆ ಮಾಡಲು ಸರಕಾರ ತೀರ್ಮಾನಿಸಿದೆ.
ಆದರೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿ ವ್ಯಾಪ್ತಿಯ ಪ್ರದೇಶಗಳಿಗೆ ಇದು ಅನ್ವಯ ವಾಗುವುದಿಲ್ಲ. ಉಳಿದಂತೆ ವಸತಿ ಮತ್ತು ವಾಣಿಜ್ಯ ಪ್ರದೇಶಗಳ ಮಾರ್ಗಸೂಚಿ ದರ ಡಿಸೆಂಬರ್ ವೇಳೆಗೆ ಕಡಿಮೆಯಾಗಲಿದೆ.
ಕಂದಾಯ ಸಚಿವ ಆರ್. ಅಶೋಕ್ ಈ ಸಂಬಂಧ ಶುಕ್ರವಾರ ಅಧಿಕಾರಿ ಸಭೆ ನಡೆಸಿ ಎಷ್ಟು ಕಡಿಮೆ ಮಾಡಬಹುದು ಎಂಬ ಬಗ್ಗೆ ವರದಿ ನೀಡುವಂತೆ ನಿರ್ದೇಶನ ನೀಡಿದ್ದಾರೆ.
ಪ್ರಸ್ತುತ ಸ್ಥಿರಾಸ್ತಿ ನೊಂದಣಿ ಮುದ್ರಾಂಕ ಶುಲ್ಕ ಜಾಸ್ತಿ ಇದೆ. ಈ ಹಿನ್ನೆಲೆಯಲ್ಲಿ ಸಭೆ ನಡೆಸಿ ಚರ್ಚಿಸ ಲಾಗಿದ್ದು, ವರದಿ ನೀಡುವಂತೆ ಸೂಚನೆ ನೀಡ ಲಾಗಿದೆ ಎಂದು ಅಶೋಕ್ ಹೇಳಿದರು.
ಸಂಪುಟ ಸಭೆಯಲ್ಲೂ ಚರ್ಚೆ
ಶನಿವಾರದ ಸಂಪುಟ ಸಭೆಯಲ್ಲೂ ಈ ಬಗ್ಗೆ ಚರ್ಚಿಸಲಾಗುವುದು. ಸ್ಥಿರಾಸ್ತಿ ಮಾರ್ಗಸೂಚಿ ದರ ಕಡಿಮೆ ಮಾಡುವುದರಿಂದ ರಿಯಲ್ ಎಸ್ಟೇಟ್ ಉದ್ಯಮವೂ ಚೇತರಿಕೆ ಕಾಣಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
MUST WATCH
ಹೊಸ ಸೇರ್ಪಡೆ
Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ
ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ
Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್ ಎಂ. ಪೈ ಬ್ಲಾಕ್ ಇಂದು ಲೋಕಾರ್ಪಣೆ
Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್ ಪೋಸ್ಟ್ ವರದಿ
Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ