ಚನ್ನರಾಯಪಟ್ಟಣ: ಗೌರಿ, ಗಣೇಶೋತ್ಸವಕ್ಕೆ ಸಕಲ ಸಿದ್ಧತೆ


Team Udayavani, Sep 9, 2021, 4:41 PM IST

ಚನ್ನರಾಯಪಟ್ಟಣ: ಗೌರಿ, ಗಣೇಶೋತ್ಸವಕ್ಕೆ ಸಕಲ ಸಿದ್ಧತೆ

ಚನ್ನರಾಯಪಟ್ಟಣ: ಗೌರಿ-ಗಣೇಶ ಹಬ್ಬ ಹಿನ್ನೆಲೆಯಲ್ಲಿ ಪಟ್ಟಣದ ರಸ್ತೆ ಬದಿ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸಾವಿರಾರು ವಿಘ್ನ ವಿನಾಯಕ ಮೂರ್ತಿ ಮಾರಾಟಕ್ಕೆ ಕಲಾವಿದರು ಮುಂದಾಗಿದ್ದಾರೆ.

ಆತಂಕದಲ್ಲಿ ಇದ್ದ ಕಲಾವಿದರು:6 ತಿಂಗಳಿನಿಂದ ಜೇಡಿಮಣ್ಣಿನ ಮೂರ್ತಿ ತಯಾರು ಮಾಡುವ ತಾಲೂಕಿನ ಹಲವು ಮಂದಿ ಕಲಾವಿದರಿಗೆ ಸಾಕಷ್ಟು ಆತಂಕ ಉಂಟಾಗಿತ್ತು. ಸಕಾರ ಷರತ್ತುಬದ್ಧ ಹಬ್ಬ ಆಚರಣೆಗೆ ಅನುಮತಿ ನೀಡಿದ್ದರಿಂದ ಕಲಾವಿದರು ನಿಟ್ಟುಸಿರು ಬಿಟ್ಟಿದ್ದು ತಾವು ತಯಾರಿಸಿದ ಮೂರ್ತಿಯನ್ನು ಮಾರುಕಟ್ಟೆಗೆ ರವಾನೆ ಮಾಡಿದ್ಧಾರೆ.

ಪರಿಸರ ಸ್ನೇಹಿಗೆ ಹೆಚ್ಚು ಆಸಕ್ತಿ: ತಾಲೂಕಿನ ವಿವಿಧ ಬಡಾವಣೆಯಲ್ಲಿ ಕಲಾವಿದರು ಜೇಡಿಮಣ್ಣಿನ ಗಣೇಶ ಮೂರ್ತಿಯನ್ನು ತಯಾರಿಸಿದ್ದು ಭರ್ಜರಿ ಮಾರಾಟ ನಡೆಯುತ್ತಿದೆ. ಕಳೆದೆಲ್ಲಾ ವರ್ಷಕ್ಕೆ ಹೋಲಿಸಿದರೆ ಪ್ರಸಕ್ತ ವರ್ಷ ಪರಿಸರ ಸ್ನೇಹಿ ಜೇಡಿಮಣ್ಣಿನ ಗಣಪತಿ ಮೂರ್ತಿ ತಯಾರಿಕೆ ಹೆಚ್ಚಾಗಿದೆ. ಅಲ್ಲದೇ, ಖರೀದಿಯೂ ಗಣನೀಯವಾಗಿ ಹೆಚ್ಚಳವಾಗುತ್ತಿದೆ.

ವಿವಿಧ ಜಿಲ್ಲೆಗೆ ರವಾನೆ: ತಾಲೂಕುಕೇಂದ್ರದಲ್ಲಿ ಜೇಡಿ ಮಣ್ಣಿನಿಂದತಯಾರಾಗಿರುವ ವಿನಾಯಕ ಮೂರ್ತಿ ತಾಲೂಕಿನ ಆರು ಹೋಬಳಿ ಕೇಂದ್ರ ಗಳಲ್ಲಿ ಮಾತ್ರ ಮಾರಾಟವಾಗದೆ, ತಿಪಟೂರು, ಕೃಷ್ಣರಾಜಪೇಟೆ, ನಾಗಮಂಗಲ, ತುಮಕೂರು, ಮೈಸೂರು, ಮಂಡ್ಯ ಶಿವಮೊಗ್ಗ, ಬೆಳಗಾವಿ, ಹಾಸನ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ತಾಲೂಕು ಹಾಗೂ ಜಿಲ್ಲಾಕೇಂದ್ರಕ್ಕೆ ಈಗಾಗಲೇ ರವಾನೆ ಆಗಿವೆ.

ಇದನ್ನೂ ಓದಿ:ಪರವಾನಿಗೆ ಪಡೆದರೂ ಗಣಪತಿ ಪೆಂಡಾಲ್ ಕಿತ್ತ ವ್ಯವಸ್ಥೆ ವಿರುದ್ಧ ಹಿಂದೂಪರ ಸಂಘಟನೆಗಳ ಪ್ರತಿಭಟನೆ

100 ರೂ.ನಿಂದ ಸಾವಿರ ರೂ.ವರೆಗೆ:ಕನಿಷ್ಠ100 ರೂ.ಗಳಿಂದ ಸಾವಿರ ರೂ. ಮೌಲ್ಯದ ವಿಘ್ನೇಶ್ವರ ಮೂರ್ತಿಗಳು ದೊರೆಯುತ್ತಿವೆ. ಗ್ರಾಹಕರು ಇಂತಹದ್ದೇ ವಿನ್ಯಾಸದ ಮೂರ್ತಿಗಾಗಿ ಮುಂಚಿತವಾಗಿ ಬೇಡಿಕೆ ಸಲ್ಲಿಸಿದ್ದು ಅವರಿಗೆ ಮೂರ್ತಿ ಸಿದ್ಧಪಡಿಸಿ ನೀಡಿದ್ದಾರೆ. ಮನೆಯಲ್ಲಿ ಪ್ರತಿಷ್ಠಾಪಿಸುವ ಮೂರ್ತಿಗಳಿಗೆ ದರಕಡಿಮೆಯಾಗಿದ್ದರೆ, ಸಾರ್ವಜನಿಕ ಮೂರ್ತಿಗಳ ಗಾತ್ರ ಮತ್ತು ವಿನ್ಯಾಸ ವಿಶಿಷ್ಟವಾಗಿ ಇರುವುದರಿಂದ ಸ್ವಲ್ಪ ಮಟ್ಟಿಗೆ ದರವೂ ಹೆಚ್ಚಾಗಿದೆ.

ರಾಜ್ಯ ಸರ್ಕಾರ ಕೋವಿಡ್‌ ಸೋಂಕು ಹಿನ್ನೆಲೆಯಲ್ಲಿ ಗಣೇಶ ಚತುರ್ಥಿಗೆ ಅವಕಾಶ ನೀಡುವುದಿಲ್ಲ ಎಂದುಕೊಂಡಿದ್ದೆವು. ಹಲವು ಮಾರ್ಗಸೂಚಿ ವಿಧಿಸಿ ವಿಘ್ನೇಶ್ವರ ಪ್ರತಿಷ್ಠಾಪನೆಗೆ ಅವಕಾಶ ನೀಡಿದೆ.ಕಳೆದ ಮೂರು ದಿನದಿಂದ ಗ್ರಾಹಕರು ಆಗಮಿಸಿ ಮೂರ್ತಿಖರೀದಿಸುತ್ತಿದ್ದಾರೆ.
-ರಮೇಶ್‌, ವಿಘ್ನೇಶ್ವರ ಮಾಡೆಲ್‌
ವರ್ಕ್ಸ್ ಮಾಲೀಕ

ಚನ್ನರಾಯಪಟ್ಟಣದಲ್ಲಿ ವಾರ್ಡ್‌ಗೆ ಒಂದು, ತಾಲೂಕಿನಲ್ಲಿ ಗ್ರಾಮಕ್ಕೆ ಒಂದರಂತೆ ಸಾರ್ವಜನಿಕರು ವಿಘ್ನೇಶ್ವರ ಮೂರ್ತಿ ಪ್ರತಿಷ್ಠಾಪನೆ, ವಿಶೇಷ ಪೂಜೆಗೆ ಅವಕಾಶಕಲ್ಪಿಸಲಾಗಿದೆ. ಮೂರ್ತಿ ಪ್ರತಿಷ್ಠಾಪಿಸಿದ 3-5 ದಿನದ ಒಳಗೆ ಮೂರ್ತಿ ವಿಸರ್ಜನೆ ಮಾಡಬೇಕು. ಸಾಂಸ್ಕೃತಿ ಕಾರ್ಯಕ್ರಮ ನಿಷೇಧಿಸಲಾಗಿದೆ.
– ಜೆ.ಬಿ.ಮಾರುತಿ, ತಹಶೀಲ್ದಾರ್‌

ಗಣ್ಯಾತಿ ಗಣ್ಯರ ಮನೆಗೆ ಗಣಪನ ಮೂರ್ತಿ
ಬೆಂಗಳೂರಿನ ಪದ್ಮನಾಭನಗರದಲ್ಲಿನ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ, ನಾಗಮಂಗಲತಾಲೂಕಿನ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠಕ್ಕೆ, ತುರುವೇಕರೆ ತಾಲೂಕಿನ ನೋಣನಕೆರೆ ಕಾಡುಸಿದ್ದೇಶ್ವರ ಮಠ, ಕುಂದೂರು ಮಹಾ ಸಂಸ್ಥಾನ ಮಠ, ಕಬ್ಬಳಿ ಕ್ಷೇತ್ರ, ತಾಲೂಕಿನಲ್ಲಿರುವ ರಂಭಾಪುರಿ ಶಾಖಮಠ, ಮಾಜಿ ಮುಖ್ಯ ಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಮಾಜಿ ಮಂತ್ರಿ ಎಚ್‌.ಡಿ.ರೇವಣ್ಣ ಅವರ ಮನೆಗೂ ಚನ್ನರಾಯಪಟ್ಟಣತಾಲೂಕಿನ ಕಲಾವಿದರು ತಯಾರಿಸಿರುವ ಜೇಡಿಮಣ್ಣಿನ ಗಣೇಶ ಮೂರ್ತಿಗಳು ಪ್ರತಿ ವರ್ಷದಂತೆಈ ಬಾರಿಯೂ
ರವಾನೆಯಾಗಿದೆ.

– ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

1-wqewqwqewqe

Telangana; ಮಳೆ ಅಬ್ಬರಕ್ಕೆ ತತ್ತರ: ಮಗು ಸೇರಿ 13 ಮಂದಿ ಮೃತ್ಯು!

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Air India: ಪೈಲಟ್‌ ಗಳ ಸಾಮೂಹಿಕ ರಜೆ-70ಕ್ಕೂ ಅಧಿಕ ಏರ್‌ ಇಂಡಿಯಾ ವಿಮಾನ ಸಂಚಾರ ರದ್ದು

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

Malpe: ತೊಟ್ಟಂ ಬೀಚ್‌ನಲ್ಲಿ ಮುಳುಗುತ್ತಿದ್ದವರ ರಕ್ಷಣೆ

1-weq-ewq

Gujarat ; ದಟ್ಟಾರಣ್ಯದಲ್ಲಿ ಒಬ್ಬ ಮತದಾರನಿಗಾಗಿ ಮತಗಟ್ಟೆ ಸ್ಥಾಪನೆ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

ಭಾರತ ಸೇರಿದಂತೆ ಜಾಗತಿಕವಾಗಿ ಕೋವಿಡ್‌ ಲಸಿಕೆ ಹಿಂಪಡೆಯುವುದಾಗಿ ಘೋಷಿಸಿದ ಆಸ್ಟ್ರಾಜೆನಿಕಾ!

1–dsdasdsad

Sirsi; ಕಾಗೇರಿ ರಿಲಾಕ್ಸ್ ಮೂಡ್: ಪಕ್ಷಿಗಳಿಗೆ ಆಹಾರ, ತೋಟ ಸುತ್ತಾಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Sandalwood: ಈತ ಊರ ಬೆಳೆಸೋ ಜಂಟಲ್‌ಮ್ಯಾನ್‌; ರಾಮನ ಅವತಾರ ಬಗ್ಗೆ ರಿಷಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ

BJP 2

Muslim ಆ್ಯಮಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್‌ ಕದ್ದ ಆಟೋ ಡ್ರೈವರ್‌ ಬಂಧನ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.