ಗೋಹತ್ಯೆ ನಿಷೇಧ ಕಾಯ್ದೆ: ನ.15ರಂದು ಅಂತಿಮ ವಿಚಾರಣೆ
Team Udayavani, Sep 8, 2021, 10:30 PM IST
ಬೆಂಗಳೂರು: ಸರಕಾರ ಜಾರಿಗೆ ತಂದಿರುವ “ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣ ಕಾಯ್ದೆ-2020’ರ ಸಿಂಧುತ್ವ ಪ್ರಶ್ನಿಸಿ ಸಲ್ಲಿಕೆಯಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ಅಂತಿಮ ವಿಚಾರಣೆಯನ್ನು ಹೈಕೋರ್ಟ್ ನ.15ಕ್ಕೆ ನಿಗದಿಪಡಿಸಲಾಗಿದೆ.
ಕಾಯ್ದೆಯನ್ನು ಪ್ರಶ್ನಿಸಿ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್, ಕೆಲವು ಕಸಾಯಿ ಖಾನೆ ಮಾಲಕರು ಮತ್ತು ಗೋಮಾಂಸ ಮಾರಾಟಗಾರರು ಸಲ್ಲಿಸಿರುವ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಹಂಗಾಮಿ ಮುಖ್ಯ ನ್ಯಾ| ಸತೀಶ್ ಚಂದ್ರ ಶರ್ಮ ನೇತೃತ್ವದ ವಿಭಾಗೀಯ ನ್ಯಾಯಪೀಠದ ಮುಂದೆ ಬುಧವಾರ ವಿಚಾರಣೆಗೆ ಬಂದ್ದಿದವು.
ಈ ವೇಳೆ ಸರಕಾರದ ಪರ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ ಹಾಜರಾಗಿ, ಅರ್ಜಿಗಳ ಅಂತಿಮ ವಿಚಾರಣೆಗೆ ದಿನಾಂಕವನ್ನು ಸೆ.8ರಂದು ನಿಗದಿಪಡಿಸಲಾಗುವುದು ಎಂದು ಆ.26ರಂದು ಹೈಕೋರ್ಟ್ ತಿಳಿಸಿತ್ತು. ಅದರಂತೆ ಅರ್ಜಿಗಳನ್ನು ಅಂತಿಮ ವಿಚಾರಣೆಗೆ ನಿಗದಿಪಡಿಸಬೇಕಿದೆ ಎಂದು ತಿಳಿಸಿದರು.
ಇದನ್ನೂ ಓದಿ:ಜೆಡಿಎಸ್ ಬೆಂಬಲ ಕೋರಿಕೆ, ಸಿದ್ದರಾಮಯ್ಯ ಅಸಮಾಧಾನ?
ಆಗ ಮಧ್ಯಂತರ ಅರ್ಜಿದಾರರೊಬ್ಬರ ಪರ ವಕೀಲರು, ಕಾಯ್ದೆಯನ್ನು ಜಾರಿ ಮಾಡಲು ನಿರ್ದೇಶಿಸಲು ಕೋರಿ ಮಧ್ಯಂತರ ಅರ್ಜಿ ಸಲ್ಲಿಸಲಾಗಿದೆ. ಅದನ್ನು ವಿಚಾರಣೆಗೆ ಪರಿಗಣಿಸಬೇಕು ಎಂದು ಕೋರಿದರು.
ಅದಕ್ಕೆ ಅಡ್ವೋಕೇಟ್ ಜನರಲ್ ಪ್ರತಿಕ್ರಿಯಿಸಿ, ಎಲ್ಲಾ ಅರ್ಜಿಗಳು ಮತ್ತು ಮಧ್ಯಂತರ ಅರ್ಜಿಗಳನ್ನು ಒಟ್ಟಿಗೆ ವಿಚಾರಣೆ ಮಾಡಲಾಗುವುದು ಎಂದು ಹೈಕೋರ್ಟ್ ಈ ಹಿಂದೆ ಸ್ಪಷ್ಟಪಡಿಸಿತ್ತು ಎಂದು ನ್ಯಾಯಪೀಠದ ಗಮನಕ್ಕೆ ತಂದರು. ಅದಕ್ಕೆ ಒಪ್ಪಿದ ನ್ಯಾಯಪೀಠ, ಎಲ್ಲಾ ಅರ್ಜಿಗಳ ಅಂತಿಮ ವಿಚಾರಣೆಯನ್ನು ನ.15ಕ್ಕೆ ನಿಗದಿಪಡಿಸಿ ವಿಚಾರಣೆ ಮುಂದೂಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ