ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ : ರಿಕ್ಟರ್ ಮಾಪಕದಲ್ಲಿ 3.9 ತೀವ್ರತೆ ದಾಖಲು
Team Udayavani, Sep 5, 2021, 7:51 AM IST
ವಿಜಯಪುರ : ಶನಿವಾರ ತಡರಾತ್ರಿ ವಿಜಯ ಜಿಲ್ಲೆ ಸೇರಿದಂತೆ ನೆರೆಯ ಜಿಲ್ಲೆಗಳಲ್ಲಿ ಭೂಮಿ ನಡುಗಿದ ಅನುಭವ ಆಗಿದ್ದು, ರಿಕ್ಟರ್ ಮಾಪಕದಲ್ಲಿ ದಾಖಲಾದ ಲಘು ತೀವ್ರತೆ ಭೂಕಂಪ ಎಂಬುದನ್ನು ಜಿಲ್ಲಾಡಳಿತ ದೃಢೀಕರಿಸಿದೆ.
ಭೂಕಂಪನ ಅಗಿದ್ದು ರಿಕ್ಟರ್ ಮಾಪಕದಲ್ಲಿ ದಾಖಲು 3.9 ತೀವ್ರತೆಯ ಭೂಕಂಪನ ಆಗಿದೆ.ಮಹಾರಾಷ್ಟ್ರದ ಕೊಲ್ಹಾಪುರ ಭೂಕಂಪನದ ಕೇಂದ್ರ ಬಿಂಧುವಾಗಿತ್ತು. ಕೆ.ಎಸ್.ಎನ್. ಡಿ.ಎಂ.ಸಿ. ಮೂಲಕ ಮಾಹಿತಿ ಸಂಗ್ರಹಿಸಿದೆ ಎಂದು ಜಿಲ್ಲಾಧಿಕಾರಿ ಸುನಿಲಕುಮಾರ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ವಿಜಯಪುರ ಜಿಲ್ಲೆಯ ಬಹುತೇಕ ಎಲ್ಲ ಕಡೆ ಶನಿವಾರ ರಾತ್ರಿ11-47, 11-48 ರ ಮಧ್ಯಾವಧಿಯಲ್ಲಿ 30 ಸೆಕೆಂಡ್ ಅಂತರದಲ್ಲಿ ಎರಡು ಬಾರಿ ಭಾರಿ ಸದ್ದಿನೊಂದಿಗೆ ಭೂಮಿ ನಡುಗಿಸಿ ಭೂಕಂಪನದ ಸ್ಪಷ್ಟ ಅನುಭವ ನೀಡಿದೆ.
ಭೂಕಂಪನ ಆಗುತ್ತಲೇ ಮನೆಗಳಲ್ಲಿ ಮಲಗಿದ್ದವರನ್ನು ಅಲುಗಾಡಿಸಿ ಎಬ್ಬಿಸಿದ್ದು, ಮನೆಗಳಲ್ಲಿನ ಪಾತ್ರೆ ಸೇರಿದಂತೆ ಹಲವು ವಸ್ತುಗಳು ಮೇಲಿಂದ ಕೆಳಗೆ ಬಿದ್ದಿವೆ. ಕೂಡಲೇ ಜನರು ಮಕ್ಕಳು, ವೃದ್ಧರೊಂದಿಗೆ ಮನೆ ಬಿಟ್ಡು ಹೊರಗೋಡಿ ಬಂದಿದ್ದಾರೆ. ಇದೇವೇಳೆ ಮಳೆ ಸುರಿಯಲು ಆರಂಭಿಸಿದರೂ ಲೆಕ್ಕಿಸದೇ ಜೀವ ಭಯದಲ್ಲು ಹಲವು ಹೊತ್ತು ಬೀದಿಯಲ್ಲೇ ಕಲೆದಿದ್ದಾರೆ.
ವಿಜಯಪುರ ಜಿಲ್ಲೆ ಮಾತ್ರವಲ್ಲದೇ ನೆರೆಯ ಕಲಬುರಗಿ ಜಿಲ್ಲೆಯ ಅಫಜಲಪುರ, ಬಾಗಲಕೋಟೆ ಜಿಲ್ಲೆಯ ಜಮಖಂಡಿ, ಮಹಾರಾಷ್ಟ್ರ ರಾಜ್ಯದ ಸೋಲಾಪುರ ಭಾಗದಲ್ಲೂ ಭೂಕಂಪನ ಸಂಭವಿಸಿದ್ದಾಗಿ ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು