ಕಂದು ರೋಗ ನಿಯಂತ್ರಣಕ್ಕೆ ಕ್ರಮ
ಹ್ಯಾಂಡ್ ಗ್ಲೌಸ್ ಮತ್ತು ಮಾಸ್ಕ್ ಧರಿಸಿ ಸುರಕ್ಷತೆಯಿಂದ ಲಸಿಕೆ ಹಾಕಬೇಕು
Team Udayavani, Sep 8, 2021, 6:09 PM IST
ಬೀದರ: ಜಾನುವಾರುಗಳಲ್ಲಿ ಕಂದು ರೋಗ ನಿಯಂತ್ರಣ ಅತೀ ಅವಶ್ಯಕತೆ ಇದೆ ಎನ್ನುವಂತಹ ವಿಷಯಗಳ ಬಗ್ಗೆ ರೈತರಿಗೆ ತಿಳಿಸಿ, ಅವರ ಮನವೊಲಿಸಿ ಲಸಿಕೆ ಕಡ್ಡಾಯ ಹಾಕಿಸಬೇಕು. ಪಶು ವೈದ್ಯರು ಹಳ್ಳಿಗಳಿಗೆ ಬಂದಾಗ ರೈತರು ಲಸಿಕಾಕರಣಕ್ಕೆ ಸಹಕರಿಸಬೇಕು ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ ಮನವಿ ಮಾಡಿದರು.
ನಗರದ ಜಿಪಂ ಕಚೇರಿ ಸಭಾಂಗಣದಲ್ಲಿ ರಾಜ್ಯಮಟ್ಟದ ಕಂದುರೋಗ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸುವುದಕ್ಕೆ ಸಂಬಂಧಿಸಿದಂತೆ ಕಲಬುರಗಿ ವಿಭಾಗದ ಆರು ಜಿಲ್ಲೆಗಳ ಪಶುಪಾಲನಾ ಇಲಾಖೆ ಅಧಿಕಾರಿಗಳನ್ನೊಳಗೊಂಡ ವಿಭಾಗೀಯ ಮಟ್ಟದ ಕಾರ್ಯಾಗಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರೈತರಿಗೆ ಆರ್ಥಿಕ ನಷ್ಟ ಉಂಟು ಮಾಡುವ ಹಾಗೂ ಪ್ರಾಣಿ ಜನ್ಯ ಮಾನವ ರೋಗದ ಬಗ್ಗೆ ಮೊದಲು ಪಶುಪಾಲನಾ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾಹಿತಿ ಇರಬೇಕು. ಗಂಡು ಕರುಗಳಿಗೆ ಈ ಲಸಿಕೆ ಹಾಕಿಸಬಾರದು ಎನ್ನುವಂತಹ ವಿಶೇಷ ಮುನ್ನೆಚ್ಚರಿಕೆಯ ಕ್ರಮಗಳ ಪಾಲನೆಗೆ ಒತ್ತು ಕೊಡಬೇಕು ಎಂದರು.
ಬೀದರ ಜಿಲೆಯಲ್ಲಿ ಇರುವ ಎಲ್ಲ ಒಟ್ಟು 25,000 ಹೆಣ್ಣು ಕರುಗಳನ್ನು ಕಡ್ಡಾಯವಾಗಿ ಲಸಿಕೆಗೊಳಪಡಿಸಬೇಕು. ಇದು ಮನುಷ್ಯರಿಗೂ ಹರಡುವ ಸಾಧ್ಯತೆ ಇರುವುದರಿಂದ ಲಸಿಕಾದಾರರು ಕೂಡ ಕಡ್ಡಾಯ ಹ್ಯಾಂಡ್ ಗ್ಲೌಸ್ ಮತ್ತು ಮಾಸ್ಕ್ ಧರಿಸಿ ಸುರಕ್ಷತೆಯಿಂದ ಲಸಿಕೆ ಹಾಕಬೇಕು ಎಂದು ಸಚಿವರು ಸಲಹೆ ಮಾಡಿದರು.
ಅಪರ ನಿರ್ದೇಶಕ ಡಾ| ತಿಪ್ಪೇಸ್ವಾಮಿ ಮಾತನಾಡಿ, ಪ್ರತಿಬಂಧಕೋಪಾಯವಾಗಿ 4-8 ತಿಂಗಳು ಪ್ರಾಯದ ಹಸು ಮತ್ತು ಎಮ್ಮೆಗಳ ಹೆಣ್ಣು ಕರುಗಳಿಗೆ ತಪ್ಪದೇ ಜೀವನದಲ್ಲಿ ಒಮ್ಮೆ ಮಾತ್ರವೇ ಲಸಿಕೆ ಹಾಕಿಸುವುದರಿಂದ ಜಾನುವಾರುಗಳ ಹಿಂಡಿನಲ್ಲಿ ರೋಗ ಪ್ರತಿಬಂಧಕ ಶಕ್ತಿ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂಬುದನ್ನು ರೈತರು ಅರಿಯಬೇಕು ಎಂದು ತಿಳಿಸಿದರು.
ಕಾರ್ಯಾಗಾರದಲ್ಲಿ ಕಂದು ರೋಗ ಎಂದರೇನು?, ಅದನ್ನು ತಡೆಗಟ್ಟುವ ರೀತಿ ಹೇಗೆ?, ವಹಿಸಬೇಕಾದ ಮುನ್ನೆಚ್ಚರಿಕೆ ಕ್ರಮಗಳು ಏನು? ಎಂಬುದರ ಬಗ್ಗೆ ಕಾರ್ಯಾಗಾರದಲ್ಲಿ ಸಮಗ್ರ ಚರ್ಚಿಸಲಾಯಿತು. ಕಂದು ರೋಗವು ಹಸು, ಎಮ್ಮೆ, ಕುರಿ, ಮೇಕೆ, ಹಂದಿ, ನಾಯಿ, ಒಂಟೆ ಮತ್ತು ಕುದುರೆ ಮುಂತಾದ ಪ್ರಾಣಿಗಳಲ್ಲಿ ಕಂಡು ಬರುವ ಮಾರಕ ರೋಗವಾಗಿದೆ. ಈ ರೋಗದಿಂದ ಜಾನುವಾರುಗಳಲ್ಲಿ ಗರ್ಭಪಾತ, ಅನಾರೋಗ್ಯ, ಉತ್ಪಾದನೆಯಲ್ಲಿ ಕುಸಿತ ಹಾಗೂ ಬಂಜೆತನ ಉಂಟಾಗಿ ಪಶುಪಾಲಕರಿಗೆ ನಷ್ಟ ಉಂಟುಮಾಡುತ್ತದೆ ಎಂಬುದನ್ನು ರೈತಬಾಂಧವರಿಗೆ ತಿಳಿಸಿ ಅಭಿಯಾನಕ್ಕೆ ಸಹಕರಿಸಬೇಕು ಎಂಬುದರ ಬಗ್ಗೆ
ಕಾರ್ಯಾಗಾರದಲ್ಲಿ ಚರ್ಚಿಸಲಾಯಿತು.
ಇಲಾಖೆಯ ಬೀದರ ಉಪ ನಿರ್ದೇಶಕ ಡಾ| ರವಿ ಬೂರೆ ಮಾತನಾಡಿದರು. ಉಪ ನಿರ್ದೇಶಕರಾದ ಕಲಬುರಗಿ ಡಾ| ಬಿ.ಎಸ್. ಪಾಟೀಲ, ರಾಯಚೂರಿನ ಡಾ| ಶಿವಣ್ಣ, ಬಳ್ಳಾರಿಯ ಪರಮೇಶ್ವರ ನಾಯ್ಕ ಮತ್ತು ಇನ್ನಿತರರು ಇದ್ದರು.
ಕಂದುರೋಗ ಮುಕ್ತವಾಗಿರುವಹಿಂಡಿನಿಂದಲೇ ಹಸುಗಳನ್ನು ಖರೀದಿಸಬೇಕು. ಹೊಸದಾಗಿ ಖರೀದಿಸಿದರಾಸುವನ್ನು ಕನಿಷ್ಠ 30 ದಿನಗಳವರೆಗೆ ಉಳಿದ ರಾಸುಗಳಿಂದ ದೂರವಿರಿಸಬೇಕು. ಕಂದುರೋಗ ಇರಬಹುದೆಂದು ಸಂಶಯಿಸಿದ ಸಂದರ್ಭಗಳಲ್ಲಿ ಪ್ರಯೋಗಾಲಯಕ್ಕೆ ಮಾದರಿ ಕಳುಹಿಸಿ ರೋಗದ ಬಗ್ಗೆ ಖಚಿತಪಡಿಸಿಕೊಳ್ಳಬೇಕು ಅಥವಾ ರೋಗ ಪತ್ತೆಗೆ ಕಾಲಕಾಲಕ್ಕೆ ಹಾಲಿನ ಪರೀಕ್ಷೆ ಮಾಡಿಸಬೇಕು. ಜಾನುವಾರುಗಳ ಪ್ಲಾಸ್ಟೀಕರಿಸದ ಹಾಲು ಮತ್ತು ಹಾಲಿನ ಉತ್ಪನ್ನಗಳ ಸೇವನೆಯಿಂದಮಾನವರಿಗೂಈ ರೋಗವು ಹರಡುವ ಸಾಧ್ಯತೆಇರುತ್ತದೆ.
ಡಾ| ಮಂಜುನಾಥ ಪಾಳೆಗಾರ, ಪಶು ಇಲಾಖೆ ನಿರ್ದೇಶಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಹೃದಯಘಾತದಿಂದ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯದಲ್ಲಿದ್ದ ಅಧಿಕಾರಿ ಮೃತ್ಯು…
Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ
Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್ ರೇವಣ್ಣನಂಥವರಾ?; ಜಿಗ್ನೇಶ್
Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ
MUST WATCH
ಹೊಸ ಸೇರ್ಪಡೆ
T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್ ಗೆಲುವು: 4-0 ಮುನ್ನಡೆ
Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ
Pakistan ಟಿ20 ವಿಶ್ವಕಪ್ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್ ಬಹುಮಾನ
Table Tennis Star; ಬಾಳ್ವೆಯ ದೊಡ್ಡ ಗೆಲುವು ದಾಖಲಿಸಿದ ಮನಿಕಾ ಬಾತ್ರ
Lok Sabha Election ಹಂತ 2: ಮತದಾನದ ಹಕ್ಕು ಚಲಾವಣೆಗೆ ಸಕಲ ಸಿದ್ಧತೆ