ಅಡ್ಡದಾರಿ: ಅಪಘಾತ ಕಟ್ಟಿಟ್ಟ ಬುತ್ತಿ; ವೇಗದ ವಾಹನ ಸಂಚಾರಕ್ಕೆ ಕಡಿವಾಣ ಅಗತ್ಯ

ಹೆದ್ದಾರಿಯಲ್ಲಿ 24 ಗಂಟೆಗಳ ಕಾಲ ವಾಹನಗಳು ವೇಗದಿಂದ ಸಂಚಾರ ಮಾಡುತ್ತವೆ.

Team Udayavani, Sep 13, 2021, 6:34 PM IST

ಅಡ್ಡದಾರಿ: ಅಪಘಾತ ಕಟ್ಟಿಟ್ಟ ಬುತ್ತಿ; ವೇಗದ ವಾಹನ ಸಂಚಾರಕ್ಕೆಕಡಿವಾಣ ಅಗತ್ಯ

ಮುಳಬಾಗಿಲು: ಕೇಂದ್ರ ಸರ್ಕಾರ ಜನರ ಅನುಕೂಲಕ್ಕಾಗಿ ಕೋಟ್ಯಂತರ ರೂ. ವೆಚ್ಚದಲ್ಲಿ ನಿರ್ಮಿಸಿರುವ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ವಿವಿಧ ಗೇಟ್‌ಗಳಲ್ಲಿ ಗ್ರಾಮಸ್ಥರು, ರಸ್ತೆ ದಾಟಲು  ಅಕ್ರಮವಾಗಿ ದಾರಿ ಸೃಷ್ಟಿಸಿದ್ದು, ರಸ್ತೆ ವಿಭಜಕಗಳು ಅಪಘಾತಗಳನ್ನು ಸೃಷ್ಟಿಸುವ ತಾಣವಾಗಿ ಪರಿಣಮಿಸುತ್ತಿದೆ ಎಂಬ ಆರೋಪಕೇಳಿ ಬರುತ್ತಿದೆ. ತಾಲೂಕಿನಲ್ಲಿ ಹಾದು ಹೋಗಿರುವ ಹೆದ್ದಾರಿಯನ್ನು ಕೇಂದ್ರ ಸರ್ಕಾರ ಮೇಲ್ದರ್ಜೇಗೇರಿಸಲು ಉದ್ದೇಶಿಸಿ ಹೆದ್ದಾರಿ ಅಭಿವೃದ್ಧಿ ಅಧಿಕಾರಿ
ಗಳು ಚುತುಷ್ಪಥ ರಸ್ತೆಯನ್ನಾಗಿ ನಿರ್ಮಿಸಲು ಕ್ರಮ ಕೈಗೊಂಡಿದ್ದರು.

ಅದರಂತೆ 2013ರಲ್ಲಿ ಲ್ಯಾಂಕೋ ಕಂಪನಿಯು ಹೊಸಕೋಟೆಯಿಂದ ಮುಳಬಾಗಿಲು ನಗರದ ಮದರಸಾ ವರೆಗೂ ನಿರ್ಮಿಸಿ, ಹೆದ್ದಾರಿ ಅಭಿವೃದ್ಧಿ ಗಾಗಿ ವ್ಯಯವಾಗಿರುವ ಹಣವನ್ನು ವಸೂಲಿ ಮಾಡಲು ದೇವರಾಯಸಮುದ್ರ ಬಳಿ ಟೋಲ್‌ ನಿರ್ಮಿಸಿದ್ದಾರೆ. ಅಂತೆಯೇ 2ನೇ ಹಂತವಾಗಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ ಭಾರತ ಸರ್ಕಾರದ ಅನುಸಾರ ಜೆಎಸ್‌ಆರ್‌ ಟೋಲ್‌ವೇಸ್‌ ಪ್ರçವೇಟ್‌ ಲಿಮಿಟೆಡ್‌ ಕಂಪನಿಯು ರಾ.ಹೆ.75ರ ಮುಳಬಾಗಿಲು ನಗರದ ಮದರಸಾದಿಂದ ಕರ್ನಾಟಕ ಗಡಿ ಭಾಗದವರೆಗೆ 2015ರಲ್ಲಿ ಚುತುಷ್ಪಥ ರಸ್ತೆ ನಿರ್ಮಿಸಿದ್ದು, ಹೆದ್ದಾರಿ ಬಳಕೆಗಾಗಿ ಬಳಕೆದಾರ ಶುಲ್ಕ ಸಂಗ್ರಹಕ್ಕೆ ಗಡಿ ರೇಖೆಯಿಂದ 500 ಮೀ ದೂರದ ಎನ್‌.ಯಲುವಹಳ್ಳಿ ಬಳಿ ಟೋಲ್‌ ಪ್ಲಾಜಾ ನಿರ್ಮಿಸಿಕೊಂಡು ಶುಲ್ಕ ವಸೂಲಿ ಮಾಡುತ್ತಿದ್ದರು.

ಚತುಷ್ಪಥ ರಸ್ತೆ ನಿರ್ಮಾಣ: ಅಂತೆಯೇ ಲ್ಯಾಂಕೋ ಹೊಸಕೋಟೆ ಕಂಪನಿಯು ಮುಳಬಾಗಿಲು ತಾಲೂಕಿನ ತಂಬಿಹಳ್ಳಿ ಪಾಲಾರ್‌ ಸೇತುವೆಯಿಂದ ನಗರದ ಮದರಸಾವರೆಗೂ ಚತುಷ್ಪಥ ರಸ್ತೆಯುಳ್ಳ ಹೆದ್ದಾರಿ ನಿರ್ಮಿಸಿದ್ದಾರೆ. ವಿವಿಧ ಗ್ರಾಮಗಳ ಗೇಟ್‌ ಗಳ ಬಳಿ ಗ್ರಾಮಸ್ಥರು ಒಂದು ಕಡೆಯಿಂದ ಮತ್ತೂಂದು ಕಡೆ ರಸ್ತೆ ದಾಟಲು ರಸ್ತೆ ವಿಭಜಕ ನಿರ್ಮಿಸಲಾಗಿದೆ. ಆದರೆ, ಅದರ ನಡುವೆಯೂ ಕಮದಟ್ಟಿ, ಕಾಮನೂರು, ಪಂಚವಟಿ ಪಾರ್ಮ್, ಕುರುಬರಹಳ್ಳಿ ಗೇಟ್‌, ತಿರುಮಲ ಡೇರಿ ಮುಂಭಾಗ, ಜಮ್ಮನಹಳ್ಳಿ ಗೇಟ್‌ ಬಳಿ ಎರಡು ಕಡೆ, ದೊಡ್ಡಮಾದೇನಹಳ್ಳಿ, ಕಪ್ಪಲಮಡಗು, ಶ್ರೀರಂಗಪುರ, ಪದ್ಮಘಟ್ಟ, ಹಳೆಕುಪ್ಪ, ಮುದಿಗೆರೆ ಕ್ರಾಸ್‌, ನಂಗಲಿ
ಬಾರ್ಡರ್‌ನಲ್ಲಿ ಗ್ರಾಮಸ್ಥರು ವಾಹನಗಳಲ್ಲಿ ರಸ್ತೆ ದಾಟಲು ರಸ್ತೆ ಮದ್ಯದಲ್ಲಿನ ರಸ್ತೆ ವಿಭಜಕವನ್ನು ಅಕ್ರಮವಾಗಿ ಕೊರೆದು ದಾರಿ ಮಾಡಿಕೊಂಡಿದ್ದಾರೆ.

ರಸ್ತೆ ಮುಚ್ಚಿದ್ದರೂ ಪ್ರಯೋಜನವಿಲ್ಲ: ಹೆದ್ದಾರಿಯಲ್ಲಿ 24 ಗಂಟೆಗಳ ಕಾಲ ವಾಹನಗಳು ವೇಗದಿಂದ ಸಂಚಾರ ಮಾಡುತ್ತವೆ. ಅದರ ನಡುವೆ ಗ್ರಾಮಸ್ಥರು, ವಿಭಜಕದ ದಾರಿಯಲ್ಲಿ ಹಠಾತ್‌ ಆಗಿ ಗಿಡಗಳ ನಡುವೆ ಒಂದು ಕಡೆಯಿಂದ ಮತ್ತೂಂದು ಕಡೆ ವಾಹನಗಳನ್ನು ನುಗ್ಗಿಸಿದಾಗ, ಎದುರುಗಡೆಯಿಂದ ವೇಗವಾಗಿ ಬರುವ ವಾಹನಗಳು ಒಂದಕ್ಕೊಂದು ಡಿಕ್ಕಿ ಹೊಡೆದ ಅಪಘಾತಗಳು ಉಂಟಾಗುತ್ತಿವೆ. ಅಲ್ಲದೇ ಸಾಕಷ್ಟು ಜನರು ಮೃತಪಟ್ಟು ಮತ್ತೂ ಕೆಲವರು ಗಾಯಗೊಂಡಿರುವ ಘಟನೆಗಳು ನಡೆಯುತ್ತಿವೆ.

ಅದರಂತೆ ಲ್ಯಾಂಕೋ ಕಂಪನಿಯೂ ಅಪಘಾತ ತಪ್ಪಿಸಲು ಸಿಮೆಂಟ್‌ ಕಂಬಗಳನ್ನು ಅಡ್ಡಹಾಕಿ, ಅಕ್ರಮ ರಸ್ತೆ ವಿಭಜಕಗಳನ್ನು ಮುಚ್ಚಿದ್ದರೂ, ಗ್ರಾಮಸ್ಥರು ಮತ್ತೆ ಅದೇ ರೀತಿ ಸದರೀ ಕಲ್ಲುಗಳನ್ನು ಪಕ್ಕಕ್ಕೆ ಸರಿಸಿ, ಸದರೀ ಸ್ಥಳದಲ್ಲಿಯೇ ಸಂಚರಿಸಲು ಅನುವು ಮಾಡಿಕೊಂಡಿದ್ದಾರೆ. ಅದರಲ್ಲೂ ರಾತ್ರಿ ವೇಳೆ ಹೇಳಲೂ ಅಸಾಧ್ಯ. ರಸ್ತೆಯಲ್ಲಿ ವಾಹನಗಳು ಸಂಚರಿಸುತ್ತಿದ್ದಾಗ, ಇದೇ ಸ್ಥಳಗಳಲ್ಲಿ ಕತ್ತಲಲ್ಲಿ ಒಂದು ಕಡೆಯಿಂದ ಮತ್ತೂಂದು ಕಡೆಗೆ ವಾಹನಗಳು ದಾಟಿದಾಗ ಎದುರುಗಡೆಯಿಂದ ಬರುವ ವಾಹನಗಳಿಗೆ ವೇಗದ ಕಡಿವಾಣ ಹಾಕಿ ಕೊಳ್ಳಲು ಆಗದೇ ಡಿಕ್ಕಿ ಹೊಡೆದು ಅಪಘಾತವನ್ನುಂಟು ಮಾಡಿ ಪರಾರಿಯಾಗುತ್ತಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 75ರಲ್ಲಿನ ವಿವಿಧ ಗೇಟ್‌ಗಳಲ್ಲಿ ಜನರು ಅಕ್ರಮವಾಗಿ ರಸ್ತೆ ವಿಭಜಕಗಳನ್ನುಕೊರೆದು ದಾರಿ ಮಾಡಿಕೊಂಡಿದ್ದು, ಈ ಜಾಗಗಳಲ್ಲಿ ಸಡನ್ನಾಗಿ ತಮ್ಮ ವಾಹನಗಳ ಮೂಲಕ ರಸ್ತೆ ದಾಟುವುದರಿಂದ ವೇಗವಾಗಿ ಸಂಚರಿಸುವ ವಾಹನಗಳ ನಡುವೆ ಅಪಘಾತಗಳು ಉಂಟಾಗುತ್ತಿವೆ. ಆದ್ದರಿಂದ ಇಂತಹ ಅವಘಡಗಳಿಗೆ ಹೆದ್ದಾರಿ ಅಧಿಕಾರಿಗಳು ಕಡಿವಾಣ ಹಾಕಬೇಕಿದೆ.
ರಮೇಶ್‌, ಕಾರು ಚಾಲಕ

ರಾಷ್ಟ್ರೀಯ ಹೆದ್ದಾರಿಯಲ್ಲಿ ವಿವಿಧ ಗೇಟ್‌ಗಳಲ್ಲಿ ರಸ್ತೆ ದಾಟಲು ಜನರು ಅಕ್ರಮವಾಗಿ ದಾರಿ ಸೃಷ್ಟಿಸಿಕೊಂಡಿದ್ದಾರೆ. ರಸ್ತೆ ವಿಭಜಕಗಳು ಅಪಘಾತ ಸೃಷ್ಟಿಸುವ ತಾಣವಾಗಿ ಪರಿಣಮಿಸುತ್ತಿರುವುದರಿಂದ ಹೆದ್ದಾರಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಂಪನಿ ಅಧಿಕಾರಿಗಳ ಜೊತೆ ಚರ್ಚಿಸಿ, ರಸ್ತೆ ಕಂದಕ ಮುಚ್ಚಿಸಲು ಸೂಚಿಸಲಾಗುವುದು.
ಸೆಲ್ವಮಣಿ, ಜಿಲ್ಲಾಧಿಕಾರಿ

ಎಂ ನಾಗರಾಜಯ್ಯ

ಟಾಪ್ ನ್ಯೂಸ್

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.