ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನದ ಅನುಭವ
Team Udayavani, Sep 11, 2021, 9:04 AM IST
ವಿಜಯಪುರ: ಜಿಲ್ಲೆಯಲ್ಲಿ ಶನಿವಾರ ಬೆಳಿಗ್ಗೆ ಮತ್ತೆ ಭೂಕಂಪದ ಅನುಭವ ಆಗಿದೆ. ಜಿಲ್ಲೆಯಲ್ಲಿ ಎರಡನೇ ಬಾರಿ ಭೂಕಂಪವಾಗಿದೆ. ಬೆ. 8-18 ರಿಂದ 8-20 ರಲ್ಲಿ ನಡುವೆ ಭೂಮಿ ಕಂಪಿಸಿದೆ.
ಹಗಲು ವೇಳೆ ಭೂಕಂಪನ ಆಗಿರುವ ಕಾರಣ ಭೂಮಿ ಕಂಪಿಸಿದ ತೀವ್ರತೆ ಹೆಚ್ಚಾಗಿ ಅನುಭವಕ್ಕೆ ಬಂದಿಲ್ಲ.
ಇದನ್ನೂ ಓದಿ:ಕುರಿಗಾಹಿಗಳನ್ನು ಬೆದರಿಸಿ ಕುರಿ ಕಳ್ಳತನ ಯತ್ನ: ಪರಾರಿಯಾಗುವ ಭರದಲ್ಲಿ ಕಳ್ಳರ ಕಾರು ಪಲ್ಟಿ!
ಕಳೆದ ಶನಿವಾರ ಮಧ್ಯ ರಾತ್ರಿ 11-47 ಹಾಗೂ 11-49 ರ ಮಧ್ಯಾವಧಿಯಲ್ಲಿ ಭೂಕಂಪನ ಸಂಭವಿಸಿದ್ದು, ಕಂಪನದ ತೀವ್ರತೆ 3.9 ಇತ್ತು ಎಂದು ಆಲಮಟ್ಟಿ ರಿಕ್ಟರ್ ಮಾಪಕದಲ್ಲಿ ದಾಖಲಾಗಿತ್ತು. ಆದರೆ ಭೂಕಂಪ ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಕೇಂದ್ರಿತವಾಗಿತ್ತು. ಇದರ ಭಾಗಶಃ ಪರಿಣಾಮ ವಿಜಯಪುರ ಜಿಲ್ಲೆಗೆ ಆಗಿದೆ. ಹೀಗಾಗಿ ಜನರು ಭಯ ಪಡುವ ಅಗತ್ಯವಿಲ್ಲ ಎಂದು ಸ್ಥಳಕ್ಕೆ ಬಂದು ಅಧ್ಯಯನ ನಡೆಸಿದ್ದ ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಘಟಕದ ಭೂಗರ್ಭ ತಜ್ಞರು ಸ್ಪಷ್ಟಪಡಿಸಿದ್ದರು.
ಹೀಗಿದ್ದೂ ಕೂಡ ವಾರದ ಅಂತರದಲ್ಲಿ ಮತ್ತೆ ಭೂಮಿ ಕಂಪಿಸುದ್ದು, ಜನರನ್ನು ಆತಂಕಕ್ಕೆ ಈಡುಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ
Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ
Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್
Vijayapura ಮರ್ಯಾದಾ ಹತ್ಯೆ: ಇಬ್ಬರಿಗೆ ಗಲ್ಲು,ಐವರಿಗೆ ಜೀವಾವಧಿ ಶಿಕ್ಷೆ
ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ