ಆನ್‌ಲೈನ್‌ ಜೂಜಿಗೆ ಅಂಕುಶ


Team Udayavani, Sep 5, 2021, 7:10 AM IST

ಆನ್‌ಲೈನ್‌ ಜೂಜಿಗೆ ಅಂಕುಶ

ಬೆಂಗಳೂರು: ಆನ್‌ಲೈನ್‌ನಲ್ಲಿ ಜೂಜಾಡುತ್ತ ಕಾಲಹರಣ ಮಾಡುತ್ತಿರುವವರೇ ಎಚ್ಚರ! ಇನ್ನು ಮುಂದೆ ನಿಮ್ಮ ಆಟಕ್ಕೆ ಅಂಕುಶ ಬೀಳಲಿದೆ.

ರಾಜ್ಯದಲ್ಲಿ ಆನ್‌ಲೈನ್‌ ಜೂಜು ಅಥವಾ ಬೆಟ್ಟಿಂಗ್‌ಗೆ ನಿಷೇಧ ಹೇರಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಕರ್ನಾಟಕ ಪೊಲೀಸ್‌ ಕಾಯ್ದೆ, 1963ಕ್ಕೆ ತಿದ್ದುಪಡಿ ತರಲಾಗುತ್ತದೆ. ಕಂಪ್ಯೂಟರ್‌ ಡಿವೈಸ್‌, ಮೊಬೈಲ್, ಮೊಬೈಲ್‌ ಆ್ಯಪ್‌, ಎಲೆಕ್ಟ್ರಾನಿಕ್‌ ಸಾಧನ ಬಳಸಿ ಆನ್‌ಲೈನ್‌ ಮೂಲಕ ಹಣದ ವ್ಯವಹಾರ ನಡೆಸುವ ಜೂಜಾಟವನ್ನು ನಿಷೇಧಿಸಲು ನಿರ್ಧರಿಸಲಾಗಿದೆ. ಆದರೆ ಲಾಟರಿ ಅಥವಾ ಕುದುರೆ ರೇಸ್‌ ಮೇಲೆ ಬೆಟ್ಟಿಂಗ್‌ ಮಾಡುವುದು ಈ ನಿಷೇಧದ ವ್ಯಾಪ್ತಿಗೆ ಬರುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದ್ದಾರೆ.

ಈ ಕುರಿತು ಹೈಕೋರ್ಟ್‌ಗೆ ರಿಟ್‌ ಅರ್ಜಿಯೂ ಸಲ್ಲಿಕೆಯಾಗಿದ್ದು, ಆನ್‌ಲೈನ್‌ ಬೆಟ್ಟಿಂಗ್‌ ಕುರಿತು ಸ್ಪಷ್ಟ ನಿಲುವು ತೆಗೆದುಕೊಳ್ಳುವಂತೆ ಸರಕಾರಕ್ಕೆ ಹೈಕೋರ್ಟ್‌ ಹಲವು ಬಾರಿ ತಾಕೀತು ಮಾಡಿತ್ತು.

ಸಚಿವ ಸಂಪುಟವು ಕರ್ನಾಟಕ ಪೊಲೀಸ್‌ ಕಾಯ್ದೆ 1963ಕ್ಕೆ ತಿದ್ದುಪಡಿ ತರುವ ಕರಡು ಮಸೂದೆಗೆ ಒಪ್ಪಿಗೆ ನೀಡಿದ್ದು, ಸೆ. 13ರಿಂದ ಆರಂಭವಾಗಲಿರುವ ವಿಧಾನಸಭೆ ಅಧಿವೇಶನ ದಲ್ಲಿ ಮಂಡಿಸಲಾಗುತ್ತದೆ ಎಂದು ಸಚಿವ ಮಾಧುಸ್ವಾಮಿ ತಿಳಿಸಿದ್ದಾರೆ.

ಯಾವುದಕ್ಕೆ ನಿಷೇಧ? :

ಗ್ಯಾಂಬ್ಲಿಂಗ್‌ (ಜೂಜು) ಎಂದರೆ, ಆನ್‌ಲೈನ್‌ ಮೂಲಕ ಗೇಮ್‌ ಆಡುವುದು, ಬೆಟ್ಟಿಂಗ್‌, ಟೋಕನ್‌ ಮೂಲಕ ಹಣದ ಆಟ ಆಡುವುದು, ಎಲೆಕ್ಟ್ರಾನಿಕ್‌ ಮನಿ, ಯಾವುದೇ ಆಟಕ್ಕೆ ಆನ್‌ಲೈನ್‌ ಮೂಲಕ ಹಣದ ವರ್ಗಾವಣೆ ಮಾಡುವುದಕ್ಕೆ ನಿಷೇಧವಿರಲಿದೆ. ನೇರವಾಗಿ ಅಥವಾ ಪರೋಕ್ಷವಾಗಿ ಆಟಗಳಿಗೆ ಹಣ ವರ್ಗಾವಣೆ ಮಾಡುವುದನ್ನು ನಿರ್ಬಂಧಿಸಲಾಗುತ್ತದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ.

ಶಿಕ್ಷೆ ಪ್ರಮಾಣವೂ ಹೆಚ್ಚಳ :

ಕರ್ನಾಟಕ ಪೊಲಿಸ್‌ ಕಾಯ್ದೆ ಸೆಕ್ಸನ್‌ 2ಕ್ಕೆ ತಿದ್ದುಪಡಿ ತರಲು ತೀರ್ಮಾನಿಸಲಾಗಿದೆ. ಈಗಿರುವ ಕಾಯ್ದೆಯಲ್ಲಿ ಆನ್‌ಲೈನ್‌ ಗ್ಯಾಂಬ್ಲಿಂಗ್‌ ನಿಷೇಧಕ್ಕೆ ಅವಕಾಶ ಇರಲಿಲ್ಲ. ಹೀಗಾಗಿ ತಿದ್ದುಪಡಿ ಮೂಲಕ ಅವುಗಳಿಗೆ ನಿಷೇಧ ಹೇರಲಾಗುತ್ತದೆ. ಶಿಕ್ಷೆಯ ಪ್ರಮಾಣವನ್ನೂ ಹೆಚ್ಚಳ ಮಾಡಲು ಸಂಪುಟ ನಿರ್ಧರಿಸಿದೆ. ಸೆಕ್ಸನ್‌ 78ಎ/3 ಪ್ರಕಾರ, ಈಗಿರುವ ಒಂದು ತಿಂಗಳ ಜೈಲು ಶಿಕ್ಷೆ ಪ್ರಮಾಣವನ್ನು 6 ತಿಂಗಳುಗಳಿಗೆ ವಿಸ್ತರಿಸುವುದು, ಒಂದು ವರ್ಷದ ಶಿಕ್ಷೆ 3 ವರ್ಷಕ್ಕೆ ಹೆಚ್ಚಳ, ಈಗಿರುವ 500 ರೂ. ದಂಡ 10 ಸಾವಿರ ರೂ.ಗೆ ಹೆಚ್ಚಳ, ಈಗಿರುವ 1,000 ರೂ. ದಂಡವನ್ನು 1 ಲಕ್ಷ ರೂ.ಗೆ ಹೆಚ್ಚಳ ಮಾಡಲು ತೀರ್ಮಾನಿಸಲಾಗುತ್ತದೆ.

ಕೇರಳ, ತ. ನಾಡಿನಲ್ಲಿ ನಿಷೇಧ :

ತಮಿಳುನಾಡಿನಲ್ಲಿ ಕಳೆದ ವರ್ಷದ ನವೆಂಬರ್‌ನಲ್ಲೇ ಆನ್‌ಲೈನ್‌ ಜೂಜಿಗೆ ನಿಷೇಧ ಹೇರಿ ಅಧ್ಯಾದೇಶ ಜಾರಿ ಮಾಡಲಾಗಿದೆ. ಕೇರಳದಲ್ಲಿ ಪ್ರಸಕ್ತ ವರ್ಷದ ಆರಂಭದಲ್ಲೇ ಇದಕ್ಕೆ ನಿಷೇಧ ಹೇರಲಾಗಿದೆ. ಮೊದಲಿಗೆ ಆಯಾ ರಾಜ್ಯಗಳಲ್ಲಿ ಜೂಜಿಗೆ ಸಂಬಂಧಿಸಿ ಪ್ರತ್ಯೇಕ ಕಾನೂನುಗಳಿದ್ದವು. ಒಂದು ರಾಜ್ಯದಲ್ಲಿ ಜೂಜು ಅಪರಾಧವಾಗಿದ್ದರೆ, ಮತ್ತೂಂದರಲ್ಲಿ ಕಾನೂನುಬದ್ಧವಾಗಿತ್ತು. ಅನಂತರ, ಕೇಂದ್ರ ಸರಕಾರವೇ “ಸಾರ್ವಜನಿಕ ಜೂಜು ಕಾಯ್ದೆ, 1867′ ಜಾರಿ ಮಾಡಿತ್ತು. ಬಳಿಕ ಉತ್ತರಪ್ರದೇಶ, ಮಧ್ಯಪ್ರದೇಶ, ಪಂಜಾಬ್‌ನಂಥ ಕೆಲವು ರಾಜ್ಯಗಳು ಇದೇ ಕಾಯ್ದೆಯನ್ನು ಜಾರಿ ಮಾಡಿದವು. ಆದರೆ ಅವುಗಳಲ್ಲಿ ಆನ್‌ಲೈನ್‌ ಜೂಜು ಕುರಿತು ಪ್ರಸ್ತಾವವಿರಲಿಲ್ಲ. ಮೊದಲಿಗೆ ಈ ಕುರಿತ ಉಲ್ಲೇಖವಿರುವ ಕಾನೂನು ಜಾರಿ ಮಾಡಿದ್ದು ಸಿಕ್ಕಿಂ ಮತ್ತು ನಾಗಾಲ್ಯಾಂಡ್‌. ಗೋವಾದಲ್ಲಿ ಸರಕಾರಿ ಪ್ರಾಯೋಜಿತ ಕ್ಯಾಸಿನೋಗಳಲ್ಲಿ ಜೂಜಿಗೆ ಅವಕಾಶವಿದೆ.

ಏನಿದು ಆನ್‌ಲೈನ್‌ ಜೂಜು? :

ಇಂಟರ್ನೆಟ್‌ ಮೂಲಕ ಕ್ರೀಡೆ ಅಥವಾ ಕ್ಯಾಸಿನೋಗಳ ಮೇಲೆ ಬೆಟ್ಟಿಂಗ್‌ ಮಾಡುವುದನ್ನು ಆನ್‌ ಲೈನ್‌ ಜೂಜು ಅಥವಾ ಇ-ಗ್ಯಾಂಬ್ಲಿಂಗ್‌ ಎಂದು ಕರೆಯು ತ್ತಾರೆ.

ಯಾವೆಲ್ಲ ಗ್ಯಾಂಬ್ಲಿಂಗ್‌?

ಪೋಕರ್‌, ಕುದುರೆ ರೇಸ್‌, ಕ್ಯಾಸಿನೋ ಸ್ಲಾಟ್‌ಗಳು, ಬ್ಲ್ಯಾಕ್‌ಜ್ಯಾಕ್‌, ರೋಲೆಟ್‌, ಕ್ರೀಡಾ ಬೆಟ್ಟಿಂಗ್‌ (ಕ್ರಿಕೆಟ್‌, ಬಾಸ್ಕೆಟ್‌ಬಾಲ್‌, ಫ‌ುಟ್ಬಾಲ್‌ ಇತ್ಯಾದಿ).

ಟಾಪ್ ನ್ಯೂಸ್

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

Thirthahalli ಕುಪ್ಪಳ್ಳಿ; ಮನೆಗೆ ಆಕಸ್ಮಿಕ ಬೆಂಕಿ: ಅಪಾರ ಹಾನಿ!

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್

ಎಲ್ಲಾ ಶೆಡ್ಯೂಲ್ ಮುಗಿದ ಬಳಿಕವಷ್ಟೇ ʼ‌KGF -3ʼ.. ಬಿಗ್‌ ಅಪ್ಡೇಟ್ ಕೊಟ್ಟ ನಿರ್ದೇಶಕ ನೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Revanna 2

Extended;ಎಚ್.ಡಿ.ರೇವಣ್ಣ ನ್ಯಾಯಾಂಗ ಬಂಧನ ಮೇ 14ರವರೆಗೆ ವಿಸ್ತರಣೆ

1-wqe-wq-ewqeqq

Sirsi; ಶಾಸಕ ಭೀಮಣ್ಣ ನಾಯ್ಕ ಸೇರಿ ಮೂವರ ಮೇಲೆ ಜೇನು ನೊಣಗಳ ದಾಳಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

Fishing ಕಾಲಿಗೆ ಮೀನಿನ ಬಲೆ ಸಿಲುಕಿ ಸಮುದ್ರಕ್ಕೆ ಬಿದ್ದ ಮೀನುಗಾರ; ಆಸ್ಪತ್ರೆಗೆ ದಾಖಲು

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

ಧಾರವಾಡದ ಐಐಐಟಿ ನಿರ್ದೇಶಕರಾಗಿ ಪ್ರೊ.ಮಹಾದೇವ ಪ್ರಸನ್ನ ನೇಮಕ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

Panaji; ಮೇ 11 ರಿಂದ ಗೋವಾದಲ್ಲಿ ಕೆಲವೆಡೆ ತುಂತುರು ಮಳೆ ಸಾಧ್ಯತೆ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

ಶಿವಮೊಗ್ಗ: ಹಾಡಹಗಲೇ ನಡುರಸ್ತೆಯಲ್ಲಿ ಇಬ್ಬರು ರೌಡಿಶೀಟರ್ ಗಳ ಭೀಕರ ಹತ್ಯೆ, ಬಿಗುವಿನ ವಾತಾವರಣ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Sangeeth Sivan: ಮಾಲಿವುಡ್‌, ಬಾಲಿವುಡ್‌ನ ಖ್ಯಾತ ನಿರ್ದೇಶಕ ಸಂಗೀತ್ ಶಿವನ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.