ಮುಂದಿನ ಸಿಎಂ ಎಂದು ಟವಲ್ ಹಾಕಿದ ಕಾಂಗ್ರೆಸ್ ನವರು ತಮ್ಮ ಟವಲ್ ತೆಗೆಯಬೇಕಿದೆ: ನಳಿನ್ ಕಟೀಲ್


Team Udayavani, Sep 6, 2021, 1:38 PM IST

nalin-kumar

ಬೆಂಗಳೂರು: ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಎಂದು ಟವಲ್ ಹಾಕಿಕೊಂಡಿದ್ದವವರು ತಮ್ಮ ಸಿಎಂ ಟವಲ್ ತೆಗೆಯಬೇಕು. ಸಿದ್ದರಾಮಯ್ಯ ಎಲ್ಲೂ ಪ್ರವಾಸ ಮಾಡಿರಲಿಲ್ಲ. ಡಿ ಕೆಶಿವಕುಮಾರ್ ಅಧ್ಯಕ್ಷರಾಗಿ ಸೋತಿದ್ದಾರೆ ಎಂದು ಸಂದೇಶ ಸಾರುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

ನಗರಪಾಲಿಕೆಗಳ ಚುನಾವಣೆ ಫಲಿತಾಂಶ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಮೂರು ಮಹಾನಗರ ಪಾಲಿಕೆಗಳು ಕೆಲವು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗಳ ಫಲಿತಾಂಶ ಅತಿ ಹೆಚ್ಚು ಸ್ಥಾನಗಳನ್ನು ಬಿಜೆಪಿ ಗೆದ್ದಿದೆ. ಬಿಜೆಪಿಗೆ ಮತ ಹಾಕಿದ ಮತದಾರರಿಗೆ ಧನ್ಯವಾದಗಳು ಎಂದರು.

ಯಡಿಯೂರಪ್ಪ ಮಾರ್ಗದರ್ಶನ ಹಾಗೂ ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಜನ ಮನ್ನಣೆ ನೀಡಿದ್ದಾರೆ. ಇದರಿಂದ ನಮ್ಮ ಜವಾಬ್ದಾರಿ ಹೆಚ್ಚಿದೆ. ಬೆಳಗಾವಿಯಲ್ಲಿ ಮೊದಲ ಬಾರಿಗೆ ಚಿಹ್ನೆಯಡಿ ಸ್ಪರ್ಧೆ ಮಾಡಿದ್ದು ಬಿಜೆಪಿಗೆ ಹೆಚ್ಚು ಸ್ಥಾನ ನೀಡಿದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ಮೂರನೇ ಬಾರಿಯೂ ನಮ್ಮದೇ ಅಧಿಕಾರ ಇದೆ.  ಹು- ಧಾ ಹಾಗೂ ಬೆಳಗಾವಿಗೆ ಸ್ಮಾರ್ಟ್ ಸಿಟಿ ಸ್ಥಾನ ನೀಡಿದ್ದೇವೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಹುಬ್ಬಳ್ಳಿ ಧಾರವಾಡಕ್ಕೆ ಹೆಚ್ಚಿನ ಅನುದಾನ ನೀಡಿದ್ದಾರೆ. ದೊಡ್ಡಬಳ್ಳಾಪುರ ನಗರಸಭೆಯಲ್ಲಿ ಬಿಜೆಪಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ನರೇಂದ್ರ ಮೋದಿ ಸರ್ಕಾರದ ಸಾಧನೆಗಳು, ಯಡಿಯೂರಪ್ಪ ಅವರ ಎರಡು ವರ್ಷಗಳ ಅಧಿಕಾರಿ ಹಾಗೂ ಬೊಮ್ಮಾಯಿ ಅವರ ಅಮೃತ ಕಲ್ಪನೆಯ ಯೋಜನೆಗಳಿಗೆ ಜನರ ಬೆಂಬಲ ದೊರೆತಿದೆ ಎಂದು ಕಟೀಲ್ ಹೇಳಿದರು.

ಇದನ್ನೂ ಓದಿ:ಬೆಳಗಾವಿ ಪಾಲಿಕೆಯಲ್ಲಿ ಅರಳಿದ‌ ಕಮಲ: ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದ ಬಿಜೆಪಿ

ನಾವು ಬೆಳಗಾವಿಯಲ್ಲಿ ಒಂದು ಸಂದೇಶ ನೀಡಬೇಕು ಎಂದು ಅಭ್ಯರ್ಥಿಗಳನ್ನು ಹಾಕಿದ್ದೇವು. ಅದರಲ್ಲಿ ಯಶಸ್ಬಿಯಾಗಿದ್ದೇವೆ. ಎಲ್ಲರ ಪರಿಶ್ರಮದಿಂದ ನಮಗೆ ಯಶಸ್ಸು ಸಿಕ್ಕಿದೆ. ಪೇಜ್ ಪ್ರಮುಖರು, ಮತಗಟ್ಟೆಯ ಅಧ್ಯಕ್ಷರ ಮನೆಗೆ ಬೋರ್ಡ್ ಹಾಕುವುದು. ನಮಗೆ ಯಶಸ್ಸು ದೊರೆಯಲು ಕಾರಣವಾಗಿದೆ. ಕಾರ್ಯಕರ್ತರ ಶ್ರಮದಿಂದ ಗೆಲುವು ದೊರೆಯುತ್ತದೆ ಎಂಬ ಸಂದೇಶ ನೀಡಿದೆ ಎಂದರು.

ಯಡಿಯೂರಪ್ಪ ಅವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸಿದ್ದೇವೆ. ಯಡಿಯೂರಪ್ಪ ಇರುವ ಬಿಜೆಪಿ ಇದು. ರಾಜ್ಯದಲ್ಲಿ ಮುಖ್ಯಮಂತ್ರಿ ನಾಯಕತ್ವ ಅಂತ ಹೇಳಿದಾರೆ. ಅಮಿತ್ ಶಾ ಸ್ಪಷ್ಟ ಸಂದೇಶ ಸಾರಿದಾರೆ ಅವರ ಆದೇಶದಂತೆ ನಾವು ಬೊಮ್ಮಾಯಿ ನಾಯಕತ್ವದಲ್ಲಿ ನಾವೆಲ್ಲರು ಒಟ್ಟಾಗಿ ಹೋಗುತ್ತೇವೆ ಎಂದರು.

ಬೆಲೆ ಏರಿಕೆ ಬೇರೆ ಬೇರೆ ಕಾರಣದಿಂದ ಹೆಚ್ಚಾಗಿದೆ. ನಾವು ಬೆಲೆ ಏರಿಕೆ ಹೆಚ್ಚಳದ ವಿರುದ್ಧ ಹೋರಾಟ ಮಾಡಿದ್ದೇವೆ. ಈಗ ನಾವು ಬೆಲೆ ಇಳಿಕೆ ಮಾಡುವ ಕೆಲಸ ಮಾಡುತ್ತಿದ್ದೇವೆ. ಕೇಂದ್ರ ಸರ್ಕಾರ ಬೆಲೆ ನಿಯಂತ್ರಣ ಮಾಡಲು ಕ್ರಮ ಕೈಗೊಳ್ಳುತ್ತಿದೆ. ಕೋವಿಡ್ ಲಸಿಕೆ ಉಚಿತ ಕೊಟ್ಟಿದೆ. 20 ಕೆಜಿ ಅಕ್ಕಿ ಉಚಿತವಾಗಿ ನೀಡಿದೆ. ಜಗತ್ತಿನ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ದೇಶದಲ್ಲಿ ಆರ್ಥಿಕ ಪರಿಸ್ಥಿತಿ ಚೆನ್ನಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು.

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.