ರೇಷ್ಮೆ ಬೆಲೆ ಹೆಚ್ಚಳ: ಸಂಕಷ್ಟದಲ್ಲಿ ರೇಷ್ಮೆ ಉದ್ಯಮ

ರಾಜ್ಯದಲ್ಲಿ 25 ಮೆಟ್ರಿಕ್‌ ಟನ್‌ಗೆ ಬೇಡಿಕೆ; ರೇಷ್ಮೆ ಉತ್ಪಾದನೆ 22 ಮೆಟ್ರಿಕ್‌ ಟನ್‌ ; ಇಳುವರಿ ಕುಸಿತ

Team Udayavani, Sep 8, 2021, 3:44 PM IST

ರೇಷ್ಮೆ ಬೆಲೆ ಹೆಚ್ಚಳ: ಸಂಕಷ್ಟದಲ್ಲಿ ರೇಷ್ಮೆ ಉದ್ಯಮ

ದೊಡ್ಡಬಳ್ಳಾಪುರ: ಕೋವಿಡ್‌ ಸಂಕಷ್ಟ, ರೇಷ್ಮೆ ಬೆಲೆ ವಿಪರೀತ ಏರಿಕೆ ಹಾಗೂ ಮಾರುಕಟ್ಟೆ ವೈಪರಿತ್ಯಗಳಿಂದಾಗಿ ರೇಷ್ಮೆ ಬಟ್ಟೆ ತಯಾರಿಕೆ ದಿನೇ ದಿನೇ ಇಳಿಮುಖವಾಗುತ್ತಿದ್ದು, ರೇಷ್ಮೆ ಬಟ್ಟೆ ತಯಾರಕರು ನಷ್ಟ ಸಿಲುಕಿದ್ದಾರೆ.

ದೊಡ್ಡಬಳ್ಳಾಪುರ ನಗರದಲ್ಲಿ ಸುಮಾರು 20 ಸಾವಿರ ಮಗ್ಗಗಳಿದ್ದು, ಶೇ.10 ಭಾಗ ಮಾತ್ರ ರೇಷ್ಮೆ ಬಟ್ಟೆ ತಯಾರಿಕೆ ನಡೆಯುತ್ತಿದೆ.ಸಾಧಾರಣ ವಾಗಿ 2.5 ಸಾವಿರ ರೂಗಳಿದ್ದ ಕಚ್ಚಾ ರೇಷ್ಮೆ ಬೆಲೆ ಈಗ 3.5 ಸಾವಿರ ದಾಟಿದ್ದು,ಸಿದ್ದ ಹುರಿ ರೇಷ್ಮೆ 4 ಸಾವಿರ ರೂ ದಾಟಿದೆ. ಚೈನಾ ರೇಷ್ಮೆ5 ಸಾವಿರ ದಾಟಿದೆ. ಆದರೆ ಇದಕ್ಕೆ ಪೂರಕವಾಗಿ ಬಟ್ಟೆ ಬೆಲೆ ಮಾತ್ರ ಹೆಚ್ಚಾಗಿಲ್ಲ.

ಈಗಾಗಲೇ ಬಹಳಷ್ಟು ಮಂದಿ ಉದ್ಯೋಗ ತೊರೆದಿದ್ದು, ರೇಷ್ಮೆ ಬಟ್ಟೆ ತಯಾರಿಸುವವರು ಬೆರಳೆಣಿಕೆ ಮಂದಿಯಾಗಿದ್ದಾರೆ. ಹಂತ ಹಂತವಾಗಿ ಅವರೂ ವಿದಾಯ ಹೇಳುವ ಹಂತದಲ್ಲಿದ್ದಾರೆ.

ಕುಸಿಯುತ್ತಿರುವ ರೇಷ್ಮೆ ಇಳುವರಿ : ರೇಷ್ಮೆ ಬೆಳೆಯಲು ಬೇಕಾದ ಇಪ್ಪು ನೇರಳೆ ಬೇಸಾಯ ರಾಜ್ಯದಲ್ಲಿ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ. ದಶಕದ ಹಿಂದೆ 90 ಸಾವಿರ ಹಕ್ಟೇರ್‌ ಇದ್ದ ರೇಷ್ಮೆ ಕೃಷಿ ಬೇಸಾಯ ಕಳೆದ ವರ್ಷದಲ್ಲಿ 60 ಸಾವಿರಕ್ಕೆ ಇಳಿದಿದೆ. ದೇಶದ ಶೇ.70
ಪಾಲು ರೇಷ್ಮೆ ಉತ್ಪಾದನೆಯಾಗುತ್ತಿದ್ದ ರಾಜ್ಯದಲ್ಲಿ ಉತ್ಪಾದನೆ ವರ್ಷದಿಂದ ವರ್ಷಕ್ಕೆ ಕುಸಿಯುತ್ತಿದೆ.

ಇತ್ತೀಚಿನ ದಿನಗಳಲ್ಲಿ ರೈತರು ರೇಷ್ಮೆ ಕೃಷಿಯಿಂದ ವಿಮುಖರಾಗುತ್ತಿರುವುದರಿಂದ ಅಗತ್ಯವಿರು ವಷ್ಟು ರೇಷ್ಮೆ ಸರಬರಾಜಾಗುತ್ತಿಲ್ಲ. ರಾಜ್ಯದಲ್ಲಿ ಅಗತ್ಯವಿರುವುದು 25 ಮೆಟ್ರಿಕ್‌ ಟನ್‌ಗಳಷ್ಟು. ಆದರೆ 22ಮೆಟ್ರಿಕ್‌ ಟನ್‌ ರೇಷ್ಮೆ ಮಾತ್ರ ಉತ್ಪಾದನೆಯಾಗುತ್ತಿದೆ. ರಾಜ್ಯದಲ್ಲಿ ರೇಷ್ಮೆ ಹೆಚ್ಚು ಬೆಳೆಯುವ ಚಿಕ್ಕಬಳ್ಳಾಪುರ, ಕೋಲಾರ, ಶಿಡ್ಲಗಟ್ಟ, ರಾಮನಗರ, ಮಳವಳ್ಳಿಯ ತಳಗವಾದಿ ಮೊದಲಾದ ಪ್ರದೇಶಗಳಲ್ಲಿಯೂ ರೇಷ್ಮೆ
ಇಳುವರಿ ಕಡಿಮೆಯಾಗುತ್ತಿದೆ.

ಇದನ್ನೂ ಓದಿ:ಅನುಶ್ರೀ ಹೇರ್ ಟೆಸ್ಟ್ ಏಕೆ ಮಾಡಿಸಿಲ್ಲ : ಇಂದ್ರಜೀತ್ ಲಂಕೇಶ್

ಕೋವಿಡ್‌-19 ಲಾಕ್‌ಡೌನ್‌ ಹಾಗೂ ಸಭೆ ಸಮಾರಂಭಗಳಿಗೆ ನಿರ್ಬಂಧಕಾರಣದಿಂದಾಗಿ ರೇಷ್ಮೆ ಸೀರೆಗಳ ಮಾರಾಟ ತೀವ್ರವಾಗಿ ಕುಸಿದಿದೆ. ಸೀರೆಗಳಿಗೆ ಸೂಕ್ತ ಬೆಲೆಯಿಲ್ಲದೇ ಸಹಸ್ರಾರು ಸೀರೆಗಳುದಾಸ್ತಾನಾಗುತ್ತಿದ್ದು ರೇಷ್ಮೆ ಬಟ್ಟೆ ತಯಾರಕರುಕಂಗಾಲಾಗಿದ್ದಾರೆ.ಕೋವಿಡ್‌ ಸಂಕಷ್ಟ ಉದ್ಬವಿಸುವುದಕ್ಕೂ ಮುನ್ನವೇ ಗಗನಕ್ಕೇರಿದ ರೇಷ್ಮೆ ಬೆಲೆ, ನೇಯ್ದ ಬಟ್ಟೆಗೆ ಸೂಕ್ತ ಮಾರುಕಟ್ಟೆ ಬೆಲೆ ಇಲ್ಲದೇ ನೇಯ್ಗೆ ಉದ್ಯಮ ತತ್ತರಿಸುತ್ತಿದೆ.

ಸಹಸ್ರಾರು ಸೀರೆಗಳ ದಾಸ್ತಾನು : ರೇಷ್ಮೆ ನೂಲಿನ ಬೆಲೆ ಏರಿಕೆಗೆ ಅನುಗುಣವಾಗಿ ಬಟ್ಟೆಗಳಿಗೆ ಬೆಲೆ ಇಲ್ಲ. ರೇಷ್ಮೆ ಸೀರೆಗಳ ಖರೀದಿದಾರರು ಕಡಿಮೆ ಬೆಲೆಗೆ ಕೇಳಲಾರಂಭಿಸಿದ್ದಾರೆ. ನೇಕಾರರು ವಿಧಿಯಿಲ್ಲದೇ ಮನೆಗಳಲ್ಲಿಯೇ ಸೀರೆಗಳನ್ನು ದಾಸ್ತಾನು ಮಾಡುವ ಪರಿಸ್ಥಿತಿ ಒದಗಿ ಬಂದಿದ್ದು, ಬಹುತೇಕ ಎಲ್ಲಾ ರೇಷ್ಮೆ ಉದ್ಯಮಿಗಳ ಮನೆಗಳಲ್ಲಿ ಅವರ ಸುಸ್ಥಿತಿಗನುಸಾರವಾಗಿ ದಾಸ್ತಾನು ಮಾಡುತ್ತಿದ್ದಾರೆ. ವಾರ್ಪುಗಳನ್ನು ಹಾಕಿಸಿ ಅದನ್ನು ನೇಯಿಸಿದರೆ ನಷ್ಟ ಎಂದು ಅಲ್ಲಿಗೇ ನಿಲ್ಲಿಸಿರುವ ನೇಕಾರರು ಇದ್ದಾರೆ. ಇನ್ನು ಹಲವು ನೇಕಾರರು ರೇಷ್ಮೆ ಉದ್ಯಮದಿಂದ ಆರ್ಟ್‌ ಸಿಲ್ಕ್, ಪಾಲಿಯಸ್ಟರ್‌ ನೂಲಿನ ಸೀರೆಗಳ ಉತ್ಪಾದನೆಗೆ ವಾಲಿದ್ದು ಇದು ನೇಕಾರರಲ್ಲಿಯೇ ಸ್ಪರ್ಧೆ ಏರ್ಪಡಲು ಕಾರಣವಾಗುತ್ತಿದೆ.

ಅವಲಂಬಿತ ಉದ್ಯಮಗಳಿಗೆ ಹೊಡೆತ: ರೇಷ್ಮೆ ಸೀರೆಗಳ ತಯಾರಿಕೆ ಕುಸಿತವಾಗುತ್ತಿರುವುದರಿಂದ ನೇಕಾರಿಕೆಯನ್ನು ಅವಲಂಬಿಸಿರುವ ಹುರಿಮಿಷನ್‌, ರೇಷ್ಮೆ ಬಣ್ಣ ಮಾಡುವ ಮಾಲಿಕರು, ಹಾಗೂಕಾರ್ಮಿಕರಿಗೆ ರೇಷ್ಮೆ ರೀಲರ್‌ಗಳ ಕೆಲಸಕ್ಕೂ ಹೊಡೆತ ಬಿದ್ದಿದೆ. ಈ ಘಟಕಗಳಲ್ಲಿಯೂ ಕೆಲಸವಿಲ್ಲದಂತಾಗಿದೆ. ರೇಷ್ಮೆ ನಗರ ಎಂದು ಇಡೀ ರಾಜ್ಯದಲ್ಲಿಯೇ ಹೆಸರುವಾಸಿಯಾಗಿದ್ದ ದೊಡ್ಡಬಳ್ಳಾಪುರಕ್ಕೆ ಸ್ವಾಗತ ನೀಡುವ ಕಮಾನು ಗಳು ಮುಂದೆ ಅರ್ಥ ಕಳೆದುಕೊಂಡರೂ ಅಚ್ಚರಿಯಿಲ್ಲ.

ರೇಷ್ಮೆ ಬಟ್ಟೆ ತಯಾರಿಕೆ ಮೇಲೆ ಪರಿಣಾಮ
ರೇಷ್ಮೆ ತಯಾರಿಕೆಕಡಿಮೆಯಾಗಿ ಬೆಲೆ ಏರಿಕೆಯಾಗಿರುವ ಪರಿಣಾಮ ದೊಡ್ಡಬಳ್ಳಾಪುರದಲ್ಲಿ ರೇಷ್ಮೆ ಬಟ್ಟೆ ತಯಾರಿಸುವವರ ಸಂಖ್ಯೆ ಕಡಿಮೆ ಯಾಗುತ್ತಿದೆ. ಸಿದ್ಧ ರೇಷ್ಮೆ ಒಂದು ಗ್ರಾಂಗೆ5.5 ರೂ.ಗಳಾಗಿದ್ದು ರೇಷ್ಮೆ ಚಿನ್ನದಂತಾಗಿದೆ.ಕಚ್ಚಾ ಮಾಲಿನ ಬೆಲೆ ಹೆಚ್ಚಾದರೂ ನೇಯ್ದ ಬಟ್ಟೆಗೆ ಸೂಕ್ತ ಬೆಲೆ ಸಿಕ್ಕರೆ ಪರವಾಗಿಲ್ಲ. ಆದರೆ ಒಂದು ಉತ್ತಮ ಮಟ್ಟದ ರೇಷ್ಮೆ ಸೀರೆಗೆ ಸುಮಾರು200 ರೂ.ಗಳು ನಷ್ಟವಾಗುತ್ತಿದೆ ಎನ್ನುತ್ತಾರೆ ರೇಷ್ಮೆ ನೇಕಾರ ವೆಂಕಟೇಶ್‌.

ಉತ್ತರ ಭಾರತದ ಮಾರುಕಟ್ಟೆಯಿಲ್ಲ:ವಿಶೇಷವಾಗಿ ದೊಡ್ಡಬಳ್ಳಾಪುರದಲ್ಲಿ ನೇಯುವ ಕಡಿಮೆ ತೂಕದ ನಮೂನೆಯ ರೇಷ್ಮೆ ಸೀರೆಗಳು ಉತ್ತರ ಭಾರತದಲ್ಲಿ ಹೆಚ್ಚು ಮಾರಾಟವಾಗುತ್ತ ದೆ. ಕೋವಿಡ್‌-19 ಪರಿಣಾಮ ಎಲ್ಲೆಡೆ ಶುಭ ಸಮಾರಂಭಗಳಿಗೆ ನಿರ್ಬಂಧ ಹೇರಿದ್ದರಿಂದ, ವ್ಯಾಪಾರ ಕುಸಿದಿದ್ದು, ಇನ್ನೂ ಚೇತರಿಸಿ ಕೊಂಡಿಲ್ಲ ಎನ್ನುತ್ತಾರೆ ರೇಷ್ಮೆ ಸೀರೆಗಳ ಉದ್ಯಮಿ ರಮೇಶ್‌.

-ಡಿ.ಶ್ರೀಕಾಂತ

ಟಾಪ್ ನ್ಯೂಸ್

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

Siddaramaiah ಚುನಾವಣೆ ನಂತರ ನಮ್ಮೊಂದಿಗೆ ಬರುತ್ತಾರೆ: ರಮೇಶ ಜಾರಕಿಹೊಳಿ

6-

Modi ಒಬ್ಬ ಸುಳ್ಳುಗಾರ: ಸಚಿವ ಸಂತೋಷ್ ಲಾಡ್ ಆರೋಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

ಭಟ್ಕಳ: ದಿನೇ ದಿನೇ ಏರುತ್ತಿದೆ ತಾಪ-ನೀರಿಗಾಗಿ ಜನರ ಪರಿತಾಪ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.