ಬಿಳಿಗಿರಿ ರಂಗನ ದೇಗುಲದಲ್ಲಿ ಅರಸರ ಫೋಟೋ ತೆರವು: ಆಕ್ರೋಶ

ನಂತರ ಕೋವಿಡ್‌ 2ನೇ ಅಲೆ ಜಿಲ್ಲೆಯಲ್ಲಿ ಇಲ್ಲಿಂದಲೇ ಆರಂಭಗೊಂಡಿತ್ತು.

Team Udayavani, Sep 13, 2021, 5:51 PM IST

ಬಿಳಿಗಿರಿ ರಂಗನ ದೇಗುಲದಲ್ಲಿ ಅರಸರ ಫೋಟೋ ತೆರವು: ಆಕ್ರೋಶ

ಯಳಂದೂರು: ತಾಲೂಕಿನ ಪ್ರಸಿದ್ಧ ಬಿಳಿಗಿರಿ ರಂಗನಬೆಟ್ಟದಲ್ಲಿ ದೇವಾಲಯದ ಆವರಣದಲ್ಲಿ ಮೈಸೂರು ಮಹಾರಾಜರ ಫೋಟೋಗಳನ್ನು ಜಿಲ್ಲಾ ಮಟ್ಟದ ಉನ್ನತ ಅಧಿಕಾರಿಯೊಬ್ಬರ ಸೂಚನೆ ಯಿಂದ ಕಳೆದ ತಿಂಗಳ ಹಿಂದೆ ತೆರವುಗೊಳಿಸಲಾಗಿದೆ ಎಂದು ದೇಗುಲದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಐತಿಹಾಸಿಕ ದೇಗುಲ: ಸಾವಿರಾರು ವರ್ಷಗಳ ಪಾರಂಪರಿಕ ಹಿನ್ನೆಲೆಯುಳ್ಳ ಬಿಳಿಗಿರಿರಂಗನಾಥ ಸ್ವಾಮಿ ದೇಗುಲದ ಕಟ್ಟಡಕ್ಕೆ ನೂರಾರು ವರ್ಷಗಳ ಐತಿಹ್ಯವಿದೆ. ಇದಕ್ಕೂ ಮೈಸೂರು ಅರಸರಿಗೂ ಅವಿನಾಭಾವ ಸಂಬಂಧವಿದೆ. ಇಲ್ಲಿಗೆ ರಸ್ತೆ ನಿರ್ಮಾಣ, ದೇಗುಲದ ನಿರ್ಮಾಣ ಮಾಡಿ ದವರು ಮೈಸೂರು ಅರಸರೇ ಎಂದು ಇತಿಹಾಸ ಹೇಳುತ್ತದೆ. ಇದರೊಂದಿಗೆ ಇಲ್ಲಿನ ರಂಗನಾಥ ಸ್ವಾಮಿ, ಅಲಮೇಲು ರಂಗನಾಯಕಿ ಹಾಗೂ ಇದರ ತಳಭಾಗದ ಗಂಗಾಧರೇಶ್ವರ ಸ್ವಾಮಿಗೆ ಲಕ್ಷಾಂತರ ರೂ. ಮೌಲ್ಯದ ರತ್ನಖಚಿತ ಚಿನ್ನಾಭರಣಗಳನ್ನುಮೈಸೂರಿನ ಅರಸರು ನೀಡಿದ್ದಾರೆ.

ದೇವಸ್ಥಾನ ಶಿಥಿಲಗೊಂಡ ಹಿನ್ನೆಲೆ 2017 ಮಾರ್ಚ್‌ನಲ್ಲಿ ಪುರಾತತ್ವ ಇಲಾಖೆ ವತಿಯಿಂದ 2.40 ಕೋಟಿ ರೂ. ವೆಚ್ಚದಲ್ಲಿ ಜೀರ್ಣೋದ್ಧಾರ ಕಾಮಗಾರಿಯನ್ನು ಶಿವಮೊಗ್ಗದ ಪರಂಪರಾ ಕನ್ಸಟ್ರಕ್ಷನ್‌ ವತಿಯಿಂದ ಆರಂಭಿಸಲಾಗಿತ್ತು. 20 ತಿಂಗಳ ಒಳಗೆಕಾಮಗಾರಿ ಮುಗಿಸಬೇಕು ಎಂಬ ಷರತ್ತು ವಿಧಿಸಲಾಗಿತ್ತಾದರೂ ಸುಮಾರು 4 ವರ್ಷದ ತರುವಾಯ ಅಂದರೆ ಇದೇ ವರ್ಷದ ಮಾ.29ರಿಂದಏ.2ರವರೆಗೆ ಕಾಮಗಾರಿಪೂರ್ಣ ಗೊಳಿಸಿ ಭಕ್ತರ ದರ್ಶನಕ್ಕೆ ಅನುವು ಮಾಡಿಕೊಡ
ಲಾಗಿತ್ತು. ನಂತರ ಕೋವಿಡ್‌ 2ನೇ ಅಲೆ ಜಿಲ್ಲೆಯಲ್ಲಿ ಇಲ್ಲಿಂದಲೇ ಆರಂಭಗೊಂಡಿತ್ತು.

ವಿಶಿಷ್ಟ ಭಾವಚಿತ್ರ: ಇಲ್ಲಿರುವ ನಾಲ್ವಡಿ ಕೃಷ್ಣರಾಜ ಒಡೆಯರ್‌, ಜಯಚಾಮರಾಜೇಂದ್ರ ಒಡೆಯರ್‌ರ ಭಾವಚಿತ್ರವೂ ತೈಲವರ್ಣ ಚಿತ್ರಗಳಾಗಿದ್ದು ಇದಕ್ಕೂ ನೂರಾರು ವರ್ಷಗಳ ಇತಿಹಾಸವಿದೆ. ಇದು ದೇಗುಲಕ್ಕೆ ಯಾರು ನೀಡಿದರು ಎಂಬುದರ ಬಗ್ಗೆ ಮಾಹಿತಿ ಇಲ್ಲ. ಇದನ್ನು ಯಾವ ಕೋನದಲ್ಲಿ ನೋಡಿದರು. ಇಬ್ಬರು ಅರಸರು ನಮ್ಮನ್ನೇ ನೋಡುತ್ತಿರುವಂತೆ ಇದನ್ನು ಚಿತ್ರಿಸಲಾಗಿದೆ. ಈ ಚಿತ್ರಗಳನ್ನು ಅಳವಡಿಸಿದ್ದ ದೇಗುಲದ ಆಡಳಿತ ವರ್ಗ ಇದಕ್ಕಿದ್ದಂತೆಯೇ ತೆರವುಗೊಳಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮತ್ತೆ ಭಾವಚಿತ್ರ ಅಳವಡಿಸಿದ ಆಡಳಿತವರ್ಗ:
ಈ ಸುದ್ದಿ ವ್ಯಾಪಿಸುತ್ತಿದ್ದಂತೆಯೇ ದೇಗುಲದ ಆಡಳಿತ ವರ್ಗ ಎಚ್ಚೆತ್ತು ಮತ್ತೆ ಇದನ್ನು ಅಲ್ಲೇ ಅಳವಡಿಸಿದ್ದಾರೆ. ಈ ಬಗ್ಗೆ ದೇಗುಲದ ಕಾರ್ಯನಿರ್ವಾಹಕ ಅಧಿಕಾರಿ ಮೋಹನ್‌ ಕುಮಾರ್‌ ಮಾಹಿತಿ ನೀಡಿ, ಇಲ್ಲಿನ ಕಲ್ಲಿನ ಕಂಬಗಳಿಗೆ ಮೈಸೂರು ಅರಸರ ಭಾವಚಿತ್ರದ ಫೋಟೋ ಅಳವಡಿಸಬೇಕಾಗಿದೆ. ಬಿಟ್‌ನಲ್ಲಿ ಕಲ್ಲು ಕೊರೆದು ಇದಕ್ಕೆ ಮೊಳೆ ಹಾಕಿ ಇದನ್ನು ಶಾಶ್ವತವಾಗಿ ಇಲ್ಲೇ ಇರುವಂತೆ ಮಾಡುವ ಸಲುವಾಗಿ ತೆರವುಗೊಳಿಸಲಾಗಿತ್ತು ಹೊರತು ಬೇರೆ ಯಾರ ಒತ್ತಡದಿಂದ ತೆರವುಗೊಳಿಸಿಲ್ಲ ಎಂದು ಮಾಹಿತಿ ನೀಡಿದರು.

ಟಾಪ್ ನ್ಯೂಸ್

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

Siddaramaiah ಎಸ್‌ಐಟಿ ಮೇಲೆ ನಂಬಿಕೆಯಿಡಿ, ಸಿಬಿಐ ತನಿಖೆ ಬೇಕಿಲ್ಲ

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

3 ದಿನ ರೇವಣ್ಣ ಭೇಟಿಗಿಲ್ಲ ಅವಕಾಶ; ಮಾಜಿ ಸಚಿವರಿಗೆ ಈಗ ಬೆನ್ನು ನೋವು

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ

ಪತ್ರಕರ್ತರ ಜತೆ ದೇವರಾಜೇಗೌಡ ಮಾತನಾಡಿದ ಆಡಿಯೋ ಬಹಿರಂಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Gundlupete ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳ ಸಾವು

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

Bandipura ಅರಣ್ಯಕ್ಕೆ ಬೆಂಕಿ ಹಚ್ಚಿದ್ದ ಪ್ರಕರಣ: ಅರಣ್ಯಾಧಿಕಾರಿಗಳಿಂದ ಓರ್ವ ಆರೋಪಿಯ ಬಂಧನ

3-kollegala

Kollegala: ಖಾಸಗಿ ಬಸ್ ಡಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

1-ewqeqwqewq

Gundlupete; ಸತತ‌ 25 ದಿನಗಳ ಕಾಲ ಕೂಂಬಿಂಗ್ ಯಶಸ್ವಿ:ಪುಂಡಾನೆ ಸೆರೆ

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap ಗುಂಡ್ಲುಪೇಟೆ: ಅಪರಿಚಿತ ವಾಹನ ಡಿಕ್ಕಿ; ಬೈಕ್ ಸವಾರ ಸಾವು

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

SSLC Exam Result ಸಂಭ್ರಮಿಸಲು ವಿದ್ಯಾರ್ಥಿಯೇ ಇರಲಿಲ್ಲ!

ವಿವಾಹ ನಿಶ್ಚಿತಾರ್ಥ ಕಳೆದು ವಾಪಸಾಗುತ್ತಿದ್ದಾಗ ವಾಹನ ಅಪಘಾತದಲ್ಲಿ ವರನ ತಂದೆ ಸಾವು

Kasaragod ವಾಹನ ಅಪಘಾತ: ವರನ ತಂದೆ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kapu ದಿಢೀರ್‌ ಅನಾರೋಗ್ಯ; ಬಾಲಕಿ ಸಾವು

Kollur ಯುವತಿ ಮೇಲೆ ಅತ್ಯಾಚಾರ; ದೂರು

Kollur ಯುವತಿ ಮೇಲೆ ಅತ್ಯಾಚಾರ; ದೂರು

1-wqeqwew

IPL; ಚೆನ್ನೈ ವಿರುದ್ಧ ಅಬ್ಬರ; ಗುಜರಾತ್ ಪ್ಲೇ ಆಫ್ ಆಸೆ ಜೇವಂತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.