ಜೋಕುಮಾರ ತರ್ತಾನಾ ಮಳೆ….! ಮಳೆ-ಬೆಳೆಯ ಪ್ರತೀಕ ಜೋಕುಮಾರನ ಹಬ್ಬ


Team Udayavani, Sep 13, 2021, 7:00 PM IST

ಜೋಕುಮಾರ ತರ್ತಾನಾ ಮಳೆ….! ಮಳೆ-ಬೆಳೆಯ ಪ್ರತೀಕ ಜೋಕುಮಾರ

ಬನಹಟ್ಟಿ : ನಮ್ಮದು ಸಂಪ್ರದಾಯ ಸಂಸ್ಕೃತಿಯ ನೆಲೆಬೀಡು, ಗ್ರಾಮೀಣ ಪ್ರದೇಶದಲ್ಲಿ ಹಿಂದಿನಿಂದ ಆಚರಿಸುತ್ತಾ ಬಂದ ಕೆಲ ಧಾರ್ಮಿಕ ಆಚರಣೆಗಳು ಇಂದಿಗೂ ನಮ್ಮಲ್ಲಿ ಪ್ರಸ್ತುತ ಎನ್ನುವುದಕ್ಕೆ ಉತ್ತರ ಕರ್ನಾಟಕದ ಜೋಕುಮಾರನ ಹಬ್ಬ ಕೂಡಾ ಒಂದು. ಹಿಂದಿನಿಂದ ತಮ್ಮ ಹಿರಿಯರು ಆಚರಿಸುತ್ತಾ ಬಂದ ಈ ಜೋಕುಮಾರನ ಹಬ್ಬ ಉತ್ತರ ಕರ್ನಾಟಕದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಇಂದಿಗೂ ಚಾಲ್ತಿಯಲ್ಲಿದೆ.

ಭಾದ್ರಪದ ಮಾಸದ ಅಷ್ಟಮಿಯಂದು ಹುಟ್ಟುವ ಜೋಕುಮಾರ ಜೋ ಎಂಬ ಮುನಿಯ ಮಗನು, ಜೇಷ್ಠಾ ದೇವಿಯ ಮಗನೆಂದು ಹೇಳಲಾಗುತ್ತಿದೆ. ಗಣಪ ಕುಳಿತು ತಿಂದು ಉಂಡು ಹೋದರೆ ಜೋಕುಮಾರ ಮಾತ್ರ ಭೂಮಂಡಲದಲ್ಲಿ ಓಣಿ ಓಣಿಗೂ ಸುತ್ತಾಡಿ, ಮಳೆ ಬೆಳೆ ಇಲ್ಲದೇ ಕಂಗಾಲಾಗಿರುವುದನ್ನು ಕಂಡು ಶಿವನಿಗೆ ವರದಿ ಒಪ್ಪಿಸಿ ಮಳೆ ತರುತ್ತಾನೆ ಎಂಬ ಪ್ರತೀತಿಯೂ ಇದೆ
ಕುಂಬಾರ ಮನೆಯಲ್ಲಿ ಜನಿಸಿ, ತಳವಾರ ಮನೆಯಲ್ಲಿ ಮೆರೆದಾಡಿ, ಕರ‍್ಯಾನವರ ಮನೆಯಲ್ಲಿ ಜಿಗಿದಾಡಿ ಕೊನೆಗೆ ದಾಸರ ಪಡಿಯಲ್ಲಿ ಮರಣ ಹೊಂದುತ್ತಾನೆ ಎಂಬುದು ಮೊದಲಿನಿಂದ ಜಾರಿಯಲ್ಲಿದ್ದ ಪದ್ದತಿಯಾಗಿದೆ.

ಗಣಪತಿ ಕುಳಿತ 4ನೇ ದಿನಕ್ಕೆ ಜೋಕುಮಾರ ಜನಿಸುತ್ತಾನೆ. ನಂತರ ಅವನಿಗೆ ಬೆಣ್ಣೆ, ಬೇವಿನ ತಪ್ಪಲದಿಂದ ಸಿಂಗರಿಸಿ ಬಿದರಿನ ಬುಟ್ಟಿಯಲ್ಲಿಟ್ಟುಕೊಂಡು ಮಹಿಳೆಯರು ಗಲ್ಲಿ ಗಲ್ಲಿ ಮನೆ ಮನೆ ತಿರುಗಾಡುತ್ತಾರೆ. ಜೋಕುಮಾರನ ಜಾನಪದ ಹಾಡುಗಳನ್ನು ಹಾಡುತ್ತಾ, ಕೇಳುಗರನ್ನು ಮಂತ್ರ ಮಗ್ದರನ್ನಾಗಿಸುತ್ತಾರೆ ಜೋಕುಮಾರನಿಗೆ ಗೋದಿ, ಜೋಳ, ಸಜ್ಜಿ ಹಣ ಸೇರಿದಂತೆ ಅನೇಕ ಪದಾರ್ಥಗಳನ್ನು ಜನ ನೀಡುತ್ತಾರೆ. ಬಂದ ಧಾನ್ಯಗಳಲ್ಲಿ ಕುಂಬಾರರು, ಕೇರಿಯ ಜನರು ಸೇರಿ ಮೂರು ಪಾಲು ಹಂಚಿಕೊಳ್ಳುತ್ತಾರೆ.

ಇದನ್ನೂ ಓದಿ : ಕೋವಿಡ್: ರಾಜ್ಯದಲ್ಲಿ ಸೋಂಕು ಇಳಿಮುಖ | 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ  

7 ದಿನಗಳ ವರೆಗೆ ನಗರದಲ್ಲಿ ತಿರುಗಾಡಿ 7ನೇ ರಾತ್ರಿ ಎಲ್ಲ ಜನ ಮಲಗಿದ ಮೇಲೆ ಕೇರಿಯಲ್ಲಿನ ದೇವಿಗುಡಿ ಕಟ್ಟೆಮೇಲೆ ಇಟ್ಟು ಬರುತ್ತಾರೆ. ನಂತರ ಕೇರಿಯ ಜನ ಜೋಕುಮಾರನ ಮೂರ್ತಿಮೇಲೆ ಬಾರಿಗಿಡದ ಕಂಟಿಯಿಂದ ಮುಚ್ಚಿ ಆತನ ಸುತ್ತಲೂ ಸುತ್ತುತ್ತಾರೆ. ಸುತ್ತುವಾಗ ಬಾರಿ ಕಂಟಿಗೆ ಸೀರೆ ಸಿಲುಕಿದಾಗ ಜೋಕುಮಾರ ಜಗ್ಗಿದಾ ಎಂದು ಭಾವಿಸಿ ಕಲ್ಲಿನಿಂದ, ಒಣಕೆಯಿಂದ ಜಡಿದು ತಲೆ ಬುರುಡೆ ಒಡೆಯುವುದು ವಾಡಿಕೆ. ನಂತರ ದಾಸರ ಪಡಿಯಲ್ಲಿ ಒಡೆದ ಮೂರ್ತಿ ಧಫನ್ ಮಾಡುತ್ತಾರೆ. ಮರುದಿನ ದಾಸರು(ಅಗಸರು) ಜೋಕುಮಾರನ ದಿನದ (ತಿಥಿ) ಕಾರ್ಯದ ಸಿಹಿ ಊಟ ಮಾಡಿ ಹಬ್ಬ ಮುಗಿಸುತ್ತಾರೆ.

ಈ ಹಬ್ಬ ಮಳೆ-ಬೆಳೆಯ ಪ್ರತೀಕವಾಗಿದೆ. ಮಳೆ ತರುವ ನಂಬಿಗಸ್ತನೆಂದು ರೈತಾಪಿ ಜನರು ಈತನನ್ನು ನಂಬಿದ್ದಾರೆ.

– ಕಿರಣ ಶ್ರೀಶೈಲ ಆಳಗಿ 

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.